AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pat Cummins: ನಮ್ಮ ಎದುರಾಳಿಯಾಗಿದ್ದರೂ ಅಬ್ಬರಿಸಿದ್ದು ಆಸ್ಟ್ರೇಲಿಯಾದವ!

IPL 2026 SRH vs PBKS: ಇಂಡಿಯನ್ ಪ್ರೀಮಿಯರ್ ಲೀಗ್​ನ 49ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​​ರೈಸರ್ಸ್ ಹೈದರಾಬಾದ್​ ತಂಡ 20 ಓವರ್​ಗಳಲ್ಲಿ 235 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು 202 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಈ ಮೂಲಕ ಎಸ್​ಆರ್​​ಹೆಚ್ ತಂಡ 33 ರನ್​ಗಳ ಜಯ ಸಾಧಿಸಿದೆ.

Pat Cummins: ನಮ್ಮ ಎದುರಾಳಿಯಾಗಿದ್ದರೂ ಅಬ್ಬರಿಸಿದ್ದು ಆಸ್ಟ್ರೇಲಿಯಾದವ!
Pat Cummins
ಝಾಹಿರ್ ಯೂಸುಫ್
|

Updated on: May 07, 2026 | 9:25 AM

Share

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 49ನೇ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡ ಭರ್ಜರಿ ಜಯ ಸಾಧಿಸಿದೆ. ಹೈದರಾಬಾದ್​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 235 ರನ್​ ಕಲೆಹಾಕಿತು.

ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ಪರ ಕೂಪರ್ ಕೊನೊಲಿ 59 ಎಸೆತಗಳಲ್ಲಿ 8 ಭರ್ಜರಿ ಸಿಕ್ಸರ್ ಹಾಗೂ 7 ಫೋರ್​ಗಳೊಂದಿಗೆ ಅಜೇಯ 107 ರನ್ ಬಾರಿಸಿದರು. ಇದಾಗ್ಯೂ ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ 33 ರನ್​ಗಳಿಂದ ಸೋಲನುಭವಿಸಿತು.

ಈ ಗೆಲುವಿನ ಬಳಿಕ ಮಾತನಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮಿನ್ಸ್, ಕೂಪರ್ ಕೊನೊಲಿ ಅವರ ಆಟವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.

“ಇದು ಕೂಪರ್ ಕೊನೊಲಿ ಅತ್ಯುತ್ತಮವಾಗಿ ಬ್ಯಾಟಿಂಗ್ ಮಾಡಿದ್ದಾರೆ. ಇದು ಅವರಿಗೆ ಉತ್ತಮ ಫಲಿತಾಂಶ. ಒಬ್ಬ ಆಸ್ಟ್ರೇಲಿಯನ್ ಆಟಗಾರ ಇಷ್ಟು ಅದ್ಭುತವಾಗಿ ಆಡುವುದನ್ನು ನೋಡುವುದು ಖುಷಿ ನೀಡುತ್ತದೆ. ಕೂಪರ್ ಕೊನೊಲಿ ಆಟ ಆಸ್ಟ್ರೇಲಿಯಾ ತಂಡಕ್ಕೂ ಶುಭ ಸಂಕೇತ” ಎಂದು ಪ್ಯಾಟ್ ಕಮಿನ್ಸ್ ಹಾಡಿ ಹೊಗಳಿದ್ದಾರೆ.

ಇಲ್ಲಿ ಕೂಪರ್ ಕೊನೊಲಿ ಎದುರಾಳಿ ತಂಡದ ಆಟಗಾರನಾಗಿದ್ದರೂ ಆಸ್ಟ್ರೇಲಿಯಾದವ ಅತ್ಯುತ್ತಮವಾಗಿ ಆಡಿರುವುದನ್ನು ನೋಡಿ ಪ್ಯಾಟ್ ಕಮಿನ್ಸ್​ಗೆ ಖುಷಿಯಾಗಿದೆ. ಏಕೆಂದರೆ ಕೊನೊಲಿ ಆಸ್ಟ್ರೇಲಿಯಾ ತಂಡದ ಭರವಸೆಯ ದಾಂಡಿಗ. ಇದೇ ರೀತಿ ಪ್ರದರ್ಶನ ನೀಡಿದರೆ ಅದರಿಂದ ಆಸ್ಟ್ರೇಲಿಯಾ ತಂಡಕ್ಕೆ ಪ್ಲಸ್ ಪಾಯಿಂಟ್ ಆಗಲಿದೆ ಎಂಬುದು ಕಮಿನ್ಸ್ ಅವರ ಅಭಿಮತ.

ಇದನ್ನೂ ಓದಿ: ಅಭಿಷೇಕ್ ಆರ್ಭಟಕ್ಕೆ ಕ್ರಿಸ್ ಗೇಲ್ ದಾಖಲೆ ಧೂಳೀಪಟ

ಇನ್ನು ಈ ಪಂದ್ಯದಲ್ಲಿ ಶತಕ ಸಿಡಿಸುವುದರೊಂದಿಗೆ ಕೂಪರ್ ಕೊನೊಲಿ ಭರ್ಜರಿ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ. ಆ ದಾಖಲೆ ಯಾವುದೆಂದರೆ…

  •  ಕಿರಿಯ ಶತಕವೀರ: 22 ವರ್ಷದ ಕೊನೊಲಿ, ಐಪಿಎಲ್‌ನಲ್ಲಿ ಶತಕ ಸಿಡಿಸಿದ ಅತ್ಯಂತ ಕಿರಿಯ ಓವರ್‌ಸೀಸ್ ಆಟಗಾರ ಎನಿಸಿಕೊಂಡರು.
  • ಬ್ರಾಡ್‌ಮನ್ ಪ್ರಶಸ್ತಿ ವಿಜೇತ: ಈ ವರ್ಷದ ಆರಂಭದಲ್ಲೇ ‘ಬ್ರಾಡ್‌ಮನ್ ಯಂಗ್ ಕ್ರಿಕೆಟರ್ ಆಫ್ ದಿ ಇಯರ್’ ಪ್ರಶಸ್ತಿ ಪಡೆದಿದ್ದ ಕೊನೊಲಿ, ಈಗ ಐಪಿಎಲ್‌ನಲ್ಲೂ ತಮ್ಮ ಸಾಮರ್ಥ್ಯ ಸಾಬೀತುಪಡಿಸಿದ್ದಾರೆ.
  • ಏಕಾಂಗಿ ಹೋರಾಟ: ಹೈದರಾಬಾದ್ ನೀಡಿದ್ದ 235 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ಪರ ಕೊನೊಲಿ ಒಬ್ಬರೇ ಹೋರಾಟ ನಡೆಸಿದರು. ಈ ಏಕಾಂಗಿ ಹೋರಾಟಕ್ಕೆ ಪ್ಯಾಟ್ ಕಮಿನ್ಸ್ ಮೆಚ್ಚುಗೆಗಳನ್ನು ವ್ಯಕ್ತಪಡಿಸಿದ್ದಾರೆ.

ಅಗ್ರಸ್ಥಾನಕ್ಕೇರಿದ ಎಸ್​ಆರ್​​ಹೆಚ್​:

ಪಂಜಾಬ್ ಕಿಂಗ್ಸ್​ ವಿರುದ್ಧದ ಗೆಲುವಿನೊಂದಿಗೆ ಸನ್​ರೈಸರ್ಸ್ ಹೈದರಾಬಾದ್ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಅಲ್ಲದೆ ಮುಂದಿನ 3 ಪಂದ್ಯಗಳಲ್ಲಿ ಎಸ್​ಆರ್​​ಹೆಚ್ ತಂಡ ಒಂದು ಗೆಲುವು ಸಾಧಿಸಿದರೆ ಪ್ಲೇಆಫ್ ಆಡುವುದು ಸಹ ಖಚಿತವಾಗಲಿದೆ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?