AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಹೃದಯಾಘಾತದಿಂದ ಮೈದಾನದಲ್ಲೇ ಮೃತಪಟ್ಟ ಕ್ರಿಕೆಟಿಗ

ನೋಯ್ಡಾದ ಥಾನಾ ಎಕ್ಸ್​ಪ್ರೇಸ್​ವೇ ಸೆಕ್ಟರ್-135 ಪ್ರದೇಶದಲ್ಲಿ ಕ್ರಿಕೆಟ್ ಟೂರ್ನಿಯನ್ನು ಆಯೋಜಿಸಲಾಗಿತ್ತು. ಈ ಟೂರ್ನಿಯಲ್ಲಿ ಉತ್ತರಾಖಂಡ ಮೂಲದ ವಿಕಾಸ್ ನೇಗಿ ಕಣಕ್ಕಿಳಿದಿದ್ದರು. ಪಂದ್ಯದ ನಡುವೆಯೇ ದಿಢೀರ್ ಕುಸಿತಕ್ಕೊಳಗಾದ ವಿಕಾಸ್ ಪಿಚ್ ಮೇಲೆ ಬಿದ್ದಿದ್ದಾರೆ.

VIDEO: ಹೃದಯಾಘಾತದಿಂದ ಮೈದಾನದಲ್ಲೇ ಮೃತಪಟ್ಟ ಕ್ರಿಕೆಟಿಗ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 10, 2024 | 1:58 PM

Share

ದೇಶದಲ್ಲಿ ಹೃದಯಾಘಾತದ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅದರಲ್ಲೂ ಸಂಪೂರ್ಣ ಫಿಟ್​ನೆಸ್ ಹೊಂದಿದ್ದರೂ ಕೆಲವರು ಹೃದಯಾಘಾತ ಹಾಗೂ ಹೃದಯ ಸ್ತಂಭನದಿಂದ ಸಾವನ್ನಪ್ಪುತ್ತಿರುವ ಸುದ್ದಿಗಳು ಆಗಾಗ್ಗೆ ಕೇಳಿ ಬರುತ್ತಿದೆ. ಇದೀಗ ಕ್ರಿಕೆಟ್ (Cricket) ಪಂದ್ಯಾಟ ನಡುವೆಯೇ 36 ವರ್ಷದ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ.

ನೋಯ್ಡಾದ ಥಾನಾ ಎಕ್ಸ್​ಪ್ರೇಸ್​ವೇ ಸೆಕ್ಟರ್-135 ಪ್ರದೇಶದಲ್ಲಿ ಕ್ರಿಕೆಟ್ ಟೂರ್ನಿಯನ್ನು ಆಯೋಜಿಸಲಾಗಿತ್ತು. ಈ ಟೂರ್ನಿಯಲ್ಲಿ ಉತ್ತರಾಖಂಡ ಮೂಲದ ವಿಕಾಸ್ ನೇಗಿ ಕಣಕ್ಕಿಳಿದಿದ್ದರು.

ಅದರಂತೆ ಬ್ಯಾಟಿಂಗ್ ಮಾಡುತ್ತಿದ್ದಾಗ ವಿಕಾಸ್ ನೇಗಿ ರನ್ ಓಡಿದ್ದರು. ಆದರೆ ಚೆಂಡು ಬೌಂಡರಿ ಲೈನ್ ದಾಟಿತ್ತು. ಹೀಗಾಗಿ ಕ್ರೀಸ್​ನ ಮಧ್ಯ ಭಾಗದಿಂದ ಮತ್ತೆ ನಾನ್ ಸ್ಟ್ರೈಕ್​ನತ್ತ ಮರಳಲು ಮುಂದಾಗಿದ್ದರು. ಆದರೆ ದಿಢೀರ್ ಕುಸಿತಕ್ಕೊಳಗಾದ ವಿಕಾಸ ನೇಗಿ ಪಿಚ್ ಮೇಲೆ ಬಿದ್ದಿದ್ದಾರೆ.

ಇದನ್ನೂ ಓದಿ: ಶ್ರೀರಾಮನ ಹಾಡು ಕೇಳುವುದೇ ಖುಷಿ ಎಂದ ಸೌತ್ ಆಫ್ರಿಕಾ ಕ್ರಿಕೆಟಿಗ

ತಕ್ಷಣವೇ ಎದುರಾಳಿ ತಂಡದ ವಿಕೆಟ್ ಕೀಪರ್ ಹಾಗೂ ಸಹ ಆಟಗಾರ ವಿಕಾಸ್ ನೇಗಿ ಬಳಿ ಓಡಿ ಬಂದಿದ್ದಾರೆ. ಆ ಬಳಿಕ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಷ್ಟರಲ್ಲಾಗಲ್ಲೇ ವಿಕಾಸ್ ನೇಗಿ ಮೃತಪಟ್ಟಿದ್ದಾರೆ ವೈದ್ಯರು ತಿಳಿಸಿದ್ದಾರೆ.

ಮೃತದೇಹವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ದಿದ್ದು, ಈ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಈ ಹಿಂದೆ ವಿಕಾಸ್ ನೇಗಿ ಕೋವಿಡ್ ಸೋಂಕಿಗೆ ಒಳಗಾಗಿ ಚೇತರಿಸಿಕೊಂಡಿದ್ದರು. ಇದಾಗ್ಯೂ ಅವರು ಸಂಪೂರ್ಣ ಆರೋಗ್ಯವಂತರಾಗಿದ್ದರು ಎಂದು ಅವರ ಆಪ್ತರು ತಿಳಿಸಿದ್ದಾರೆ.

Follow Us
ಪ್ರಧಾನಿ ಮೋದಿಯಿಂದ ಜೋಧ್‌ಪುರ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಉದ್ಘಾಟನೆ
ಪ್ರಧಾನಿ ಮೋದಿಯಿಂದ ಜೋಧ್‌ಪುರ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಉದ್ಘಾಟನೆ
ರಾಜ್ಯದಲ್ಲಿ SIR ಪ್ರಕ್ರಿಯೆ ಸರಿಯಾಗಿ ನಡೆಯುತ್ತಿಲ್ಲ: ಪ್ರಹ್ಲಾದ್​ ಜೋಶಿ
ರಾಜ್ಯದಲ್ಲಿ SIR ಪ್ರಕ್ರಿಯೆ ಸರಿಯಾಗಿ ನಡೆಯುತ್ತಿಲ್ಲ: ಪ್ರಹ್ಲಾದ್​ ಜೋಶಿ
ನೆಲಮಂಗಲ: ಮನೆ ಮನೆಗೆ ಹೋಗುವ ಬದಲು ಮಸೀದಿಯಲ್ಲೇ ಕುಳಿತು SIR ಪತ್ರ ವಿತರಣೆ
ನೆಲಮಂಗಲ: ಮನೆ ಮನೆಗೆ ಹೋಗುವ ಬದಲು ಮಸೀದಿಯಲ್ಲೇ ಕುಳಿತು SIR ಪತ್ರ ವಿತರಣೆ
ಬತ್ತಿದ್ದ ಕೃಷ್ಣಾ ನದಿಗೆ ಜೀವ ಕಳೆ, 15 ಸಾವಿರ ಕ್ಯೂಸೆಕ್ ಒಳ ಹರಿವು
ಬತ್ತಿದ್ದ ಕೃಷ್ಣಾ ನದಿಗೆ ಜೀವ ಕಳೆ, 15 ಸಾವಿರ ಕ್ಯೂಸೆಕ್ ಒಳ ಹರಿವು
SIR ವಿವಾದ: ಸರ್ಕಾರದ ವಿರುದ್ಧ ಜಂಟಿ ಸಮರಕ್ಕೆ ಬಿಜೆಪಿ, ಜೆಡಿಎಸ್‌ ಸಿದ್ಧತೆ
SIR ವಿವಾದ: ಸರ್ಕಾರದ ವಿರುದ್ಧ ಜಂಟಿ ಸಮರಕ್ಕೆ ಬಿಜೆಪಿ, ಜೆಡಿಎಸ್‌ ಸಿದ್ಧತೆ
ಟ್ರಾಫಿಕ್ ಸಿಗ್ನಲ್​ನಲ್ಲಿ ನಿಂತಿದ್ದ ಎಸಿ ಬಸ್​ಗೆ ಮತ್ತೊಂದು ಬಸ್ ಡಿಕ್ಕಿ!
ಟ್ರಾಫಿಕ್ ಸಿಗ್ನಲ್​ನಲ್ಲಿ ನಿಂತಿದ್ದ ಎಸಿ ಬಸ್​ಗೆ ಮತ್ತೊಂದು ಬಸ್ ಡಿಕ್ಕಿ!
ಸರ್ಕಾರಿ ಕೆಲಸ ಕೊಡಿಸುವ ನೆಪದಲ್ಲಿ ವಂಚನೆ: ಟಿವಿ9 ವರದಿ ಬಳಿಕ ಆರೋಪಿಗಳ ಬಂಧನ
ಸರ್ಕಾರಿ ಕೆಲಸ ಕೊಡಿಸುವ ನೆಪದಲ್ಲಿ ವಂಚನೆ: ಟಿವಿ9 ವರದಿ ಬಳಿಕ ಆರೋಪಿಗಳ ಬಂಧನ
ಮಂಡ್ಯ ಫೈರಿಂಗ್: ಪ್ರಭಾವಿ ಪುತ್ರನ ಬೆನ್ನಿಗೆ ನಿಂತ್ರಾ ಎಸ್‌ಪಿ ಶೋಭಾರಾಣಿ?
ಮಂಡ್ಯ ಫೈರಿಂಗ್: ಪ್ರಭಾವಿ ಪುತ್ರನ ಬೆನ್ನಿಗೆ ನಿಂತ್ರಾ ಎಸ್‌ಪಿ ಶೋಭಾರಾಣಿ?
ರೌಡಿಶೀಟರ್​ಗಳಿಗೆ ಸಿಸಿಬಿ ಬಿಗ್ ಶಾಕ್, ರಾತ್ರೋರಾತ್ರಿ ಮಿಂಚಿನ ಕಾರ್ಯಾಚರಣೆ
ರೌಡಿಶೀಟರ್​ಗಳಿಗೆ ಸಿಸಿಬಿ ಬಿಗ್ ಶಾಕ್, ರಾತ್ರೋರಾತ್ರಿ ಮಿಂಚಿನ ಕಾರ್ಯಾಚರಣೆ
ಕೊರತೆ ತಪ್ಪಿಸಲು ಸಿಎಂ ಡಿಕೆ ಶಿವಕುಮಾರ್ ತುರ್ತು ಸಭೆ, ಅಧಿಕಾರಿಗಳಿಗೆ ಸೂಚನೆ
ಕೊರತೆ ತಪ್ಪಿಸಲು ಸಿಎಂ ಡಿಕೆ ಶಿವಕುಮಾರ್ ತುರ್ತು ಸಭೆ, ಅಧಿಕಾರಿಗಳಿಗೆ ಸೂಚನೆ