AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುಭ್​​ಮನ್ ಗಿಲ್ ಮಾಡಿದ ಒಂದು ತಪ್ಪಿನಿಂದಾಗಿ ಸೋತ ಗುಜರಾತ್ ಟೈಟಾನ್ಸ್​

Punjab Kings vs Gujarat Titans: ಇಂಡಿಯನ್ ಪ್ರೀಮಿಯರ್ ಲೀಗ್​ನ 4ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್​​ಗಳಲ್ಲಿ 162 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು 19.1 ಓವರ್​​ಗಳಲ್ಲಿ 165 ರನ್ ಬಾರಿಸಿ 3 ವಿಕೆಟ್​ಗಳ ರೋಚಕ ಜಯ ಸಾಧಿಸಿದೆ.

ಶುಭ್​​ಮನ್ ಗಿಲ್ ಮಾಡಿದ ಒಂದು ತಪ್ಪಿನಿಂದಾಗಿ ಸೋತ ಗುಜರಾತ್ ಟೈಟಾನ್ಸ್​
Shubman Gill
ಝಾಹಿರ್ ಯೂಸುಫ್
|

Updated on: Apr 01, 2026 | 7:36 AM

Share

ಐಪಿಎಲ್ 2026ರ ಸೀಸನ್‌ನ ರೋಚಕ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ವಿರುದ್ಧ ಗುಜರಾತ್ ಟೈಟಾನ್ಸ್ (GT)  ಮೂರು ವಿಕೆಟ್‌ಗಳ ಸೋಲನ್ನು ಅನುಭವಿಸಿತು. ಆದರೆ, ಈ ಸೋಲಿಗಿಂತ ಹೆಚ್ಚಾಗಿ ಚರ್ಚೆಯಾಗುತ್ತಿರುವುದು ನಾಯಕ ಶುಭ್​ಮನ್ ಗಿಲ್ ಅವರ ಒಂದು ವಿಚಿತ್ರ ನಿರ್ಧಾರ. ಅದುವೇ ತಂಡದ ಪ್ರಮುಖ ವೇಗಿ ಮೊಹಮ್ಮದ್ ಸಿರಾಜ್ ಅವರಿಗೆ ಪೂರ್ಣ ಓವರ್‌ಗಳನ್ನು ನೀಡದೇ ಇರುವುದು!

ಮುಲ್ಲನ್​ಪುರ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ 162 ರನ್‌ಗಳ ಸಾಧಾರಣ ಮೊತ್ತವನ್ನು ಕಲೆಹಾಕಿತು. ಈ ಮೊತ್ತವನ್ನು ರಕ್ಷಿಸುವ ಜವಾಬ್ದಾರಿ ಬೌಲರ್‌ಗಳ ಮೇಲಿತ್ತು. ಪವರ್‌ಪ್ಲೇನಲ್ಲಿ ಮೊಹಮ್ಮದ್ ಸಿರಾಜ್ ಅತ್ಯುತ್ತಮ ಲಯದಲ್ಲಿದ್ದಂತೆ ಕಂಡು ಬಂದರು. ಅಲ್ಲದೆ ಈ ವೇಳೆ ಎಸೆದ 2 ಓವರ್‌ಗಳಲ್ಲಿ ಸಿರಾಜ್​ ನೀಡಿದ್ದು ಕೇವಲ 15 ರನ್​​ಗಳು ಮಾತ್ರ.

ಅಂದರೆ ಪವರ್​ಪ್ಲೇನಲ್ಲೇ ಮೊಹಮ್ಮದ್ ಸಿರಾಜ್ ಪಂಜಾಬ್ ಕಿಂಗ್ಸ್ ಬ್ಯಾಟರ್​​ಗಳ ರನ್ ವೇಗಕ್ಕೆ ಕಡಿವಾಣ ಹಾಕುವಲ್ಲಿ ಯಶಸ್ವಿಯಾಗಿದ್ದರು. ಆದರೆ, ಅಚ್ಚರಿಯ ವಿಷಯವೆಂದರೆ ಆ 2 ಓವರ್‌ಗಳ ನಂತರ ಶುಭ್​​ಮನ್ ಗಿಲ್, ಸಿರಾಜ್‌ಗೆ ಮತ್ತೆ ಚೆಂಡನ್ನೇ ನೀಡಲಿಲ್ಲ!

ಇತ್ತ 13ನೇ ಓವರ್​ ವೇಳೆ ದಾಳಿಗಿಳಿದ ಪ್ರಸಿದ್ಧ್ ಕೃಷ್ಣ ಬ್ಯಾಕ್ ಟು ಬ್ಯಾಕ್ ವಿಕೆಟ್ ಕಬಳಿಸುವ ಮೂಲಕ ಪಂಜಾಬ್ ಕಿಂಗ್ಸ್ ತಂಡಕ್ಕೆ ಆಘಾತ ನೀಡಿದ್ದರು. 2 ಓವರ್​​ಗಳಲ್ಲಿ 3 ವಿಕೆಟ್ ಉರುಳಿಸಿದ ಪ್ರಸಿದ್ಧ್ ಗುಜರಾತ್ ಟೈಟಾನ್ಸ್ ತಂಡಕ್ಕೆ ಗೆಲುವಿನ ಆಸೆ ಚಿಗುರಿಸಿದ್ದರು. ಆದರೆ ಈ ಹಂತದಲ್ಲೂ ಶುಭ್​​ಮನ್ ಗಿಲ್ ಮೊಹಮ್ಮದ್ ಸಿರಾಜ್ ಅವರನ್ನು ದಾಳಿಗೆ ಇಳಿಸಿರಲಿಲ್ಲ ಎಂಬುದೇ ಅಚ್ಚರಿ.

  • ಶುಭ್​​ಮನ್ ಗಿಲ್ ಮೊದಲ 2 ಓವರ್​​​ಗಳಲ್ಲಿ ಅತ್ಯುತ್ತಮ ದಾಳಿ ಸಂಘಟಿಸಿದ ಮೊಹಮ್ಮದ್ ಸಿರಾಜ್​ಗೆ ಮತ್ತೆ ಓವರ್ ನೀಡಲೇ ಇಲ್ಲ.
  • ಸಿರಾಜ್​ ಅವರ ಬಳಿಕ ಪ್ರಸಿದ್ಧ್ ಕೃಷ್ಣಗೂ ಓವರ್​ ನೀಡಿರಲಿಲ್ಲ. ಅಂದರೆ ಪ್ರಸಿದ್ಧ್ ದಾಳಿಗೆ ಇಳಿದದ್ದು 13ನೇ ಓವರ್​ನಲ್ಲಿ.
  • ಉತ್ತಮ ಲಯದಲ್ಲಿದ್ದರೂ ಸಿರಾಜ್ ಅವರನ್ನು ಸರಿಯಾಗಿ ಬಳಸಿಕೊಂಡಿಲ್ಲ. ಅತ್ತ ಅನುಭವಿ ಪ್ರಸಿದ್ಧ್ ಕೃಷ್ಣ ಅವರನ್ನು ಸಹ ಮೊದಲೇ ದಾಳಿಗಿಳಿಸಿರಲಿಲ್ಲ.

ಪಂಜಾಬ್ ಕಿಂಗ್ಸ್ ತಂಡವು ಸತತ ವಿಕೆಟ್ ಕಳೆದುಕೊಂಡ ಒತ್ತಡಕ್ಕೊಳಗಾಗಿದ್ದರೂ ಶುಭ್​​ಮನ್ ಗಿಲ್ ಅನಾನುಭವಿ ಅಶೋಕ್ ಶರ್ಮಾ ಮತ್ತು ವಾಷಿಂಗ್ಟನ್ ಸುಂದರ್ ಅವರಂತಹ ಬೌಲರ್‌ಗಳನ್ನು ದೀರ್ಘಕಾಲ ಬಳಸಿಕೊಂಡರು.

ಒಂದು ಹಂತದಲ್ಲಿ 118 ರನ್‌ಗಳಿಗೆ 6 ವಿಕೆಟ್ ಕಳೆದುಕೊಂಡಿದ್ದ ಪಂಜಾಬ್ ಕಿಂಗ್ಸ್ ಸೋಲಿನ ಸುಳಿಗೆ ಸಿಲುಕಿತ್ತು. ಒಂದು ವೇಳೆ ಈ ಹಂತದಲ್ಲಿ ಮೊಹಮ್ಮದ್ ಸಿರಾಜ್ ಅವರನ್ನು ಬಳಸಿಕೊಂಡಿದ್ದರೆ, ಅಥವಾ 7 ವಿಕೆಟ್ ಕಳೆದುಕೊಂಡ ಬಳಿಕ ಸಿರಾಜ್ ಕೈಗೆ ಚೆಂಡು ನೀಡಿದ್ದರೆ ವಿಕೆಟ್ ಪಡೆಯುವ ಅಥವಾ ರನ್ ನಿಯಂತ್ರಿಸುವ ಸಾಧ್ಯತೆ ಹೆಚ್ಚಿತ್ತು.

ಏಕೆಂದರೆ ಪವರ್​ಪ್ಲೇನಲ್ಲಿ ಪ್ರಭ್​ಸಿಮ್ರಾನ್ ಸಿಂಗ್ ಹಾಗೂ ಕೂಪರ್ ಕೊನೊಲಿ ಅಬ್ಬರಿಸಿದರೂ ಮೊಹಮ್ಮದ್ ಸಿರಾಜ್ 12 ಎಸೆತಗಳಲ್ಲಿ ನೀಡಿದ್ದು ಕೇವಲ 15 ರನ್​​ಗಳು ಮಾತ್ರವಾಗಿತ್ತು. ಹೀಗಾಗಿ ನಿರ್ಣಾಯಕ ಹಂತದಲ್ಲಿ ಸಿರಾಜ್ ಅವರ ಅನುಭವವನ್ನು ಬಳಸಿಕೊಂಡು ಪಂಜಾಬ್ ಕಿಂಗ್ಸ್ ಮೇಲೆ ಒತ್ತಡ ಹೇರುವ ಅವಕಾಶ ಶುಭ್​​ಮನ್ ಗಿಲ್ ಮುಂದಿತ್ತು.

ಇದಾಗ್ಯೂ ಶುಭ್​​ಮನ್ ಗಿಲ್  ಅವರ ರಕ್ಷಣಾತ್ಮಕ ನಾಯಕತ್ವದಿಂದಾಗಿ ಪಂಜಾಬ್‌ನ ಯುವ ಆಟಗಾರ ಕೂಪರ್ ಕೊನೊಲಿ (72)* ಅಬ್ಬರಿಸಲು ಅವಕಾಶ ಸಿಕ್ಕಿತು. ಅಂತಿಮವಾಗಿ ಪಂಜಾಬ್ 19.1 ಓವರ್‌ಗಳಲ್ಲಿ ಗುರಿ ತಲುಪುವ ಮೂಲಕ 3 ವಿಕೆಟ್​​ಗಳ ರೋಚಕ ಜಯ ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಮುಗಿಯದ ಓವರ್… ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್

ಈ ಸೋಲಿನ ಬೆನ್ನಲ್ಲೇ ಶುಭ್​​ಮನ್ ಗಿಲ್ ಅವರ ನಾಯಕತ್ವದ ಬಗ್ಗೆ ಪ್ರಶ್ನೆಗಳೆದ್ದಿವೆ. ಅದರಲ್ಲೂ ಗಿಲ್​  ನಾಯಕನಾಗಿ ಒತ್ತಡದ ಸಮಯದಲ್ಲಿ ಸರಿಯಾದ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಫಲರಾಗುತ್ತಿದ್ದಾರೆ ಎಂಬ ಟೀಕೆ ಕೇಳಿಬರುತ್ತಿದೆ. ಈ ಟೀಕೆಗಳ ನಡುವೆ ಮುಂದಿನ ಪಂದ್ಯಗಳಲ್ಲಿ ಸಿರಾಜ್ ಮತ್ತು ಪ್ರಸಿದ್ಧ್ ಕೃಷ್ಣ ಅವರಂತಹ ಹಿರಿಯ ಬೌಲರ್‌ಗಳನ್ನು ಗಿಲ್ ಹೇಗೆ ಬಳಸಿಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಇಡಿ ದಾಳಿ ನಂತರ ನಲಪಾಡ್ ಸ್ಫೋಟಕ ಹೇಳಿಕೆ
ಇಡಿ ದಾಳಿ ನಂತರ ನಲಪಾಡ್ ಸ್ಫೋಟಕ ಹೇಳಿಕೆ