AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PBKS vs RR: ಅಂಪೈರ್​ಗಳ ಕೆಟ್ಟ ತೀರ್ಪಿನಿಂದ​ ಪಂಜಾಬ್ ಕಿಂಗ್ಸ್​ಗೆ ಸೋಲು?

PBKS vs RR in IPL 2021: ಈ ಬಗ್ಗೆ ಭಾರತದ ಮಾಜಿ ಕ್ರಿಕೆಟಿಗ ಮತ್ತು ಕಾಮೆಂಟೇಟರ್ ಆಕಾಶ್ ಚೋಪ್ರಾ ಪ್ರಶ್ನೆಗಳನ್ನೆತ್ತಿದ್ದು, ಕೊನೆಯ ಓವರ್‌ನ ಎರಡು ಎಸೆತಗಳು ನೋ ಬಾಲ್ ಆಗಿದ್ದರೂ ಅಂಪೈರ್​ ಮೌನ ಪಂಜಾಬ್ ಪಾಲಿಗೆ ದುಬಾರಿಯಾಯಿತು ಎಂದಿದ್ದಾರೆ.

PBKS vs RR: ಅಂಪೈರ್​ಗಳ ಕೆಟ್ಟ ತೀರ್ಪಿನಿಂದ​ ಪಂಜಾಬ್ ಕಿಂಗ್ಸ್​ಗೆ ಸೋಲು?
PBKS vs RR
TV9 Web
| Edited By: |

Updated on: Sep 22, 2021 | 6:02 PM

Share

ಐಪಿಎಲ್ 2021ರ 32 ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಪಂಜಾಬ್ ಕಿಂಗ್ಸ್ ತಂಡದ ವಿರುದ್ದ 2 ರನ್​ಗಳ ರೋಚಕ ಜಯ ಸಾಧಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್​ 185 ರನ್​ ಬಾರಿಸಿತು. 186 ರನ್ ಗಳ ಗುರಿ ಪಡೆದ ಪಂಜಾಬ್ ಕಿಂಗ್ಸ್​ ತಂಡ ನಿಗದಿತ ಓವರ್ ನಲ್ಲಿ ಕೇವಲ 183 ರನ್ ಗಳಿಸಲಷ್ಟೇ ಶಕ್ತವಾಯಿತು. ಕೊನೆಯ ಓವರ್​ನಲ್ಲಿ ಕೇವಲ 4 ರನ್​ಗಳ ಗುರಿ ಪಡೆದಿದ್ದ ಪಂಜಾಬ್ ಕಾರ್ತಿಕ್ ತ್ಯಾಗಿ ಕೊನೆಯ ಓವರ್ ನಲ್ಲಿ ಕೇವಲ 1 ರನ್​ಗಳಿಸಲಷ್ಟೇ ಶಕ್ತವಾಯಿತು. ಇದರೊಂದಿಗೆ ರಾಜಸ್ಥಾನ್ ತಂಡವು 2 ರನ್​ಗಳ ರೋಚಕ ಜಯ ಸಾಧಿಸಿತು. ಆದರೆ ಇದಕ್ಕೂ ಮುನ್ನ ಅಂಪೈರ್ ನೀಡಿದ ಕೆಟ್ಟ ತೀರ್ಪಿನಿಂದಾಗಿ ಪಂಜಾಬ್​ ತಂಡಕ್ಕೆ 2 ರನ್​ಗಳು ಕಳೆದುಕೊಂಡಿತು ಎಂದರೆ ನಂಬಲೇಬೇಕು.

19ನೇ ಓವರ್‌ನಲ್ಲಿ ಅಂಪೈರ್‌ ಮಾಡಿದ ತಪ್ಪು ಪಂಜಾಬ್‌ ಸೋಲಿಗೆ ಪ್ರಮುಖ ಕಾರಣವಾಯ್ತು. ಮುಸ್ತಫಿಜುರ್ ರೆಹಮಾನ್ ಎಸೆದ ಈ ಓವರ್​ನಲ್ಲಿ ಎರಡು ಲೈನ್​ ನೋ ಬಾಲ್​ಗಳು ಮೂಡಿಬಂದಿದ್ದವು. ಆದರೆ ಅದನ್ನು ಆನ್-ಫೀಲ್ಡ್ ಅಂಪೈರ್ ಮತ್ತು ಮೂರನೇ ಅಂಪೈರ್ ನಿರ್ಲಕ್ಷಿಸಿದರು. ಇತ್ತ ಬ್ಯಾಟ್ಸ್​ಮನ್​ಗಳಿಗೂ ಅದನ್ನು ಅಪೀಲ್ ಮಾಡುವ ಆಯ್ಕೆ ಇರಲಿಲ್ಲ. ಆ ಎರಡು ನೋಬಾಲ್​ಗಳಿಂದ 2 ರನ್​ ಕಳೆದುಕೊಂಡ ಪಂಜಾಬ್ ಕಿಂಗ್ಸ್​ ಅಂತಿಮದಲ್ಲಿ 2 ರನ್​ಗಳಿಂದ ಸೋಲನುಭವಿಸಿದ್ದು ವಿಪರ್ಯಾಸ.

ಈ ಬಗ್ಗೆ ಭಾರತದ ಮಾಜಿ ಕ್ರಿಕೆಟಿಗ ಮತ್ತು ಕಾಮೆಂಟೇಟರ್ ಆಕಾಶ್ ಚೋಪ್ರಾ ಪ್ರಶ್ನೆಗಳನ್ನೆತ್ತಿದ್ದು, ಕೊನೆಯ ಓವರ್‌ನ ಎರಡು ಎಸೆತಗಳು ನೋ ಬಾಲ್ ಆಗಿದ್ದರೂ ಅಂಪೈರ್​ ಮೌನ ಪಂಜಾಬ್ ಪಾಲಿಗೆ ದುಬಾರಿಯಾಯಿತು ಎಂದಿದ್ದಾರೆ. ಇನ್ನು ಅಂಪೈರ್ ತೀರ್ಪಿಗೆ ಭಾರತದ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಕೂಡ ಈ ಬಗ್ಗೆ ತಮ್ಮ ನಿರಾಶೆಯನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Virat Kohli: ನಮಗೆ ಸೋಲುಣಿಸಿದ ಆತನೇ ನಮ್ಮ ಪ್ರಮುಖ ಅಸ್ತ್ರ..!

ಇದನ್ನೂ ಓದಿ: Virat Kohli: ಐಪಿಎಲ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ವಿರಾಟ್ ಕೊಹ್ಲಿ

ಇದನ್ನೂ ಓದಿ: 90 ಕಿ.ಮೀ ಮೈಲೇಜ್ ನೀಡುವ ಕಡಿಮೆ ಬೆಲೆಯ ಬೈಕ್​ಗಳ ಪಟ್ಟಿ ಇಲ್ಲಿದೆ

ಇದನ್ನೂ ಓದಿ: IPL 2021: ಪ್ಲೇ ಆಫ್​ ಪ್ರವೇಶಿಸುವ 4 ತಂಡಗಳನ್ನು ಹೆಸರಿಸಿದ ಗೌತಮ್ ಗಂಭೀರ್

(PBKS vs RR in IPL 2021: umpires ignores 2 no balls)

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ