AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cricket News: ಧೋತಿ ಮತ್ತು ಕುರ್ತಾ ಧರಿಸಿ ಕ್ರಿಕೆಟ್​ ಪಂದ್ಯಾಟ ಜೊತೆಗೆ ಸಂಸ್ಕೃತ ಕಾಮೆಂಟರಿ

ಈ ಪಂದ್ಯದ ಕಾಮೆಂಟರಿ ಕೂಡ ಸಂಸ್ಕೃತದಲ್ಲಿ ಮಾಡಲಾಯಿತು. ಸಂಸ್ಕೃತ ಭಾಷೆಯನ್ನು ಉತ್ತೇಜಿಸಲು ಈ ಪಂದ್ಯವನ್ನು ಆಯೋಜಿಸಲಾಗಿದೆ ಮತ್ತು ಹೆಚ್ಚು ಜನರು ಭಾಷೆಯನ್ನು ಕಲಿಯಬೇಕೆಂದು ಸಂಸ್ಥೆ ಬಯಸಿದೆ ಎಂದು ವೇದ ಪರಿವರ್​ನ ಆಟಗಾರರು ಹೇಳಿದ್ದಾರೆ.

Cricket News: ಧೋತಿ ಮತ್ತು ಕುರ್ತಾ ಧರಿಸಿ ಕ್ರಿಕೆಟ್​ ಪಂದ್ಯಾಟ ಜೊತೆಗೆ ಸಂಸ್ಕೃತ ಕಾಮೆಂಟರಿ
Cricket Match
TV9 Web
| Edited By: |

Updated on: Jan 18, 2022 | 9:52 AM

Share

ಭೂಪಾಲ್​ನ ಅಂಕುರ್ ಮೈದಾನ ವಿಶೇಷ ಕ್ರಿಕೆಟ್  ಪಂದ್ಯಕ್ಕೆ (Cricket Match) ಸಾಕ್ಷಿಯಾಗಿದೆ. ಸದಾ ವೇದ ಪಾರಾಯಣ, ವಿದ್ಯಾಭ್ಯಾಸದಲ್ಲಿ ತೊಡಗಿರುತ್ತಿದ್ದ ಇಲ್ಲಿನ ಸಂಸ್ಕೃತ ಶಾಲೆಗಳ ವಿದ್ಯಾರ್ಥಿಗಳು ಕ್ರಿಕೆಟ್‌ ಬ್ಯಾಟ್‌, ಬಾಲ್‌ ಹಿಡಿದು ಮೈದಾನಕ್ಕಿಳಿದಿದ್ದರು. ವಿಶೇಷ ಎಂದರೆ ಆಟಗಾರರು ತಾವು ಶಾಲೆಗೆ ಧರಿಸುವ ಉಡುಪಿನಲ್ಲೇ ಕ್ರಿಕೆಟ್‌ ಅಂಗಳಕ್ಕೂ ಆಗಮಿಸಿದ್ದರು. ಧೋತಿ ಮತ್ತು ಕುರ್ತಾ ಧರಿಸಿ ಕ್ರಿಕೆಟ್ ಆಡಿದ್ದಾರೆ. ಅಷ್ಟೇ ಅಲ್ಲದೆ ಈ ಪಂದ್ಯದ ಕಾಮೆಂಟರಿ ಕೂಡ ಸಂಸ್ಕೃತದಲ್ಲಿ ಮಾಡಲಾಯಿತು. ಸಂಸ್ಕೃತ ಭಾಷೆಯನ್ನು ಉತ್ತೇಜಿಸಲು ಈ ಪಂದ್ಯವನ್ನು ಆಯೋಜಿಸಲಾಗಿದೆ ಮತ್ತು ಹೆಚ್ಚು ಜನರು ಭಾಷೆಯನ್ನು ಕಲಿಯಬೇಕೆಂದು ಸಂಸ್ಥೆ ಬಯಸಿದೆ ಎಂದು ವೇದ ಪರಿವರ್​ನ ಆಟಗಾರರು ಹೇಳಿದ್ದಾರೆ.

ಈ ಪಂದ್ಯ ವೀಕ್ಷಿಸಲು ಅಲ್ಪ ಸಂಖ್ಯೆಯಲ್ಲಿ ಪ್ರೇಕ್ಷಕರು ಸೇರಿದ್ದರು. ಪಂದ್ಯದ ಪ್ರತಿ ಎಸೆತಕ್ಕೂ ವೀಕ್ಷಕ ವಿವರಣೆ ನೀಡಲಾಗುತ್ತಿತ್ತು. ವೀಕ್ಷಕ ವಿವರಣೆ (ಕಾಮೆಂಟ್ರಿ)ಯನ್ನು ಸಂಸ್ಕೃತದಲ್ಲಿ ನೀಡಲಾಗುತ್ತಿತ್ತು. ವೀಕ್ಷಕ ವಿವರಣೆಗಾರರು, ಅಂಪೈರ್‌ಗಳು ಸಹ ಪಂಚೆ, ಜುಬ್ಬಾ ಧರಿಸಿದ್ದು ವಿಶೇಷ.

ಈ ಹಿಂದೆ ಕೂಡ ಇದೇ ಮಾದರಿಯ ಕ್ರಿಕೆಟ್ ಪಂದ್ಯಾಟ ನಡೆದಿತ್ತು. ವಾರಾಣಸಿಯ ಸಂಪೂರ್ಣಾನಂದ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾಟ ಎಲ್ಲರ ಗಮನ ಸೆಳೆಸಿತ್ತು. ಆಟಗಾರರು ಪಂಚೆ, ಕುರ್ತಾ ಸಾಂಪ್ರದಾಯಿಕ ಉಡುಗೆ ಧರಿಸಿದ್ದರೆ, ಕ್ರಿಕೆಟ್ ಕಾಮೆಂಟರಿಯನ್ನು ಸಂಸ್ಕೃತದಲ್ಲಿ ಹೇಳಲಾಗುತ್ತಿತ್ತು. ವಿಶ್ವವಿದ್ಯಾಲಯದ 70ನೇ ವರ್ಷಾಚರಣೆಯ ಅಂಗವಾಗಿ ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿತ್ತು. ಕ್ಯಾಂಪಸ್‌ನಲ್ಲಿ ನಡೆದ ಮ್ಯಾಚ್, ಜನರ ಮನಸ್ಸನ್ನು ಗೆದ್ದಿತು ಮಾತ್ರವಲ್ಲದೆ, ಸಂಸ್ಕೃತ ಕಾಮೆಂಟರಿಗೆ ಎಲ್ಲರ ಮೆಚ್ಚುಗೆ ದೊರೆಯಿತು. ಧೋತಿ, ಕುರ್ತಾ ಧರಿಸಿದ್ದರೂ, ಆಟಗಾರರು ಯಾವುದೇ ಸಮಸ್ಯೆಯಿಲ್ಲದೆ ಸುಸೂತ್ರವಾಗಿ ಕ್ರಿಕೆಟ್ ಆಟದಲ್ಲಿ ಪಾಲ್ಗೊಂಡಿದ್ದರು.

South Africa vs India: ಏಕದಿನ ಸರಣಿ ಆರಂಭಕ್ಕೂ ಮುನ್ನ ಭಾರತಕ್ಕೆ ಗುಡ್ ನ್ಯೂಸ್: ಸ್ಟಾರ್ ಆಟಗಾರ ಕಮ್​ಬ್ಯಾಕ್

Beijing Winter Olympic: ಬೀಜಿಂಗ್ ಚಳಿಗಾಲದ ಒಲಿಂಪಿಕ್ಸ್‌: ವೀಕ್ಷಕರಿಗಿಲ್ಲ ಅವಕಾಶ, ಟಿಕೆಟ್ ಮಾರಾಟ ನಿಷೇಧ

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ