AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pat Cummins: ಹೆಡ್, ಅಭಿಷೇಕ್ ಅಲ್ಲ, ನಮ್ಮ ಗೆಲುವಿಗೆ ಈತನೇ ಕಾರಣ!

IPL 2026 MI vs SRH: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 243 ರನ್ ಕಲೆಹಾಕಿದ್ದರು. ಈ ಗುರಿಯನ್ನು ಸನ್ ರೈಸರ್ಸ್ ಹೈದರಾಬಾದ್ ತಂಡ 18.4 ಓವರುಗಳಲ್ಲಿ ಚೇಸ್ ಮಾಡಿ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.

Pat Cummins: ಹೆಡ್, ಅಭಿಷೇಕ್ ಅಲ್ಲ, ನಮ್ಮ ಗೆಲುವಿಗೆ ಈತನೇ ಕಾರಣ!
Pat Cummins
ಝಾಹಿರ್ ಯೂಸುಫ್
|

Updated on: Apr 30, 2026 | 8:53 AM

Share

IPL 2026: ವಾಂಖೆಡೆ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಐಪಿಎಲ್ 2026ರ ಹೈ-ವೋಲ್ಟೇಜ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (SRH) ತಂಡವು ಮುಂಬೈ ಇಂಡಿಯನ್ಸ್ (MI) ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಮುಂಬೈ ನೀಡಿದ್ದ 244 ರನ್‌ಗಳ ಬೃಹತ್ ಮೊತ್ತವನ್ನು ಇನ್ನು 8 ಎಸೆತಗಳು ಬಾಕಿ ಇರುವಂತೆಯೇ ಬೆನ್ನಟ್ಟುವ ಮೂಲಕ ಸನ್‌ರೈಸರ್ಸ್ ಹೈದರಾಬಾದ್ ಐತಿಹಾಸಿಕ ರನ್ ಚೇಸ್ ದಾಖಲಿಸಿದೆ.

ಈ ಗೆಲುವಿನ ಬಳಿಕ ಮಾತನಾಡಿದ ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮಿನ್ಸ್, “ನಮ್ಮ ಬ್ಯಾಟಿಂಗ್ ಲೈನಪ್ ಮತ್ತು ಪಿಚ್‌ನ ಗುಣಮಟ್ಟ ನೋಡಿದರೆ ಎಂತಹ ಗುರಿಯನ್ನೂ ಬೆನ್ನಟ್ಟಬಹುದು ಎಂಬ ನಂಬಿಕೆ ನನಗಿತ್ತು. ನಮ್ಮ ಆರಂಭಿಕ ಆಟಗಾರರು ಯಾವುದೇ ಭಯವಿಲ್ಲದೆ ಆಡುತ್ತಿದ್ದಾರೆ. ಅವರಲ್ಲಿ ಅದೆಷ್ಟು ವೈವಿಧ್ಯಮಯ ಶಾಟ್‌ಗಳಿವೆ ಎಂದರೆ, ಅವರಿಗೆ ಬೌಲಿಂಗ್ ಮಾಡುವ ಪರಿಸ್ಥಿತಿ ನನಗೆ ಬರದಿರುವುದಕ್ಕೆ ನಾನು ದೇವರಿಗೆ ಧನ್ಯವಾದ ಅರ್ಪಿಸುತ್ತೇನೆ!” ಎಂದು ಹಾಸ್ಯ ಚಟಾಕಿ ಹಾರಿಸಿದ್ದಾರೆ.

ಯುವ ಆಟಗಾರರ ಬೆಂಬಲ:

ತಂಡದ ಯುವ ಆಟಗಾರರಾದ ಸಲಿಲ್ ಅರೋರಾ ಅವರಂತಹ ಪ್ರತಿಭೆಗಳ ಬಗ್ಗೆ ಮಾತನಾಡುತ್ತಾ, ಕೋಚಿಂಗ್ ಸ್ಟಾಫ್ ಯುವಕರಲ್ಲಿ ತುಂಬಿರುವ ‘ನಿರ್ಭೀತ ಮನೋಭಾವ’ವೇ ತಂಡದ ಯಶಸ್ಸಿನ ಗುಟ್ಟು ಎಂದಿದ್ದಾರೆ. “ಈ ಯುವ ಆಟಗಾರರಿಗೆ ತಾವು ಎಷ್ಟು ಸಮರ್ಥರು ಎಂಬುದು ಅವರಿಗೇ ತಿಳಿದಿಲ್ಲ, ಅದು ಅವರ ದೊಡ್ಡ ಶಕ್ತಿ,” ಎಂದು ಕಮ್ಮಿನ್ಸ್ ಅಭಿಪ್ರಾಯಪಟ್ಟಿದ್ದಾರೆ.

ಬೌಲರ್‌ಗಳಿಗೆ ಹೊಸ ಸವಾಲು:

ಹೆಚ್ಚಿನ ರನ್ ಬಿಟ್ಟುಕೊಡುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಕಮ್ಮಿನ್ಸ್, “ಖಂಡಿತವಾಗಿಯೂ ಚಿಂತೆಯಾಗುತ್ತದೆ. ಆದರೆ ನಾವು ವಾಸ್ತವವನ್ನು ಒಪ್ಪಿಕೊಳ್ಳಬೇಕು. ಐದು ವರ್ಷಗಳ ಹಿಂದಿನ ಐಪಿಎಲ್‌ಗೂ ಈಗಿನದ್ದಕ್ಕೂ ದೊಡ್ಡ ವ್ಯತ್ಯಾಸವಿದೆ. ಹಿಂದೆ 200 ರನ್ ಬೆನ್ನಟ್ಟುವುದು ಕಷ್ಟವಾಗಿತ್ತು, ಆದರೆ ಈಗ ಓವರ್‌ಗೆ 12 ರನ್ ಬೇಕಿದ್ದರೂ ಬ್ಯಾಟರ್‌ಗಳು ಅದನ್ನು ಸುಲಭವಾಗಿ ಚೇಸ್ ಮಾಡುತ್ತಿದ್ದಾರೆ. ಹೀಗಾಗಿ ಬೌಲರ್‌ಗಳು ತಮ್ಮ ನಿರೀಕ್ಷೆಗಳನ್ನು ಬದಲಿಸಿಕೊಳ್ಳಬೇಕಿದೆ,” ಎಂದಿದ್ದಾರೆ.

ಬೌಲರ್‌ಗಳಿಗೆ ಎದುರಾಗಿರುವ ಇಂತಹ ಸವಾಲುಗಳ ನಡುವೆ ಈಶಾನ್ ಮಾಲಿಂಗ ಅವರ ಬೌಲಿಂಗ್ ದಾಳಿಯೇ ನಮ್ಮ ಗೆಲುವಿಗೆ ಕಾರಣ. ಏಕೆಂದರೆ ಹೈ ಸ್ಕೋರಿಂಗ್ ಪಂದ್ಯದಲ್ಲಿ ಈಶಾನ್ 4 ಓವರ್‌ಗಳಲ್ಲಿ ನೀಡಿದ್ದು ಕೇವಲ 29 ರನ್ ಮಾತ್ರ. ಹೀಗಾಗಿ ನಮ್ಮ ಗೆಲುವಿಗೆ ಈಶಾನ್ ಮಾಲಿಂಗ ಕಾರಣ ಎಂದೇ ಹೇಳಬೇಕು.

ಕೊನೆಯಲ್ಲಿ ನೀವು ಹಾಕುವ ಒಂದು ಅತ್ಯುತ್ತಮ ಯಾರ್ಕರ್ ಪಂದ್ಯದ ಗತಿಯನ್ನೇ ಬದಲಿಸಬಹುದು. ಈಶಾನ್ ಮಾಲಿಂಗ ಅವರಂತಹ ಬೌಲರ್‌ಗಳು ನಮ್ಮ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದು ಪ್ಯಾಟ್ ಕಮಿನ್ಸ್, ಶ್ಲಾಘಿಸಿದ್ದಾರೆ.

ಇದನ್ನೂ ಓದಿ: ಗೆಲುವಿಗಾಗಿ 22 ಆಟಗಾರರನ್ನು ಕಣಕ್ಕಿಳಿಸಿದ ಮುಂಬೈ ಇಂಡಿಯನ್ಸ್

ಒಟ್ಟಾರೆಯಾಗಿ, ಬ್ಯಾಟಿಂಗ್ ಸ್ನೇಹಿ ಪಿಚ್‌ಗಳ ನಡುವೆಯೂ ಈಶಾನ್ ಮಾಲಿಂಗ 4 ಓವರ್‌ಗಳಲ್ಲಿ ಕೇವಲ 29 ರನ್ ಮಾತ್ರ ನೀಡಿದ್ದಾರೆ. ಪರಿಣಾಮ 250 ರ ಗಡಿದಾಟಬೇಕಿದ್ದ ಮುಂಬೈ ಇಂಡಿಯನ್ಸ್ ಸ್ಕೋರ್ 243 ರಲ್ಲೇ ನಿಂತಿದೆ. ಈ ಗುರಿ ಬೆನ್ನತ್ತಿ ಸನ್‌ರೈಸರ್ಸ್ ಹೈದರಾಬಾದ್ 6 ವಿಕೆಟ್ ಗಳ ವಿಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಸನ್‌ರೈಸರ್ಸ್ ಹೈದರಾಬಾದ್ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದೆ.

Follow Us
ಛಾಯಾ ಸಿಂಗ್ ಹುಡುಗನಾಗಿ, ರಾಜೇಶ್ ಹುಡುಗಿಯಾಗಿ ಬದಲಾದ್ರೆ ಹೇಗಿರ್ತಾರೆ?
ಛಾಯಾ ಸಿಂಗ್ ಹುಡುಗನಾಗಿ, ರಾಜೇಶ್ ಹುಡುಗಿಯಾಗಿ ಬದಲಾದ್ರೆ ಹೇಗಿರ್ತಾರೆ?
ಫಲ ಸಿಗಬೇಕು ಎಂದರೆ ನೀವು ಯಾವ ದಿನ ಉಪವಾಸ ಮಾಡಬೇಕು ಗೊತ್ತಾ?
ಫಲ ಸಿಗಬೇಕು ಎಂದರೆ ನೀವು ಯಾವ ದಿನ ಉಪವಾಸ ಮಾಡಬೇಕು ಗೊತ್ತಾ?
ಇಂದು ಈ ರಾಶಿಯವರು ಅನ್ಯರ ಮಾತಿಗೆ ಹೆಚ್ಚು ಒತ್ತು ಕೊಡಬೇಡಿ
ಇಂದು ಈ ರಾಶಿಯವರು ಅನ್ಯರ ಮಾತಿಗೆ ಹೆಚ್ಚು ಒತ್ತು ಕೊಡಬೇಡಿ
ಶೀಘ್ರವೇ ದರ ಏರಿಕೆ ಶಾಕ್​​?: ಪೆಟ್ರೋಲ್​​ ರೇಟ್​​ 5 ರೂ. ಏರಿಕೆ ಸಾಧ್ಯತೆ
ಶೀಘ್ರವೇ ದರ ಏರಿಕೆ ಶಾಕ್​​?: ಪೆಟ್ರೋಲ್​​ ರೇಟ್​​ 5 ರೂ. ಏರಿಕೆ ಸಾಧ್ಯತೆ
ಬೆಂಗಳೂರಿನಲ್ಲಿ ಮತ್ತೆ ಮಳೆ ಆರ್ಭಟ: ರಸ್ತೆಗಳು ಜಲಾವೃತ; ಜನ್ರು ಪರದಾಟ
ಬೆಂಗಳೂರಿನಲ್ಲಿ ಮತ್ತೆ ಮಳೆ ಆರ್ಭಟ: ರಸ್ತೆಗಳು ಜಲಾವೃತ; ಜನ್ರು ಪರದಾಟ
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್