AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Attack on Prithvi Shaw: ಟೀಮ್ ಇಂಡಿಯಾ ಆಟಗಾರನ ಮೇಲೆ ಹಲ್ಲೆಗೆ ಮುಂದಾದ ಯುವತಿ: ವಿಡಿಯೋ ವೈರಲ್

Prithvi Shaw Fight Video: ಈ ವೇಳೆ ಪೃಥ್ವಿ ಶಾ ನಿರಾಕರಿಸಿದ್ದರು. ಇದಾದ ಬಳಿಕ ಬೇಸ್​ಬಾಲ್ ಬ್ಯಾಟ್ ಮೂಲಕ ಕಿಡಿಗೇಡಿಗಳ ಗುಂಪೊಂದು ಟೀಮ್ ಇಂಡಿಯಾ ಆಟಗಾರನ ಮೇಲೆ ಹಲ್ಲೆಗೆ ಮುಂದಾಗಿದೆ.

Attack on Prithvi Shaw: ಟೀಮ್ ಇಂಡಿಯಾ ಆಟಗಾರನ ಮೇಲೆ ಹಲ್ಲೆಗೆ ಮುಂದಾದ ಯುವತಿ: ವಿಡಿಯೋ ವೈರಲ್
Prithvi Shaw
TV9 Web
| Edited By: |

Updated on:Feb 17, 2023 | 9:38 AM

Share

ಟೀಮ್ ಇಂಡಿಯಾ (Team India) ಆಟಗಾರ ಪೃಥ್ವಿ ಶಾ (Prithvi Shaw) ಹಾಗೂ ಅಭಿಮಾನಿಗಳ ನಡುವಣ ಸೆಲ್ಫಿ ವಿವಾದವು ಇದೀಗ ಹೊಸ ತಿರುವು ಪಡೆದುಕೊಂಡಿದೆ. ಈ ಹಿಂದೆ ಪೃಥ್ವಿ ಶಾ ತಾನು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಕೆಲವು ಕಿಡಿಗೇಡಿಗಳು ದಾಳಿ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಈ ಸಂಬಂಧ ದೂರು ದಾಖಲಿಸಿದ್ದರು. ಅದರಂತೆ 8 ಮಂದಿಯನ್ನು ಬಂಧಿಸಲಾಗಿದೆ. ಇದೀಗ ಪೃಥ್ವಿ ಶಾ ವಿರುದ್ಧ ಹಲ್ಲೆಗೆ ಮುಂದಾಗಿರುವ ಯುವತಿಯ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪ್ರಸ್ತುತ ಮಾಹಿತಿ ಪ್ರಕಾರ, ಪೃಥ್ವಿ ಶಾ ಅವರೊಂದಿಗೆ ಕೆಲ ಅಭಿಮಾನಿಗಳು ಸೆಲ್ಫಿಗೆ ಮುಂದಾಗಿದ್ದಾರೆ. ಈ ವೇಳೆ ಇಬ್ಬರಿಗೆ ಸೆಲ್ಫಿ ನೀಡಿದ್ದಾರೆ. ಇದರ ನಂತರ ಇನ್ನಷ್ಟು ಮಂದಿ ಸೆಲ್ಫಿ ಕ್ಲಿಕ್ಕಿಸಲು ಕೇಳಿಕೊಂಡಿದ್ದಾರೆ.

ಈ ವೇಳೆ ಪೃಥ್ವಿ ಶಾ ನಿರಾಕರಿಸಿದ್ದರು. ಇದಾದ ಬಳಿಕ ಬೇಸ್​ಬಾಲ್ ಬ್ಯಾಟ್ ಮೂಲಕ ಕಿಡಿಗೇಡಿಗಳ ಗುಂಪೊಂದು ಟೀಮ್ ಇಂಡಿಯಾ ಆಟಗಾರನ ಮೇಲೆ ಹಲ್ಲೆಗೆ ಮುಂದಾಗಿದೆ. ಇತ್ತ ವಿಡಿಯೋದಲ್ಲೂ ಪೃಥ್ವಿ ಶಾ ಯುವತಿಯ ಕೈಯಿಂದ ಬೇಸ್​ಬಾಲ್ ಬ್ಯಾಟ್​​ ಕಸಿದುಕೊಳ್ಳಲು ಯತ್ನಿಸುತ್ತಿರುವುದು ಕಾಣಬಹುದು. ಈ ವಿಡಿಯೋದಲ್ಲಿರುವ ಯುವತಿಯನ್ನು ಸಪ್ನಾ ಗಿಲ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ
Image
India vs Australia 2nd Test: ಟೀಮ್ ಇಂಡಿಯಾಗೆ ಸ್ಟಾರ್ ಆಟಗಾರ ಎಂಟ್ರಿ
Image
Virender Sehwag: ಪುಲ್ವಾಮಾ ದಾಳಿಗೆ 4 ವರ್ಷ: ಕೊಟ್ಟ ಮಾತು ಉಳಿಸಿಕೊಂಡ ವೀರೇಂದ್ರ ಸೆಹ್ವಾಗ್
Image
RCB ತಂಡದ ಸ್ಮೈಲ್ ಸುಂದರಿ ಸ್ಮೃತಿ ಮಂಧಾನ ಅವರ ಶೈಕ್ಷಣಿಕ ಅರ್ಹತೆ ಏನು ಗೊತ್ತಾ?
Image
WPL 2023: ವುಮೆನ್ಸ್​ ಪ್ರೀಮಿಯರ್ ಲೀಗ್​ನಲ್ಲಿ ಕಣಕ್ಕಿಳಿಯುವ 5 ತಂಡಗಳು ಹೀಗಿವೆ

ಇದೀಗ ಯುವತಿಯು ಪೃಥ್ವಿ ಶಾ ತನ್ನ ಮೇಲೆ ಹಲ್ಲೆಗೆ ಮುಂದಾಗಿದ್ದಾರೆಂದು ಆರೋಪಿಸಿದ್ದಾರೆ. ಆದರೆ ಪೃಥ್ವಿ ಶಾ ಆರೋಪದಂತೆ, ಸೆಲ್ಫಿ ನೀಡದಿರುವ ಕಾರಣ ಆರೋಪಿಗಳು ಅವರನ್ನು ಹಿಂಬಾಲಿಸಿ ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ. ಇಲ್ಲದಿದ್ದರೆ ಸುಳ್ಳು ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಕೆಯೊಡ್ಡಿದ್ದರು. ಈ ಸಂಬಂಧ ದೂರು ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಮತ್ತೊಂದೆಡೆ ಸಪ್ನಾ ಗಿಲ್ ಅವರ ವಕೀಲ ಅಲಿ ಕಾಸಿಫ್ ಖಾನ್ ದೇಶಮುಖ್ ಪ್ರಕಾರ, ಪೊಲೀಸರು ನನ್ನ ಕಕ್ಷಿದಾರರಿಗೆ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಿಂದ ತೆಗೆದುಹಾಕುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

8 ಜನರ ವಿರುದ್ಧ ಪ್ರಕರಣ ದಾಖಲು:

ಮುಂಬೈನ ಓಶಿವಾರ ಪೊಲೀಸ್ ಠಾಣಾ ಮಾಹಿತಿ ಪ್ರಕಾರ, ಪೃಥ್ವಿ ಶಾ ನೀಡಿದ ದೂರಿನ ಅನ್ವಯ 8 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ದೂರಿನ ಪ್ರಕಾರ, ಆರೋಪಿಗಳು ಪೃಥ್ವಿ ಶಾ ಅವರಲ್ಲಿ ಸೆಲ್ಫಿಗಾಗಿ ಒತ್ತಾಯಿಸಿದ್ದರು. ಈ ವೇಳೆ ಅವರ ಸ್ನೇಹಿತ ಹೋಟೆಲ್ ಮ್ಯಾನೇಜರ್‌ಗೆ ಕರೆ ಮಾಡಿದ್ದಾರೆ. ಇದಾದ ನಂತರ ಮ್ಯಾನೇಜರ್ ಆರೋಪಿಗಳನ್ನು ಅಲ್ಲಿಂದ ಹೊಟೇಲ್​ನಿಂದ ಹೊರಗೆ ಕಳುಹಿಸಿದ್ದಾರೆ.

ಇದರಿಂದ ಕೋಪಗೊಂಡಿದ್ದ ಆರೋಪಿಗಳು, ಪೃಥ್ವಿ ಶಾ ಮತ್ತು ಅವರ ಸ್ನೇಹಿತ ಕ್ಲಬ್‌ನಿಂದ ಹೊರಬರಲು ಕಾಯುತ್ತಿದ್ದರು. ಆ ಬಳಿಕ ಕಾರನ್ನು ಹಿಂಬಾಲಿಸಿಕೊಂಡು ಹೋಗಿ ಬೇಸ್ ಬಾಲ್ ಬ್ಯಾಟ್​ನಿಂದ ಕಾರಿನ ಗಾಜು ಒಡೆದಿದ್ದಾರೆ. ಈ ಸಂಬಂಧ 8 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.

Published On - 7:09 pm, Thu, 16 February 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್