AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prasidh Krishna: ಭರ್ಜರಿ ದಾಖಲೆ ಬರೆದ ಕನ್ನಡಿಗ ಪ್ರಸಿದ್ಧ್ ಕೃಷ್ಣ

India vs West Indies: ಟೀಮ್ ಇಂಡಿಯಾ ಬೌಲರುಗಳ ಪರಾಕ್ರಮದ ಮುಂದೆ ವೆಸ್ಟ್ ಇಂಡೀಸ್ ಆಟಗಾರರು ಕ್ರೀಸ್ ಕಚ್ಚಿ ನಿಲ್ಲಲಾಗಲಿಲ್ಲ. ಅದರಂತೆ 193 ರನ್​ಗೆ ಆಲೌಟ್ ಆಗುವ ಮೂಲಕ 44 ರನ್​ಗಳಿಂದ ಸೋಲನುಭವಿಸಿತು.

Prasidh Krishna: ಭರ್ಜರಿ ದಾಖಲೆ ಬರೆದ ಕನ್ನಡಿಗ ಪ್ರಸಿದ್ಧ್ ಕೃಷ್ಣ
prasidh krishna
TV9 Web
| Edited By: |

Updated on: Feb 10, 2022 | 2:29 PM

Share

ವೆಸ್ಟ್ ಇಂಡೀಸ್ (India vs West Indies 2nd Odi) ವಿರುದ್ದದ 2ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ಮೂಲಕ ಟೀಮ್ ಇಂಡಿಯಾ ಸರಣಿ ವಶಪಡಿಸಿಕೊಂಡಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಬ್ಯಾಟಿಂಗ್​ನಲ್ಲಿ ಸೂರ್ಯಕುಮಾರ್ ಯಾದವ್ ಹಾಗೂ ಕೆಎಲ್ ರಾಹುಲ್ (KL Rahul) ಮಿಂಚಿದ್ರೆ, ಬೌಲಿಂಗ್​ನಲ್ಲಿ ಕನ್ನಡಿಗ ಪ್ರಸಿದ್ಧ್ ಕೃಷ್ಣ (Prasidh Krishna)  ಪರಾಕ್ರಮ ಮೆರೆದಿದ್ದರು. ಅದರಲ್ಲೂ 238 ರನ್​ಗಳ ಸಾಧಾರಣ ಗುರಿಯನ್ನು ಬೆನ್ನತ್ತಿದ ವೆಸ್ಟ್ ಇಂಡೀಸ್ ಪ್ರಸಿದ್ಧ್ ಕೃಷ್ಣ ಅವರ ಬೌಲಿಂಗ್​ನಲ್ಲಿ ರನ್​ಗಳಿಸಲು ಪರದಾಡಿತು. ಆರಂಭದಲ್ಲೇ 2 ವಿಕೆಟ್ ಉರುಳಿಸಿದ ಪ್ರಸಿದ್ಧ್ ಆ ಬಳಿಕ ಮತ್ತೆರಡು ವಿಕೆಟ್ ಕಬಳಿಸಿದರು. ಅದರಂತೆ 9 ಓವರ್​ಗಳನ್ನು ಬೌಲಿಂಗ್ ಮಾಡಿ 4 ವಿಕೆಟ್ ಪಡೆದರು. ಆದರೆ ಈ ವೇಳೆ ನೀಡಿದ್ದು ಕೇವಲ 12 ರನ್​ ಮಾತ್ರ.

ವೆಸ್ಟ್ ಇಂಡೀಸ್ ವಿರುದ್ದ ಇಷ್ಟೊಂದು ಕಡಿಮೆ ರನ್ ನೀಡಿ ಟೀಮ್ ಇಂಡಿಯಾದ ಯಾವುದೇ ವೇಗದ ಬೌಲರ್ 4 ವಿಕೆಟ್ ಪಡೆದಿಲ್ಲ ಎಂಬುದು ವಿಶೇಷ. ಇದು ಒಂದು ದಾಖಲೆಯಾದರೆ, ಅತೀ ಕಡಿಮೆ ರನ್​ ನೀಡಿ 4 ಮತ್ತು ಅದಕ್ಕಿಂತ ಹೆಚ್ಚು ವಿಕೆಟ್​ ಪಡೆದ ಟೀಮ್ ಇಂಡಿಯಾ ಮೂರನೇ ವೇಗಿ ಎಂಬ ದಾಖಲೆಯನ್ನೂ ಕೂಡ ಪ್ರಸಿದ್ಧ್ ಕೃಷ್ಣ ನಿರ್ಮಿಸಿದ್ದಾರೆ.

ಈ ದಾಖಲೆಯ ಪಟ್ಟಿಯಲ್ಲಿ ಕನ್ನಡಿಗ ಸ್ಟುವರ್ಟ್ ಬಿನ್ನಿ ಅಗ್ರಸ್ಥಾನದಲ್ಲಿದ್ದಾರೆ. ಬಿನ್ನಿ 2014 ರಲ್ಲಿ ಬಾಂಗ್ಲಾದೇಶದ ವಿರುದ್ದ 4 ರನ್ ನೀಡಿ 6 ವಿಕೆಟ್ ಕಬಳಿಸಿ ಈ ದಾಖಲೆ ಬರೆದಿದ್ದರು. ಹಾಗೆಯೇ ಭುವನೇಶ್ವರ್ ಕುಮಾರ್ ಶ್ರೀಲಂಕಾ ವಿರುದ್ದ 8 ರನ್ ನೀಡಿ 4 ವಿಕೆಟ್ ಪಡೆದಿದ್ದರು. ಇದೀಗ ಪ್ರಸಿದ್ದ್ ಕೃಷ್ಣ 12 ರನ್​ ನೀಡಿ 4 ವಿಕೆಟ್ ಕಬಳಿಸುವ ಮೂಲಕ ವಿಶೇಷ ದಾಖಲೆಯ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಅಲ್ಲದೆ ವೆಸ್ಟ್ ಇಂಡೀಸ್ ವಿರುದ್ದ ಅತೀ ಕಡಿಮೆ ರನ್​ ನೀಡಿ 4 ವಿಕೆಟ್ ಪಡೆದ ಟೀಮ್ ಇಂಡಿಯಾ ವೇಗದ ಬೌಲರ್ ಎಂಬ ದಾಖಲೆಯನ್ನೂ ಕೂಡ ನಿರ್ಮಿಸಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಸೂರ್ಯ ಕುಮಾರ್ ಯಾದವ್ ಅವರ 64 ರನ್ ಹಾಗೂ ಕೆಎಲ್ ರಾಹುಲ್ ಅವರ 49 ರನ್​ಗಳ ನೆರವಿನಿಂದ 50 ಓವರ್​ಗಳಲ್ಲಿ 237 ರನ್​ಗಳಿಸಿತು. ಈ ಸಾಧಾರಣ ಗುರಿಯನ್ನು ಬೆನ್ನತ್ತಿದ ವೆಸ್ಟ್ ಇಂಡೀಸ್​ಗೆ ಕನ್ನಡಿಗ ಪ್ರಸಿದ್ಧ್ ಕೃಷ್ಣ ಆರಂಭದಲ್ಲೇ ಆಘಾತ ನೀಡಿದ್ದರು. ತಂಡದ ಮೊತ್ತ 50 ರನ್​ ಆಗುವಷ್ಟರಲ್ಲಿ ಮೂರು ವಿಕೆಟ್ ಉರುಳಿಸಿದ ಟೀಮ್ ಇಂಡಿಯಾ ಪಂದ್ಯದ ಮೇಲೆ ಹಿಡಿತ ಸಾಧಿಸಿದರು. ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ಬ್ರೂಕ್ಸ್ 44 ರನ್​ ಬಾರಿಸಿ ತಂಡಕ್ಕೆ ಆಸರೆಯಾದರು. ಈ ಹಂತದಲ್ಲಿ ದಾಳಿಗಿಳಿದ ದೀಪಕ್ ಹೂಡಾ ಬ್ರೂಕ್ಸ್ ವಿಕೆಟ್ ಪಡೆದರು.

ಆ ಬಳಿಕ ಟೀಮ್ ಇಂಡಿಯಾ ಬೌಲರುಗಳ ಪರಾಕ್ರಮದ ಮುಂದೆ ವೆಸ್ಟ್ ಇಂಡೀಸ್ ಆಟಗಾರರು ಕ್ರೀಸ್ ಕಚ್ಚಿ ನಿಲ್ಲಲಾಗಲಿಲ್ಲ. ಅದರಂತೆ 193 ರನ್​ಗೆ ಆಲೌಟ್ ಆಗುವ ಮೂಲಕ 44 ರನ್​ಗಳಿಂದ ಸೋಲನುಭವಿಸಿತು. ಟೀಮ್ ಇಂಡಿಯಾ ಪರ ಪ್ರಸಿದ್ಧ್ ಕೃಷ್ಣ 9 ಓವರ್​ಗಳಲ್ಲಿ ಕೇವಲ 12 ರನ್​ ನೀಡಿ 4 ವಿಕೆಟ್ ಉರುಳಿಸಿ ಮಿಂಚಿದರು. ಇನ್ನು ಶಾರ್ದೂಲ್ ಠಾಕೂರ್ 2 ವಿಕೆಟ್ ಪಡೆದರೆ, ಸಿರಾಜ್ ಹಾಗೂ ಉಳಿದ ಬೌಲರುಗಳು ತಲಾ ಒಂದೊಂದು ವಿಕೆಟ್ ಪಡೆದರು. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಸರಣಿಯನ್ನು ವಶಪಡಿಸಿಕೊಂಡಿದೆ. ಇನ್ನು ಈ ಸರಣಿಯ ಕೊನೆಯ ಪಂದ್ಯವು ಫೆಬ್ರವರಿ 11 ರಂದು ನಡೆಯಲಿದೆ.

ಇದನ್ನೂ ಓದಿ: IPL 2022 auction: ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ 590 ಆಟಗಾರರ ಹೆಸರು ಇಲ್ಲಿದೆ

ಇದನ್ನೂ ಓದಿ: Yuzvendra Chahal: ವಿಕೆಟ್​ಗಳ ಶತಕ ಪೂರೈಸಿದ ಚಹಾಲ್

ಇದನ್ನೂ ಓದಿ: Rohit Sharma: ಸಚಿನ್ ದಾಖಲೆ ಮುರಿದ ಹಿಟ್​ಮ್ಯಾನ್ ರೋಹಿತ್ ಶರ್ಮಾ

ಇದನ್ನೂ ಓದಿ: Lata Mangeshkar: ಎಲ್ಲರೂ ಕೈಬಿಟ್ಟಾಗ ಟೀಮ್ ಇಂಡಿಯಾ ಕೈ ಹಿಡಿದಿದ್ದ ಲತಾ ಮಂಗೇಶ್ಕರ್..!

(prasidh krishna record cheapest 4 wicket haul for indian pacers in odis)

Follow Us
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಗೋಡೆ ಹಾಗೂ ಥಾರ್ ನಡುವೆ ಸಿಲುಕಿ ಅಪ್ಪಚ್ಚಿಯಾದ ವೃದ್ಧೆ
ಗೋಡೆ ಹಾಗೂ ಥಾರ್ ನಡುವೆ ಸಿಲುಕಿ ಅಪ್ಪಚ್ಚಿಯಾದ ವೃದ್ಧೆ
ಉರುಳಿ ಬಿದ್ದ ಪ್ರವಾಸಿಗರ ಬಸ್: ಕಾರಿನಲ್ಲಿದ್ದ ನಾಲ್ವರು ಜಸ್ಟ್​ ಮಿಸ್​!
ಉರುಳಿ ಬಿದ್ದ ಪ್ರವಾಸಿಗರ ಬಸ್: ಕಾರಿನಲ್ಲಿದ್ದ ನಾಲ್ವರು ಜಸ್ಟ್​ ಮಿಸ್​!