AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2023: ಪಾಕಿಸ್ತಾನಕ್ಕೆ ಬರುವಂತೆ ಜಯ್ ಶಾಗೆ ಆಹ್ವಾನ ನೀಡಿದ ಪಾಕ್ ಕ್ರಿಕೆಟ್ ಮಂಡಳಿ

Asia Cup 2023: ಏಷ್ಯಾಕಪ್‌ನ ಮೊದಲ ಪಂದ್ಯವನ್ನು ವೀಕ್ಷಿಸಲು ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂದು ಜಯ್ ಶಾ ಈ ಮೊದಲೇ ಸ್ಪಷ್ಟವಾಗಿ ಹೇಳಿದ್ದರು. ಇದೀಗ ಪಾಕಿಸ್ತಾನದಿಂದ ಈ ಔಪಚಾರಿಕ ಆಹ್ವಾನದ ನಂತರ ಜಯ್ ಶಾ ತಮ್ಮ ನಿಲುವನ್ನು ಬದಲಿಸಿ ಮೊದಲ ಪಂದ್ಯಕ್ಕೆ ಹಾಜರಾಗುತ್ತಾರೆಯೇ ಎಂದು ಕಾದು ನೋಡಬೇಕಿದೆ.

Asia Cup 2023: ಪಾಕಿಸ್ತಾನಕ್ಕೆ ಬರುವಂತೆ ಜಯ್ ಶಾಗೆ ಆಹ್ವಾನ ನೀಡಿದ ಪಾಕ್ ಕ್ರಿಕೆಟ್ ಮಂಡಳಿ
ಜಯ್ ಶಾ, ಝಾಕ ಆಶ್ರಫ್
ಪೃಥ್ವಿಶಂಕರ
|

Updated on: Aug 19, 2023 | 8:51 AM

Share

ಆಗಸ್ಟ್ 30 ರಿಂದ ಪ್ರಾರಂಭವಾಗುವ ಏಷ್ಯಾಕಪ್‌ನ (Asia Cup 2023) ಆರಂಭಿಕ ಪಂದ್ಯ ವೀಕ್ಷಿಸಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಕಾರ್ಯದರ್ಶಿ ಜಯ್ ಶಾ ಅವರಿಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಆಹ್ವಾನ ಕಳುಹಿಸಿದೆ. ಏಷ್ಯಾಕಪ್‌ನ ಮೊದಲ ಪಂದ್ಯ ಪಾಕಿಸ್ತಾನ ಮತ್ತು ನೇಪಾಳ ನಡುವೆ ಮುಲ್ತಾನ್‌ನಲ್ಲಿ ನಡೆಯಲಿದೆ. ಹೀಗಾಗಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್‌ನ (ACC) ಅಧ್ಯಕ್ಷರಾಗಿರುವ ಜಯ್​ ಶಾಗೆ (Jay Shah) ಪಿಸಿಬಿ ಆಹ್ವಾನ ಕಳುಹಿಸಿದೆ. ಶಾ ಅವರನ್ನು ಹೊರತುಪಡಿಸಿ, ಎಸಿಸಿಯ ಭಾಗವಾಗಿರುವ ಇತರ ಮಂಡಳಿಯ ಸದಸ್ಯರನ್ನೂ ಆಹ್ವಾನಿಸಲಾಗಿದೆ ಎಂದು ಪಿಸಿಬಿ ಹೇಳಿದೆ.

ಆದರೆ ಏಷ್ಯಾಕಪ್‌ನ ಮೊದಲ ಪಂದ್ಯವನ್ನು ವೀಕ್ಷಿಸಲು ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂದು ಜಯ್ ಶಾ ಈ ಮೊದಲೇ ಸ್ಪಷ್ಟವಾಗಿ ಹೇಳಿದ್ದರು. ಇದೀಗ ಪಾಕಿಸ್ತಾನದಿಂದ ಈ ಔಪಚಾರಿಕ ಆಹ್ವಾನದ ನಂತರ ಜಯ್ ಶಾ ತಮ್ಮ ನಿಲುವನ್ನು ಬದಲಿಸಿ ಮೊದಲ ಪಂದ್ಯಕ್ಕೆ ಹಾಜರಾಗುತ್ತಾರೆಯೇ ಎಂದು ಕಾದು ನೋಡಬೇಕಿದೆ.

IND vs IRE: ಟೀಂ ಇಂಡಿಯಾಕ್ಕೆ ಬರಲಿದೆ ಆನೆ ಬಲ; ‘100%’ ಗುಡ್ ನ್ಯೂಸ್ ಕೊಟ್ಟ ಜಯ್ ಶಾ

ಏಷ್ಯಾಕಪ್ ಆತಿಥ್ಯಕ್ಕೆ ಸಂಬಂಧಿಸಿದಂತೆ ಈ ಹಿಂದೆ ಸಾಕಷ್ಟು ವಿವಾದಗಳು ನಡೆದಿದ್ದವು. ಈ ಟೂರ್ನಿಗೆ ತನ್ನ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸುವುದಿಲ್ಲ ಎಂದು ಬಿಸಿಸಿಐ ಸ್ಪಷ್ಟವಾಗಿ ಹೇಳಿತ್ತು. ಅಲ್ಲದೆ ಏಷ್ಯಾಕಪ್ ಅನ್ನು ಪಾಕಿಸ್ತಾನದ ಹೊರಗೆ ಆಯೋಜಿಸಲು ಮುಂದಾಗಿತ್ತು. ಈ ಕಾರಣಕ್ಕಾಗಿ ಏಷ್ಯಾಕಪ್​ನ ನಾಲ್ಕು ಪಂದ್ಯಗಳು ಮಾತ್ರ ಪಾಕಿಸ್ತಾನದಲ್ಲಿ ನಡೆಯಲಿದ್ದು, ಉಳಿದ ಪಂದ್ಯಗಳು ಶ್ರೀಲಂಕಾದಲ್ಲಿ ನಡೆಯಲಿವೆ.

ಆಹ್ವಾನ ನೀಡಿದ ಅಶ್ರಫ್

ಶಾ ಅವರಿಗೆ ನಿರೀಕ್ಷೆಯಂತೆ ಆಹ್ವಾನ ಕಳುಹಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ತನ್ನ ವರದಿಯಲ್ಲಿ ಮೂಲಗಳನ್ನು ಉಲ್ಲೇಖಿಸಿದೆ. ಪಿಸಿಬಿ ಶಾ ಅವರಿಗೆ ಆಹ್ವಾನ ಕಳುಹಿಸಿದೆ ಆದರೆ ಅವರು ಪಾಕಿಸ್ತಾನಕ್ಕೆ ಬರುವ ಸಾಧ್ಯತೆ ತುಂಬಾ ಕಡಿಮೆ ಎಂದು ಮೂಲಗಳು ತಿಳಿಸಿವೆ. ಡರ್ಬನ್‌ನಲ್ಲಿ ನಡೆದ ಐಸಿಸಿ ಸಭೆಯಲ್ಲಿ ಜಯ್ ಶಾ ಮತ್ತು ಪಿಸಿಬಿ ಅಧ್ಯಕ್ಷ ಝಾಕಾ ಅಶ್ರಫ್ ಭೇಟಿಯಾಗಿದ್ದರು. ನಂತರ ಅಶ್ರಫ್ ಶಾ ಅವರನ್ನು ಮೌಖಿಕವಾಗಿ ಕರೆದಿದ್ದರು ಆದರೆ ಈಗ ಪಿಸಿಬಿ ಔಪಚಾರಿಕವಾಗಿ ಆಹ್ವಾನವನ್ನು ಕಳುಹಿಸಿದೆ ಎಂದು ಮೂಲಗಳು ತಿಳಿಸಿವೆ.

ಈ ಮೊದಲು ಪಿಸಿಬಿಯ ಆಹ್ವಾನವನ್ನು ಶಾ ಒಪ್ಪಿಕೊಂಡಿದ್ದಾರೆ ಎಂದು ಪಾಕಿಸ್ತಾನದ ಮಾಧ್ಯಮಗಳು ಹೇಳಿದ್ದವು. ಆದರೆ ಬಿಸಿಸಿಐ ಕಾರ್ಯದರ್ಶಿ ಇದನ್ನು ನಿರಾಕರಿಸಿದರು. ಇದರಿಂದ ಪಿಸಿಬಿ ಸಾಕಷ್ಟು ಮುಜುಗರ ಎದುರಿಸಬೇಕಾಯಿತು ಎಂದು ಮೂಲಗಳು ತಿಳಿಸಿವೆ.

ಸ್ಪಷ್ಟ ಸಂದೇಶ ರವಾನಿಸಿದ ಪಿಸಿಬಿ

ವಾಸ್ತವವಾಗಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧಗಳು ಉತ್ತಮವಾಗಿಲ್ಲ. ಹೀಗಾಗಿ ಉಭಯ ದೇಶಗಳ ತಂಡಗಳು ದ್ವಿಪಕ್ಷೀಯ ಸರಣಿಯನ್ನು ಆಡುತ್ತಿಲ್ಲ. ಕ್ರೀಡೆ ಮತ್ತು ರಾಜಕೀಯವನ್ನು ಬೆರೆಸಬಾರದು ಎಂಬ ಸಂದೇಶವನ್ನು ಪಿಸಿಬಿ ರವಾನಿಸಲು ಬಯಸುತ್ತದೆ ಎಂದು ಪಿಸಿಬಿ ಮೂಲಗಳು ತಿಳಿಸಿವೆ. ಭಾರತದೊಂದಿಗಿನ ಕ್ರಿಕೆಟ್ ಸಂಬಂಧದ ಬಗ್ಗೆ ಪಾಕಿಸ್ತಾನದ ನಿಲುವನ್ನು ತೆರವುಗೊಳಿಸುವುದು ಇದರ ಹಿಂದಿನ ಆಲೋಚನೆಯಾಗಿದೆ ಎಂದು ಮೂಲಗಳು ತಿಳಿಸಿವೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?