AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025 Final: ನಿಟ್ಟುಸಿರು ಬಿಟ್ಟ ಆರ್​ಸಿಬಿ ಫ್ಯಾನ್ಸ್; ಮಗು ಮುಖ ನೋಡಿ ಭಾರತಕ್ಕೆ ವಾಪಸ್ಸಾದ ಫಿಲ್ ಸಾಲ್ಟ್

Phil Salt Joins RCB for IPL Final: ಐಪಿಎಲ್ ಫೈನಲ್‌ಗೆ ಮುನ್ನ ತಮ್ಮ ಮಗುವಿನ ಜನನದಿಂದಾಗಿ ತಾಯ್ನಾಡಿಗೆ ಹೋಗಿದ್ದ ಆರ್‌ಸಿಬಿ ಆಟಗಾರ ಫಿಲ್ ಸಾಲ್ಟ್ ಅವರು ಅಹಮದಾಬಾದ್‌ಗೆ ಮರಳಿದ್ದಾರೆ. ತಂಡದೊಂದಿಗೆ ಸೇರಿಕೊಂಡಿರುವ ಸಾಲ್ಟ್, ಫೈನಲ್ ಪಂದ್ಯದಲ್ಲಿ ಆಡಲು ಸಜ್ಜಾಗಿದ್ದಾರೆ. ಅವರ ಆಗಮನವು ಆರ್‌ಸಿಬಿ ಅಭಿಮಾನಿಗಳಲ್ಲಿ ಹೊಸ ಉತ್ಸಾಹವನ್ನು ತುಂಬಿದೆ. ಸಾಲ್ಟ್ ಅವರ ಪ್ರಮುಖ ಇನ್ನಿಂಗ್ಸ್‌ಗಳು ಈ ಸೀಸನ್‌ನಲ್ಲಿ ಆರ್‌ಸಿಬಿಗೆ ಬಹಳಷ್ಟು ನೆರವಾಗಿದೆ.

IPL 2025 Final: ನಿಟ್ಟುಸಿರು ಬಿಟ್ಟ ಆರ್​ಸಿಬಿ ಫ್ಯಾನ್ಸ್; ಮಗು ಮುಖ ನೋಡಿ ಭಾರತಕ್ಕೆ ವಾಪಸ್ಸಾದ ಫಿಲ್ ಸಾಲ್ಟ್
Phil Salt
ಪೃಥ್ವಿಶಂಕರ
|

Updated on:Jun 03, 2025 | 4:05 PM

Share

9 ವರ್ಷಗಳ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಐಪಿಎಲ್ (IPL 2025) ಫೈನಲ್ ಆಡಲು ಸಿದ್ಧವಾಗಿದೆ. ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲು ಸಜ್ಜಾಗಿರುವ ಆರ್​ಸಿಬಿಗೆ ಫೈನಲ್ ಪಂದ್ಯಕ್ಕೂ ಮುನ್ನ ಕಾಡುತ್ತಿದ್ದ ಅದೊಂದು ಭಯಕ್ಕೆ ಮುಕ್ತಿ ಸಿಕ್ಕಿದೆ. ಅದೆನೆಂದರೆ ಫೈನಲ್ ಪಂದ್ಯಕ್ಕೂ ಮುನ್ನ ತಂದೆಯಾದ ಖುಷಿಯಲ್ಲಿದ್ದ ತಂಡದ ಆರಂಭಿಕ ಆಟಗಾರ ಫಿಲ್ ಸಾಲ್ಟ್ (Phil Salt) ತಂಡವನ್ನು ತೊರೆದು ಮನೆಗೆ ವಾಪಸ್ಸಾಗಿದ್ದರು. ಹೀಗಾಗಿ ಅವರು ಫೈನಲ್ ಆಡುತ್ತಾರೋ? ಇಲ್ಲವೋ ಎಂಬ ಆತಂಕ ಶುರುವಾಗಿತ್ತು. ಆದರೀಗ ಹೊರಬಿದ್ದಿರುವ ಮಾಹಿತಿ ಪ್ರಕಾರ, ಮಡದಿ ಹಾಗೂ ಮಗುವಿನ ಮುಖ ನೋಡಿ ಫಿಲ್ ಸಾಲ್ಟ್ ಭಾರತಕ್ಕೆ ವಾಪಸ್ಸಾಗಿದ್ದಾರೆ. ಅಲ್ಲದೆ ಅಹಮದಾಬಾದ್‌ನಲ್ಲಿ ತಂಡವನ್ನು ಸೇರಿಕೊಂಡಿದ್ದಾರೆ.

ತಂದೆಯಾದ ಫಿಲ್ ಸಾಲ್ಟ್

ಐಪಿಎಲ್‌ ಫೈನಲ್ ಪಂದ್ಯಕ್ಕೂ ಮುನ್ನ, ಆರ್‌ಸಿಬಿ ಸ್ಟಾರ್ ಬ್ಯಾಟ್ಸ್‌ಮನ್ ಫಿಲ್ ಸಾಲ್ಟ್ ಅವರ ಬದ್ಧತೆ ಮತ್ತು ಕ್ರೀಡಾ ಸ್ಫೂರ್ತಿ ಎಲ್ಲರ ಹೃದಯ ಗೆದ್ದಿದೆ. ಇಎಸ್‌ಪಿಎನ್ ಕ್ರಿಕ್‌ಇನ್ಫೊ ವರದಿಯ ಪ್ರಕಾರ, ಸಾಲ್ಟ್ ತಮ್ಮ ಮೊದಲ ಮಗುವಿನ ಜನನಕ್ಕಾಗಿ ಇಂಗ್ಲೆಂಡ್‌ಗೆ ಹೋಗಿದ್ದರು. ಹೀಗಾಗಿ ಅವರು ಆರ್​ಸಿಬಿ ಪಾಳಯದಿಂದ ಕಾಣಿಸಿಕೊಂಡಿರಲಿಲ್ಲ. ಆದರೆ ಇಂದು ಬೆಳಿಗ್ಗೆ ಸಾಲ್ಟ್ ಅಹಮದಾಬಾದ್‌ಗೆ ಬಂದಿಳಿದಿದ್ದು ತಂಡವನ್ನು ಕೂಡಿಕೊಂಡಿದ್ದಾರೆ. ಮೇ 29 ರಂದು ನಡೆದಿದ್ದ ಕ್ವಾಲಿಫೈಯರ್ -1 ರಲ್ಲಿ ತಂಡದ ಪರ ಆಡಿದ್ದ ಸಾಲ್ಟ್, ಪಂದ್ಯ ಮುಗಿದ ನಂತರ ತಮ್ಮ ದೇಶಕ್ಕೆ ಮರಳಿದ್ದರು. ಹೀಗಾಗಿ ಆರ್‌ಸಿಬಿಯ ತರಬೇತಿ ಸೆಷನ್​ನಲ್ಲಿ ಅವರ ಅನುಪಸ್ಥಿತಿ ಅಭಿಮಾನಿಗಳಲ್ಲಿ ಕಳವಳವನ್ನು ಉಂಟುಮಾಡಿತ್ತು. ಆದರೆ, ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಅವರು ಕಾಣಿಸಿಕೊಂಡಿರುವ ಸುದ್ದಿ ಆರ್‌ಸಿಬಿ ಅಭಿಮಾನಿಗಳಲ್ಲಿ ಹೊಸ ಭರವಸೆಯನ್ನು ಹುಟ್ಟುಹಾಕಿದೆ.

ಆರ್​ಸಿಬಿ ಪರ ಸಾಲ್ಟ್ ಪ್ರದರ್ಶನ

ಈ ಸೀಸನ್‌ನಲ್ಲಿ ಆರ್​ಸಿಬಿ ಪರ ಹಲವು ಪ್ರಮುಖ ಇನ್ನಿಂಗ್ಸ್​ಗಳನ್ನು ಆಡಿರುವ ಫಿಲ್ ಸಾಲ್ಟ್ ಆಡಿರುವ 12 ಪಂದ್ಯಗಳಲ್ಲಿ 387 ರನ್ ಗಳಿಸಿದ್ದಾರೆ, ಇದರಲ್ಲಿ ಅವರ ಸ್ಟ್ರೈಕ್ ರೇಟ್ 175.90 ಮತ್ತು ಸರಾಸರಿ 35.18 ಆಗಿದೆ. ಅದೇ ಸಮಯದಲ್ಲಿ, ಕ್ವಾಲಿಫೈಯರ್ 1 ರಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸಾಲ್ಟ್ 27 ಎಸೆತಗಳಲ್ಲಿ 56 ಅಜೇಯ ರನ್ ಗಳಿಸುವ ಮೂಲಕ ಆರ್‌ಸಿಬಿ 10 ಓವರ್‌ಗಳಲ್ಲಿ 102 ರನ್‌ಗಳ ಗುರಿ ತಲುಪುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಹೀಗಾಗಿ ಫೈನಲ್ ಪಂದ್ಯಕ್ಕೆ ಸಾಲ್ಟ್ ಲಭ್ಯತೆ ಅತ್ಯವಶ್ಯಕವಾಗಿತ್ತು.

IPL 2025 Final: ‘ಈ ಸಲ ಕಪ್ ಆರ್‌ಸಿಬಿಗೆ’; ಫೈನಲ್​ಗೂ ಮುನ್ನ ಸಟ್ಟಾ ಬಜಾರ್ ಭವಿಷ್ಯ

ಆರ್‌ಸಿಬಿಗೆ ಫಿಲ್ ಸಾಲ್ಟ್ ಅಗತ್ಯ

ಈ ಆವೃತ್ತಿಯಲ್ಲಿ ಸಾಲ್ಟ್ ಅವರ ಆಕ್ರಮಣಕಾರಿ ಬ್ಯಾಟಿಂಗ್ ಅನೇಕ ಪಂದ್ಯಗಳಲ್ಲಿ ಆರ್‌ಸಿಬಿಗೆ ಬಲವಾದ ಆರಂಭವನ್ನು ನೀಡಿದೆ. ಅವರ ಮತ್ತು ವಿರಾಟ್ ಕೊಹ್ಲಿಯ ಆರಂಭಿಕ ಜೋಡಿ ಪ್ರತಿ ಓವರ್‌ಗೆ 10.29 ರ ರನ್​ ರೇಟ್​ನಲ್ಲಿ ರನ್ ಕಲೆಹಾಕಿತ್ತು. ಹೀಗಾಗಿ ಫೈನಲ್ ಪಂದ್ಯದಲ್ಲೂ ಈ ಜೋಡಿ ಇದೇ ರೀತಿಯ ಪ್ರದರ್ಶನ ನೀಡಿದರೆ ಆರ್​ಸಿಬಿಗೆ ಗೆಲುವು ಸುಲಭವಾಗಿ ದಕ್ಕಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:00 pm, Tue, 3 June 25

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್
ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್
Video: ಕೋಲ್ಕತ್ತಾಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೋ
Video: ಕೋಲ್ಕತ್ತಾಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೋ
ದೆಹಲಿಯ ಫರ್ನಿಚರ್ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ
ದೆಹಲಿಯ ಫರ್ನಿಚರ್ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ
ಶನಿವಾರದಂದು ಕಪ್ಪು ಬಣ್ಣದ ಬಟ್ಟೆ ಧರಿಸಿದರೆ ಏನಾಗುತ್ತೆ ಗೊತ್ತಾ?
ಶನಿವಾರದಂದು ಕಪ್ಪು ಬಣ್ಣದ ಬಟ್ಟೆ ಧರಿಸಿದರೆ ಏನಾಗುತ್ತೆ ಗೊತ್ತಾ?
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಲಿದೆ!
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಲಿದೆ!
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ