AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಪಂಜಾಬ್ ಸೋಲಿಗೆ ಅದರ ಮಾಲೀಕರೇ ಕಾರಣ..! ಮಾಜಿ ನಾಯಕನ ಗಂಭೀರ ಆರೋಪ

PBKS IPL 2026 Playoffs Hopes Dwindle: ಪಂಜಾಬ್ ಕಿಂಗ್ಸ್ IPL 2026 ರಲ್ಲಿ ಆರಂಭದಲ್ಲಿ ಆರು ಗೆಲುವು ಸಾಧಿಸಿ ನಂತರ ಸತತ ಐದು ಪಂದ್ಯಗಳನ್ನು ಸೋತಿದ್ದು, ಪ್ಲೇಆಫ್ ರೇಸ್‌ನಿಂದ ಹೊರಗುಳಿಯುವ ಆತಂಕದಲ್ಲಿದೆ. ಮಾಜಿ ಆಟಗಾರ ಆರ್. ಅಶ್ವಿನ್ ಈ ಕುಸಿತಕ್ಕೆ ತಂಡದ ಮಾಲೀಕರ ನಿರ್ಧಾರವೇ ಕಾರಣ ಎಂದಿದ್ದಾರೆ. ಎರಡು ತವರು ಮೈದಾನಗಳನ್ನು ಆಯ್ಕೆ ಮಾಡಿಕೊಂಡಿರುವುದು ಆಟಗಾರರ ಹೊಂದಾಣಿಕೆಗೆ ಅಡ್ಡಿಯಾಗಿದ್ದು, ಅದರಲ್ಲೂ ಧರ್ಮಶಾಲಾದ ಪಿಚ್‌ನಲ್ಲಿ ತಂಡದ ಬ್ಯಾಟಿಂಗ್ ಕಳಪೆಯಾಗಿದೆ ಎಂದು ಅವರು ವಿವರಿಸಿದ್ದಾರೆ.

IPL 2026: ಪಂಜಾಬ್ ಸೋಲಿಗೆ ಅದರ ಮಾಲೀಕರೇ ಕಾರಣ..! ಮಾಜಿ ನಾಯಕನ ಗಂಭೀರ ಆರೋಪ
Punjab Kings
ಪೃಥ್ವಿಶಂಕರ
|

Updated on:May 16, 2026 | 6:29 PM

Share

2026 ರ ಐಪಿಎಲ್‌ನಲ್ಲಿ (IPL 2026) ಸತತ 6 ಪಂದ್ಯಗಳನ್ನು ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ರಾರಾಜಿಸುತ್ತಿದ್ದ ಪಂಜಾಬ್ ಕಿಂಗ್ಸ್ (Punjab Kings) ತಂಡ ಅದ್ಯಾಕೋ 6 ರ ಪಂದ್ಯಗಳ ನಂತರ ಲಯ ಕಳೆದುಕೊಂಡಿದೆ. ಇದರ ಪರಿಣಾಮವಾಗಿ ಆ ನಂತರ ನಡೆದ ಸತತ ಐದು ಪಂದ್ಯಗಳನ್ನು ಸೋತಿದೆ. ಆರಂಭದಲ್ಲಿ ಸತತ ಗೆಲುವುಗಳಿಂದ ಸುಲಭವಾಗಿ ಪ್ಲೇಆಫ್‌ಗೇರುವ ಭರವಸೆ ಮೂಡಿಸಿದ್ದ ಪಂಜಾಬ್ ಇದೀಗ ಸತತ ಸೋಲುಗಳಿಂದಾಗಿ ಪ್ಲೇಆಫ್‌ ರೇಸ್​ನಿಂದ ಹೊರಗುಳಿಯುವ ಆತಂಕದಲ್ಲಿದೆ. ಅದರಲ್ಲೂ ಪಂಜಾಬ್ ತನ್ನ ತವರು ನೆಲದಲ್ಲೇ ಸೋಲುತ್ತಿರುವುದು ಅಭಿಮಾನಿಗಳಿಗೆ ನಿರಾಸೆಯನ್ನುಂಟು ಮಾಡಿದೆ. ಇದೀಗ ಪಂಜಾಬ್ ಸೋಲಿಗೆ ಕಾರಣ ವಿವರಿಸಿರುವ ಪಂಜಾಬ್ ತಂಡದ ಮಾಜಿ ಆಟಗಾರ ರವಿಚಂದ್ರನ್ ಅಶ್ವಿನ್(R Ashwin), ಪಂಜಾಬ್ ಕಿಂಗ್ಸ್ ತಂಡದ ಸತತ ಐದು ಸೋಲುಗಳಿಗೆ ತಂಡದ ಮಾಲೀಕರೇ ಕಾರಣ ಎಂದಿದ್ದಾರೆ.

2 ತವರು ಮೈದಾನಗಳು ಪಂಜಾಬ್ ಸೋಲಿಗೆ ಕಾರಣ

ವಾಸ್ತವವಾಗಿ ಐಪಿಎಲ್‌ನಲ್ಲಿ ಪ್ರತಿಯೊಂದು ತಂಡವೂ ಒಂದು ತವರು ಮೈದಾನವನ್ನು ಹೊಂದಿರುತ್ತವೆ. ಇದು ತಂಡಗಳು ತವರು ಮೈದಾನದ ಲಾಭ ಪಡೆದು ತಂತ್ರರೂಪಿಸಿ ಗೆಲುವು ಸಾಧಿಸಲು ನೆರವಾಗುತ್ತದೆ. ಆದರೆ ಪಂಜಾಬ್ ತಂಡ ಎರಡೆರಡು ಮೈದಾನಗಳನ್ನು ತವರು ಮೈದಾನವಾಗಿ ಆಯ್ಕೆ ಮಾಡಿಕೊಂಡಿದೆ. ಇದು ತಂಡದ ಫಲಿತಾಂಶದ ಮೇಲೆ ನೇರ ಪರಿಣಾಮ ಬೀರುತ್ತಿದೆ. ಅಶ್ವಿನ್ ಕೂಡ ಇದನ್ನೇ ಹೇಳಿದ್ದಾರೆ.

ಅತ್ಯಂತ ಯಶಸ್ವಿ ಐಪಿಎಲ್ ತಂಡಗಳು ತಮ್ಮ ತವರು ಮೈದಾನಗಳನ್ನು ಎಂದಿಗೂ ಬದಲಾಯಿಸಿಲ್ಲ. ಆದರೆ ಪಂಜಾಬ್ ಎರಡು ಮೈದಾನಗಳಲ್ಲಿ ಪಂದ್ಯಗಳನ್ನು ಆಡುತ್ತದೆ.ಇದು ಅವರ ಗೆಲುವಿನ ಓಟಕ್ಕೆ ಅಡ್ಡಿಯಾಗಿದೆ. ಆಟಗಾರರು ಹೊಸ ಮೈದಾನಗಳಿಗೆ ಬೇಗನೆ ಹೊಂದಿಕೊಳ್ಳಲು ಸಾಧ್ಯವಾಗುವುದಿಲ್ಲ, ಅದಕ್ಕಾಗಿಯೇ ಗೆಲುವಿನ ಸರಣಿಗೆ ಅಡ್ಡಿಯಾಗುತ್ತದೆ. ಹೀಗಾಗಿ ಪಂಜಾಬ್ ತಂಡದ ಮಾಲೀಕರು ಎರಡೆರಡು ಮೈದಾನಗಳನ್ನು ತವರು ಮೈದಾನವಾಗಿ ಆಯ್ಕೆ ಮಾಡಿರುವುದು ತಂಡಕ್ಕೆ ಕಂಟಕವಾಗುತ್ತಿದೆ ಎಂದು ಅಶ್ವಿನ್ ಅಭಿಪ್ರಾಯ ಪಟ್ಟಿದ್ದಾರೆ.

ಕಾರಣ ವಿವರಿಸಿದ ಅಶ್ವಿನ್

ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿರುವ ಅಶ್ವಿನ್, ‘ನನಗೊಂದು ಪ್ರಶ್ನೆ ಇದೆ. ಕೆಕೆಆರ್, ಮುಂಬೈ ಮತ್ತು ಸಿಎಸ್‌ಕೆ 19 ಸೀಸನ್‌ಗಳಲ್ಲಿ ಅತಿ ಹೆಚ್ಚು ಟ್ರೋಫಿಗಳನ್ನು ಗೆದ್ದ ತಂಡಗಳು. ಅವರು ಒಟ್ಟು 13 ಟ್ರೋಫಿಗಳನ್ನು ಗೆದ್ದಿದ್ದಾರೆ. ಎಸ್‌ಆರ್‌ಎಚ್ ಕೂಡ ಎರಡು (ಡೆಕ್ಕನ್ ಚಾರ್ಜರ್ಸ್ ಸೇರಿದಂತೆ) ಗೆದ್ದಿದೆ. ಈ ತಂಡಗಳು ಎಂದಾದರೂ ತಮ್ಮ ತವರು ನೆಲವನ್ನು ಬದಲಾಯಿಸಿದ್ದಾರೆಯೇ? ಹೊರಗಿನಿಂದ ನೋಡಿದರೆ ಪಂಜಾಬ್ ತಂಡ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ನೀವು ಭಾವಿಸಬಹುದು. ಆದರೆ ನಾನು ತಂಡದಲ್ಲಿದ್ದಾಗ ನನಗೂ ಇದೇ ಅನುಭವವಾಗಿದೆ. 2018 ರ ಆವೃತ್ತಿಯಲ್ಲಿ ನಾವು ಮೊಹಾಲಿಯಲ್ಲಿ ಐದು ಪಂದ್ಯಗಳನ್ನು ಗೆದ್ದಿದ್ದೆವು. ಆದರೆ ಆನಂತರ ಮೈದಾನವನ್ನು ಬದಲಾಯಿಸಿದ ಕಾರಣದಿಂದಾಗಿ ಸತತವಾಗಿ ಸೋತು ಟೂರ್ನಮೆಂಟ್‌ನಿಂದ ಹೊರಬಿದ್ದೆವು.

PBKS vs MI: ನಾಯಕನಾಗಿ ಚೊಚ್ಚಲ ಪಂದ್ಯದಲ್ಲಿ ಗೆದ್ದ ಬುಮ್ರಾ; ಪಂಜಾಬ್​ಗೆ ಸತತ 5ನೇ ಸೋಲು

ಪಂಜಾಬ್ ಮುಲ್ಲನ್‌ಪುರದ ಜೊತೆಗೆ ಧರ್ಮಶಾಲಾವನ್ನು ತವರು ನೆಲವಾಗಿ ಆಯ್ಕೆ ಮಾಡಿಕೊಂಡಿದೆ. ಆದರೆ ಧರ್ಮಶಾಲಾದಲ್ಲಿ ಪಂಜಾಬ್​ಗೆ ಯಶಸ್ಸು ಸಿಗುತ್ತಿಲ್ಲ. ಅಲ್ಲಿನ ಪಿಚ್ ಬ್ಯಾಟಿಂಗ್‌ಗೆ ಅಷ್ಟೊಂದು ಉತ್ತಮವಾಗಿಲ್ಲ. ಹೀಗಾಗಿ ಮೊದಲ ಬ್ಯಾಟಿಂಗ್‌ ಮಾಡುವ ತಂಡಗಳಿಗೆ ಪಿಚ್​ಗೆ ಹೊಂದಿಕೊಳ್ಳಲು ಸಮಯ ತೆಗೆದುಕೊಳ್ಳುತ್ತದೆ. ಇದರ ಪರಿಣಾಮವಾಗಿ ಪಂಜಾಬ್‌ ಬ್ಯಾಟಿಂಗ್ ಮಾಡುವಾಗ 30-40 ರನ್‌ಗಳು ಕಡಿಮೆಯಾಗಿದೆ. ಏಕೆಂದರೆ ಅವರು ಇನ್ನೂ ಆ ಮೈದಾನದಲ್ಲಿ ಹೊಂದಿಕೊಳ್ಳಲು ಸಾಧ್ಯವಾಗಿಲ್ಲ’ ಎಂದು ಅಶ್ವಿನ್ ಹೇಳಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:26 pm, Sat, 16 May 26

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ನೆದರ್‌ಲ್ಯಾಂಡ್ಸ್‌ ತಲುಪಿದ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ
ನೆದರ್‌ಲ್ಯಾಂಡ್ಸ್‌ ತಲುಪಿದ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ