Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2025: ಬ್ಯಾಟಿಂಗ್ ವೈಫಲ್ಯ; ತವರಿನಲ್ಲಿ ಹ್ಯಾಟ್ರಿಕ್ ಸೋಲುಂಡ ಆರ್​ಸಿಬಿ

WPL 2025: ಮಹಿಳಾ ಪ್ರೀಮಿಯರ್ ಲೀಗ್‌ನ 12ನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ ಕೇವಲ 125 ರನ್‌ ಗಳಿಸಲಷ್ಟೇ ಶಕ್ತವಾಯಿತು. ಸ್ಮೃತಿ ಮಂಧಾನ ಮತ್ತೊಮ್ಮೆ ನಿರಾಶೆಗೊಳಿಸಿದರೆ, ಎಲ್ಲಿಸ್ ಪೆರ್ರಿ ಶೂನ್ಯಕ್ಕೆ ಔಟಾದರು. ಗುಜರಾತ್‌ನ ಆಶ್ಲೇ ಗಾರ್ಡ್ನರ್ ಅವರ 58 ರನ್‌ಗಳ ಅದ್ಭುತ ಇನಿಂಗ್ಸ್ ಗೆಲುವಿಗೆ ಪ್ರಮುಖ ಕಾರಣವಾಯಿತು. ಈ ಸೋಲಿನೊಂದಿಗೆ ಆರ್‌ಸಿಬಿ ತವರಿನಲ್ಲಿ ಸತತ ಮೂರು ಪಂದ್ಯಗಳನ್ನು ಸೋತಿದೆ.

WPL 2025: ಬ್ಯಾಟಿಂಗ್ ವೈಫಲ್ಯ; ತವರಿನಲ್ಲಿ ಹ್ಯಾಟ್ರಿಕ್ ಸೋಲುಂಡ ಆರ್​ಸಿಬಿ
Rcb Women
Follow us
ಪೃಥ್ವಿಶಂಕರ
|

Updated on:Feb 27, 2025 | 11:08 PM

ಮಹಿಳಾ ಪ್ರೀಮಿಯರ್ ಲೀಗ್​ನ 12 ನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಮಹಿಳಾ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡಗಳು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ ಕೇವಲ 125 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಗುರಿಯನ್ನು ಬೆನ್ನಟ್ಟಿದ ಗುಜರಾತ್ ತಂಡ ಇನ್ನು 21 ಎಸೆತಗಳು ಬಾಕಿ ಇರುವಂತೆಯೇ 6 ವಿಕೆಟ್‌ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಈ ಸೋಲಿನೊಂದಿಗೆ ಆರ್​​ಸಿಬಿ, ತವರಿನಲ್ಲಿ ಸತತ ಮೂರು ಪಂದ್ಯಗಳನ್ನು ಸೋತ ಬೇಡದ ದಾಖಲೆಗೆ ಕೊರಳೊಡ್ಡಿದೆ.

ಆರ್​ಸಿಬಿ ಕಳಪೆ ಬ್ಯಾಟಿಂಗ್

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ಅತ್ಯಂತ ಕಳಪೆ ಆರಂಭ ಪಡೆಯಿತು. ತಂಡಕ್ಕೆ ಮೊದಲ ಹೊಡೆತ ಕೊಟ್ಟವರು ಡಿಯಾಂಡ್ರಾ ಡಾಟಿನ್. ಅವರು ಡ್ಯಾನಿ ವ್ಯಾಟ್ ಹಾಡ್ಜ್‌ ಅವರನ್ನು ಮೊದಲ ಓವರ್​ನಲ್ಲೇ ಪೆವಿಲಿಯನ್​ಗಟ್ಟಿದರು. ಇದಾದ ನಂತರ ಗುಜರಾತ್ ನಾಯಕಿ ಆಶ್ಲೀ ಗಾರ್ಡ್ನರ್, ಆರ್​ಸಿಬಿ ಬ್ಯಾಟಿಂಗ್ ಬೆನ್ನೇಲುಬಾದ ಎಲ್ಲಿಸ್ ಪೆರ್ರಿಯನ್ನು ಶೂನ್ಯಕ್ಕೆ ಔಟ್ ಮಾಡಿದರು. ಸತತ ಮೂರು ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿರುವ ನಾಯಕಿ ಸ್ಮೃತಿ ಮಂಧಾನ ಕೂಡ ಕೇವಲ 10 ರನ್​ಗಳಿಗೆ ಸುಸ್ತಾದರು.

ಕನಿಕಾ ಏಕಾಂಗಿ ಹೋರಾಟ

ಆರ್‌ಸಿಬಿ ಪರ ಏಕಾಂಗಿ ಹೋರಾಟ ನೀಡಿದ ಕನಿಕಾ ಅಹುಜಾ 28 ಎಸೆತಗಳಲ್ಲಿ ಒಂದು ಬೌಂಡರಿ ಮತ್ತು ಎರಡು ಸಿಕ್ಸರ್‌ಗಳ ಸಹಾಯದಿಂದ 33 ರನ್ ಗಳಿಸಿದರು. ಅವರಲ್ಲದೆ, ರಾಘವಿ ಬಿಶ್ಟ್ 22 ರನ್, ರಿಚಾ ಘೋಷ್ ಒಂಬತ್ತು ಮತ್ತು ಕಿಮ್ ಗಾರ್ತ್ 14 ರನ್ ಗಳಿಸಿ ಔಟಾದರು. ಜಾರ್ಜಿಯಾ ವೇರ್‌ಹ್ಯಾಮ್ ಮತ್ತು ಸ್ನೇಹಾ ರಾಣಾ ಕ್ರಮವಾಗಿ 20 ಮತ್ತು 1 ರನ್ ಗಳಿಸಿ ಅಜೇಯರಾಗಿ ಉಳಿದರು. ಗುಜರಾತ್ ಪರ ಡಿಯಾಂಡ್ರಾ ಡಾಟಿನ್ ಮತ್ತು ತನುಜಾ ಕನ್ವರ್ ತಲಾ ಎರಡು ವಿಕೆಟ್ ಪಡೆದರೆ, ಆಶ್ಲೀ ಗಾರ್ಡ್ನರ್ ಮತ್ತು ಕಾಶ್ವಿ ಗೌತಮ್ ತಲಾ ಒಂದು ವಿಕೆಟ್ ಪಡೆದರು.

ಇದನ್ನೂ ಓದಿ
Image
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
Image
ಸತತ ಸೋಲುಗಳಿಂದ ಕಂಗೆಟ್ಟಿರುವ ಆರ್​ಸಿಬಿ ಮತ್ತೆ ಗೆಲುವಿನ ಲಯಕ್ಕೆ ಮರಳುತ್ತಾ?
Image
ಸತತ 2ನೇ ಬಾರಿಗೆ ಗೆಲ್ಲುವ ಪಂದ್ಯವನ್ನು ಕೈಚೆಲ್ಲಿದ ಆರ್​ಸಿಬಿ

ಇದನ್ನೂ ಓದಿ: WPL 2025: ಆರ್​ಸಿಬಿಗೆ ಮಾಡು ಇಲ್ಲವೇ ಮಡಿ ಪಂದ್ಯ; ಸೇಡು ತೀರಿಸಿಕೊಳ್ಳುವ ತವಕದಲ್ಲಿ ಗುಜರಾತ್

ಗಾರ್ಡ್ನರ್ ಹೊಡಿಬಡಿ ಆಟ

ಈ ಗುರಿ ಬೆನ್ನಟ್ಟಿದ ಗುಜರಾತ್​ಗೂ ಆರಂಭಿಕ ಆಘಾತ ಎದುರಾಯಿತು. ಆದರೆ ತಂಡದ ನಾಯಕಿ ಆಶ್ಲೇ ಗಾರ್ಡ್ನರ್ ಹೊಡಿಬಡಿ ಆಟದ ಮೂಲಕ ಆರ್​ಸಿಬಿ ಪಾಳಯದಿಂದ ಗೆಲುವನ್ನು ಕಸಿದುಕೊಂಡರು. ಗಾರ್ಡ್ನರ್ ಕೇವಲ 31 ಎಸೆತಗಳಲ್ಲಿ 6 ಬೌಂಡರಿ ಮತ್ತು 3 ಸಿಕ್ಸರ್‌ಗಳ ಸಹಾಯದಿಂದ 58 ರನ್ ಗಳಿಸಿ ತಂಡವನ್ನು ಜಯದತ್ತ ಮುನ್ನಡೆಸಿರು. ಗಾರ್ಡ್ನರ್​ಗೆ ಸಾಥ್ ನೀಡಿದ ಫೋಬೆ ಲಿಚ್‌ಫೀಲ್ಡ್ 21 ಎಸೆತಗಳಲ್ಲಿ ಅಜೇಯ 30 ರನ್ ಗಳಿಸಿದರು. ಈ ಜೊತೆಯಾಟದೊಂದಿಗೆ ಗುಜರಾತ್ ತಂಡವು ಬೆಂಗಳೂರು ನೀಡಿದ್ದ ಸವಾಲನ್ನು 16.3 ಓವರ್‌ಗಳಲ್ಲಿ ಪೂರ್ಣಗೊಳಿಸಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:07 pm, Thu, 27 February 25

‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ