AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PBKS vs SRH Playing XI IPL 2022: ಗೆಲುವಿನ ಲಯದಲ್ಲಿ ಉಭಯ ತಂಡಗಳು: ಹೀಗಿರಲಿದೆ ಪ್ಲೇಯಿಂಗ್ 11

PBKS vs SRH Playing XI: ಮುಂಬೈ ಇಂಡಿಯನ್ಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ, ತಂಡದ ನಾಯಕ ಮಯಾಂಕ್ ಅಗರ್ವಾಲ್ ಮತ್ತು ಶಿಖರ್ ಧವನ್ ಜೋಡಿ ಉತ್ತಮವಾಗಿ ಬ್ಯಾಟಿಂಗ್ ಮಾಡಿದ್ದರು.

PBKS vs SRH Playing XI IPL 2022: ಗೆಲುವಿನ ಲಯದಲ್ಲಿ ಉಭಯ ತಂಡಗಳು: ಹೀಗಿರಲಿದೆ ಪ್ಲೇಯಿಂಗ್ 11
PBKS vs SRH
TV9 Web
| Updated By: ಝಾಹಿರ್ ಯೂಸುಫ್|

Updated on: Apr 16, 2022 | 8:02 PM

Share

ಇಂಡಿಯನ್ ಪ್ರೀಮಿಯರ್ ಲೀಗ್​ನ 27ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಸನ್​ರೈಸರ್ಸ್​ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಉಭಯ ತಂಡಗಳು ಗೆಲುವಿನ ಲಯದಲ್ಲಿದ್ದು, ಹೀಗಾಗಿ ಈ ಪಂದ್ಯದಲ್ಲಿ ರೋಚಕ ಹೋರಾಟವನ್ನು ಎದುರು ನೋಡಬಹುದು. ಏಕೆಂದರೆ ಸನ್​ರೈಸರ್ಸ್​ ಹೈದರಾಬಾದ್ ತಂಡವು ಮೊದಲೆರಡು ಪಂದ್ಯಗಳಲ್ಲಿನ ಸೋಲಿನ ನಂತರ ಪ್ರಚಂಡ ಪುನರಾಗಮನ ಮಾಡಿದೆ. ಆ ಬಳಿಕ ಸತತ 3 ಪಂದ್ಯಗಳನ್ನು ಗೆದ್ದು ಎಲ್ಲರನ್ನು ಅಚ್ಚರಿಗೊಳಿಸಿದೆ. ಅದೇ ಫಾರ್ಮ್ ಅನ್ನು ಕಾಯ್ದುಕೊಳ್ಳುವ ಗುರಿಯೊಂದಿಗೆ, ಹೈದರಾಬಾದ್ ತಂಡವು ಭಾನುವಾರ ಮೈದಾನಕ್ಕೆ ಇಳಿಯಲಿದೆ. ಮತ್ತೊಂದೆಡೆ ಪಂಜಾಬ್ ಕಿಂಗ್ಸ್​ ತಂಡವು 3 ಪಂದ್ಯಗಳನ್ನು ಗೆದ್ದಿದ್ದರೆ, 2 ರಲ್ಲಿ ಸೋತಿದೆ. ಹೈದರಾಬಾದ್ ಎರಡು ಸೋಲಿನ ನಂತರ ಮೂರು ಗೆಲುವು ದಾಖಲಿಸಿದೆ. ಹೀಗಾಗಿ ಈ ಪಂದ್ಯದ ಫಲಿತಾಂಶ ಉಭಯ ತಂಡಗಳ ಪಾಯಿಂಟ್​ ಟೇಬಲ್​ನಲ್ಲಿನ ಸ್ಥಾನವನ್ನು ಬದಲಿಸಲಿದೆ. ಹಾಗಾಗಿ ಎರಡೂ ತಂಡಗಳು ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಲಿದೆ.

ಬೈರ್‌ಸ್ಟೋ ಸ್ಥಾನಕ್ಕೆ ರಾಜಪಕ್ಸೆ? ಮುಂಬೈ ಇಂಡಿಯನ್ಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ, ತಂಡದ ನಾಯಕ ಮಯಾಂಕ್ ಅಗರ್ವಾಲ್ ಮತ್ತು ಶಿಖರ್ ಧವನ್ ಜೋಡಿ ಉತ್ತಮವಾಗಿ ಬ್ಯಾಟಿಂಗ್ ಮಾಡಿದ್ದರು. ಅಲ್ಲದೆ ನಂತರ ಬಂದ ಇತರ ಬ್ಯಾಟ್ಸ್‌ಮನ್‌ಗಳು ಕೆಳ ಕ್ರಮಾಂಕದಲ್ಲಿ ಕೊಡುಗೆ ನೀಡಿದರು. ಇದಾಗ್ಯೂ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಜಾನಿ ಬೈರ್‌ಸ್ಟೋವ್ ಸತತವಾಗಿ ವಿಫಲರಾಗುತ್ತಿದ್ದಾರೆ. ಹೀಗಾಗಿ ಮೊದಲ ಮೂರು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಭಾನುಕಾ ರಾಜಪಕ್ಸೆ ಅವರಿಗೆ ಚಾನ್ಸ್ ನೀಡುವ ಸಾಧ್ಯತೆಯಿದೆ.

ಮತ್ತೊಂದೆಡೆ ಎಸ್​ಆರ್​ಹೆಚ್​ ತಂಡದ ಆಲ್​ರೌಂಡರ್ ವಾಷಿಂಗ್ಟನ್ ಸುಂದರ್ ಗಾಯಗೊಂಡಿದ್ದರಿಂದ ಕಳೆದ ಪಂದ್ಯದಲ್ಲಿ ಒಂದೇ ಒಂದು ಬದಲಾವಣೆ ಮಾಡಿ ಜಗದೀಶ ಸುಚಿತ್ ಗೆ ಅವಕಾಶ ನೀಡಿತ್ತು. ಈ ಪಂದ್ಯಕ್ಕೂ ಅವರು ಫಿಟ್ ಆಗುವುದು ಅನುಮಾನ. ಹೀಗಾಗಿ ಸುಚಿತ್ ಅವರನ್ನು ಉಳಿಸಿಕೊಳ್ಳಬಹುದು. ಹಾಗಾಗಿ ಎಸ್​ಆರ್​ಹೆಚ್​​ ತಂಡದಲ್ಲಿ ಬದಲಾವಣೆ ಕಂಡು ಬರುವ ಸಾಧ್ಯತೆಯಿಲ್ಲ ಎನ್ನಬಹುದು. ಅದರಂತೆ ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ 11 ಹೀಗಿರಲಿದೆ.

ಪಂಜಾಬ್ ಕಿಂಗ್ಸ್: ಮಯಾಂಕ್ ಅಗರ್ವಾಲ್ (ನಾಯಕ), ಶಿಖರ್ ಧವನ್, ಭಾನುಕಾ ರಾಜಪಕ್ಸೆ, ಲಿಯಾಮ್ ಲಿವಿಂಗ್‌ಸ್ಟನ್, ಜಿತೇಶ್ ಶರ್ಮಾ, ಶಾರುಖ್ ಖಾನ್, ಓಡಿಯನ್ ಸ್ಮಿತ್, ಕಗಿಸೊ ರಬಾಡ, ಅರ್ಶ್‌ದೀಪ್ ಸಿಂಗ್, ರಾಹುಲ್ ಚಹರ್, ವೈಭವ್ ಅರೋರಾ

ಸನ್‌ರೈಸರ್ಸ್ ಹೈದರಾಬಾದ್ : ಕೇನ್ ವಿಲಿಯಮ್ಸನ್ (ನಾಯಕ), ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ಏಡನ್ ಮಾರ್ಕ್ರಾಮ್, ನಿಕೋಲಸ್ ಪೂರನ್, ಶಶಾಂಕ್ ಸಿಂಗ್, ಜಗದೀಶ ಸುಚಿತ್, ಭುವನೇಶ್ವರ್ ಕುಮಾರ್, ಮಾರ್ಕೊ ಯಾನ್ಸನ್, ಉಮ್ರಾನ್ ಮಲಿಕ್ ಮತ್ತು ಟಿ ನಟರಾಜನ್

ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್