AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾವನ್ನು ಸೋಲಿಸಿದರೆ ಡೇಟಿಂಗ್ ಆಫರ್ ನೀಡಿದ ಪಾಕ್ ನಟಿ

India vs Bangladesh: ಭಾರತ-ಬಾಂಗ್ಲಾದೇಶ್ ನಡುವಣ ಪಂದ್ಯವು ಅಕ್ಟೋಬರ್ 19 ರಂದು ನಡೆಯಲಿದೆ. ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ ಗೆಲುವಿನ ಸಂಖ್ಯೆಯನ್ನು ನಾಲ್ಕಕ್ಕೇರಿಸಲು ಟೀಮ್ ಇಂಡಿಯಾ ಸಜ್ಜಾಗಿದೆ.

ಟೀಮ್ ಇಂಡಿಯಾವನ್ನು ಸೋಲಿಸಿದರೆ ಡೇಟಿಂಗ್ ಆಫರ್ ನೀಡಿದ ಪಾಕ್ ನಟಿ
Team India-sehar shinwari
TV9 Web
| Updated By: ಝಾಹಿರ್ ಯೂಸುಫ್|

Updated on: Oct 18, 2023 | 6:37 PM

Share

ಏಕದಿನ ವಿಶ್ವಕಪ್​ನ 17ನೇ ಪಂದ್ಯದಲ್ಲಿ ಭಾರತ ಮತ್ತು ಬಾಂಗ್ಲಾದೇಶ್ ತಂಡಗಳು ಮುಖಾಮುಖಿಯಾಗಲಿದೆ. ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡವು ಭಾರತವನ್ನು ಸೋಲಿಸಿದರೆ ಬಾಂಗ್ಲಾ ಹುಡುಗನೊಂದಿಗೆ ಡೇಟಿಂಗ್ ಮಾಡುವುದಾಗಿ ಪಾಕ್ ನಟಿ ಸೆಹರ್ ಶಿನ್ವಾರಿ ಘೋಷಿಸಿದ್ದಾರೆ.

ಈ ಬಗ್ಗೆ ಎಕ್ಸ್​ನಲ್ಲಿ ಬರೆದುಕೊಂಡಿರುವ ಸೆಹರ್ ಶಿನ್ವಾರಿ, ಇನ್ಶಾ ಅಲ್ಲಾಹ್…ನನ್ನ ಬಂಗಾಳಿ ಬಂಧು (ಬಾಂಗ್ಲಾದೇಶ್ ತಂಡ) ಮುಂದಿನ ಪಂದ್ಯದಲ್ಲಿ ಸೇಡು ತೀರಿಸಿಕೊಳ್ಳಲಿದ್ದಾರೆ. ಬಾಂಗ್ಲಾ ತಂಡವು ಭಾರತವನ್ನು ಸೋಲಿಸಿದರೆ, ನಾನು ಢಾಕಾಗೆ ಹೋಗುತ್ತೇನೆ. ಅಲ್ಲದೆ ಬಾಂಗ್ಲಾ ಹುಡುಗನೊಂದಿಗೆ ಮೀನು ಭೋಜನವನ್ನು ಮಾಡುತ್ತೇನೆ” ಎಂದಿದ್ದಾರೆ.

ಈ ಮೂಲಕ ಸೆಹರ್ ಶಿನ್ವಾರಿ ಟೀಮ್ ಇಂಡಿಯಾ ವಿರುದ್ಧ ಬಾಂಗ್ಲಾದೇಶ್ ತಂಡವ ಗೆಲುವನ್ನು ಎದುರು ನೋಡುತ್ತಿರುವುದಾಗಿ ತಿಳಿಸಿದ್ದಾರೆ. ಇಂತಹದೊಂದು ಡೇಟಿಂಗ್ ಆಫರ್ ನೀಡಲು ಮುಖ್ಯ ಕಾರಣ ಪಾಕಿಸ್ತಾನ್ ತಂಡ ಟೀಮ್ ಇಂಡಿಯಾ ವಿರುದ್ಧ ಹೀನಾಯವಾಗಿ ಸೋತಿರುವುದು.

ಅಕ್ಟೋಬರ್ 14 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೋಘ ಪ್ರದರ್ಶನ ನೀಡಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಪಾಕಿಸ್ತಾನ್ ತಂಡವನ್ನು ಭಾರತ ಕೇವಲ 191 ರನ್​ಗಳಿಗೆ ಆಲೌಟ್ ಮಾಡಿತ್ತು.

ಅಲ್ಲದೆ 192 ರನ್​ಗಳ ಗುರಿಯನ್ನು ಕೇವಲ 30.3 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ ಟೀಮ್ ಇಂಡಿಯಾ ಅಮೋಘ ಜಯ ಸಾಧಿಸಿತ್ತು. ಈ ಹೀನಾಯ ಸೋಲಿನಿಂದ ಹತಾಶರಾಗಿರುವ ಪಾಕ್ ನಟಿ ಸೆಹರ್ ಶಿನ್ವಾರಿ ಇದೀಗ ಭಾರತದ ವಿರುದ್ಧ ಬಾಂಗ್ಲಾದೇಶ್ ತಂಡದ ಗೆಲುವನ್ನು ಎದುರು ನೋಡುತ್ತಿದ್ದಾರೆ.

ಇದನ್ನೂ ಓದಿ: ಚೇಸ್ ಮಾಸ್ಟರ್…ಸಚಿನ್ ವಿಶ್ವ ದಾಖಲೆ ಮುರಿದ ಕಿಂಗ್ ಕೊಹ್ಲಿ

ಇಂಡೊ-ಬಾಂಗ್ಲಾ ಪಂದ್ಯ ಯಾವಾಗ?

ಭಾರತ-ಬಾಂಗ್ಲಾದೇಶ್ ನಡುವಣ ಪಂದ್ಯವು ಅಕ್ಟೋಬರ್ 19 ರಂದು ನಡೆಯಲಿದೆ. ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ ಗೆಲುವಿನ ಸಂಖ್ಯೆಯನ್ನು ನಾಲ್ಕಕ್ಕೇರಿಸಲು ಟೀಮ್ ಇಂಡಿಯಾ ಸಜ್ಜಾಗಿದೆ. ಅತ್ತ ಆಡಿರುವ 3 ಪಂದ್ಯಗಳಲ್ಲಿ 2 ರಲ್ಲಿ ಸೋತಿರುವ ಬಾಂಗ್ಲಾದೇಶ್ ತಂಡವು ಈ ಪಂದ್ಯದ ಮೂಲಕ ಗೆಲುವಿನ ಲಯಕ್ಕೆ ಮರಳುವ ಇರಾದೆಯಲ್ಲಿದೆ.

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?