Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2023: ಪಾಕಿಸ್ತಾನಕ್ಕೆ ಬರುವಂತೆ ಜಯ್ ಶಾಗೆ ಆಹ್ವಾನ ನೀಡಿದ ಪಾಕ್ ಕ್ರಿಕೆಟ್ ಮಂಡಳಿ

Asia Cup 2023: ಏಷ್ಯಾಕಪ್‌ನ ಮೊದಲ ಪಂದ್ಯವನ್ನು ವೀಕ್ಷಿಸಲು ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂದು ಜಯ್ ಶಾ ಈ ಮೊದಲೇ ಸ್ಪಷ್ಟವಾಗಿ ಹೇಳಿದ್ದರು. ಇದೀಗ ಪಾಕಿಸ್ತಾನದಿಂದ ಈ ಔಪಚಾರಿಕ ಆಹ್ವಾನದ ನಂತರ ಜಯ್ ಶಾ ತಮ್ಮ ನಿಲುವನ್ನು ಬದಲಿಸಿ ಮೊದಲ ಪಂದ್ಯಕ್ಕೆ ಹಾಜರಾಗುತ್ತಾರೆಯೇ ಎಂದು ಕಾದು ನೋಡಬೇಕಿದೆ.

Asia Cup 2023: ಪಾಕಿಸ್ತಾನಕ್ಕೆ ಬರುವಂತೆ ಜಯ್ ಶಾಗೆ ಆಹ್ವಾನ ನೀಡಿದ ಪಾಕ್ ಕ್ರಿಕೆಟ್ ಮಂಡಳಿ
ಜಯ್ ಶಾ, ಝಾಕ ಆಶ್ರಫ್
Follow us
ಪೃಥ್ವಿಶಂಕರ
|

Updated on: Aug 19, 2023 | 8:51 AM

ಆಗಸ್ಟ್ 30 ರಿಂದ ಪ್ರಾರಂಭವಾಗುವ ಏಷ್ಯಾಕಪ್‌ನ (Asia Cup 2023) ಆರಂಭಿಕ ಪಂದ್ಯ ವೀಕ್ಷಿಸಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಕಾರ್ಯದರ್ಶಿ ಜಯ್ ಶಾ ಅವರಿಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಆಹ್ವಾನ ಕಳುಹಿಸಿದೆ. ಏಷ್ಯಾಕಪ್‌ನ ಮೊದಲ ಪಂದ್ಯ ಪಾಕಿಸ್ತಾನ ಮತ್ತು ನೇಪಾಳ ನಡುವೆ ಮುಲ್ತಾನ್‌ನಲ್ಲಿ ನಡೆಯಲಿದೆ. ಹೀಗಾಗಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್‌ನ (ACC) ಅಧ್ಯಕ್ಷರಾಗಿರುವ ಜಯ್​ ಶಾಗೆ (Jay Shah) ಪಿಸಿಬಿ ಆಹ್ವಾನ ಕಳುಹಿಸಿದೆ. ಶಾ ಅವರನ್ನು ಹೊರತುಪಡಿಸಿ, ಎಸಿಸಿಯ ಭಾಗವಾಗಿರುವ ಇತರ ಮಂಡಳಿಯ ಸದಸ್ಯರನ್ನೂ ಆಹ್ವಾನಿಸಲಾಗಿದೆ ಎಂದು ಪಿಸಿಬಿ ಹೇಳಿದೆ.

ಆದರೆ ಏಷ್ಯಾಕಪ್‌ನ ಮೊದಲ ಪಂದ್ಯವನ್ನು ವೀಕ್ಷಿಸಲು ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂದು ಜಯ್ ಶಾ ಈ ಮೊದಲೇ ಸ್ಪಷ್ಟವಾಗಿ ಹೇಳಿದ್ದರು. ಇದೀಗ ಪಾಕಿಸ್ತಾನದಿಂದ ಈ ಔಪಚಾರಿಕ ಆಹ್ವಾನದ ನಂತರ ಜಯ್ ಶಾ ತಮ್ಮ ನಿಲುವನ್ನು ಬದಲಿಸಿ ಮೊದಲ ಪಂದ್ಯಕ್ಕೆ ಹಾಜರಾಗುತ್ತಾರೆಯೇ ಎಂದು ಕಾದು ನೋಡಬೇಕಿದೆ.

IND vs IRE: ಟೀಂ ಇಂಡಿಯಾಕ್ಕೆ ಬರಲಿದೆ ಆನೆ ಬಲ; ‘100%’ ಗುಡ್ ನ್ಯೂಸ್ ಕೊಟ್ಟ ಜಯ್ ಶಾ

ಏಷ್ಯಾಕಪ್ ಆತಿಥ್ಯಕ್ಕೆ ಸಂಬಂಧಿಸಿದಂತೆ ಈ ಹಿಂದೆ ಸಾಕಷ್ಟು ವಿವಾದಗಳು ನಡೆದಿದ್ದವು. ಈ ಟೂರ್ನಿಗೆ ತನ್ನ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸುವುದಿಲ್ಲ ಎಂದು ಬಿಸಿಸಿಐ ಸ್ಪಷ್ಟವಾಗಿ ಹೇಳಿತ್ತು. ಅಲ್ಲದೆ ಏಷ್ಯಾಕಪ್ ಅನ್ನು ಪಾಕಿಸ್ತಾನದ ಹೊರಗೆ ಆಯೋಜಿಸಲು ಮುಂದಾಗಿತ್ತು. ಈ ಕಾರಣಕ್ಕಾಗಿ ಏಷ್ಯಾಕಪ್​ನ ನಾಲ್ಕು ಪಂದ್ಯಗಳು ಮಾತ್ರ ಪಾಕಿಸ್ತಾನದಲ್ಲಿ ನಡೆಯಲಿದ್ದು, ಉಳಿದ ಪಂದ್ಯಗಳು ಶ್ರೀಲಂಕಾದಲ್ಲಿ ನಡೆಯಲಿವೆ.

ಆಹ್ವಾನ ನೀಡಿದ ಅಶ್ರಫ್

ಶಾ ಅವರಿಗೆ ನಿರೀಕ್ಷೆಯಂತೆ ಆಹ್ವಾನ ಕಳುಹಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ತನ್ನ ವರದಿಯಲ್ಲಿ ಮೂಲಗಳನ್ನು ಉಲ್ಲೇಖಿಸಿದೆ. ಪಿಸಿಬಿ ಶಾ ಅವರಿಗೆ ಆಹ್ವಾನ ಕಳುಹಿಸಿದೆ ಆದರೆ ಅವರು ಪಾಕಿಸ್ತಾನಕ್ಕೆ ಬರುವ ಸಾಧ್ಯತೆ ತುಂಬಾ ಕಡಿಮೆ ಎಂದು ಮೂಲಗಳು ತಿಳಿಸಿವೆ. ಡರ್ಬನ್‌ನಲ್ಲಿ ನಡೆದ ಐಸಿಸಿ ಸಭೆಯಲ್ಲಿ ಜಯ್ ಶಾ ಮತ್ತು ಪಿಸಿಬಿ ಅಧ್ಯಕ್ಷ ಝಾಕಾ ಅಶ್ರಫ್ ಭೇಟಿಯಾಗಿದ್ದರು. ನಂತರ ಅಶ್ರಫ್ ಶಾ ಅವರನ್ನು ಮೌಖಿಕವಾಗಿ ಕರೆದಿದ್ದರು ಆದರೆ ಈಗ ಪಿಸಿಬಿ ಔಪಚಾರಿಕವಾಗಿ ಆಹ್ವಾನವನ್ನು ಕಳುಹಿಸಿದೆ ಎಂದು ಮೂಲಗಳು ತಿಳಿಸಿವೆ.

ಈ ಮೊದಲು ಪಿಸಿಬಿಯ ಆಹ್ವಾನವನ್ನು ಶಾ ಒಪ್ಪಿಕೊಂಡಿದ್ದಾರೆ ಎಂದು ಪಾಕಿಸ್ತಾನದ ಮಾಧ್ಯಮಗಳು ಹೇಳಿದ್ದವು. ಆದರೆ ಬಿಸಿಸಿಐ ಕಾರ್ಯದರ್ಶಿ ಇದನ್ನು ನಿರಾಕರಿಸಿದರು. ಇದರಿಂದ ಪಿಸಿಬಿ ಸಾಕಷ್ಟು ಮುಜುಗರ ಎದುರಿಸಬೇಕಾಯಿತು ಎಂದು ಮೂಲಗಳು ತಿಳಿಸಿವೆ.

ಸ್ಪಷ್ಟ ಸಂದೇಶ ರವಾನಿಸಿದ ಪಿಸಿಬಿ

ವಾಸ್ತವವಾಗಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧಗಳು ಉತ್ತಮವಾಗಿಲ್ಲ. ಹೀಗಾಗಿ ಉಭಯ ದೇಶಗಳ ತಂಡಗಳು ದ್ವಿಪಕ್ಷೀಯ ಸರಣಿಯನ್ನು ಆಡುತ್ತಿಲ್ಲ. ಕ್ರೀಡೆ ಮತ್ತು ರಾಜಕೀಯವನ್ನು ಬೆರೆಸಬಾರದು ಎಂಬ ಸಂದೇಶವನ್ನು ಪಿಸಿಬಿ ರವಾನಿಸಲು ಬಯಸುತ್ತದೆ ಎಂದು ಪಿಸಿಬಿ ಮೂಲಗಳು ತಿಳಿಸಿವೆ. ಭಾರತದೊಂದಿಗಿನ ಕ್ರಿಕೆಟ್ ಸಂಬಂಧದ ಬಗ್ಗೆ ಪಾಕಿಸ್ತಾನದ ನಿಲುವನ್ನು ತೆರವುಗೊಳಿಸುವುದು ಇದರ ಹಿಂದಿನ ಆಲೋಚನೆಯಾಗಿದೆ ಎಂದು ಮೂಲಗಳು ತಿಳಿಸಿವೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್