AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

12.4, 13.2, 13.5: ಹೀಗಿದೆ ಪಾಕಿಸ್ತಾನ್ ತಂಡದ ಸೆಮಿಫೈನಲ್ ಲೆಕ್ಕಾಚಾರ

T20 World Cup 2026: ಪಾಕಿಸ್ತಾನ್ ತಂಡವು ಟಿ20 ವಿಶ್ವಕಪ್​ನಲ್ಲಿ ಸೆಮಿಫೈನಲ್​ಗೇರಬೇಕಿದ್ದರೆ ಶ್ರೀಲಂಕಾ ವಿರುದ್ಧ ಗೆಲ್ಲಲೇಬೇಕು. ಈ ಗೆಲುವಿನೊಂದಿಗೆ ನ್ಯೂಝಿಲೆಂಡ್ ತಂಡದ ನೆಟ್​ ರನ್ ರೇಟ್ ಅನ್ನು ಟಾರ್ಗೆಟ್ ಮಾಡಬೇಕು. ಅಂದರೆ ಮೂರು ಅಂಕಗಳೊಂದಿಗೆ ಕಿವೀಸ್ ಪಡೆಯ ನೆಟ್ ರನ್ ರೇಟ್​ ಅನ್ನು ಹಿಂದಿಕ್ಕಿದರೆ ಮಾತ್ರ ಪಾಕ್ ತಂಡ ಸೆಮಿಫೈನಲ್​ಗೇರುತ್ತದೆ.

12.4, 13.2, 13.5: ಹೀಗಿದೆ ಪಾಕಿಸ್ತಾನ್ ತಂಡದ ಸೆಮಿಫೈನಲ್ ಲೆಕ್ಕಾಚಾರ
Pakistan
ಝಾಹಿರ್ ಯೂಸುಫ್
|

Updated on:Feb 28, 2026 | 8:39 AM

Share

T20 World Cup 2026: ಟಿ20 ವಿಶ್ವಕಪ್​ನ 50ನೇ ಪಂದ್ಯದಲ್ಲಿ ಪಾಕಿಸ್ತಾನ್ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಲಿದೆ. ಪಲ್ಲೆಕೆಲೆ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಪಾಕ್ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್​ನಲ್ಲಿ ಗೆದ್ದರೆ ಮಾತ್ರ ಪಾಕಿಸ್ತಾನ್ ತಂಡ ಸೆಮಿಫೈನಲ್​ಗೇರಬಹುದು. ಆದರೆ ಈ ಗೆಲುವಿನೊಂದಿಗೆ ಪಾಕ್ ಪಡೆ ನೆಟ್ ರನ್ ರೇಟ್ ಲೆಕ್ಕಾಚಾರವನ್ನು ಸಹ ಮಾಡಬೇಕಿದೆ.

ಅಂದರೆ ಗ್ರೂಪ್-2 ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿ ಇಂಗ್ಲೆಂಡ್ ತಂಡವು ಸೆಮಿಫೈನಲ್​ಗೇರಿದೆ. ಇತ್ತ ದ್ವಿತೀಯ ಸ್ಥಾನದಲ್ಲಿರುವ ನ್ಯೂಝಿಲೆಂಡ್ ತಂಡವನ್ನು ಹಿಂದಿಕ್ಕಿ ಸೆಮಿಫೈನಲ್​ಗೇರಬೇಕಿದ್ದರೆ ಪಾಕಿಸ್ತಾನ್ ತಂಡವು ಶ್ರೀಲಂಕಾ ವಿರುದ್ಧ ಭಾರೀ ಅಂತರದಿಂದ ಗೆಲ್ಲಬೇಕು.

ಗ್ರೂಪ್ 2 ಅಂಕಪಟ್ಟಿ:

  • ಇಂಗ್ಲೆಂಡ್: 6 ಅಂಕ (ಸೆಮಿಫೈನಲ್‌ಗೆ ಅರ್ಹತೆ ಪಡೆದಿದೆ).
  • ನ್ಯೂಝಿಲೆಂಡ್: 3 ಅಂಕ (ನೆಟ್ ರನ್ ರೇಟ್ +1.390).
  • ಪಾಕಿಸ್ತಾನ್: 1 ಅಂಕ (ನೆಟ್ ರನ್ ರೇಟ್ -0.461).
  • ಶ್ರೀಲಂಕಾ: 0 ಅಂಕ (ಟೂರ್ನಿಯಿಂದ ಹೊರಬಿದ್ದಿದೆ).

ಪಾಕಿಸ್ತಾನ್ ತಂಡವು ಭರ್ಜರಿ ಗೆಲುವಿನೊಂದಿಗೆ ನ್ಯೂಝಿಲೆಂಡ್ ತಂಡ ನೆಟ್ ರನ್ ರೇಟ್ ಅನ್ನು ಹಿಂದಿಕ್ಕಿದರೆ ಮಾತ್ರ ಸೆಮಿಫೈನಲ್​ಗೆ ಅರ್ಹತೆ ಪಡೆಯಲಿದೆ. ಇದಕ್ಕಾಗಿ ಪಾಕಿಸ್ತಾನ್ ತಂಡ ಇಂದಿನ ಮ್ಯಾಚ್​ನಲ್ಲಿ ಕೆಳಗೆ ನೀಡಲಾದ ಅಂತರದಲ್ಲಿ ಗೆಲ್ಲಲೇಬೇಕು.

ಮೊದಲು ಬ್ಯಾಟ್ ಮಾಡಿದರೆ:

ಪಾಕಿಸ್ತಾನ್ ತಂಡವು ಟಾಸ್ ಗೆದ್ದು ಅಥವಾ ಸೋತು ಮೊದಲು ಬ್ಯಾಟ್ ಮಾಡಿದರೆ ಈ ಲೆಕ್ಕಾಚಾರದಲ್ಲಿ ರನ್​ಗಳಿಸಬೇಕು. ಹಾಗೆಯೇ ಶ್ರೀಲಂಕಾ ತಂಡವನ್ನು ಈ ಅಂತರದಿಂದ ಸೋಲಿಸಬೇಕು.

  • ಪಾಕ್ ತಂಡ ಮೊದಲು ಬ್ಯಾಟ್ ಮಾಡಿ 200 ರನ್​ಗಳಿಸಿದರೆ, ಶ್ರೀಲಂಕಾ ತಂಡವನ್ನು 135 ರನ್​ಗಳ ಒಳಗೆ ಆಲೌಟ್ ಮಾಡಬೇಕು ಇಲ್ಲಾ ನಿಯಂತ್ರಿಸಬೇಕು.
  • ಪಾಕಿಸ್ತಾನ್ ಮೊದಲು ಬ್ಯಾಟಿಂಗ್ ಮಾಡಿ 180 ರನ್​ ಕಲೆಹಾಕಿದರೆ, ಲಂಕಾ ಪಡೆಯನ್ನು 115 ರನ್​ಗಳಿಗೆ ನಿಯಂತ್ರಿಸುವುದು ಅನಿವಾರ್ಯ.
  • ಪಾಕ್ ತಂಡ 150 ರನ್​ ಗಳಿಸಿದರೆ, ಶ್ರೀಲಂಕಾ ತಂಡವನ್ನು ಕೇವಲ 85 ರನ್ ಅಥವಾ ಅದಕ್ಕಿಂತ ಕಡಿಮೆ ಮೊತ್ತಕ್ಕೆ ಕಟ್ಟಿಹಾಕಬೇಕು.

ಅಂದರೆ ಇಲ್ಲಿ ಪಾಕಿಸ್ತಾನ್ ತಂಡದ ಗೆಲುವಿನ ಅಂತರ ಕನಿಷ್ಠ 64 ರನ್​ಗಿಂತ ಹೆಚ್ಚಿರಬೇಕು. 65 ರನ್​ಗಿಂತ ಕಡಿಮೆ ರನ್​ಗಳ ಅಂತರದಿಂದ ಪಾಕ್ ತಂಡ ಗೆದ್ದರೆ ಸೆಮಿಫೈನಲ್​ಗೇರಲು ಸಾಧ್ಯವಾಗುವುದಿಲ್ಲ.

ಚೇಸಿಂಗ್ ಮಾಡಿದರೆ:

ಪಾಕಿಸ್ತಾನ್ ತಂಡವು ಮೊದಲು ಬೌಲಿಂಗ್ ಮಾಡಿ ಆ ಬಳಿಕ ಶ್ರೀಲಂಕಾ ತಂಡ ನೀಡುವ ಗುರಿಯನ್ನು ಚೇಸಿಂಗ್ ಮಾಡಿದರೆ ನಿರ್ದಿಷ್ಟ ಓವರ್​ಗಳಲ್ಲಿ ಪಂದ್ಯ ಮುಗಿಸಬೇಕು. ಅದರಂತೆ ಪಾಕ್ ತಂಡ ಚೇಸಿಂಗ್ ಲೆಕ್ಕಾಚಾರ ಈ ಕೆಳಗಿನಂತಿದೆ…

  • ಶ್ರೀಲಂಕಾ ತಂಡವು 200 ರನ್​ಗಳಿಸಿದರೆ, ಪಾಕಿಸ್ತಾನ್ ತಂಡವು 201 ರನ್​ಗಳ ಗುರಿಯನ್ನು 13.5 ಓವರ್​ಗಳಲ್ಲಿ ಚೇಸ್ ಮಾಡಬೇಕು.
  • ಶ್ರೀಲಂಕಾ ಮೊದಲು ಬ್ಯಾಟ್ ಮಾಡಿ 181 ರನ್​ಗಳ ಗುರಿ ನೀಡಿದರೆ, ಪಾಕಿಸ್ತಾನ್ ತಂಡವು ಈ ಗುರಿಯನ್ನು 13.4 ಓವರ್​ಗಳಲ್ಲಿ ಬೆನ್ನತ್ತಬೇಕಾಗುತ್ತದೆ.
  • ಶ್ರೀಲಂಕಾ ತಂಡವು 150 ರನ್​ಗಳಿಸಿದರೆ, ಪಾಕಿಸ್ತಾನ್ ತಂಡವು 12.4 ಓವರ್​ಗಳಲ್ಲಿ 151 ರನ್​ಗಳಿಸಲೇಬೇಕು.

ಅಂದರೆ ಶ್ರೀಲಂಕಾ ತಂಡವ ಮೊದಲು ಬ್ಯಾಟಿಂಗ್ ಮಾಡಿ 160 ಕ್ಕಿಂತ ಅಧಿಕ ರನ್​ಗಳ ಗುರಿ ನೀಡಿದರೆ ಪಾಕಿಸ್ತಾನ್ ತಂಡವು 38+ ಎಸೆತಗಳನ್ನು ಬಾಕಿಯಿರಿಸಿಯೇ ಚೇಸಿಂಗ್ ಮಾಡಬೇಕಾಗುತ್ತದೆ.

ಇನ್ನು ಪಾಕಿಸ್ತಾನ್ ತಂಡವು ಮೊದಲು ಬ್ಯಾಟ್ ಮಾಡಿ 160 ಕ್ಕಿಂತ ಅಧಿಕ ರನ್ ಕಲೆಹಾಕಿದರೆ, ಶ್ರೀಲಂಕಾ ತಂಡವನ್ನು 64+ ರನ್​ಗಳ ಅಂತರದಿಂದ ಸೋಲಿಸುವುದು ಅನಿವಾರ್ಯ.

ಹೀಗಾಗಿ ಇಂದಿನ ಪಂದ್ಯದಲ್ಲಿ ಪಾಕಿಸ್ತಾನ್ ತಂಡವು ಟಾಸ್ ಗೆದ್ದರೆ ಚೇಸಿಂಗ್ ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಶ್ರೀಲಂಕಾ ತಂಡವನ್ನು ಅಲ್ಪ ಮೊತ್ತಕ್ಕೆ ನಿಯಂತ್ರಿಸಿ ನಿರ್ದಿಷ್ಟ ಓವರ್​ಗಳಲ್ಲಿ ಲಂಕಾ ತಂಡ ನೀಡುವ ಗುರಿಯನ್ನು ಬೆನ್ನತ್ತಲು ಪ್ಲ್ಯಾನ್ ರೂಪಿಸಲಿದೆ.

ಒಂದು ವೇಳೆ ಪಾಕಿಸ್ತಾನ್ ತಂಡವು ಶ್ರೀಲಂಕಾ ನೀಡುವ ಗುರಿಯನ್ನು (ಸುಮಾರು 200 ರನ್ಸ್​) ಬೆನ್ನತ್ತಲು 14 ಓವರ್​ಗಳನ್ನು ತೆಗೆದುಕೊಂಡರೆ ನ್ಯೂಝಿಲೆಂಡ್ ತಂಡವು ಸೆಮಿಫೈನಲ್​ಗೆ ಅರ್ಹತೆ ಪಡೆಯಲಿದೆ. ಹಾಗೆಯೇ 64 ಕ್ಕಿಂತ ಕಡಿಮೆ ರನ್​ಗಳ ಅಂತರದಿಂದ ಗೆದ್ದರೂ ಸಹ ಪಾಕಿಸ್ತಾನ್ ತಂಡ ಟಿ20 ವಿಶ್ವಕಪ್​ನಿಂದ ಹೊರಬೀಳಲಿದೆ.

ಇದನ್ನೂ ಓದಿ: ಟಿ20 ವಿಶ್ವಕಪ್‌ನಲ್ಲಿ ನ್ಯೂಝಿಲೆಂಡ್ ಆರಂಭಿಕರ ವಿಶ್ವ ದಾಖಲೆಯ ಚೇಸಿಂಗ್

ಹೀಗಾಗಿ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ್ ತಂಡವು ಪ್ರತಿ ಹಂತದಲ್ಲೂ ನೆಟ್ ರನ್ ರೇಟ್​ ಅನ್ನು ಲೆಕ್ಕಾಚಾರ ಮಾಡಲಿದೆ. ಈ ಮೂಲಕ ಪಾಕ್ ಪಡೆ ಲಂಕಾ ತಂಡಕ್ಕೆ ಸೋಲುಣಿಸಿ ಸೆಮಿಫೈನಲ್​ಗೇರಲಿದೆಯಾ ಕಾದು ನೋಡಬೇಕಿದೆ.

Published On - 8:31 am, Sat, 28 February 26

Follow Us
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ