AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾಕಪ್​ಗೂ ಮುನ್ನ ಪಾಕಿಸ್ತಾನದ ತ್ರಿಕೋನ ಸರಣಿ

ಬಹುನಿರೀಕ್ಷಿತ ಏಷ್ಯಾಕಪ್​ ಟೂರ್ನಿಗೆ ಪೂರ್ವ ಸಿದ್ಧತೆಗಾಗಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಮಾಸ್ಟರ್ ಪ್ಲ್ಯಾನ್ ರೂಪಿಸಿದೆ. ಈ ಯೋಜನೆಯಂತೆ ಪಾಕಿಸ್ತಾನ್ ತಂಡವು ಏಷ್ಯಾಕಪ್​ಗೂ ಮುನ್ನ ಯುಎಇ ಹಾಗೂ ಅಫ್ಘಾನಿಸ್ತಾನ್ ವಿರುದ್ಧ ಟಿ20 ಸರಣಿ ಆಡಲಿದೆ. ಅಂದರೆ ಮೂರು ತಂಡಗಳು ತ್ರಿಕೋನ ಸರಣಿಯಲ್ಲಿ ಮುಖಾಮುಖಿಯಾಗಲಿದೆ.

ಏಷ್ಯಾಕಪ್​ಗೂ ಮುನ್ನ ಪಾಕಿಸ್ತಾನದ ತ್ರಿಕೋನ ಸರಣಿ
AFG-UAE-PAK
ಝಾಹಿರ್ ಯೂಸುಫ್
| Edited By: |

Updated on:Sep 01, 2025 | 5:21 PM

Share

ಏಷ್ಯನ್ ರಾಷ್ಟ್ರಗಳ ಕ್ರಿಕೆಟ್ ಕದನ ಏಷ್ಯಾಕಪ್ ಸೆಪ್ಟೆಂಬರ್ 9 ರಿಂದ ಶುರುವಾಗಲಿದೆ. ಯುಎಇನಲ್ಲಿ ನಡೆಯಲಿರುವ ಈ ಏಷ್ಯಾಕಪ್​​​ ಗೆಲ್ಲಲು ಪಾಕಿಸ್ತಾನ್ ತಂಡ ಭರ್ಜರಿ ಪ್ಲ್ಯಾನ್ ರೂಪಿಸಿದೆ. ಅದು ಸಹ ಏಷ್ಯಾಕಪ್​​ಗೂ ಮುನ್ನ ತ್ರಿಕೋನ ಸರಣಿ ಆಯೋಜಿಸುವ ಮೂಲಕ. ಪಾಕಿಸ್ತಾನ್ ಕ್ರಿಕೆಟ್​ ಮಂಡಳಿ ಆಗಸ್ಟ್ 29 ರಿಂದ ಯುಎಇನಲ್ಲಿ ಮೂರು ತಂಡಗಳ ನಡುವಣ ತ್ರಿಕೋನ ಸರಣಿ ಆಯೋಜಿಸಲು ನಿರ್ಧರಿಸಿದೆ.

ಅದರಂತೆ ಈ ಸರಣಿಯು ಆಗಸ್ಟ್ 29 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಸೆಪ್ಟೆಂಬರ್ 7 ರಂದು ನಡೆಯಲಿದೆ. ಅಂದರೆ ಏಷ್ಯಾಕಪ್ ಆರಂಭಕ್ಕೂ ಒಂದು ದಿನ ಮುಂಚಿತವಾಗಿ ತ್ರಿಕೋನ ಸರಣಿಯ ಅಂತಿಮ ಪಂದ್ಯ ನಡೆಯಲಿದೆ.

ಇದಾದ ಬಳಿಕ ಭಾರತ ಮತ್ತು ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಈ ಪಂದ್ಯವು ಸೆಪ್ಟೆಂಬರ್ 14 ರಂದು ಜರುಗಲಿದ್ದು, ಅದಕ್ಕೂ ಮುನ್ನ ತ್ರಿಕೋನ ಸರಣಿಯ ಮೂಲಕ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲು ಪಾಕಿಸ್ತಾನ್ ತಂಡ ಪ್ಲ್ಯಾನ್ ರೂಪಿಸಿದೆ.

ತ್ರಿಕೋನ ಸರಣಿ ವೇಳಾಪಟ್ಟಿ:

  1. ಆಗಸ್ಟ್ 29  ಅಫ್ಘಾನಿಸ್ತಾನ್ ಪಾಕಿಸ್ತಾನ  (ಶಾರ್ಜಾ ಸ್ಟೇಡಿಯಂ)
  2. ಆಗಸ್ಟ್ 30  ಯುಎಇ ಪಾಕಿಸ್ತಾನ್  (ಶಾರ್ಜಾ ಸ್ಟೇಡಿಯಂ)
  3. ಸೆಪ್ಟೆಂಬರ್ 1  ಯುಎಇ v ಅಫ್ಘಾನಿಸ್ತಾನ್  (ಶಾರ್ಜಾ ಸ್ಟೇಡಿಯಂ)
  4. ಸೆಪ್ಟೆಂಬರ್ 2  ಪಾಕಿಸ್ತಾನ್ ಅಫ್ಘಾನಿಸ್ತಾನ್  (ಶಾರ್ಜಾ ಸ್ಟೇಡಿಯಂ)
  5. ಸೆಪ್ಟೆಂಬರ್ 4  ಪಾಕಿಸ್ತಾನ್ ಯುಎಇ  (ಶಾರ್ಜಾ ಸ್ಟೇಡಿಯಂ)
  6. ಸೆಪ್ಟೆಂಬರ್ 5  ಅಫ್ಘಾನಿಸ್ತಾನ್ ಯುಎಇ  (ಶಾರ್ಜಾ ಸ್ಟೇಡಿಯಂ)
  7. ಸೆಪ್ಟೆಂಬರ್ 7  ಫೈನಲ್ ಪಂದ್ಯ (ಶಾರ್ಜಾ ಸ್ಟೇಡಿಯಂ)

ಇದನ್ನೂ ಓದಿ: IPL 2026: ಐಪಿಎಲ್ ನಿಯಮ… RCB ಈ ಇಬ್ಬರನ್ನು ಬಿಡುಗಡೆ ಮಾಡಲೇಬೇಕು!

ಯುಎಇ ತಂಡ: ಮುಹಮ್ಮದ್ ವಸೀಮ್ (ನಾಯಕ), ಹೈದರ್ ಅಲಿ, ರಾಹುಲ್ ಚೋಪ್ರಾ, ಎಥಾನ್ ಡಿಸೋಜಾ, ಮುಹಮ್ಮದ್ ಫಾರೂಕ್, ಮುಹಮ್ಮದ್ ಜವದುಲ್ಲಾ, ಹರ್ಷಿತ್ ಕೌಶಿಕ್, ಆಸಿಫ್ ಖಾನ್, ರೋಹಿದ್ ಖಾನ್, ಸಘೀರ್ ಖಾನ್, ಧ್ರುವ ಪರಾಶರ್, ಅಲಿಶಾನ್ ಶರಫು, ಆರ್ಯಾಂಶ್ ಶರ್ಮಾ, ಜುನೈದ್ ಸಿದ್ದಿಕ್, ಮುಹಮ್ಮದ್ ಝೊಹೈಬ್.

ಪಾಕಿಸ್ತಾನ್ ತಂಡ: ಸಲ್ಮಾನ್ ಅಲಿ ಅಘಾ (ನಾಯಕ), ಅಬ್ರಾರ್ ಅಹ್ಮದ್, ಫಹೀಮ್ ಅಶ್ರಫ್, ಫಖರ್ ಝಮಾನ್, ಹ್ಯಾರಿಸ್ ರೌಫ್, ಹಸನ್ ಅಲಿ, ಹಸನ್ ನವಾಝ್, ಹುಸೇನ್ ತಲತ್, ಖುಷ್ದಿಲ್ ಶಾ, ಮೊಹಮ್ಮದ್ ಹ್ಯಾರಿಸ್ (ವಿಕೆಟ್ ಕೀಪರ್), ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಂ ಜೂನಿಯರ್, ಸಾಹಿಬ್​ಝಾದ್ ಫರ್ಹಾನ್, ಶಾಹೀನ್ ಅಫ್ರಿದಿ, ಸಲ್ಮಾನ್ ಮಿರ್ಝಾ, ಸೈಮ್ ಅಯ್ಯೂಬ್ ಮತ್ತು ಸುಫಿಯಾನ್ ಮುಖಿಮ್.

ಅಫ್ಘಾನಿಸ್ತಾನ್ ತಂಡ: ರಶೀದ್ ಖಾನ್ (ನಾಯಕ), ರಹಮಾನುಲ್ಲಾ ಗುರ್ಬಾಝ್, ಇಬ್ರಾಹಿಂದ್ರಾನ್, ದರ್ವಿಶ್ ರಸೂಲಿ, ಸೇದಿಖುಲ್ಲಾ ಅಟಲ್, ಅಝ್ಮತುಲ್ಲಾ ಒಮರ್ಝಾಹಿ, ಕರೀಂ ಜನತ್, ಮೊಹಮ್ಮದ್ ನಬಿ, ಗುಲ್ಬದಿನ್ ನೈಬ್, ಶರಫುದ್ದೀನ್ ಅಶ್ರಫ್, ಮೊಹಮ್ಮದ್ ಇಶಾಕ್, ಮುಜೀಬ್ ಉರ್ ರಹಮಾನ್, ಅಲ್ಲಾ ಘಝನ್​ಪರ್, ನೂರ್ ಅಹ್ಮದ್, ಫರೀದ್ ಮಲಿಕ್, ಅಬ್ದುಲ್ಲಾ ಅಹ್ಮದ್​ಝಾಹಿ, ಫಝಲ್​ಹಕ್ ಫಾರೂಖಿ.

Published On - 9:55 am, Thu, 28 August 25

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಪ್ರಮುಖ ಷರತ್ತುಗಳೇನು?
ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಪ್ರಮುಖ ಷರತ್ತುಗಳೇನು?
ಸೋಮವಾರ ಅಮಾವಾಸ್ಯೆ: ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ
ಸೋಮವಾರ ಅಮಾವಾಸ್ಯೆ: ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ
ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಹೆಚ್​​ಡಿಕೆ
ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಹೆಚ್​​ಡಿಕೆ
ಮಂತ್ರಾಲಯದಲ್ಲಿ ವರುಣನ ಅಬ್ಬರ: ಹೊಳೆಯಂತಾದ ರಸ್ತೆ, ತತ್ತರಿಸಿದ ಭಕ್ತರು
ಮಂತ್ರಾಲಯದಲ್ಲಿ ವರುಣನ ಅಬ್ಬರ: ಹೊಳೆಯಂತಾದ ರಸ್ತೆ, ತತ್ತರಿಸಿದ ಭಕ್ತರು
ಶಿವಮೊಗ್ಗ: ಆಟವಾಡುತ್ತಿದ್ದಾಗ ಆರು ವರ್ಷದ ಬಾಲಕ ಸಾವು, ಹೃದಯಾಘಾತ ಶಂಕೆ
ಶಿವಮೊಗ್ಗ: ಆಟವಾಡುತ್ತಿದ್ದಾಗ ಆರು ವರ್ಷದ ಬಾಲಕ ಸಾವು, ಹೃದಯಾಘಾತ ಶಂಕೆ