AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾಕಪ್ ಟ್ರೋಫಿ ಕಳ್ಳ ಮೊಹ್ಸಿನ್ ನಖ್ವಿಗೆ ಪಾಕಿಸ್ತಾನದಲ್ಲಿ ಚಿನ್ನದ ಪದಕ ನೀಡಿ ಸನ್ಮಾನ

Mohsin Naqvi Honored: ಏಷ್ಯಾಕಪ್ ಟ್ರೋಫಿ ವಿವಾದ ಸೃಷ್ಟಿಸಿದ ಪಿಸಿಬಿ/ಎಸಿಸಿ ಅಧ್ಯಕ್ಷ ಮೊಹ್ಸಿನ್ ನಖ್ವಿಗೆ ಪಾಕಿಸ್ತಾನದಲ್ಲಿ ಚಿನ್ನದ ಪದಕ ನೀಡಿ ಗೌರವಿಸಲಾಗುತ್ತಿದೆ. ಭಾರತ ತಂಡ ಟ್ರೋಫಿ ಸ್ವೀಕರಿಸಲು ನಿರಾಕರಿಸಿದಾಗ ಅದನ್ನು ಮೊಹ್ಸಿನ್ ತೆಗೆದುಕೊಂಡು ಹೋಗಿದ್ದರು. ಬಿಸಿಸಿಐ ವಿರುದ್ಧ ಕಠಿಣ ನಿಲುವು ತಳೆದ ಕಾರಣ ಅವರಿಗೆ ಈ ಪದಕ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

ಏಷ್ಯಾಕಪ್ ಟ್ರೋಫಿ ಕಳ್ಳ ಮೊಹ್ಸಿನ್ ನಖ್ವಿಗೆ ಪಾಕಿಸ್ತಾನದಲ್ಲಿ ಚಿನ್ನದ ಪದಕ ನೀಡಿ ಸನ್ಮಾನ
Mohsin Naqvi
ಪೃಥ್ವಿಶಂಕರ
|

Updated on:Oct 03, 2025 | 10:07 PM

Share

ಏಷ್ಯಾಕಪ್‌ (Asia Cup) ಚಾಂಪಿಯನ್ ಟೀಂ ಇಂಡಿಯಾಕ್ಕೆ ಟ್ರೋಫಿ ಹಾಗೂ ಪದಕಗಳನ್ನು ನೀಡದೆ ಅವುಗಳನ್ನು ತನ್ನೊಂದಿಗೆ ತೆಗೆದುಕೊಂಡು ಹೋಗಿ ವಿಶ್ವ ಕ್ರಿಕೆಟ್​ನ ಮುಂದೆ ಟ್ರೋಫಿ ಕಳ್ಳ ಎಂದೇ ಕುಖ್ಯಾತರಾಗಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಹಾಗೂ ಏಷ್ಯನ್ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಮೊಹ್ಸಿನ್ ನಖ್ವಿಗೆ (Mohsin Naqvi) ಪಾಕಿಸ್ತಾನದಲ್ಲಿ ಚಿನ್ನದ ಪದಕ ನೀಡಿ ಗೌರವಿಸಲಾಗುತ್ತಿದೆ ಎಂದು ವರದಿಯಾಗಿದೆ. ಏಷ್ಯಾಕಪ್ ನಡೆಯುವ ಸಮಯದಲ್ಲಿ ತೆಗೆದುಕೊಂಡ ದಿಟ್ಟ ನಿರ್ಧಾರಗಳಿಗೆ ಮೊಹ್ಸಿನ್ ನಖ್ವಿಯನ್ನು ಚಿನ್ನದ ಪದಕ ನೀಡಿ ಗೌರವಿಸಲಾಗುತ್ತಿದೆ ಎಂದು ವರದಿಯಾಗಿದೆ.

ಚಿನ್ನದ ಪದಕ ನೀಡಿ ಗೌರವ

ಪಾಕಿಸ್ತಾನದ ಸುದ್ದಿ ಪೋರ್ಟಲ್ ದಿ ನೇಷನ್ ವರದಿಯ ಪ್ರಕಾರ, 2025 ರ ಏಷ್ಯಾಕಪ್‌ನಲ್ಲಿ ಮೊಹ್ಸಿನ್ ನಖ್ವಿ ತಾಳಿದ ಕಠಿಣ ನಿಲುವಿಗಾಗಿ ಈ ಪದಕವನ್ನು ನೀಡಲಾಗುತ್ತಿದೆ. ವರದಿಯ ಪ್ರಕಾರ, ಸಿಂಧ್ ಮತ್ತು ಕರಾಚಿ ಬ್ಯಾಸ್ಕೆಟ್‌ಬಾಲ್ ಅಸೋಸಿಯೇಷನ್‌ನ ಅಧ್ಯಕ್ಷ ವಕೀಲ ಗುಲಾಮ್ ಅಬ್ಬಾಸ್ ಜಮಾಲ್, ಪಿಸಿಬಿ ಮತ್ತು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಅಧ್ಯಕ್ಷ ನಖ್ವಿ ಅವರಿಗೆ ಶಹೀದ್ ಜುಲ್ಫಿಕರ್ ಅಲಿ ಭುಟ್ಟೋ ಎಕ್ಸಲೆನ್ಸ್ ಚಿನ್ನದ ಪದಕವನ್ನು ನೀಡುವುದಾಗಿ ಘೋಷಿಸಿದ್ದಾರೆ. ಏಷ್ಯಾಕಪ್‌ನಲ್ಲಿ ನಿರ್ಭೀತ ಮತ್ತು ತತ್ವಬದ್ಧ ನಿರ್ಧಾರಗಳಿಗೆ ಬದ್ಧರಾಗಿ ಪಾಕಿಸ್ತಾನಕ್ಕೆ ಗೌರವ ತಂದ ನಖ್ವಿ ಅವರಿಗೆ ಪದಕವನ್ನು ನೀಡುತ್ತಿರುವುದಾಗಿ ವರದಿಯಾಗಿದೆ.

‘ನಾನು ದುಃಖಿತನಾಗಿದ್ದೇನೆ’; ಏಷ್ಯಾಕಪ್‌ ಟ್ರೋಫಿ ವಿವಾದದ ಬಗ್ಗೆ ಡಿವಿಲಿಯರ್ಸ್ ಮಾತು

ವಿವಾದ ಶುರುವಾಗಿದ್ದು ಹೇಗೆ?

ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಟೀಂ ಇಂಡಿಯಾ ಅಜೇಯವಾಗಿ ಉಳಿದು ಏಷ್ಯಾಕಪ್ ಗೆದ್ದಿತು. ಆ ಬಳಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ವೇದಿಕೆಯಲ್ಲಿ ಕಾಣಿಸಿಕೊಂಡರು. ಮೊಹ್ಸಿನ್, ಎಸಿಸಿಯ ಪ್ರಸ್ತುತ ಅಧ್ಯಕ್ಷರಾಗಿರುವ ಕಾರಣ ಟ್ರೋಫಿಯನ್ನು ಪ್ರದಾನ ಮಾಡಲು ಬಂದಿದ್ದರು. ಆದರೆ ಟೀಂ ಇಂಡಿಯಾ ಮೊಹ್ಸಿನ್ ಅವರಿಂದ ಅದನ್ನು ಸ್ವೀಕರಿಸುವುದಿಲ್ಲ ಎಂದು ಸ್ಪಷ್ಟಪಡಿಸಿತು. ಇದಕ್ಕೆ ಕಾರಣವನ್ನು ನೀಡಿದ್ದ ಟೀಂ ಇಂಡಿಯಾ, ಮೊಹ್ಸಿನ್ ನಖ್ವಿ ಪಾಕಿಸ್ತಾನ ಸರ್ಕಾರದಲ್ಲಿ ಸಚಿವರೂ ಆಗಿರುವ ಕಾರಣ ನಾವು ಅವರಿಂದ ಟ್ರೋಫಿಯನ್ನು ಸ್ವೀಕರಿಸುತ್ತಿಲ್ಲ ಎಂದಿತ್ತು. ಆದಾಗ್ಯೂ, ಮೊಹ್ಸಿನ್ ನಾಚಿಕೆಯಿಲ್ಲದೆ ವೇದಿಕೆಯ ಮೇಲೆ ನಿಂತಿದ್ದರು. ನಂತರ ಟ್ರೋಫಿಯನ್ನು ತಮ್ಮೊಂದಿಗೆ ತೆಗೆದುಕೊಂಡು ಹೊರಟುಹೋಗಿದ್ದರು. ಇದು ಕೋಲಾಹಲಕ್ಕೆ ಕಾರಣವಾಗಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:53 pm, Fri, 3 October 25

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ದೆಹಲಿಯ ಫರ್ನಿಚರ್ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ
ದೆಹಲಿಯ ಫರ್ನಿಚರ್ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ
ಶನಿವಾರದಂದು ಕಪ್ಪು ಬಣ್ಣದ ಬಟ್ಟೆ ಧರಿಸಿದರೆ ಏನಾಗುತ್ತೆ ಗೊತ್ತಾ?
ಶನಿವಾರದಂದು ಕಪ್ಪು ಬಣ್ಣದ ಬಟ್ಟೆ ಧರಿಸಿದರೆ ಏನಾಗುತ್ತೆ ಗೊತ್ತಾ?
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಲಿದೆ!
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಲಿದೆ!
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ