Cricket News: ಧೋತಿ ಮತ್ತು ಕುರ್ತಾ ಧರಿಸಿ ಕ್ರಿಕೆಟ್​ ಪಂದ್ಯಾಟ ಜೊತೆಗೆ ಸಂಸ್ಕೃತ ಕಾಮೆಂಟರಿ

ಈ ಪಂದ್ಯದ ಕಾಮೆಂಟರಿ ಕೂಡ ಸಂಸ್ಕೃತದಲ್ಲಿ ಮಾಡಲಾಯಿತು. ಸಂಸ್ಕೃತ ಭಾಷೆಯನ್ನು ಉತ್ತೇಜಿಸಲು ಈ ಪಂದ್ಯವನ್ನು ಆಯೋಜಿಸಲಾಗಿದೆ ಮತ್ತು ಹೆಚ್ಚು ಜನರು ಭಾಷೆಯನ್ನು ಕಲಿಯಬೇಕೆಂದು ಸಂಸ್ಥೆ ಬಯಸಿದೆ ಎಂದು ವೇದ ಪರಿವರ್​ನ ಆಟಗಾರರು ಹೇಳಿದ್ದಾರೆ.

Cricket News: ಧೋತಿ ಮತ್ತು ಕುರ್ತಾ ಧರಿಸಿ ಕ್ರಿಕೆಟ್​ ಪಂದ್ಯಾಟ ಜೊತೆಗೆ ಸಂಸ್ಕೃತ ಕಾಮೆಂಟರಿ
Cricket Match
Follow us
| Updated By: Vinay Bhat

Updated on: Jan 18, 2022 | 9:52 AM

ಭೂಪಾಲ್​ನ ಅಂಕುರ್ ಮೈದಾನ ವಿಶೇಷ ಕ್ರಿಕೆಟ್  ಪಂದ್ಯಕ್ಕೆ (Cricket Match) ಸಾಕ್ಷಿಯಾಗಿದೆ. ಸದಾ ವೇದ ಪಾರಾಯಣ, ವಿದ್ಯಾಭ್ಯಾಸದಲ್ಲಿ ತೊಡಗಿರುತ್ತಿದ್ದ ಇಲ್ಲಿನ ಸಂಸ್ಕೃತ ಶಾಲೆಗಳ ವಿದ್ಯಾರ್ಥಿಗಳು ಕ್ರಿಕೆಟ್‌ ಬ್ಯಾಟ್‌, ಬಾಲ್‌ ಹಿಡಿದು ಮೈದಾನಕ್ಕಿಳಿದಿದ್ದರು. ವಿಶೇಷ ಎಂದರೆ ಆಟಗಾರರು ತಾವು ಶಾಲೆಗೆ ಧರಿಸುವ ಉಡುಪಿನಲ್ಲೇ ಕ್ರಿಕೆಟ್‌ ಅಂಗಳಕ್ಕೂ ಆಗಮಿಸಿದ್ದರು. ಧೋತಿ ಮತ್ತು ಕುರ್ತಾ ಧರಿಸಿ ಕ್ರಿಕೆಟ್ ಆಡಿದ್ದಾರೆ. ಅಷ್ಟೇ ಅಲ್ಲದೆ ಈ ಪಂದ್ಯದ ಕಾಮೆಂಟರಿ ಕೂಡ ಸಂಸ್ಕೃತದಲ್ಲಿ ಮಾಡಲಾಯಿತು. ಸಂಸ್ಕೃತ ಭಾಷೆಯನ್ನು ಉತ್ತೇಜಿಸಲು ಈ ಪಂದ್ಯವನ್ನು ಆಯೋಜಿಸಲಾಗಿದೆ ಮತ್ತು ಹೆಚ್ಚು ಜನರು ಭಾಷೆಯನ್ನು ಕಲಿಯಬೇಕೆಂದು ಸಂಸ್ಥೆ ಬಯಸಿದೆ ಎಂದು ವೇದ ಪರಿವರ್​ನ ಆಟಗಾರರು ಹೇಳಿದ್ದಾರೆ.

ಈ ಪಂದ್ಯ ವೀಕ್ಷಿಸಲು ಅಲ್ಪ ಸಂಖ್ಯೆಯಲ್ಲಿ ಪ್ರೇಕ್ಷಕರು ಸೇರಿದ್ದರು. ಪಂದ್ಯದ ಪ್ರತಿ ಎಸೆತಕ್ಕೂ ವೀಕ್ಷಕ ವಿವರಣೆ ನೀಡಲಾಗುತ್ತಿತ್ತು. ವೀಕ್ಷಕ ವಿವರಣೆ (ಕಾಮೆಂಟ್ರಿ)ಯನ್ನು ಸಂಸ್ಕೃತದಲ್ಲಿ ನೀಡಲಾಗುತ್ತಿತ್ತು. ವೀಕ್ಷಕ ವಿವರಣೆಗಾರರು, ಅಂಪೈರ್‌ಗಳು ಸಹ ಪಂಚೆ, ಜುಬ್ಬಾ ಧರಿಸಿದ್ದು ವಿಶೇಷ.

ಈ ಹಿಂದೆ ಕೂಡ ಇದೇ ಮಾದರಿಯ ಕ್ರಿಕೆಟ್ ಪಂದ್ಯಾಟ ನಡೆದಿತ್ತು. ವಾರಾಣಸಿಯ ಸಂಪೂರ್ಣಾನಂದ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾಟ ಎಲ್ಲರ ಗಮನ ಸೆಳೆಸಿತ್ತು. ಆಟಗಾರರು ಪಂಚೆ, ಕುರ್ತಾ ಸಾಂಪ್ರದಾಯಿಕ ಉಡುಗೆ ಧರಿಸಿದ್ದರೆ, ಕ್ರಿಕೆಟ್ ಕಾಮೆಂಟರಿಯನ್ನು ಸಂಸ್ಕೃತದಲ್ಲಿ ಹೇಳಲಾಗುತ್ತಿತ್ತು. ವಿಶ್ವವಿದ್ಯಾಲಯದ 70ನೇ ವರ್ಷಾಚರಣೆಯ ಅಂಗವಾಗಿ ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿತ್ತು. ಕ್ಯಾಂಪಸ್‌ನಲ್ಲಿ ನಡೆದ ಮ್ಯಾಚ್, ಜನರ ಮನಸ್ಸನ್ನು ಗೆದ್ದಿತು ಮಾತ್ರವಲ್ಲದೆ, ಸಂಸ್ಕೃತ ಕಾಮೆಂಟರಿಗೆ ಎಲ್ಲರ ಮೆಚ್ಚುಗೆ ದೊರೆಯಿತು. ಧೋತಿ, ಕುರ್ತಾ ಧರಿಸಿದ್ದರೂ, ಆಟಗಾರರು ಯಾವುದೇ ಸಮಸ್ಯೆಯಿಲ್ಲದೆ ಸುಸೂತ್ರವಾಗಿ ಕ್ರಿಕೆಟ್ ಆಟದಲ್ಲಿ ಪಾಲ್ಗೊಂಡಿದ್ದರು.

South Africa vs India: ಏಕದಿನ ಸರಣಿ ಆರಂಭಕ್ಕೂ ಮುನ್ನ ಭಾರತಕ್ಕೆ ಗುಡ್ ನ್ಯೂಸ್: ಸ್ಟಾರ್ ಆಟಗಾರ ಕಮ್​ಬ್ಯಾಕ್

Beijing Winter Olympic: ಬೀಜಿಂಗ್ ಚಳಿಗಾಲದ ಒಲಿಂಪಿಕ್ಸ್‌: ವೀಕ್ಷಕರಿಗಿಲ್ಲ ಅವಕಾಶ, ಟಿಕೆಟ್ ಮಾರಾಟ ನಿಷೇಧ

ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್