AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ್ ತಂಡದ ‘ಆಯ್ಕೆ ಮತ್ತು ವೇತನ’ ವ್ಯವಸ್ಥೆಯೇ ಬದಲು..!

ಟಿ20 ಕ್ರಿಕೆಟ್ ಲೀಗ್‌ಗಳ ಅಬ್ಬರ ಹಾಗೂ ಕೋಟಿ ಕೋಟಿ ಹಣದ ಆಕರ್ಷಣೆಯಿಂದಾಗಿ ಇಂದು ಸಾಂಪ್ರದಾಯಿಕ ಟೆಸ್ಟ್ ಕ್ರಿಕೆಟ್ ತನ್ನ ಅಸ್ತಿತ್ವಕ್ಕಾಗಿ ಹೋರಾಡುತ್ತಿದೆ. ಜಾಗತಿಕ ಕ್ರಿಕೆಟ್‌ನಲ್ಲಿ ಆಟಗಾರರು ಅಂತಾರಾಷ್ಟ್ರೀಯ ಪಂದ್ಯಗಳಿಗಿಂತ ಫ್ರಾಂಚೈಸಿ ಲೀಗ್‌ಗಳಿಗೇ ಹೆಚ್ಚಿನ ಆದ್ಯತೆ ನೀಡುತ್ತಿರುವ ಈ ಕಾಲಘಟ್ಟದಲ್ಲಿ, ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅತ್ಯಂತ ದಿಟ್ಟ ಹಾಗೂ ಐತಿಹಾಸಿಕ ನಿರ್ಧಾರವೊಂದನ್ನು ಕೈಗೊಂಡಿದೆ.

ಪಾಕಿಸ್ತಾನ್ ತಂಡದ 'ಆಯ್ಕೆ ಮತ್ತು ವೇತನ' ವ್ಯವಸ್ಥೆಯೇ ಬದಲು..!
PakistanImage Credit source: PCB
ಝಾಹಿರ್ ಯೂಸುಫ್
|

Updated on: Jun 16, 2026 | 11:32 AM

Share

ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ತನ್ನ ಆಟಗಾರರ ಆಯ್ಕೆ ಮತ್ತು ಸೆಂಟ್ರಲ್ ಕಾಂಟ್ರಾಕ್ಟ್ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಯನ್ನು ತಂದಿದೆ. ಇದುವರೆಗೆ ಚಾಲ್ತಿಯಲ್ಲಿದ್ದ ಸಾಂಪ್ರದಾಯಿಕ ‘A ಇಂದ D ಗ್ರೇಡ್’ ಶ್ರೇಣೀಕೃತ ಪದ್ಧತಿಯನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದ್ದು, ಅದರ ಜಾಗದಲ್ಲಿ ಆಟಗಾರರು ಆಡುವ ಕ್ರಿಕೆಟ್ ಸ್ವರೂಪಗಳನ್ನು ಆಧರಿಸಿದ ಹೊಸ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಕ್ರಿಕೆಟ್‌ನಲ್ಲಿ ಹೆಚ್ಚುತ್ತಿರುವ ಟಿ20 ಫ್ರಾಂಚೈಸಿ ಲೀಗ್‌ಗಳ ಹಾವಳಿ ಮತ್ತು ಟೆಸ್ಟ್ ಕ್ರಿಕೆಟ್‌ಗೆ ಉಂಟಾಗುತ್ತಿರುವ ಹಿನ್ನಡೆಯನ್ನು ತಡೆಯಲು ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಈ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.

 ನಾಲ್ಕು ‘ಒಪ್ಪಂದ’:

ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯ ಹೊಸ ನಿಯಮದ ಪ್ರಕಾರ, ಆಟಗಾರರನ್ನು ಯಾವುದೇ ಸಾಮಾನ್ಯ ಗ್ರೇಡ್‌ಗಳಲ್ಲಿ ಗುರುತಿಸದೆ, ಅವರು ಆಡುವ ಕ್ರಿಕೆಟ್ ಮಾದರಿಯ ಆಧಾರದ ಮೇಲೆ ನಾಲ್ಕು ಪ್ರತ್ಯೇಕ ಟ್ರ್ಯಾಕ್‌ಗಳಾಗಿ ವಿಂಗಡಿಸಲಾಗಿದೆ.

  • ಟ್ರ್ಯಾಕ್ A (ಟೆಸ್ಟ್): ಇದು ಕೇವಲ ಟೆಸ್ಟ್ ಕ್ರಿಕೆಟ್ ಆಡುವ ಆಟಗಾರರಿಗಾಗಿ ಮೀಸಲಾದ ಟ್ರ್ಯಾಕ್. ಟೆಸ್ಟ್ ಕ್ರಿಕೆಟ್‌ಗೆ ಹೆಚ್ಚಿನ ಆದ್ಯತೆ ನೀಡಲು ಈ ಆಟಗಾರರಿಗೆ ಗರಿಷ್ಠ ಆರ್ಥಿಕ ಪ್ರೋತ್ಸಾಹ ಧನ ನೀಡಲಾಗುತ್ತದೆ. ಆದರೆ, ಇವರು ಜಾಗತಿಕ ಟಿ20 ಫ್ರಾಂಚೈಸಿ ಲೀಗ್‌ಗಳಲ್ಲಿ ಆಡಲು ಕಠಿಣ ನಿರ್ಬಂಧಗಳನ್ನು ಎದುರಿಸಬೇಕಾಗುತ್ತದೆ.
  • ಟ್ರ್ಯಾಕ್ AB (ದ್ವಿ ಸ್ವರೂಪ): ಟೆಸ್ಟ್ ಮತ್ತು ಏಕದಿನ ಎರಡೂ ಮಾದರಿಯ ಕ್ರಿಕೆಟ್ ಆಡುವ ಆಟಗಾರರು ಈ ಟ್ರ್ಯಾಕ್‌ಗೆ ಒಳಪಡುತ್ತಾರೆ.
  • ಟ್ರ್ಯಾಕ್ BC (ಸೀಮಿತ ಓವರ್‌ಗಳ ಸ್ವರೂಪ): ಏಕದಿನ ಮತ್ತು ಟಿ20 ಅಂತರರಾಷ್ಟ್ರೀಯ ಪಂದ್ಯಗಳ ಮೇಲೆ ಮಾತ್ರ ಗಮನ ಹರಿಸುವ ಆಟಗಾರರನ್ನು ಈ ಗುಂಪಿಗೆ ಸೇರಿಸಲಾಗುತ್ತದೆ.
  • ಟ್ರ್ಯಾಕ್ D (ಟಿ20): ಕೇವಲ ಟಿ20 ಸ್ವರೂಪಗಳಲ್ಲಿ ಆಡುವ ಆಟಗಾರರು ಈ ಒಪ್ಪಂದದಲ್ಲಿ ಒಳಪಡಲಿದ್ದಾರೆ.  ಇವರಿಗೆ ಮಂಡಳಿಯಿಂದ ಸಿಗುವ ವಾರ್ಷಿಕ ಸಂಭಾವನೆ ಕಡಿಮೆಯಿದ್ದರೂ, ವಿಶ್ವದಾದ್ಯಂತ ನಡೆಯುವ ಟಿ20 ಲೀಗ್‌ಗಳಲ್ಲಿ ಆಡಲು ಇವರಿಗೆ ಹೆಚ್ಚಿನ ಸ್ವಾತಂತ್ರ್ಯ ನೀಡಲಾಗುತ್ತದೆ.

ಆಯ್ಕೆ ವ್ಯವಸ್ಥೆಯಲ್ಲೂ ಬದಲಾವಣೆ:

ಈ ಹೊಸ ಒಪ್ಪಂದ ವ್ಯವಸ್ಥೆಯು ಕೇವಲ ಹಣಕಾಸಿನ ಬದಲಾವಣೆಯಷ್ಟೇ ಅಲ್ಲದೆ, ಪಾಕಿಸ್ತಾನ ಕ್ರಿಕೆಟ್‌ನ ಆಡಳಿತ ಶೈಲಿಯನ್ನೇ ಬದಲಿಸುವ ನಿಟ್ಟಿನಲ್ಲಿ ಕೆಲವು ಕಠಿಣ ನಿಯಮಗಳನ್ನು ಒಳಗೊಂಡಿದೆ.

  • ಶೇ. 85 ರಷ್ಟು ಡೇಟಾ ಆಧಾರಿತ ಆಯ್ಕೆ: ಆಟಗಾರರ ಆಯ್ಕೆ ಮತ್ತು ಒಪ್ಪಂದ ಪ್ರಕ್ರಿಯೆಯಲ್ಲಿ ಪಕ್ಷಪಾತವನ್ನು ತಪ್ಪಿಸಲು ಶೇ. 85 ರಷ್ಟು ನಿರ್ಧಾರಗಳನ್ನು ಸಂಪೂರ್ಣವಾಗಿ ಕಂಪ್ಯೂಟರೈಸ್ಡ್ ತಂತ್ರಜ್ಞಾನ ಮತ್ತು ಆಟಗಾರರ ಅಂಕಿ-ಅಂಶಗಳ ಆಧಾರದ ಮೇಲೆ ತೆಗೆದುಕೊಳ್ಳಲಾಗುತ್ತದೆ. ಉಳಿದ ಶೇ. 15 ರಷ್ಟು ಮಾತ್ರ ರಾಷ್ಟ್ರೀಯ ಆಯ್ಕೆಗಾರರ ಶಿಫಾರಸಿಗೆ ಬಿಡಲಾಗುತ್ತದೆ.
  • ದೇಶಿ ಕ್ರಿಕೆಟ್ ಕಡ್ಡಾಯ: ಕೇಂದ್ರ ಒಪ್ಪಂದವನ್ನು ಪಡೆಯಲು ಆಟಗಾರರು ಪಾಕಿಸ್ತಾನದ ಸ್ಥಳೀಯ ದೇಶಿ ಕ್ರಿಕೆಟ್ ಪಂದ್ಯಗಳಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ದೇಶಿ ಪಂದ್ಯಗಳಿಂದ ದೂರ ಉಳಿಯುವ ಆಟಗಾರರ ಒಪ್ಪಂದವನ್ನು ತಕ್ಷಣವೇ ರದ್ದುಗೊಳಿಸಲಾಗುತ್ತದೆ.
  •  ಸಂಪೂರ್ಣ ಗೌಪ್ಯತೆ: ಯಾವ ಆಟಗಾರ ಯಾವ ಟ್ರ್ಯಾಕ್‌ನಲ್ಲಿದ್ದಾರೆ ಮತ್ತು ಅವರಿಗೆ ಸಿಗುವ ಒಟ್ಟು ಸಂಭಾವನೆ ಎಷ್ಟು ಎಂಬ ಮಾಹಿತಿಯನ್ನು ಸಾರ್ವಜನಿಕವಾಗಿ ಪ್ರಕಟಿಸದೆ ಗೌಪ್ಯವಾಗಿಡಲು ಪಿಸಿಬಿ ತೀರ್ಮಾನಿಸಿದೆ. ಇದರಿಂದ ಆಟಗಾರರ ಮೇಲಿನ ಅನಗತ್ಯ ಸಾಮಾಜಿಕ ಮಾಧ್ಯಮಗಳ ಒತ್ತಡ ಕಡಿಮೆಯಾಗಲಿದೆ ಎಂಬುದು ಮಂಡಳಿಯ ಆಶಯ.
  •  ಮಂಡಳಿಯದ್ದೇ ಅಂತಿಮ ನಿರ್ಧಾರ: ಆಟಗಾರರು ತಮಗೆ ಇಷ್ಟ ಬಂದ ಟ್ರ್ಯಾಕ್ ಅನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶವಿಲ್ಲ. ತಂಡದ ಅಗತ್ಯಕ್ಕೆ ತಕ್ಕಂತೆ ಮಂಡಳಿಯೇ ಆಟಗಾರರನ್ನು ಆಯಾ ಟ್ರ್ಯಾಕ್‌ಗಳಿಗೆ ನಿಯೋಜಿಸುತ್ತದೆ.

ಇದನ್ನೂ ಓದಿ: ಕೊಡಗಿನಲ್ಲಿ ಫುಟ್​ಬಾಲ್ ಕ್ರೇಝ್: ತಲೆ ಎತ್ತಿ ನಿಂತ ಕ್ರಿಸ್ಟಿಯಾನೊ ರೊನಾಲ್ಡೊ!

ಒಟ್ಟಿನಲ್ಲಿ ಟಿ20 ಲೀಗ್‌ಗಳ ಆಕರ್ಷಣೆಯಿಂದಾಗಿ ಆಟಗಾರರು ದೇಶಿ ಕ್ರಿಕೆಟ್ ಮತ್ತು ಟೆಸ್ಟ್ ಮಾದರಿಯನ್ನು ನಿರ್ಲಕ್ಷಿಸುತ್ತಿರುವ ಇಂದಿನ ಕಾಲಘಟ್ಟದಲ್ಲಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಹೊಸ ಹೆಜ್ಜೆಯನ್ನಿಟ್ಟಿದೆ. ಈ ಮೂಲಕ ಹಣಕಾಸಿನ ಭದ್ರತೆಯೊಂದಿಗೆ ಪ್ರತಿಭೆ ಮತ್ತು ಯೋಗ್ಯತೆಗೆ ತಕ್ಕಂತೆ ಆಟಗಾರರನ್ನು ಗೌರವಿಸುವ ಈ ‘ಮಾದರಿ ಆಧಾರಿತ ವ್ಯವಸ್ಥೆ’ ಪರಿಚಯಿಸಲು ಮುಂದಾಗಿದೆ.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ?
ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ?
ಎಸಿಎಫ್​​ ಮನೆಯಲ್ಲಿ ಖಜಾನೆ ಕಂಡು ಲೋಕಾಯಕ್ತ ಅಧಿಕಾರಿಗಳೇ ಶಾಕ್​​
ಎಸಿಎಫ್​​ ಮನೆಯಲ್ಲಿ ಖಜಾನೆ ಕಂಡು ಲೋಕಾಯಕ್ತ ಅಧಿಕಾರಿಗಳೇ ಶಾಕ್​​
ಮೈಸೂರು ಪಬ್​​ ದುರಂತ ಕೇಸ್​​ಗೆ ಟ್ವಿಸ್ಟ್​​: ಕೇಳಿಬಂತು ಸ್ಫೋಟಕ ಆರೋಪ
ಮೈಸೂರು ಪಬ್​​ ದುರಂತ ಕೇಸ್​​ಗೆ ಟ್ವಿಸ್ಟ್​​: ಕೇಳಿಬಂತು ಸ್ಫೋಟಕ ಆರೋಪ
ಮೇಲ್ಛಾವಣಿ ಕುಸಿತದಿಂದ ಜೀವ ಭಯದಲ್ಲೇ ಸರ್ಕಾರಿ ಶಾಲೆಗೆ ಬರುತ್ತಿರುವ ಮಕ್ಕಳು
ಮೇಲ್ಛಾವಣಿ ಕುಸಿತದಿಂದ ಜೀವ ಭಯದಲ್ಲೇ ಸರ್ಕಾರಿ ಶಾಲೆಗೆ ಬರುತ್ತಿರುವ ಮಕ್ಕಳು
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!