AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿನ ವಿಶ್ವಕಪ್ ಬಹಿಷ್ಕರಿಸುವ ಧೈರ್ಯ ಪಾಕಿಸ್ತಾನಕ್ಕಿಲ್ಲ ಎಂದ ಪಾಕ್ ಕ್ರಿಕೆಟಿಗ

India vs Pakistan: ಪಾಕಿಸ್ತಾನದ ಜನರು ಏಷ್ಯಾಕಪ್ ಅನ್ನು ತಮ್ಮ ದೇಶದಲ್ಲಿ ನಡೆಯಬೇಕೆಂದು ಬಯಸುತ್ತಾರೆ. ಆದರೆ ದೇಶದ ಪರಿಸ್ಥಿತಿಯನ್ನು ನೋಡಿದರೆ, ನಾವು ಟೂರ್ನಿ ಆಯೋಜನೆಯಿಂದ ಹಿಂದೆ ಸರಿಯಬೇಕಾಗಿ ಬರಬಹುದು.

ಭಾರತದಲ್ಲಿನ ವಿಶ್ವಕಪ್ ಬಹಿಷ್ಕರಿಸುವ ಧೈರ್ಯ ಪಾಕಿಸ್ತಾನಕ್ಕಿಲ್ಲ ಎಂದ ಪಾಕ್ ಕ್ರಿಕೆಟಿಗ
Pakistan Team
TV9 Web
| Updated By: ಝಾಹಿರ್ ಯೂಸುಫ್|

Updated on: Nov 27, 2022 | 11:08 PM

Share

India vs Pakistan: 2023 ರಲ್ಲಿ ನಡೆಯಲಿರುವ ಏಷ್ಯಾಕಪ್ ಹಾಗೂ ಏಕದಿನ ವಿಶ್ವಕಪ್​ ಈಗ ಚರ್ಚಾ ವಿಷಯವಾಗಿದೆ. ಇದಕ್ಕೆ ಮುಖ್ಯ ಕಾರಣ ಪಾಕಿಸ್ತಾನದಲ್ಲಿ ನಡೆಯಲಿರುವ ಏಷ್ಯಾಕಪ್​ನಲ್ಲಿ ಭಾರತ ತಂಡವು ಭಾಗವಹಿಸುವುದಿಲ್ಲ ಎಂದಿರುವುದು. ಇತ್ತ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ನೀಡಿದ ಹೇಳಿಕೆ ಬೆನ್ನಲ್ಲೇ ಪಾಕ್ ಕ್ರಿಕೆಟ್ ಮಂಡಳಿ ಅಧ್ಯಕ್ಷ ರಮೀಜ್ ರಾಜಾ ಏಷ್ಯಾಕಪ್ ಆಡಲು ಟೀಮ್ ಇಂಡಿಯಾ ಪಾಕಿಸ್ತಾನಕ್ಕೆ ಬರದಿದ್ದರೆ ನಮ್ಮ ತಂಡವೂ ಕೂಡ ಮುಂದಿನ ವರ್ಷ ಭಾರತದಲ್ಲಿ ನಡೆಯಲ್ಲಿರುವ ವಿಶ್ವಕಪ್​ ಆಡಲು ಭಾರತಕ್ಕೆ ತೆರಳುವುದಿಲ್ಲ ಎಂದಿದ್ದಾರೆ.

ಈ ಹೇಳಿಕೆಗಳ ನಡುವೆ ಇದೀಗ ಪಾಕಿಸ್ತಾನ್ ತಂಡದ ಮಾಜಿ ಆಟಗಾರ ದಾನಿಶ್ ಕನೇರಿಯಾ ನೀಡಿರುವ ಹೇಳಿಕೆಯು ಎಲ್ಲರ ಗಮನ ಸೆಳೆದಿದೆ. 2016 ರಲ್ಲಿ ಭಾರತ ಟಿ20 ವಿಶ್ವಕಪ್​ಗೆ ಆತಿಥ್ಯವಹಿಸಿತ್ತು. ಆಗಲೂ ಆಗ ಪಾಕಿಸ್ತಾನ್ ತಂಡವು ಭಾಗವಹಿಸಿತ್ತು. ಇದೀಗ ಏಕದಿನ ವಿಶ್ವಕಪ್​ನಲ್ಲೂ ಪಾಕ್ ತಂಡ ಕಾಣಿಸಿಕೊಳ್ಳಲಿದೆ. ಏಕೆಂದರೆ ವಿಶ್ವಕಪ್ ಐಸಿಸಿ ಕಾರ್ಯಕ್ರಮವಾಗಿದ್ದು, ಅದರಲ್ಲಿ ಆಡದಿರಲು ಪಾಕಿಸ್ತಾನ ನಿರ್ಧರಿಸಿದರೆ, ಅದರ ವಿರುದ್ಧ ಐಸಿಸಿ ಕಠಿಣ ನಿಲುವು ತೆಗೆದುಕೊಳ್ಳಬಹುದು. ಹೀಗಾಗಿ 2023 ರಲ್ಲಿ ಪಾಕ್ ತಂಡ ವಿಶ್ವಕಪ್ ಆಡಲಿದೆ ಎಂದಿದ್ದಾರೆ ದಾನಿಶ್ ಕನೇರಿಯಾ.

ಏಕೆಂದರೆ ಐಸಿಸಿಯ ಕಾರ್ಯಕ್ರಮವನ್ನು ಬಹಿಷ್ಕರಿಸುವ ಧೈರ್ಯ ಪಿಸಿಬಿಗೆ ಇಲ್ಲ. ಹಾಗೆಯೇ ಭಾರತಕ್ಕೆ ಪಾಕಿಸ್ತಾನ ತಂಡ ಬರುತ್ತದೆಯೋ ಇಲ್ಲವೋ ಎಂಬುದು ಅವರಿಗೆ ಮುಖ್ಯವಲ್ಲ. ಭಾರತೀಯ ಕ್ರಿಕೆಟ್ ಮಂಡಳಿ ಆದಾಯವನ್ನು ಗಳಿಸುವ ದೊಡ್ಡ ಮಾರುಕಟ್ಟೆಯನ್ನು ಹೊಂದಿದೆ. ಆದರೆ ಭಾರತದಲ್ಲಿನ ವಿಶ್ವಕಪ್​ನ್ನು ಪಾಕ್ ಬಹಿಷ್ಕರಿಸಿದರೆ ಅದು ಪಾಕಿಸ್ತಾನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂದು ದಾನಿಶ್ ಕನೇರಿಯಾ ಹೇಳಿದ್ದಾರೆ.

ಇದನ್ನೂ ಓದಿ
Image
Suryakumar Yadav: ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಸೂರ್ಯಕುಮಾರ್ ಯಾದವ್
Image
BPL 2023: ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್​ಗೆ ಭಾರತೀಯ ಆಟಗಾರ ಎಂಟ್ರಿ..!
Image
IPL 2023: 4 ವರ್ಷಗಳ ಬಳಿಕ ಐಪಿಎಲ್​ನತ್ತ ಜೋ ರೂಟ್..!
Image
ICC T20 Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಟೀಮ್ ಇಂಡಿಯಾದ ಏಕೈಕ ಆಟಗಾರನಿಗೆ ಸ್ಥಾನ

ಈಗ ಭಾರತ ತಂಡವು ಭದ್ರತೆ ಕಾರಣವನ್ನು ನೀಡಿ ಪಾಕ್​ನಲ್ಲಿ ನಡೆಯಲಿರುವ ಏಷ್ಯಾಕಪ್​​ನಿಂದ ಹಿಂದೆ ಸರಿದಿದೆ. ಮುಂದೆ ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ಕೂಡ ಪಾಕಿಸ್ತಾನಕ್ಕೆ ಬರಲು ನಿರಾಕರಿಸಬಹುದು ಎಂದು ಕನೇರಿಯಾ ಹೇಳಿದ್ದಾರೆ. ಏಷ್ಯಾಕಪ್​ಗೆ ಇನ್ನೂ ಸಾಕಷ್ಟು ಸಮಯವಿದೆ. ಆ ವೇಳೆಗೆ ಎಲ್ಲವೂ ಸರಿಯಾಗುತ್ತದೆ ಅಥವಾ ಏಷ್ಯಾಕಪ್​ ಪಂದ್ಯಾವಳಿಯನ್ನು ಪಾಕಿಸ್ತಾನದಲ್ಲಿ ಆಡಲಾಗುತ್ತದೆಯೇ ಅಥವಾ ಇಲ್ಲವೇ ಎಂದು ನಾವು ಖಚಿತವಾಗಿ ಹೇಳಲು ಸಾಧ್ಯವಿಲ್ಲ. ಮುಂದಿನ ಪರಿಸ್ಥಿತಿ ಏನಾಗಲಿದೆಯೋ ಎಂಬುದು ಸಹ ಗೊತ್ತಿಲ್ಲ. ಹೀಗಾಗಿ ಇಂತಹ ಹೇಳಿಕೆಗಳನ್ನು ರಮೀಜ್ ರಾಜಾ ನಿಲ್ಲಿಸುವುದು ಉತ್ತಮ ಎಂದಿದ್ದಾರೆ ಕನೇರಿಯಾ.

ಪಾಕಿಸ್ತಾನದ ಜನರು ಏಷ್ಯಾಕಪ್ ಅನ್ನು ತಮ್ಮ ದೇಶದಲ್ಲಿ ನಡೆಯಬೇಕೆಂದು ಬಯಸುತ್ತಾರೆ. ಆದರೆ ದೇಶದ ಪರಿಸ್ಥಿತಿಯನ್ನು ನೋಡಿದರೆ, ನಾವು ಟೂರ್ನಿ ಆಯೋಜನೆಯಿಂದ ಹಿಂದೆ ಸರಿಯಬೇಕಾಗಿ ಬರಬಹುದು ಎಂದು ಕನೇರಿಯಾ ಅಭಿಪ್ರಾಯಪಟ್ಟಿದ್ದಾರೆ.

2023 ರ ಏಷ್ಯಾಕಪ್ ಅನ್ನು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಆಯೋಜಿಸಲಿದೆ. ಆದರೆ ಪಾಕಿಸ್ತಾನದಲ್ಲಿ ಟೂರ್ನಿ ನಡೆದರೆ ಭಾರತ ಭಾಗವಹಿಸುವುದಿಲ್ಲ ಎಂದು ಈಗಾಗಲೇ ಬಿಸಿಸಿಐ ಅಧ್ಯಕ್ಷ ಜಯ್ ಶಾ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ತಟಸ್ಥ ಸ್ಥಳದಲ್ಲಿ ಟೂರ್ನಿಯನ್ನು ಆಯೋಜಿಸಬೇಕೆಂದು ಮನವಿ ಮಾಡಿದ್ದಾರೆ. ಆದರೆ ಇದೀಗ ಪಾಕ್ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ ಅನ್ನು ಬಹಿಷ್ಕರಿಸುವ ಬೆದರಿಕೆಯೊಡ್ಡಿದ್ದಾರೆ. ಆದರೆ ಪಾಕ್​ನ ಗೊಡ್ಡು ಬೆದರಿಕೆಗೆ ಭಾರತ ಬಗ್ಗುವುದಿಲ್ಲ ಎಂಬುದು ಸ್ಪಷ್ಟ. ಹೀಗಾಗಿ ಮುಂದಿನ ಏಷ್ಯಾಕಪ್​ ಯುಎಇ ಅಥವಾ ಶ್ರೀಲಂಕಾದಲ್ಲಿ ನಡೆಯುವ ಸಾಧ್ಯತೆ ಹೆಚ್ಚಿದೆ ಎನ್ನಬಹುದು.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ