AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಖರೀದಿಗೆ ಮುಂದಾದ ಡೆಲ್ಲಿ ಕ್ಯಾಪಿಟಲ್ಸ್ ಮಾಲೀಕ: ಅದಾನಿ ಕಡೆಯಿಂದ ಟಕ್ಕರ್..!

IPL 2026 RCB: ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್​ನ ಅತ್ಯಂತ ಮೌಲ್ಯಯುತ ತಂಡವಾಗಿ ಗುರುತಿಸಿಕೊಂಡಿದೆ. ಈ ತಂಡದ ಫ್ರಾಂಚೈಸಿಯನ್ನು ಮಾರಾಟ ಮಾಡಲು ಡಿಯಾಜಿಯೋ ಕಂಪೆನಿ ಮುಂದಾಗಿದ್ದು, ಹೀಗಾಗಿ ಆರ್​ಸಿಬಿ ತಂಡದ ಖರೀದಿಗೆ ದೊಡ್ಡ ಉದ್ಯಮಿಗಳ ನಡುವೆ ಪೈಪೋಟಿ ನಡೆಯಲಿದೆ.

RCB ಖರೀದಿಗೆ ಮುಂದಾದ ಡೆಲ್ಲಿ ಕ್ಯಾಪಿಟಲ್ಸ್ ಮಾಲೀಕ: ಅದಾನಿ ಕಡೆಯಿಂದ ಟಕ್ಕರ್..!
Rcb - Jsw - Adani
ಝಾಹಿರ್ ಯೂಸುಫ್
|

Updated on: Nov 06, 2025 | 11:30 AM

Share

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಫ್ರಾಂಚೈಸಿ ಮಾಲೀಕರು ಬದಲಾಗುವುದು ಖಚಿತವಾಗಿದೆ. ಆರ್​ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಲು ಡಿಯಾಜಿಯೋ ಕಂಪೆನಿ ನಿರ್ಧರಿಸಿದ್ದು, ಇದರ ಬೆನ್ನಲ್ಲೇ ರಾಯಲ್ ಫ್ರಾಂಚೈಸಿ ಖರೀದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಹ ಮಾಲೀಕರಾದ ಪಾರ್ಥ್ ಜಿಂದಾಲ್ ಮುಂದಾಗಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಖರೀದಿಗೆ ಆಸಕ್ತಿ ಹೊಂದಿರುವವರ ಪಟ್ಟಿಯಲ್ಲಿ ಪಾರ್ಥ್ ಜಿಂದಾಲ್ ಮಾಲೀಕತ್ವದ JSW ಗ್ರೂಪ್ ಮುಂಚೂಣಿಯಲ್ಲಿದ್ದಾರೆ. ಅತ್ತ ಇದೇ ಜೆಎಸ್​ಡಬ್ಲ್ಯೂ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯಲ್ಲಿ ಶೇ.50 ರಷ್ಟು ಪಾಲು ಹೊಂದಿದೆ.

ಒಂದು ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯನ್ನು ಖರೀದಿಸುವಲ್ಲಿ ಜೆಎಸ್​ಡಬ್ಲ್ಯೂ ಗ್ರೂಪ್ ಯಶಸ್ವಿಯಾದರೆ, ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯ ಪಾಲನ್ನು ಮಾರಾಟ ಮಾಡಲಿದ್ದಾರೆ. ಏಕೆಂದರೆ ಐಪಿಎಲ್ ನಿಯಮದ ಪ್ರಕಾರ ಒಂದು ಕಂಪೆನಿಯು 2 ತಂಡಗಳನ್ನು ಖರೀದಿಸುವಂತಿಲ್ಲ. ಅಥವಾ ಎರಡು ತಂಡಗಳಲ್ಲಿ ಹೂಡಿಕೆ ಮಾಡುವಂತಿಲ್ಲ.

ಇತ್ತ ಜೆಎಸ್​ಡಬ್ಲ್ಯೂ ಗ್ರೂಪ್​ಗೆ ಪೈಪೋಟಿಯಾಗಿ ಅದಾನಿ ಗ್ರೂಪ್ ಕೂಡ ಎಂಟ್ರಿ ಕೊಟ್ಟಿದೆ. ಗೌತಮ್ ಅದಾನಿ ಮಾಲೀಕತ್ವದ ಅದಾನಿ ಗ್ರೂಪ್ ಈ ಹಿಂದಿನಿಂದಲೂ ಐಪಿಎಲ್​ನಲ್ಲಿ ತಂಡವನ್ನು ಖರೀದಿಸಲು ಪ್ರಯತ್ನಿಸುತ್ತಿದೆ. ಈ ಹಿಂದೆ ಗುಜರಾತ್ ಟೈಟಾನ್ಸ್ ಫ್ರಾಂಚೈಸಿಯ ಖರೀದಿಗೆ ಬಿಡ್ ಸಲ್ಲಿಸಿದರೂ ಯಶಸ್ವಿಯಾಗಿರಲಿಲ್ಲ.

ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯನ್ನು ಖರೀದಿಸಿ ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಎಂಟ್ರಿ ಕೊಡಲು ಅದಾನಿ ಗ್ರೂಪ್ ಪ್ಲ್ಯಾನ್ ರೂಪಿಸುತ್ತಿದೆ. ಆದರೆ ಇಲ್ಲಿ ಅದಾನಿ ಗ್ರೂಪ್​ಗೆ ಪೈಪೋಟಿ ನೀಡಲು ಆದಾರ್ ಪೂನಾವಾಲ ಕೂಡ ಮುಂದಾಗಿದ್ದಾರೆ.

ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆದರ್ ಪೂನವಾಲ ಕೂಡ ಡಿಯಾಜಿಯೋ ಕಂಪೆನಿ ಜೊತೆ ಮಾತುಕತೆ ನಡೆಸಿದ್ದು, ಈ ಮಾತುಕತೆ ಯಶಸ್ವಿಯಾದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಫ್ರಾಂಚೈಸಿ ಪುಣೆ ಮೂಲದ ಉದ್ಯಮಿ ಪಾಲಾಗಲಿದೆ.

ಈ ಮೂವರು ಉದ್ಯಮಿಗಳಲ್ಲದೆ ದೇವಯಾನಿ ಇಂಟರ್​ನ್ಯಾಷನಲ್ ಗ್ರೂಪ್ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಖರೀದಿಗೆ ಆಸಕ್ತಿ ತೋರಿದೆ.

ಹಾಗೆಯೇ ಅಮೆರಿಕದ ಪ್ರೈವೆಟ್ ಇನ್​ವೆಸ್ಟ್​ಮೆಂಟ್ ಕಂಪೆನಿಯೊಂದು ಕೂಡ ಆರ್​ಸಿಬಿ ಫ್ರಾಂಚೈಸಿ ಖರೀದಿಗಾಗಿ ಡಿಯಾಜಿಯೊ ಕಂಪೆನಿ ಜೊತೆ ಮಾತುಕತೆ ನಡೆಸಿದೆ ಎಂದು ವರದಿಯಾಗಿದೆ.

ಅಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಖರೀದಿಗಾಗಿ ಈಗಾಗಲೇ 5 ಕಂಪೆನಿಗಳು ಆಸಕ್ತಿ ತೋರಿಸಿದೆ. ಹೀಗಾಗಿ ಐವರಲ್ಲಿ ಇಬ್ಬರು ಆರ್​ಸಿಬಿ ತಂಡದ ಹೊಸ ಮಾಲೀಕರಾಗಿ ಹೊರಹೊಮ್ಮುವ ಸಾಧ್ಯತೆ ಹೆಚ್ಚಿದೆ.

ಇದನ್ನೂ ಓದಿ: WPL 2026: RCB ನಾಲ್ವರನ್ನು ಮಾತ್ರ ಉಳಿಸಿಕೊಳ್ಳಲು ಇದುವೇ ಅಸಲಿ ಕಾರಣ..!

ಆರ್​ಸಿಬಿ ಫ್ರಾಂಚೈಸಿ ಖರೀದಿಗೆ ಆಸಕ್ತಿ ಹೊಂದಿರುವವರು:

  • ಜೆಎಸ್​ಡಬ್ಲ್ಯೂ ಗ್ರೂಪ್ (ಪಾರ್ಥ್ ಜಿಂದಾಲ್)
  • ಅದಾನಿ ಗ್ರೂಪ್ (ಗೌತಮ್ ಅದಾನಿ)
  • ಪೂನಾವಾಲ ಗ್ರೂಪ್ (ಆದಾರ್ ಪೂನಾವಾಲ)
  • ದೇವಯಾನಿ ಇಂಟರ್ನ್ಯಾಷನಲ್ ಗ್ರೂಪ್ (ರವಿಕಾಂತ್ ಜೈಪುರಿಯಾ)
  • ಅಮೆರಿಕದ ಪ್ರೈವೆಟ್ ಇನ್​ವೆಸ್ಟ್​ಮೆಂಟ್ ಕಂಪೆನಿ
Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ