AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shreyas Iyer: ಧೋನಿ ಶೈಲಿಯಲ್ಲಿ ಶ್ರೇಯಸ್ ಅಯ್ಯರ್ ಗೆಲುವಿನ ಸಿಕ್ಸ್ ಬಾರಿಸಿದಾಗ ಪ್ರೀತಿ ಝಿಂಟಾ ಏನು ಮಾಡಿದ್ರು ನೋಡಿ

PBKS vs MI, IPL 2025: ಶ್ರೇಯಸ್ ಅಯ್ಯರ್ ಥೇಟ್ ಎಂಎಸ್ ಧೋನಿ ಸ್ಟೈಲ್ನಲ್ಲಿ ಸಿಕ್ಸ್ ಸಿಡಿಸಿ ಪಂಜಾಬ್ ತಂಡ ಮುಂಬೈ ವಿರುದ್ಧ ಗೆದ್ದಾಗ, ತಂಡದ ಮಾಲಕಿ ಪ್ರೀತಿ ಝಿಂಟಾ ತುಂಬಾ ಖುಷಿ ಪಟ್ಟಿರುವುದು ಕಂಡುಬಂತು. ಪ್ರೀತಿ ತಮ್ಮ ತಂಡದ ಗೆಲುವನ್ನು ಸ್ಟ್ಯಾಂಡ್‌ನಲ್ಲಿ ಆಚರಿಸುತ್ತಿರುವ ವಿಡಿಯೋ ಕೂಡ ಹೊರಬಂದಿದೆ.

Shreyas Iyer: ಧೋನಿ ಶೈಲಿಯಲ್ಲಿ ಶ್ರೇಯಸ್ ಅಯ್ಯರ್ ಗೆಲುವಿನ ಸಿಕ್ಸ್ ಬಾರಿಸಿದಾಗ ಪ್ರೀತಿ ಝಿಂಟಾ ಏನು ಮಾಡಿದ್ರು ನೋಡಿ
Shreyas Iyer And Preity Zinta
Vinay Bhat
|

Updated on: May 27, 2025 | 11:41 AM

Share

ಬೆಂಗಳೂರು (ಮೇ. 27): ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ 2025 ರ (Indian Premier LEague) 69 ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ಮುಂಬೈ ಇಂಡಿಯನ್ಸ್ ತಂಡವನ್ನು 7 ವಿಕೆಟ್‌ಗಳಿಂದ ಸೋಲಿಸಿತು. ಈ ಗೆಲುವು ಪಂಜಾಬ್‌ಗೆ ಅಗ್ರ 2 ಸ್ಥಾನ ಪ್ರವೇಶಿಸಲು ಬಹಳ ಮುಖ್ಯವಾಗಿತ್ತು. ಶ್ರೇಯಸ್ ಅಯ್ಯರ್ ಪಡೆ ಈಗ ಅಗ್ರ 2 ರಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದೆ. ಅವರು ಪ್ರಸ್ತುತ 14 ಪಂದ್ಯಗಳಲ್ಲಿ 19 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

ಸದ್ಯ ಮೇ 29 ರಂದು, ಪಂಜಾಬ್ ಕಿಂಗ್ಸ್ ತಂಡವು ಮುಲ್ಲನ್‌ಪುರದಲ್ಲಿ ಗುಜರಾತ್ ಟೈಟಾನ್ಸ್ ಅಥವಾ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಮೊದಲ ಕ್ವಾಲಿಫೈಯರ್ ಪಂದ್ಯವನ್ನು ಆಡಲಿದೆ. ಪಂಜಾಬ್ ತಂಡ ಮುಂಬೈ ವಿರುದ್ಧ ಗೆದ್ದಾಗ, ತಂಡದ ಮಾಲಕಿ ಪ್ರೀತಿ ಝಿಂಟಾ ತುಂಬಾ ಖುಷಿ ಪಟ್ಟಿರುವುದು ಕಂಡುಬಂತು. ಪ್ರೀತಿ ತಮ್ಮ ತಂಡದ ಗೆಲುವನ್ನು ಸ್ಟ್ಯಾಂಡ್‌ನಲ್ಲಿ ಆಚರಿಸುತ್ತಿರುವ ವಿಡಿಯೋ ಕೂಡ ಹೊರಬಂದಿದೆ.

ಇದನ್ನೂ ಓದಿ
Image
ಲಕ್ನೋ-ಆರ್​ಸಿಬಿ ಹೈವೋಲ್ಟೇಜ್ ಪಂದ್ಯಕ್ಕೆ ಪಿಚ್ ಹೇಗೆದೆ?, ಯಾರಿಗೆ ಸಹಕಾರಿ?
Image
ಕೊನೆಯ ಓವರ್‌ನಲ್ಲಿ 3 ರನ್‌-2 ವಿಕೆಟ್‌: MI ಸೋಲಿಗೆ ಕಾರಣವಾದ ಈ ಬೌಲರ್
Image
ಪಂಜಾಬ್ ವಿರುದ್ಧ ಸೋತು ಟಾಪ್ 2 ರೇಸ್​ನಿಂದ ಹೊರಬಿದ್ದ ಮುಂಬೈ
Image
ಆರ್​ಸಿಬಿ- ಲಕ್ನೋ ಪಂದ್ಯದ ವೇಳೆ ಹೇಗಿರಲಿದೆ ಲಕ್ನೋ ಹವಾಮಾನ?

ಶ್ರೇಯಸ್ ಅಯ್ಯರ್ ಗೆಲುವಿನ ಸಿಕ್ಸ್ ಕಂಡು ಕುಣಿದುಕುಪ್ಪಳಿಸಿದ ಪ್ರೀತಿ ಝಿಂಟಾ

ಎಂಎಸ್ ಧೋನಿಯಂತೆಯೇ ನಾಯಕ ಶ್ರೇಯಸ್ ಅಯ್ಯರ್ ಕೂಡ ಟ್ರೆಂಟ್ ಬೌಲ್ಟ್ ಎಸೆತದಲ್ಲಿ ಗೆಲುವಿನ ಸಿಕ್ಸರ್ ಬಾರಿಸಿ ಮುಂಬೈ ಇಂಡಿಯನ್ಸ್ ವಿರುದ್ಧ ತಮ್ಮ ತಂಡಕ್ಕೆ ಗೆಲುವು ತಂದುಕೊಟ್ಟರು. ಅಯ್ಯರ್ ಕೂಡ ಸಿಕ್ಸರ್ ಬಾರಿಸುವ ಮೂಲಕ ಸಂಭ್ರಮಿಸಲು ಪ್ರಾರಂಭಿಸಿದರು. ಸ್ಟ್ಯಾಂಡ್‌ನಲ್ಲಿ ಕುಳಿತಿದ್ದ ಪ್ರೀತಿ ಝಿಂಟಾ ಕುಣಿದು ಸಂಭ್ರಮಿಸಿದ್ದು ಕಂಡುಬಂತು. ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

ಪಂದ್ಯ ಹೀಗಿತ್ತು

ಮುಂಬೈ ಇಂಡಿಯನ್ಸ್ ವಿರುದ್ಧ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ಗಳಿಗೆ 184 ರನ್ ಗಳಿಸಿ ಪಂಜಾಬ್‌ಗೆ 185 ರನ್‌ಗಳ ಗುರಿಯನ್ನು ನೀಡಿತು. ಮುಂಬೈ ಪರ ಸೂರ್ಯಕುಮಾರ್ ಯಾದವ್ ಅತಿ ಹೆಚ್ಚು 57 ರನ್ ಗಳಿಸಿದರು. ಪಿಬಿಕೆಎಸ್ ಪರ ಅರ್ಷದೀಪ್ ಸಿಂಗ್, ಮಾರ್ಕೊ ಜಾನ್ಸೆನ್ ಮತ್ತು ವಿಶ್ಯಕ್ ವಿಜಯ್ ಕುಮಾರ್ ತಲಾ 2 ವಿಕೆಟ್ ಪಡೆದರು. ಹರ್‌ಪ್ರೀತ್ ಬ್ರಾರ್ ಕೂಡ 1 ವಿಕೆಟ್ ಪಡೆದರು.

LSG vs RCB Pitch Report: ಲಕ್ನೋ-ಆರ್​ಸಿಬಿ ಹೈವೋಲ್ಟೇಜ್ ಪಂದ್ಯಕ್ಕೆ ಪಿಚ್ ಹೇಗೆದೆ?, ಯಾರಿಗೆ ಸಹಕಾರಿ?

ಪಂಜಾಬ್ ಕಿಂಗ್ಸ್ 18.3 ಓವರ್‌ಗಳಲ್ಲಿ 7 ವಿಕೆಟ್‌ಗಳು ಬಾಕಿ ಇರುವಾಗಲೇ 185 ರನ್‌ಗಳ ಗುರಿಯನ್ನು ಬೆನ್ನಟ್ಟಿತು. ಈ ರನ್ ಚೇಸ್‌ನಲ್ಲಿ ಜೋಶ್ ಇಂಗ್ಲಿಸ್ ಮತ್ತು ಪ್ರಿಯಾಂಶ್ ಆರ್ಯ ಪ್ರಮುಖ ಪಾತ್ರ ವಹಿಸಿದರು. ಇಂಗ್ಲಿಸ್ 42 ಎಸೆತಗಳಲ್ಲಿ 73 ರನ್ ಗಳಿಸಿದರೆ, ಆರ್ಯ 35 ಎಸೆತಗಳಲ್ಲಿ 62 ರನ್ ಗಳಿಸಿದರು. ನಾಯಕ ಶ್ರೇಯಸ್ ಅಯ್ಯರ್ 26 ರನ್ ಗಳಿಸಿ ಅಜೇಯರಾಗುಳಿದರು. ಮುಂಬೈ ಪರ ಮಿಚೆಲ್ ಸ್ಯಾಂಟ್ನರ್ ಗರಿಷ್ಠ 2 ವಿಕೆಟ್ ಪಡೆದರು. ಜಸ್ಪ್ರೀತ್ ಬುಮ್ರಾ ಕೂಡ 1 ವಿಕೆಟ್ ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ