AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಸಪ್ಪೆ, ಸಪ್ಪೆ, ಸಪ್ಪೆ.. ರುಚಿಸದ ಉಪ್ಪು; ಆರ್​ಸಿಬಿಗೆ ಹೊಸ ತಲೆನೋವು

Phil Salt's Struggle: ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಸರಣಿಯಲ್ಲಿ ಇಂಗ್ಲೆಂಡ್ ತಂಡದ ಆರಂಭಿಕ ಆಟಗಾರ ಫಿಲ್ ಸಾಲ್ಟ್ ಅವರ ಕಳಪೆ ಪ್ರದರ್ಶನ RCB ಗೆ ದೊಡ್ಡ ತಲೆನೋವಾಗಿದೆ. ರೂ. 11.50 ಕೋಟಿಗೆ ಖರೀದಿಸಲಾದ ಸಾಲ್ಟ್, ಮೂರು ಪಂದ್ಯಗಳಲ್ಲಿಯೂ ಎರಡಂಕಿ ಮೊತ್ತವನ್ನು ದಾಟಲು ವಿಫಲರಾಗಿದ್ದಾರೆ. ಕಳೆದ 11 ಇನ್ನಿಂಗ್ಸ್‌ಗಳಲ್ಲಿ 10 ರಲ್ಲಿ ವಿಫಲರಾಗಿರುವ ಸಾಲ್ಟ್ ಅವರ ಫಾರ್ಮ್ ಆರ್​ಸಿಬಿಗೆ ಹಿನ್ನಡೆಯನ್ನುಂಟು ಮಾಡಲಿದೆ.

IND vs ENG: ಸಪ್ಪೆ, ಸಪ್ಪೆ, ಸಪ್ಪೆ.. ರುಚಿಸದ ಉಪ್ಪು; ಆರ್​ಸಿಬಿಗೆ ಹೊಸ ತಲೆನೋವು
ಪಿಲ್ ಸಾಲ್ಟ್
ಪೃಥ್ವಿಶಂಕರ
|

Updated on: Jan 28, 2025 | 8:29 PM

Share

ಸದ್ಯ ಭಾರತ ಮತ್ತು ಇಂಗ್ಲೆಂಡ್ ನಡುವೆ 5 ಪಂದ್ಯಗಳ ಟಿ20 ಸರಣಿ ನಡೆಯುತ್ತಿದೆ. ಈ ಸರಣಿಯಲ್ಲಿ ಇದುವರೆಗೆ ಇಂಗ್ಲೆಂಡ್‌ ತಂಡಕ್ಕೆ ಒಂದೇ ಒಂದು ಗೆಲುವು ದಾಖಲಿಸಲು ಸಾಧ್ಯವಾಗಿಲ್ಲ. ಆಡಿರುವ ಎರಡೂ ಪಂದ್ಯಗಳಲ್ಲು ಆಂಗ್ಲ ಪಡೆ ಸೋಲನುಭವಿಸಿದೆ. ತಂಡದ ಈ ಸೋಲಿನಲ್ಲಿ ಬ್ಯಾಟಿಂಗ್ ವಿಭಾಗದ ಕೊಡುಗೆಯೆ ಹೆಚ್ಚಿದೆ. ಅದರಲ್ಲೂ ಆರಂಭಿಕರಿಬ್ಬರು ಕೂಡ ಆಡಿರುವ ಮೂರು ಪಂದ್ಯಗಳಲ್ಲಿ ಒಮ್ಮೆಯೂ ಎರಡಂಕಿ ಮೊತ್ತದ ಜೊತೆಯಾಟ ನೀಡಿಲ್ಲ. ಇದು ಒಂದೆಡೆ ಆಂಗ್ಲ ಪಡೆಯನ್ನು ಸಂಕಷ್ಟಕ್ಕೆ ಸಿಲುಕಿಸಿದ್ದರೆ, ಮತ್ತೊಂದೆಡೆ ಐಪಿಎಲ್ ತಂಡ ಆರ್​ಸಿಬಿಗೂ ತಲೆನೋವು ಹೆಚ್ಚಾಗಿದೆ. ಏಕೆಂದರೆ ಆಂಗ್ಲ ತಂಡದ ಆರಂಭಿಕರ ವೈಫಲ್ಯದಲ್ಲಿ ಫಿಲ್ ಸಾಲ್ಟ್ ಅವರ ಕೊಡುಗೆಯೇ ಅಪಾರವಿದೆ. ಆಡಿರುವ ಮೂರು ಪಂದ್ಯಗಳಲ್ಲಿ ಸಾಲ್ಟ್ ಒಂದು ಪಂದ್ಯದಲ್ಲೂ ಒಂದಂಕಿ ಮೊತ್ತ ದಾಟಿಲ್ಲ.

ರನ್‌ ಬರ ಎದುರಿಸುತ್ತಿರುವ ಸಾಲ್ಟ್

ವಾಸ್ತವವಾಗಿ ಐಪಿಎಲ್ ಮೆಗಾ ಹರಾಜಿನಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಇಂಗ್ಲೆಂಡ್‌ನ ಡ್ಯಾಶಿಂಗ್ ಬ್ಯಾಟ್ಸ್‌ಮನ್ ಫಿಲ್ ಸಾಲ್ಟ್‌ಗಾಗಿ ಸಾಕಷ್ಟು ಹಣವನ್ನು ಖರ್ಚು ಮಾಡಿತ್ತು. ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಕೂಡ ಫಿಲ್ ಸಾಲ್ಟ್‌ ಖರೀದಿಗಾಗಿ ಆಸಕ್ತಿ ತೋರಿಸಿದವು. ಆದರೆ ಅಂತಿಮವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ರೂ 11.50 ಕೋಟಿ ನೀಡುವ ಮೂಲಕ ಸಾಲ್ಟ್​ರನ್ನು ತನ್ನ ತಂಡಕ್ಕೆ ಸೇರಿಸಿಕೊಂಡಿತು. ಆದರೆ ಫಿಲ್ ಸಾಲ್ಟ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಭಾಗವಾದಾಗಿನಿಂದ ಇದುವರೆಗೆ 11 ಟಿ20 ಪಂದ್ಯಗಳನ್ನು ಆಡಿದ್ದಾರೆ. ಈ ಪೈಕಿ ಒಂದೇ ಬಾರಿ 50 ರನ್ ಗಡಿ ದಾಟುವಲ್ಲಿ ಯಶಸ್ವಿಯಾಗಿದ್ದಾರೆ.

ಟೀಂ ಇಂಡಿಯಾ ವಿರುದ್ಧದ ಈ ಸರಣಿಯಲ್ಲಿ ಫಿಲ್ ಸಾಲ್ಟ್‌ಗೆ ಮೊದಲ 3 ಪಂದ್ಯಗಳಲ್ಲಿ ಒಮ್ಮೆಯೂ ಎರಡಂಕಿ ಮುಟ್ಟಲು ಸಾಧ್ಯವಾಗಿಲ್ಲ. ಈ ಸರಣಿಯ ಮೊದಲ ಪಂದ್ಯದಲ್ಲಿ ಕೇವಲ 3 ಎಸೆತಗಳನ್ನು ಆಡಿ ಖಾತೆ ತೆರೆಯದೆ ಔಟಾಗಿದ್ದರು. ಎರಡನೇ ಪಂದ್ಯದಲ್ಲೂ 3 ಎಸೆತಗಳಲ್ಲಿ ಕೇವಲ 4 ರನ್​ಗಳಿಗೆ ಸುಸ್ತಾಗಿದ್ದ ಸಾಲ್ಟ್, ಈಗ ರಾಜ್‌ಕೋಟ್‌ನಲ್ಲೂ 7 ಎಸೆತಗಳಲ್ಲಿ ಕೇವಲ 5 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡಿದ್ದಾರೆ.

ಕಳೆದ 11 ಇನ್ನಿಂಗ್ಸ್‌ಗಳಲ್ಲಿ 10 ರಲ್ಲಿ ವಿಫಲ

ಐಪಿಎಲ್ 2025 ರ ಮೆಗಾ ಹರಾಜಿನ ನಂತರ, ಫಿಲ್ ಸಾಲ್ಟ್ ಒಟ್ಟು 11 ಪಂದ್ಯಗಳನ್ನು ಆಡಿದ್ದಾರೆ. ಈ ಪೈಕಿ 8 ಪಂದ್ಯಗಳಲ್ಲಿ ಎರಡಂಕಿ ಮುಟ್ಟಲು ಸಾಧ್ಯವಾಗದೆ ಎರಡು ಬಾರಿ ಖಾತೆ ತೆರೆಯದೆ ಔಟಾಗಿದ್ದಾರೆ. ಉಳಿದ ಮೂರು ಪಂದ್ಯಗಳಲ್ಲಿ ಅವರು ಔಟಾಗದೆ 43, 13 ರನ್ ಮತ್ತು 71 ರನ್‌ಗಳ ಇನ್ನಿಂಗ್ಸ್‌ಗಳನ್ನು ಆಡಿದ್ದಾರೆ. ಫಿಲ್ ಸಾಲ್ಟ್ ಕಳೆದ ಐಪಿಎಲ್ ಸೀಸನ್‌ನಲ್ಲಿ ಆಡಿದ 12 ಪಂದ್ಯಗಳಲ್ಲಿ 435 ರನ್ ಗಳಿಸಿದ್ದರು. ಈ ಅಮೋಘ ಪ್ರದರ್ಶನ ಕಂಡ ಆರ್‌ಸಿಬಿ ಅವರನ್ನು ಭಾರಿ ಮೊತ್ತ ನೀಡಿ ಖರೀದಿಸಿತು. ಆದರೆ ಅವರ ಕಳಪೆ ಫಾರ್ಮ್ ಪ್ರಸ್ತುತ ಆರ್‌ಸಿಬಿಗೆ ಆತಂಕ ಪಡುವಂತೆ ಮಾಡಿದೆ.

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ