AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾವನ್ನು ಸೋಲಿಸಿದರೆ ಡೇಟಿಂಗ್ ಆಫರ್ ನೀಡಿದ ಪಾಕ್ ನಟಿ

India vs Bangladesh: ಭಾರತ-ಬಾಂಗ್ಲಾದೇಶ್ ನಡುವಣ ಪಂದ್ಯವು ಅಕ್ಟೋಬರ್ 19 ರಂದು ನಡೆಯಲಿದೆ. ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ ಗೆಲುವಿನ ಸಂಖ್ಯೆಯನ್ನು ನಾಲ್ಕಕ್ಕೇರಿಸಲು ಟೀಮ್ ಇಂಡಿಯಾ ಸಜ್ಜಾಗಿದೆ.

ಟೀಮ್ ಇಂಡಿಯಾವನ್ನು ಸೋಲಿಸಿದರೆ ಡೇಟಿಂಗ್ ಆಫರ್ ನೀಡಿದ ಪಾಕ್ ನಟಿ
Team India-sehar shinwari
Follow us
TV9 Web
| Updated By: ಝಾಹಿರ್ ಯೂಸುಫ್

Updated on: Oct 18, 2023 | 6:37 PM

ಏಕದಿನ ವಿಶ್ವಕಪ್​ನ 17ನೇ ಪಂದ್ಯದಲ್ಲಿ ಭಾರತ ಮತ್ತು ಬಾಂಗ್ಲಾದೇಶ್ ತಂಡಗಳು ಮುಖಾಮುಖಿಯಾಗಲಿದೆ. ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡವು ಭಾರತವನ್ನು ಸೋಲಿಸಿದರೆ ಬಾಂಗ್ಲಾ ಹುಡುಗನೊಂದಿಗೆ ಡೇಟಿಂಗ್ ಮಾಡುವುದಾಗಿ ಪಾಕ್ ನಟಿ ಸೆಹರ್ ಶಿನ್ವಾರಿ ಘೋಷಿಸಿದ್ದಾರೆ.

ಈ ಬಗ್ಗೆ ಎಕ್ಸ್​ನಲ್ಲಿ ಬರೆದುಕೊಂಡಿರುವ ಸೆಹರ್ ಶಿನ್ವಾರಿ, ಇನ್ಶಾ ಅಲ್ಲಾಹ್…ನನ್ನ ಬಂಗಾಳಿ ಬಂಧು (ಬಾಂಗ್ಲಾದೇಶ್ ತಂಡ) ಮುಂದಿನ ಪಂದ್ಯದಲ್ಲಿ ಸೇಡು ತೀರಿಸಿಕೊಳ್ಳಲಿದ್ದಾರೆ. ಬಾಂಗ್ಲಾ ತಂಡವು ಭಾರತವನ್ನು ಸೋಲಿಸಿದರೆ, ನಾನು ಢಾಕಾಗೆ ಹೋಗುತ್ತೇನೆ. ಅಲ್ಲದೆ ಬಾಂಗ್ಲಾ ಹುಡುಗನೊಂದಿಗೆ ಮೀನು ಭೋಜನವನ್ನು ಮಾಡುತ್ತೇನೆ” ಎಂದಿದ್ದಾರೆ.

ಈ ಮೂಲಕ ಸೆಹರ್ ಶಿನ್ವಾರಿ ಟೀಮ್ ಇಂಡಿಯಾ ವಿರುದ್ಧ ಬಾಂಗ್ಲಾದೇಶ್ ತಂಡವ ಗೆಲುವನ್ನು ಎದುರು ನೋಡುತ್ತಿರುವುದಾಗಿ ತಿಳಿಸಿದ್ದಾರೆ. ಇಂತಹದೊಂದು ಡೇಟಿಂಗ್ ಆಫರ್ ನೀಡಲು ಮುಖ್ಯ ಕಾರಣ ಪಾಕಿಸ್ತಾನ್ ತಂಡ ಟೀಮ್ ಇಂಡಿಯಾ ವಿರುದ್ಧ ಹೀನಾಯವಾಗಿ ಸೋತಿರುವುದು.

ಅಕ್ಟೋಬರ್ 14 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೋಘ ಪ್ರದರ್ಶನ ನೀಡಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಪಾಕಿಸ್ತಾನ್ ತಂಡವನ್ನು ಭಾರತ ಕೇವಲ 191 ರನ್​ಗಳಿಗೆ ಆಲೌಟ್ ಮಾಡಿತ್ತು.

ಅಲ್ಲದೆ 192 ರನ್​ಗಳ ಗುರಿಯನ್ನು ಕೇವಲ 30.3 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ ಟೀಮ್ ಇಂಡಿಯಾ ಅಮೋಘ ಜಯ ಸಾಧಿಸಿತ್ತು. ಈ ಹೀನಾಯ ಸೋಲಿನಿಂದ ಹತಾಶರಾಗಿರುವ ಪಾಕ್ ನಟಿ ಸೆಹರ್ ಶಿನ್ವಾರಿ ಇದೀಗ ಭಾರತದ ವಿರುದ್ಧ ಬಾಂಗ್ಲಾದೇಶ್ ತಂಡದ ಗೆಲುವನ್ನು ಎದುರು ನೋಡುತ್ತಿದ್ದಾರೆ.

ಇದನ್ನೂ ಓದಿ: ಚೇಸ್ ಮಾಸ್ಟರ್…ಸಚಿನ್ ವಿಶ್ವ ದಾಖಲೆ ಮುರಿದ ಕಿಂಗ್ ಕೊಹ್ಲಿ

ಇಂಡೊ-ಬಾಂಗ್ಲಾ ಪಂದ್ಯ ಯಾವಾಗ?

ಭಾರತ-ಬಾಂಗ್ಲಾದೇಶ್ ನಡುವಣ ಪಂದ್ಯವು ಅಕ್ಟೋಬರ್ 19 ರಂದು ನಡೆಯಲಿದೆ. ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ ಗೆಲುವಿನ ಸಂಖ್ಯೆಯನ್ನು ನಾಲ್ಕಕ್ಕೇರಿಸಲು ಟೀಮ್ ಇಂಡಿಯಾ ಸಜ್ಜಾಗಿದೆ. ಅತ್ತ ಆಡಿರುವ 3 ಪಂದ್ಯಗಳಲ್ಲಿ 2 ರಲ್ಲಿ ಸೋತಿರುವ ಬಾಂಗ್ಲಾದೇಶ್ ತಂಡವು ಈ ಪಂದ್ಯದ ಮೂಲಕ ಗೆಲುವಿನ ಲಯಕ್ಕೆ ಮರಳುವ ಇರಾದೆಯಲ್ಲಿದೆ.

ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​