AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಹೃದಯಾಘಾತದಿಂದ ಮೈದಾನದಲ್ಲೇ ಮೃತಪಟ್ಟ ಕ್ರಿಕೆಟಿಗ

ನೋಯ್ಡಾದ ಥಾನಾ ಎಕ್ಸ್​ಪ್ರೇಸ್​ವೇ ಸೆಕ್ಟರ್-135 ಪ್ರದೇಶದಲ್ಲಿ ಕ್ರಿಕೆಟ್ ಟೂರ್ನಿಯನ್ನು ಆಯೋಜಿಸಲಾಗಿತ್ತು. ಈ ಟೂರ್ನಿಯಲ್ಲಿ ಉತ್ತರಾಖಂಡ ಮೂಲದ ವಿಕಾಸ್ ನೇಗಿ ಕಣಕ್ಕಿಳಿದಿದ್ದರು. ಪಂದ್ಯದ ನಡುವೆಯೇ ದಿಢೀರ್ ಕುಸಿತಕ್ಕೊಳಗಾದ ವಿಕಾಸ್ ಪಿಚ್ ಮೇಲೆ ಬಿದ್ದಿದ್ದಾರೆ.

VIDEO: ಹೃದಯಾಘಾತದಿಂದ ಮೈದಾನದಲ್ಲೇ ಮೃತಪಟ್ಟ ಕ್ರಿಕೆಟಿಗ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 10, 2024 | 1:58 PM

Share

ದೇಶದಲ್ಲಿ ಹೃದಯಾಘಾತದ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅದರಲ್ಲೂ ಸಂಪೂರ್ಣ ಫಿಟ್​ನೆಸ್ ಹೊಂದಿದ್ದರೂ ಕೆಲವರು ಹೃದಯಾಘಾತ ಹಾಗೂ ಹೃದಯ ಸ್ತಂಭನದಿಂದ ಸಾವನ್ನಪ್ಪುತ್ತಿರುವ ಸುದ್ದಿಗಳು ಆಗಾಗ್ಗೆ ಕೇಳಿ ಬರುತ್ತಿದೆ. ಇದೀಗ ಕ್ರಿಕೆಟ್ (Cricket) ಪಂದ್ಯಾಟ ನಡುವೆಯೇ 36 ವರ್ಷದ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ.

ನೋಯ್ಡಾದ ಥಾನಾ ಎಕ್ಸ್​ಪ್ರೇಸ್​ವೇ ಸೆಕ್ಟರ್-135 ಪ್ರದೇಶದಲ್ಲಿ ಕ್ರಿಕೆಟ್ ಟೂರ್ನಿಯನ್ನು ಆಯೋಜಿಸಲಾಗಿತ್ತು. ಈ ಟೂರ್ನಿಯಲ್ಲಿ ಉತ್ತರಾಖಂಡ ಮೂಲದ ವಿಕಾಸ್ ನೇಗಿ ಕಣಕ್ಕಿಳಿದಿದ್ದರು.

ಅದರಂತೆ ಬ್ಯಾಟಿಂಗ್ ಮಾಡುತ್ತಿದ್ದಾಗ ವಿಕಾಸ್ ನೇಗಿ ರನ್ ಓಡಿದ್ದರು. ಆದರೆ ಚೆಂಡು ಬೌಂಡರಿ ಲೈನ್ ದಾಟಿತ್ತು. ಹೀಗಾಗಿ ಕ್ರೀಸ್​ನ ಮಧ್ಯ ಭಾಗದಿಂದ ಮತ್ತೆ ನಾನ್ ಸ್ಟ್ರೈಕ್​ನತ್ತ ಮರಳಲು ಮುಂದಾಗಿದ್ದರು. ಆದರೆ ದಿಢೀರ್ ಕುಸಿತಕ್ಕೊಳಗಾದ ವಿಕಾಸ ನೇಗಿ ಪಿಚ್ ಮೇಲೆ ಬಿದ್ದಿದ್ದಾರೆ.

ಇದನ್ನೂ ಓದಿ: ಶ್ರೀರಾಮನ ಹಾಡು ಕೇಳುವುದೇ ಖುಷಿ ಎಂದ ಸೌತ್ ಆಫ್ರಿಕಾ ಕ್ರಿಕೆಟಿಗ

ತಕ್ಷಣವೇ ಎದುರಾಳಿ ತಂಡದ ವಿಕೆಟ್ ಕೀಪರ್ ಹಾಗೂ ಸಹ ಆಟಗಾರ ವಿಕಾಸ್ ನೇಗಿ ಬಳಿ ಓಡಿ ಬಂದಿದ್ದಾರೆ. ಆ ಬಳಿಕ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಷ್ಟರಲ್ಲಾಗಲ್ಲೇ ವಿಕಾಸ್ ನೇಗಿ ಮೃತಪಟ್ಟಿದ್ದಾರೆ ವೈದ್ಯರು ತಿಳಿಸಿದ್ದಾರೆ.

ಮೃತದೇಹವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ದಿದ್ದು, ಈ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಈ ಹಿಂದೆ ವಿಕಾಸ್ ನೇಗಿ ಕೋವಿಡ್ ಸೋಂಕಿಗೆ ಒಳಗಾಗಿ ಚೇತರಿಸಿಕೊಂಡಿದ್ದರು. ಇದಾಗ್ಯೂ ಅವರು ಸಂಪೂರ್ಣ ಆರೋಗ್ಯವಂತರಾಗಿದ್ದರು ಎಂದು ಅವರ ಆಪ್ತರು ತಿಳಿಸಿದ್ದಾರೆ.

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!