AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡಿಯಾ ಸೋತರೆ… ಅಮೀರ್ ಗೆ ಸವಾಲಾಕಿದ ಪಾಕ್ ಕ್ರಿಕೆಟಿಗ

T20 World Cup 2026: ಟಿ20 ವಿಶ್ವಕಪ್ ಸೆಮಿಫೈನಲ್ ಸುತ್ತಿಗೆ ಭಾರತ, ಇಂಗ್ಲೆಂಡ್, ನ್ಯೂಝಿಲೆಂಡ್ ಹಾಗೂ ಸೌತ್ ಆಫ್ರಿಕಾ ತಂಡಗಳು ತಲುಪಿದೆ. ಈ ನಾಲ್ಕು ತಂಡಗಳ ನಡುವೆ ಸೆಮಿಫೈನಲ್ ಮುಖಾಮುಖಿ ನಡೆಯಲಿದ್ದು, ಮೊದಲ ಸೆಮೀಸ್​ನಲ್ಲಿ ಸೌತ್ ಆಫ್ರಿಕಾ ಹಾಗೂ ನ್ಯೂಝಿಲೆಂಡ್ ಸೆಣಸಲಿದೆ. ಇನ್ನು ದ್ವಿತೀಯ ಸೆಮಿಫೈನಲ್ ಪಂದ್ಯವು ಭಾರತ ಮತ್ತು ಇಂಗ್ಕೆಂಡ್ ನಡುವೆ ನಡೆಯಲಿದೆ.

ಇಂಡಿಯಾ ಸೋತರೆ... ಅಮೀರ್ ಗೆ ಸವಾಲಾಕಿದ ಪಾಕ್ ಕ್ರಿಕೆಟಿಗ
Ahmed Shehzad And Mohammad Amir
ಝಾಹಿರ್ ಯೂಸುಫ್
|

Updated on: Mar 03, 2026 | 9:26 AM

Share

T20 World Cup 2026: ಟಿ20 ವಿಶ್ವಕಪ್​ನ ಸೆಮಿಫೈನಲ್​ಗೆ ವೇದಿಕೆ ಸಿದ್ಧವಾಗಿದೆ. ಈ ಸೆಮಿಫೈನಲ್​ ಸುತ್ತಿಗೂ ಮುನ್ನ ಸೂಪರ್-8 ಲೀಗ್​ನ ಕೊನೆಯ ಪಂದ್ಯದಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಿದ್ದವು. ಸೆಮಿಫೈನಲ್​ಗೇರಲು ಉಭಯ ತಂಡಗಳ ಪಾಲಿಗೆ ನಿರ್ಣಾಯಕವಾಗಿದ್ದ ಈ ಪಂದ್ಯಕ್ಕೂ ಮುನ್ನ ಪಾಕಿಸ್ತಾನ್ ಕ್ರಿಕೆಟಿಗರಾದ ಅಹ್ಮದ್ ಶೆಹಝಾದ್ ಹಾಗೂ ಮೊಹಮ್ಮದ್ ಅಮೀರ್ ಬಹಿರಂಗವಾಗಿಯೇ ಪಂಥ ಕಟ್ಟಿದ್ದರು. ಅದು ಸಹ ಶೋ ತ್ಯಜಿಸುತ್ತೇನೆ ಎನ್ನುವ ಮೂಲಕ ಎಂಬುದು ವಿಶೇಷ.

ಪಾಕಿಸ್ತಾನದ ಜಿಯೋ ಚಾನೆಲ್​ನಲ್ಲಿ ಪ್ರಸಾರವಾಗುವ ಹಸ್ನಾ ಮನಾ ಹೈ ಕ್ರಿಕೆಟ್ ಕಾರ್ಯಕ್ರಮದಲ್ಲಿ ಮಾಜಿ ಕ್ರಿಕೆಟಿಗರಾದ ಮೊಹಮ್ಮದ್ ಅಮೀರ್, ಅಹ್ಮದ್ ಶೆಹಝಾದ್ ಹಾಗೂ ರಶೀದ್ ಲತೀಫ್ ವಿಶ್ಲೇಷಕರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ನಿರ್ಣಾಯಕ ಪಂದ್ಯದ ವಿಶ್ಲೇಷಣೆ ವೇಳೆ ಮೊಹಮ್ಮದ್ ಅಮೀರ್ ಟೀಮ್ ಇಂಡಿಯಾ ಸೆಮಿಫೈನಲ್​ಗೇರಲ್ಲ ಎಂದಿದ್ದರು.

ಇದೇ ವೇಳೆ ಅಹ್ಮದ್ ಶೆಹಝಾದ್ ಭಾರತ ತಂಡ ಸೆಮಿಫೈನಲ್​ನಲ್ಲಿ ಸ್ಥಾನ ಪಡೆಯುವುದು ಖಚಿತ ತಿರುಗೇಟು ನೀಡಿದ್ದರು. ಆದರೆ ವೆಸ್ಟ್ ಇಂಡೀಸ್ ವಿರುದ್ಧ ಭಾರತ ಗೆಲ್ಲುವ ಸಾಧ್ಯತೆಯೇ ಇಲ್ಲ. ಟೀಮ್ ಇಂಡಿಯಾ ಸೋಲಲಿದೆ ಎಂದು ಅಮೀರ್ ಪುನರುಚ್ಚರಿಸಿದರು.

ಈ ವೇಳೆ “ಭಾರತ ಸೋತರೆ ನಾನು ಶೋ ಬಿಡುತ್ತೇನೆ” ಎಂದು ಅಹ್ಮದ್ ಶೆಹಝಾದ್ ಸವಾಲು ಹಾಕಿದ್ದಾರೆ. ಈ ಪಂಥಹ್ವಾನವನ್ನು ಮೊಹಮ್ಮದ್ ಅಮೀರ್ ಸ್ವೀಕರಿಸಿದ್ದಾರೆ.

ಇದೀಗ ವೆಸ್ಟ್ ಇಂಡೀಸ್ ತಂಡವನ್ನು ಬಗ್ಗು ಬಡಿದು ಟೀಮ್ ಇಂಡಿಯಾ ಸೆಮಿಫೈನಲ್​ಗೇರಿದೆ. ಭಾರತ ತಂಡದ ಈ ಗೆಲುವಿನೊಂದಿಗೆ ಅಹ್ಮದ್ ಶೆಹಝಾದ್ ಅಮೀರ್​ ಜೊತೆಗಿನ ಪಂಥಹ್ವಾನದಲ್ಲಿ ಗೆದ್ದಿದ್ದಾರೆ. ಹೀಗಾಗಿ ಅವರು ಶೋ ಬಿಡುವ ಅಗತ್ಯವಿಲ್ಲ.

ಅತ್ತ ಮೊದಲಿಂದಲೂ ಭಾರತ ತಂಡ ಈ ಬಾರಿ ಸೆಮಿಫೈನಲ್​ಗೆ ತಲುಪಲ್ಲ ಎಂದೇಳುತ್ತಾ ಬಂದಿರುವ ಮೊಹಮ್ಮದ್ ಅಮೀರ್ ಇದೀಗ ಮುಖಭಂಗ ಅನುಭವಿಸಿದ್ದಾರೆ. ಅದರಲ್ಲೂ ಶೆಹಝಾದ್ ಜೊತೆ ಪಂಥ ಕಟ್ಟಿ ಇದೀಗ ಸೋತಿದ್ದಾರೆ. ಹೀಗಾಗಿಯೇ ಭಾರತೀಯ ಕ್ರಿಕೆಟ್ ಪ್ರೇಮಿಗಳು ಮೊಹಮ್ಮದ್ ಅಮೀರ್​ ಅನ್ನು ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡುತ್ತಿದ್ದಾರೆ.

ಇದನ್ನೂ ಓದಿ: T20 World Cup 2026: ಸೆಮಿಫೈನಲ್​ನಲ್ಲಿ 10 ಓವರ್​ಗಳ ನಿಯಮ ಜಾರಿ

ಸದ್ಯ ವೆಸ್ಟ್ ಇಂಡೀಸ್ ವಿರುದ್ಧ ಗೆದ್ದು ಸೆಮಿಫೈನಲ್​ಗೆ ಪ್ರವೇಶಿಸಿರುವ ಟೀಮ್ ಇಂಡಿಯಾ ತನ್ನ ಮುಂದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಮಾರ್ಚ್ 5 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಫೈನಲ್​ಗೇರಲಿದೆ.

Follow Us
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್