Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೈನಲ್ ಕೈತಪ್ಪಿದ ಬೇಸರ: ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿ ಸಮಾರಂಭಕ್ಕೆ PCB ಗೈರು..!

Champions Trophy 2025: ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 50 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 251 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ರೋಹಿತ್ ಶರ್ಮಾ ಆಕರ್ಷಕ ಅರ್ಧಶತಕ ಬಾರಿಸಿದ್ದರು. ಈ ಅರ್ಧಶತಕದ ನೆರವಿನಿಂದ ಭಾರತ ತಂಡವು 49 ಓವರ್​ಗಳಲ್ಲಿ 254 ರನ್ ಬಾರಿಸಿ 4 ವಿಕೆಟ್​ಗಳ ಗೆಲುವು ದಾಖಲಿಸಿದೆ.

ಫೈನಲ್ ಕೈತಪ್ಪಿದ ಬೇಸರ: ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿ ಸಮಾರಂಭಕ್ಕೆ PCB ಗೈರು..!
Champions Trophy 2025
Follow us
ಝಾಹಿರ್ ಯೂಸುಫ್
|

Updated on: Mar 10, 2025 | 9:04 AM

ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯಭೇರಿ ಬಾರಿಸಿದೆ. ಅಂತಿಮ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವನ್ನು 4 ವಿಕೆಟ್​ಗಳಿಂದ ಸೋಲಿಸಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಹೀಗೆ ಚಾಂಪಿಯನ್ ಪಟ್ಟಕ್ಕೇರಿದ ಟೀಮ್ ಇಂಡಿಯಾಗೆ ಪ್ರಶಸ್ತಿಗಳನ್ನು ಪ್ರಧಾನ ಮಾಡಿದ್ದು ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಹಾಗೂ ಐಸಿಸಿ ಅಧ್ಯಕ್ಷ ಜಯ್ ಶಾ ಎಂಬುದು ವಿಶೇಷ. ಆದರೆ ಚಾಂಪಿಯನ್ಸ್ ಟ್ರೋಫಿ ಆಯೋಜಿಸಿದ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ನ ಯಾವುದೇ ಅಧಿಕಾರಿ ಸಮಾರೋಪ ಸಮಾರಂಭದ ವೇಳೆ ಕಾಣಿಸಿಕೊಂಡಿಲ್ಲ ಎಂಬುದೇ ಅಚ್ಚರಿ.

ಸಾಮಾನ್ಯವಾಗಿ ಐಸಿಸಿ ಟೂರ್ನಿಯ ಅಂತಿಮ ಪಂದ್ಯದ ವೇಳೆ ಆಯೋಜಕ ಕ್ರಿಕೆಟ್ ಮಂಡಳಿ ಹಾಗೂ ಐಸಿಸಿ ಅಧ್ಯಕ್ಷರು ಕಾಣಿಸಿಕೊಳ್ಳುವುದು ವಾಡಿಕೆ. ಇದಾಗ್ಯೂ ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಆಯೋಜಕರಾದ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯ ಅಧ್ಯಕ್ಷರಾದ ಮೊಹ್ಸಿನ್ ನಖ್ವಿ ಆಗಲಿ, ಇತರೆ ಸದಸ್ಯರಾಗಲಿ ಕಾಣಿಸಿಕೊಂಡಿಲ್ಲ. ಇದುವೇ ಈಗ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.

ಫೈನಲ್ ಕೈ ತಪ್ಪಿದ ಬೇಸರ?

ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯನ್ನು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಆಯೋಜಿಸಿದರೂ ಫೈನಲ್ ಪಂದ್ಯ ನಡೆದಿದ್ದು ದುಬೈನಲ್ಲಿ ಎಂಬುದು ವಿಶೇಷ. ಅಂದರೆ ಭಾರತ ತಂಡ ಪಾಕಿಸ್ತಾನಕ್ಕೆ ತೆರಳದಿರುವ ಕಾರಣ ಚಾಂಪಿಯನ್ಸ್ ಟ್ರೋಫಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲಾಗಿತ್ತು.

ಇದನ್ನೂ ಓದಿ
Image
ವಿರಾಟ್ ಕೊಹ್ಲಿಗೆ 100 ಕೋಟಿ ರೂ: ಶುಭ್​ಮನ್ ಗಿಲ್​ಗೆ ಎಷ್ಟು?
Image
VIDEO: ಅಳುತ್ತಿದ್ದ ಅಭಿಮಾನಿಯನ್ನು ಸಮಾಧಾನ ಮಾಡಿದ ಕೆಎಲ್ ರಾಹುಲ್
Image
ನಾನು ಹೊಡೀತಿದ್ದೆ ಅಲ್ವಾ... ವಿರಾಟ್ ಕೊಹ್ಲಿ ಮುಂದೆ ಕೆಎಲ್ ರಾಹುಲ್ ಹತಾಶೆ
Image
Virat Kohli: ಮಾಸ್ಟರ್ ಚೇಸ್ ಮಾಸ್ಟರ್​ನ ವಿಶ್ವ ದಾಖಲೆ

ಅದರಂತೆ ಟೀಮ್ ಇಂಡಿಯಾ ಪಂದ್ಯಗಳಿಗೆ ದುಬೈ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಿತ್ತು. ಅಲ್ಲದೆ ಭಾರತ ತಂಡ ಫೈನಲ್​ಗೆ ತಲುಪಿದರೆ ದುಬೈನಲ್ಲಿ ಅಂತಿಮ ಪಂದ್ಯ, ಇಲ್ಲದಿದ್ದರೆ ಲಾಹೋರ್​ನಲ್ಲಿ ಫೈನಲ್​ ಪಂದ್ಯ ಆಯೋಜಿಸಲು ನಿರ್ಧರಿಸಲಾಗಿತ್ತು.

ಆದರೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯ ಲೆಕ್ಕಾಚಾರಗಳು ಇಲ್ಲೇ ತಲೆಕೆಳಗಾದವು. ಟೀಮ್ ಇಂಡಿಯಾ ತನ್ನೆಲ್ಲಾ ಪಂದ್ಯಗಳನ್ನು ಗೆದ್ದು ಫೈನಲ್​ಗೆ ಲಗ್ಗೆಯಿಟ್ಟಿತು. ಇತ್ತ 29 ವರ್ಷಗಳ ಬಳಿಕ ಐಸಿಸಿ ಟೂರ್ನಿ ಆಯೋಜಿಸಿದ್ದ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಗೆ ಫೈನಲ್ ಪಂದ್ಯದ ಆತಿಥ್ಯ ಕೈ ತಪ್ಪಿದೆ.

ಅದರಂತೆ ಮಾರ್ಚ್ 9 ರಂದು ನಡೆದ ಫೈನಲ್ ಪಂದ್ಯಕ್ಕೆ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಿತು. ಈ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವನ್ನು ಬಗ್ಗು ಬಡಿದು ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಇದನ್ನೂ ಓದಿ: ಶರವೇಗದ ಸೆಂಚುರಿ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ ಡೇವಿಡ್ ಮಿಲ್ಲರ್

ಇತ್ತ ಫೈನಲ್ ಪಂದ್ಯದ ಆಯೋಜನೆ ಕೈ ತಪ್ಪಿದ ಬೇಸರದಲ್ಲಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯ ಅಧ್ಯಕ್ಷರು ಸಮಾರೋಪ ಸಮಾರಂಭದಲ್ಲಿ ಕಾಣಿಸಿಕೊಂಡಿಲ್ಲ ಎಂದು ಹೇಳಲಾಗುತ್ತಿದೆ. ಅಲ್ಲದೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯ ಯಾವುದೇ ಸದಸ್ಯರು ಈ ಸಮಾರಂಭದಲ್ಲಿ ಕಾಣಿಸಿಕೊಳ್ಳದಿರುವುದರಿಂದ ಪಿಸಿಬಿ ವಿರುದ್ಧ ಐಸಿಸಿ ಕಠಿಣ ಕ್ರಮ ಕೈಗೊಂಡರೂ ಅಚ್ಚರಿಪಡಬೇಕಿಲ್ಲ.

ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ ಕಾರು ಜಸ್ಟ್​ ಮಿಸ್, ಬೈಕ್ ಹೋಗೇಬಿಡ್ತು
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
ಬಾಂಬೆ ಹೈಕೋರ್ಟ್​ ಆವರಣದಲ್ಲಿ ವಾಮಾಚಾರ?
ಬಾಂಬೆ ಹೈಕೋರ್ಟ್​ ಆವರಣದಲ್ಲಿ ವಾಮಾಚಾರ?
Daily Horoscope: ಈ ರಾಶಿಯವರಿಗೆ ಇಂದು ಸಾಲ ಮಾಡುವ ಸಂದರ್ಭ ಬರಬಹುದು
Daily Horoscope: ಈ ರಾಶಿಯವರಿಗೆ ಇಂದು ಸಾಲ ಮಾಡುವ ಸಂದರ್ಭ ಬರಬಹುದು
ರಜತ್, ವಿನಯ್ ಗೌಡ ಮೆಡಿಕಲ್ ಚೆಕಪ್; ಲಾಂಗ್ ಹಿಡಿದವರಿಗೆ ಕಾದಿದೆ ಕಷ್ಟ ಕಾಲ
ರಜತ್, ವಿನಯ್ ಗೌಡ ಮೆಡಿಕಲ್ ಚೆಕಪ್; ಲಾಂಗ್ ಹಿಡಿದವರಿಗೆ ಕಾದಿದೆ ಕಷ್ಟ ಕಾಲ
ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್