AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ಪಂದ್ಯವನ್ನಾದರೂ ಆಡಿ; ಭಾರತದ ಮುಂದೆ ಹೊಸ ಬೇಡಿಕೆ ಇಟ್ಟ ಪಾಕಿಸ್ತಾನ

ICC Champions Trophy 2025: 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲಿ ನಡೆಯಲಿದೆ. ಆದರೆ, ಭಾರತ ಪಾಕಿಸ್ತಾನಕ್ಕೆ ತನ್ನ ತಂಡವನ್ನು ಕಳುಹಿಸಲು ನಿರಾಕರಿಸಿದೆ. ಇತ್ತ ಪಾಕಿಸ್ತಾನ ಕೂಡ ಹೈಬ್ರಿಡ್ ಮಾದರಿಗೆ ಹಿಂದೇಟು ಹಾಕುತ್ತಿದೆ. ಹೀಗಾಗಿ ಐಸಿಸಿ ಇದುವರೆಗೂ ಈ ಪಂದ್ಯಾವಳಿಯ ವೇಳಾಪಟ್ಟಿಯನ್ನು ಪ್ರಕಟವಾಗಿಲ್ಲ. ಆದರೀಗ ಪಾಕಿಸ್ತಾನ, ಭಾರತದ ಮುಂದೆ ಹೊಸ ಬೇಡಿಕೆ ಇಟ್ಟಿದೆ.

ಒಂದು ಪಂದ್ಯವನ್ನಾದರೂ ಆಡಿ; ಭಾರತದ ಮುಂದೆ ಹೊಸ ಬೇಡಿಕೆ ಇಟ್ಟ ಪಾಕಿಸ್ತಾನ
ಭಾರತ- ಪಾಕಿಸ್ತಾನ
Follow us
ಪೃಥ್ವಿಶಂಕರ
|

Updated on:Nov 14, 2024 | 10:21 PM

2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಸಂಬಂಧಿಸಿದಂತೆ ಹುಟ್ಟಿಕೊಂಡಿರುವ ಸಮಸ್ಯೆಗಳಿಗೆ ಇದುವರೆಗೂ ಯಾವುದೇ ಪರಿಹಾರ ಕಂಡುಕೊಳ್ಳಲಾಗಿಲ್ಲ. ಭಾರತ ಹಾಗೂ ಪಾಕಿಸ್ತಾನ ನಡುವೆ ನಡೆಯುತ್ತಿರುವ ಈ ಪ್ರತಿಷ್ಠೆಯ ಹೋರಾಟದಿಂದಾಗಿ ಇದೀಗ ಐಸಿಸಿ ಸಂದಿಗ್ಧ ಪರಿಸ್ಥಿತಿಗೆ ಸಿಲುಕಿಕೊಂಡಿದೆ. ಒಂದೆಡೆ ಪಾಕಿಸ್ತಾನದಲ್ಲಿ ನಡೆಯಲಿರುವ ಈ ಟೂರ್ನಿಗೆ ಭಾರತ ತಂಡವನ್ನು ಕಳುಹಿಸದಿರಲು ಭಾರತ ಸರ್ಕಾರ ನಿರ್ಧರಿಸಿದೆ. ಇತ್ತ ಪಾಕಿಸ್ತಾನ ಕೂಡ ಈ ಪಂದ್ಯಾವಳಿಯನ್ನು ಹೈಬ್ರಿಡ್ ಮಾದರಿಯಲ್ಲಿ ನಡೆಸಲು ಹಿಂದೇಟು ಹಾಕುತ್ತಿದೆ. ಈ ಕಾರಣದಿಂದಾಗಿ ಐಸಿಸಿ ಇನ್ನೂ ಈ ಪಂದ್ಯಾವಳಿಯ ವೇಳಾಪಟ್ಟಿಯನ್ನು ಪ್ರಕಟಿಸಿಲ್ಲ. ಸುಮಾರು 28 ವರ್ಷಗಳ ಬಳಿಕ ಪಾಕಿಸ್ತಾನಕ್ಕೆ ಐಸಿಸಿ ಟೂರ್ನಿ ಆಯೋಜಿಸುವ ಅವಕಾಶ ಸಿಕ್ಕಿದೆ. ಅಂತಹ ಪರಿಸ್ಥಿತಿಯಲ್ಲಿ, ಯಾವುದೇ ಪರಿಸ್ಥಿತಿಯಲ್ಲಿಯೂ ಈ ಪಂದ್ಯಾವಳಿಯನ್ನು ಕಳೆದುಕೊಳ್ಳಲು ಪಾಕಿಸ್ತಾನ ಬಯಸುತ್ತಿಲ್ಲ. ಇದರಿಂದಾಗಿ ಭಾರತದ ಮನವೊಲಿಸುವ ಕೆಲಸಕ್ಕೆ ಮತ್ತೊಮ್ಮೆ ಕೈಹಾಕಿರುವ ಪಾಕಿಸ್ತಾನ, ಹೊಸ ಬೇಡಿಕೆಯನ್ನು ಭಾರತದ ಮುಂದಿಟ್ಟಿದೆ.

ಪಾಕಿಸ್ತಾನದ ಹೊಸ ಸೂತ್ರ

ಒಂದು ವೇಳೆ ಭಾರತ, ಚಾಂಪಿಯನ್ಸ್ ಟ್ರೋಫಿಯನ್ನು ಆಡದಿದ್ದರೆ, ಐಸಿಸಿಗೆ ತುಂಬಲಾರದ ನಷ್ಟವಾಗಲಿದೆ. ಇತ್ತ ಚಾಂಪಿಯನ್ಸ್ ಟ್ರೋಫಿಯ ಆತಿಥ್ಯ ಪಾಕಿಸ್ತಾನದ ಕೈತಪ್ಪಿದರೆ ಅದಕ್ಕೂ ಸುಮಾರು 1800ಕೋಟಿ ರೂ. ನಷ್ಟವಾಗಲಿದೆ. ಹೀಗಾಗಿ ಪಾಕಿಸ್ತಾನ, ಪಂದ್ಯಾವಳಿಯ ವೇಳಾಪಟ್ಟಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲು ಸಿದ್ಧವಾಗಿದೆ ಎಂದು ವರದಿಯಾಗಿದೆ. ಆ ಪ್ರಕಾರ, ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಟೀಂ ಇಂಡಿಯಾ ತನ್ನ ಗುಂಪು ಹಂತದ 3 ಪಂದ್ಯಗಳಲ್ಲಿ ಒಂದನ್ನಾದರೂ ಪಾಕಿಸ್ತಾನದಲ್ಲಿ ಆಡಬೇಕೆಂಬ ಬೇಡಿಕೆ ಇಟ್ಟಿದೆ. ಲಾಹೋರ್‌ನ ಗಡಾಫಿ ಕ್ರೀಡಾಂಗಣದಲ್ಲಿ ಈ ಪಂದ್ಯವನ್ನು ಆಯೋಜಿಸಲು ಯೋಚಿಸಲಾಗಿದೆ.

ಇದನ್ನು ಹೊರತುಪಡಿಸಿ ಟೀಂ ಇಂಡಿಯಾ ಉಳಿದಿರುವ ತನ್ನ ಗ್ರೂಪ್ ಹಂತದ ಪಂದ್ಯಗಳನ್ನು ಹೈಬ್ರಿಡ್ ಮಾದರಿಯಲ್ಲೇ ಆಡುವುದಕ್ಕೆ ಸಮ್ಮತ್ತಿ ಸೂಚಿಸಲು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಸಿದ್ದವಾಗಿದೆ. ಒಂದು ವೇಳೆ ಟೀಂ ಇಂಡಿಯಾ ಸೆಮಿಫೈನಲ್ ತಲುಪಿದರೆ, ಈ ಪಂದ್ಯವೂ ಪಾಕಿಸ್ತಾನದ ಹೊರಗೆ ನಡೆಯಲಿದೆ. ಆದರೆ ಟೀಂ ಇಂಡಿಯಾ ಫೈನಲ್‌ಗೆ ಬಂದರೆ ಮತ್ತೊಮ್ಮೆ ಪಾಕಿಸ್ತಾನಕ್ಕೆ ಬರಬೇಕು ಎಂಬುದು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಮತ್ತೊಂದು ಬೇಡಿಕೆಯಾಗಿದೆ. ಕರಡು ವೇಳಾಪಟ್ಟಿಯ ಪ್ರಕಾರ, ಈ ಅಂತಿಮ ಪಂದ್ಯ ಲಾಹೋರ್‌ನಲ್ಲಿ ನಡೆಯಲಿದೆ. ಈ ಪ್ರಕಾರ, ಭಾರತ ಎರಡು ಪಂದ್ಯಗಳನ್ನ ಪಾಕಿಸ್ತಾನದಲ್ಲಿ ಆಡಿದರೆ, ಉಳಿದ ಪಂದ್ಯಗಳನ್ನು 2023 ರ ಏಷ್ಯಾಕಪ್‌ನಂತೆಯೇ ಯುಎಇ ಅಥವಾ ಶ್ರೀಲಂಕಾದಲ್ಲಿ ಆಡಲಿದೆ.

ಹೈಬ್ರಿಡ್ ಮಾದರಿಗೆ ಬಿಸಿಸಿಐ ಒತ್ತಡ

ಉಭಯ ದೇಶಗಳ ನಡುವಿನ ರಾಜಕೀಯ ಬಿಕ್ಕಟ್ಟಿನಿಂದ 2008 ರಿಂದ ಭಾರತ ತಂಡವು ಪಾಕಿಸ್ತಾನಕ್ಕೆ ಪ್ರವಾಸ ಮಾಡಿಲ್ಲ. ಈ ಕಾರಣದಿಂದಾಗಿ, ಎರಡು ತಂಡಗಳ ನಡುವೆ ಯಾವುದೇ ಸರಣಿಗಳನ್ನು ಆಡಲಾಗುತ್ತಿಲ್ಲ. ಆದರೆ ಎರಡೂ ತಂಡಗಳು ಐಸಿಸಿ ಪಂದ್ಯಾವಳಿಗಳು ಮತ್ತು ಏಷ್ಯಾಕಪ್​ನಲ್ಲಿ ಮಾತ್ರ ಮುಖಾಮುಖಿಯಾಗುತ್ತಿವೆ. ಹೀಗಾಗಿಯೇ ಟೀಂ ಇಂಡಿಯಾ ಈ ಟೂರ್ನಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಡಲು ಬಯಸಿದೆ. 2023ರ ಏಷ್ಯಾಕಪ್‌ನ ಆತಿಥ್ಯವನ್ನೂ ಸಹ ಪಾಕಿಸ್ತಾನ ಪಡೆದುಕೊಂಡಿತ್ತು. ಆದರೆ ಆಗಲೂ ಭಾರತ ತಂಡ ಪಾಕಿಸ್ತಾನ ಪ್ರವಾಸ ಮಾಡಿರಲಿಲ್ಲ. ಪಂದ್ಯಾವಳಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲಾಗಿತ್ತು. ಟೀಂ ಇಂಡಿಯಾ ತನ್ನ ಎಲ್ಲಾ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಿದ್ದು, ಫೈನಲ್ ಕೂಡ ಇಲ್ಲಿಯೇ ನಡೆದಿತ್ತು. ಹೀಗಿರುವಾಗ ಪಿಸಿಬಿಯ ಹೊಸ ಪ್ರಸ್ತಾವನೆಯನ್ನು ಬಿಸಿಸಿಐ ಒಪ್ಪಿಕೊಳ್ಳುತ್ತದೋ ಇಲ್ಲವೋ ಎಂಬುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:19 pm, Thu, 14 November 24

ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್
ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್
ಆಪರೇಷನ್ ಸಿಂಧೂರ: ನಟ ಪ್ರೇಮ್ ಪ್ರತಿಕ್ರಿಯೆ ಹೀಗಿತ್ತು...
ಆಪರೇಷನ್ ಸಿಂಧೂರ: ನಟ ಪ್ರೇಮ್ ಪ್ರತಿಕ್ರಿಯೆ ಹೀಗಿತ್ತು...