AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ್ ಆಟಗಾರರ ವೇತನ ಶೇ. 75 ರಷ್ಟು ಕಡಿತ..!

ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಪಾಕಿಸ್ತಾನ್ ತಂಡ ಎಲ್ಲಾ ಪಂದ್ಯಗಳಲ್ಲೂ ಸೋತು ಭಾರೀ ಮುಖಭಂಗಕ್ಕೆ ಒಳಗಾಗಿತ್ತು. ಈ ಹೀನಾಯ ಸೋಲಿನ ಬೆನ್ನಲ್ಲೇ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ದೇಶೀಯ ಟೂರ್ನಿ ಆಡುವ ಆಟಗಾರರ ವೇತನ ಕಡಿತಗೊಳಿಸಿ ನಗೆಪಾಟಲಿಗೀಡಾಗಿದ್ದಾರೆ. ಅಂದರೆ ಸೋತಿದ್ದು ಪಾಕಿಸ್ತಾನ್ ರಾಷ್ಟ್ರೀಯ ತಂಡ. ಕ್ರಮ ಜರುಗಿದ್ದು ದೇಶೀಯ ಆಟಗಾರರ ಮೇಲೆ..!

ಪಾಕಿಸ್ತಾನ್ ಆಟಗಾರರ ವೇತನ ಶೇ. 75 ರಷ್ಟು ಕಡಿತ..!
Pakistan Team
Follow us
ಝಾಹಿರ್ ಯೂಸುಫ್
|

Updated on: Mar 13, 2025 | 1:23 PM

ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಹೀನಾಯ ಸೋಲಿನ ಬೆನ್ನಲ್ಲೇ ಪಾಕ್ ಆಟಗಾರರಿಗೆ ಬಿಸಿ ಮುಟ್ಟಿಸಲು  ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಮುಂದಾಗಿದೆ. ಆದರೆ ಪಿಸಿಬಿ ಇಂತಹದೊಂದು ಮಹತ್ವದ ಕ್ರಮ ಕೈಗೊಂಡಿರುವುದು ದೇಶೀಯ ಟೂರ್ನಿಯಲ್ಲಿ ಕಣಕ್ಕಿಳಿಯುವ ಆಟಗಾರರ ಮೇಲೆ ಎಂಬುದೇ ಅಚ್ಚರಿ. ಅಂದರೆ ಐಸಿಸಿ ಟೂರ್ನಿಯಲ್ಲಿ ಹೀನಾಯವಾಗಿ ಸೋತಿದ್ದು ಪಾಕಿಸ್ತಾನ್ ತಂಡ. ಆದರೆ ವೇತನ ಕಡಿತವಾಗಿದ್ದು ದೇಶೀಯ ಟೂರ್ನಿ ಆಡುವ ಆಟಗಾರರದ್ದು..!

ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ತನ್ನ ದೇಶೀಯ ಟೂರ್ನಿ ನ್ಯಾಷನಲ್ ಕಪ್​ನಲ್ಲಿ ಕಣಕ್ಕಿಳಿಯುವ ಆಟಗಾರರ ವೇತನವನ್ನು ಶೇ. 75 ರಷ್ಟು ಕಡಿತ ಮಾಡಿದೆ. ಈ ಹಿಂದೆ ಆಟಗಾರರಿಗೆ ಪಂದ್ಯ ಶುಲ್ಕವಾಗಿ 40,000 ರೂ. (PKR) ನೀಡಲಾಗುತ್ತಿತ್ತು.

ಆದರೆ ಇನ್ಮುಂದೆ ಈ ಪಂದ್ಯಾವಳಿಯಲ್ಲಿ ಕಣಕ್ಕಿಳಿಯುವ ಆಟಗಾರರಿಗೆ 10,000 ರೂ. ಪಂದ್ಯ ಶುಲ್ಕ ನೀಡಲು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ನಿರ್ಧರಿಸಿದೆ. ಪ್ರಸ್ತುತ ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರ ನೇತೃತ್ವದಲ್ಲಿ ನಡೆದ ಪಿಸಿಬಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಇದನ್ನೂ ಓದಿ
Image
IPL 2025: RCB ನೂತನ ಜೆರ್ಸಿ ಫೋಟೋ ಇಲ್ಲಿದೆ
Image
15 ಭರ್ಜರಿ ಸಿಕ್ಸ್​: ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಎಬಿ ಡಿವಿಲಿಯರ್ಸ್
Image
ಈ ಸಲನೂ RCB ಕಪ್ ಗೆಲ್ಲದಿರಲಿ, ಅದಕ್ಕಾಗಿ ನಾನು ಪ್ರಾರ್ಥಿಸುವೆ..!
Image
ಗಂಭೀರ್ ಅವರ ಒಂದು ದೃಢ ನಿರ್ಧಾರ ಚಾಂಪಿಯನ್ಸ್ ಟ್ರೋಫಿಯ ಚಿತ್ರಣ ಬದಲಿಸಿತು

ನ್ಯಾಷನಲ್ ಟಿ20 ಕಪ್‌ಗಾಗಿ ಪಂದ್ಯ ಶುಲ್ಕವನ್ನು ಕಡಿತಗೊಳಿಸುವ ನಿರ್ಧಾರವು ಹಣಕಾಸಿನ ಸಮಸ್ಯೆಗಳ ಪರಿಣಾಮವಲ್ಲ ಎಂದು ಪಿಸಿಬಿ ಅಧಿಕಾರಿಯೊಬ್ಬರು ಇಎಸ್‌ಪಿಎನ್‌ಕ್ರಿಕ್‌ಇನ್ಫೊಗೆ ತಿಳಿಸಿದ್ದಾರೆ. ಇದಾಗ್ಯೂ ಇಂತಹದೊಂದು ಕ್ರಮ ಕೈಗೊಳ್ಳಲು ಕಾರಣವೇನು ಎಂಬುದರ ಬಗ್ಗೆ ಯಾವುದೇ ಸ್ಪಷ್ಟನೆ ನೀಡಿಲ್ಲ.

ಇದೀಗ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ನ ವೇತನ ಕಡಿತದ ನಿರ್ಧಾರದಿಂದ ದೇಶೀಯ ಟೂರ್ನಿಗಳ ಮೂಲಕ ಕೆರಿಯರ್ ಕಟ್ಟಿಕೊಳ್ಳುವ ವಿಶ್ವಾಸದಲ್ಲಿದ್ದ  ಆಟಗಾರರರು ಕಂಗೆಟ್ಟಿರುವುದು ಸುಳ್ಳಲ್ಲ.

ಏಕೆಂದರೆ ಪಾಕಿಸ್ತಾನ್ ಬೋರ್ಡ್​ನ ನಡೆಯು ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಎಳೆದಂತಿದೆ. ಹೀಗಾಗಿಯೇ ಪಿಸಿಬಿ ತೆಗೆದುಕೊಂಡಿರುವ ಹೊಸ ನಿರ್ಧಾರವು ಇದೀಗ ನಗೆಪಾಟಲಿಗೀಡಾಗಿದೆ.

ಇನ್ನು ಈ ಬಾರಿಯ ನ್ಯಾಷನಲ್ ಟಿ20 ಕಪ್ ಮಾರ್ಚ್ 14 ರಂದು ಆರಂಭವಾಗಲಿದ್ದು, ಫೈಸಲಾಬಾದ್, ಲಾಹೋರ್ ಮತ್ತು ಮುಲ್ತಾನ್ ನಗರಗಳಲ್ಲಿ 39 ಪಂದ್ಯಗಳು ನಡೆಯಲಿವೆ. ಮಾರ್ಚ್ 27 ರಂದು ಫೈಸಲಾಬಾದ್‌ನಲ್ಲಿ ಫೈನಲ್ ಪಂದ್ಯ ಜರುಗಲಿದೆ.

ಇತ್ತ ದೇಶೀಯ ಟೂರ್ನಿಯಲ್ಲಿ ಕಣಕ್ಕಿಳಿಯಲಿರುವ ಆಟಗಾರರ ವೇತನ ಕಡಿತಗೊಳಿಸಿರುವ ಕಾರಣ ಮುಂಬರುವ ದಿನಗಳಲ್ಲಿ ರಾಷ್ಟ್ರೀಯ ತಂಡದ ಆಟಗಾರರ ವೇತನಕ್ಕೂ ಕತ್ತರಿ ಬೀಳುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

ಇದನ್ನೂ ಓದಿ: IPL 2025: ಮುಂಬೈ ಇಂಡಿಯನ್ಸ್ ಅಭಿಮಾನಿಗಳಿಗೆ ಕಹಿ ಸುದ್ದಿ..!

ಸದ್ಯ ಪಾಕಿಸ್ತಾನ್ ತಂಡ ನ್ಯೂಝಿಲೆಂಡ್ ವಿರುದ್ಧದ ಟಿ20 ಸರಣಿಗಾಗಿ ಸಜ್ಜಾಗುತ್ತಿದೆ. ಮಾರ್ಚ್ 16 ರಿಂದ ಶುರುವಾಗಲಿರುವ ಈ ಸರಣಿಯಲ್ಲಿ ಒಟ್ಟು 5 ಪಂದ್ಯಗಳು ನಡೆಯಲಿದೆ. ಈ ಸರಣಿಯ ಬಳಿಕ ಪಾಕಿಸ್ತಾನ್ ಆಟಗಾರರ ಕೇಂದ್ರ ಒಪ್ಪಂದ ನಡೆಯಲಿದೆ. ಈ ವೇಳೆ ರಾಷ್ಟ್ರೀಯ ಆಟಗಾರರ ವೇತನವನ್ನು ಪುನರ್​ಪರಿಶೀಲಿಸುವ ಸಾಧ್ಯತೆಯಿದೆ.

ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು