AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಟೈಫಾಯ್ಡ್​​​​ನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಮರಳಿದ ಪೃಥ್ವಿ ಶಾ; ಪಂದ್ಯಕ್ಕೆ ಎಂದಿನಿಂದ ಲಭ್ಯ?

Pruthvi Shah: ಪ್ರಸ್ತುತ ಪೃಥ್ವಿ ಶಾ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್​​ನ ವೈದ್ಯಕೀಯ ತಂಡ ಮೇಲ್ವಿಚಾರಣೆ ಮಾಡುತ್ತಿದೆ. ‘ಪೃಥ್ವಿ ಶಾ ಅವರು ದೆಹಲಿ ತಂಡ ಉಳಿದುಕೊಂಡಿರುವ ಹೋಟೆಲ್​ಗೆ ಮರಳಿದ್ದಾರೆ’ ಎಂದು ಫ್ರಾಂಚೈಸಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

IPL 2022: ಟೈಫಾಯ್ಡ್​​​​ನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಮರಳಿದ ಪೃಥ್ವಿ ಶಾ; ಪಂದ್ಯಕ್ಕೆ ಎಂದಿನಿಂದ ಲಭ್ಯ?
ಪೃಥ್ವಿ ಶಾImage Credit source: Pruthvi Shah
TV9 Web
| Updated By: shivaprasad.hs|

Updated on:May 15, 2022 | 12:03 PM

Share

ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಆಟಗಾರ ಪೃಥ್ವಿ ಶಾ (Pruthvi Shah) ಅವರು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ಫ್ರಾಂಚೈಸಿ ಭಾನುವಾರ ಮಾಹಿತಿ ನೀಡಿದೆ. 22 ವರ್ಷದ ಡೆಲ್ಲಿ ಆರಂಭಿಕ ಬ್ಯಾಟರ್​​ ಪೃಥ್ವಿಯವರನ್ನು ಈ ತಿಂಗಳ ಆರಂಭದಲ್ಲಿ ತೀವ್ರ ಜ್ವರದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಟೈಫಾಯಿಡ್​ನಿಂದ ಅವರು ಬಳಲುತ್ತಿರುವುದಾಗಿ ತಿಳಿಸಲಾಗಿತ್ತು. ಇದೀಗ ಅವರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಡಿಸಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಪ್ರಸ್ತುತ ಪೃಥ್ವಿ ಶಾ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್​​ನ ವೈದ್ಯಕೀಯ ತಂಡ ಮೇಲ್ವಿಚಾರಣೆ ಮಾಡುತ್ತಿದೆ. ‘ಪೃಥ್ವಿ ಶಾ ಅವರು ದೆಹಲಿ ತಂಡ ಉಳಿದುಕೊಂಡಿರುವ ಹೋಟೆಲ್​ಗೆ ಮರಳಿದ್ದಾರೆ’ ಎಂದು ಫ್ರಾಂಚೈಸಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಡೆಲ್ಲಿ ಕ್ಯಾಪಿಟಲ್ಸ್ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿರುವ ಮಾಹಿತಿ:

ಇದನ್ನೂ ಓದಿ
Image
Andrew Symonds Death: 3 ತಿಂಗಳ ಅವಧಿಯಲ್ಲಿ ಮೂವರು ದಿಗ್ಗಜರ ಸಾವು; ಕ್ರಿಕೆಟ್​ ಲೋಕಕ್ಕೆ ಸಾಲುಸಾಲು ಆಘಾತ
Image
Umran Malik: ಉಮ್ರಾನ್ ಮಲಿಕ್ ಆ ದಾಖಲೆ ಮುರಿಯಬೇಕು; ಶೋಯಬ್ ಅಖ್ತರ್ ಹೇಳಿದ್ದು ಯಾವ ದಾಖಲೆಯ ಕುರಿತು?
Image
LSG vs RR: ಐಪಿಎಲ್​ನಲ್ಲಿಂದು ಎರಡು ಪಂದ್ಯ: ರಾಜಸ್ಥಾನಕ್ಕೆ ಗೆದ್ದರಷ್ಟೆ ಉಳಿಗಾಲ
Image
Andrew Symonds death: ದಾಖಲೆಗಳ ಸರದಾರ ಈ ಆಸೀಸ್ ಆಟಗಾರ; ಆಂಡ್ರ್ಯೂ ಸೈಮಂಡ್ಸ್ ವಿಶೇಷ​​ ರೆಕಾರ್ಡ್​​ಗಳು ಇಲ್ಲಿವೆ

ಡಿಸಿ ಪ್ಲೇ ಆಫ್ ಕನಸಿಗೆ ಬಲ ತುಂಬಲಿದ್ದಾರಾ ಪೃಥ್ವಿ ಶಾ?

ಪೃಥ್ವಿ ಶಾ ಐಪಿಎಲ್ 2022ರಲ್ಲಿ ಕೊನೆಯದಾಗಿ ಮೇ 1ರಂದು ಲಕ್ನೋ ಸೂಪರ್ ಜೈಂಟ್ಸ್​​ ವಿರುದ್ಧ ಕೊನೆಯ ಪಂದ್ಯವಾಡಿದ್ದರು. ನಂತರ ನಡೆದ ಮೂರು ಪಂದ್ಯಗಳನ್ನು ಅವರು ತಪ್ಪಿಸಿಕೊಂಡಿದ್ದರು. ಇದೀಗ ಪೃಥ್ವಿ ಶಾ ಮರು ಆಗಮನ ತಂಡದ ಆತ್ಮಸ್ಥೈರ್ಯವನ್ನು ಹೆಚ್ಚಿಸಿದೆ. ತಮ್ಮ ಇನ್​ಸ್ಟಾಗ್ರಾಂನಲ್ಲಿ ಕಮ್​ಬ್ಯಾಕ್ ಬಗ್ಗೆ ಬರೆದುಕೊಂಡಿದ್ದ ಅವರು, ಶೀಘ್ರದಲ್ಲೇ ಮೈದಾನಕ್ಕೆ ವಾಪಸ್ ಆಗುವುದಾಗಿ ಹೇಳಿದ್ದರು.

ಡೆಲ್ಲಿಯ ಪ್ಲೇ ಆಫ್ ಕನಸಿಗೆ ಪೃಥ್ವಿ ಶಾ ಅಗತ್ಯವಾಗಿದ್ದಾರೆ. ಕಾರಣ, ಫಾರ್ಮ್​ನಲ್ಲಿರುವ ಡೇವಿಡ್ ವಾರ್ನರ್​ಗೆ ಪೃಥ್ವಿ ಉತ್ತಮ ಬೆಂಬಲ ನೀಡುತ್ತಿದ್ದರು. ಆದರೆ ಅವರು ಪಂದ್ಯಗಳಿಂದ ಹೊರಗುಳಿದ ನಂತರ ಶ್ರೀಕಾರ್ ಭರತ್ ಹಾಗೂ ಮಂದೀಪ್ ಸಿಂಗ್​ಗೆ ಅವಕಾಶ ನೀಡಿದ್ದರೂ ಕೂಡ ಅವರು ಅದನ್ನು ಉಪಯೋಗಪಡಿಸಿಕೊಂಡಿಲ್ಲ. ಹೀಗಾಗಿ ಡಿಸಿಗೆ ಪೃಥ್ವಿ ಅನಿವಾರ್ಯ ಆಯ್ಕೆಯಾಗಿದ್ದಾರೆ.

ಅದಾಗ್ಯೂ ಪೃಥ್ವಿ ಶಾ ಯಾವ ಪಂದ್ಯಗಳಿಂದ ಕಣಕ್ಕಿಳಿಯಲಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಬರಬೇಕಿದೆ. ಈ ಐಪಿಎಲ್​ನಲ್ಲಿ ಆಡಿದ 9 ಪಂದ್ಯಗಳಲ್ಲಿ 259 ರನ್ ಬಾರಿಸಿರುವ ಪೃಥ್ವಿ 28.77 ಸರಾಸರಿ ಹೊಂದಿದ್ದಾರೆ. ಅವರ ಸ್ಟ್ರೈಕ್ ರೇಟ್ 160 ಇದ್ದು, ಪವರ್​ಪ್ಲೇಯ ಲಾಭವನ್ನು ದೆಹಲಿಗೆ ತಂದುಕೊಡುತ್ತಿದ್ದಾರೆ. ಹೀಗಾಗಿಯೇ ಡೆಲ್ಲಿ ಪೃಥ್ವಿಯ ಆಗಮನವನ್ನು ಕಾಯುತ್ತಿದೆ.

ಡೆಲ್ಲಿ ಪ್ರಸ್ತುತ 12 ಪಂದ್ಯಗಳಿಂದ 12 ಅಂಕ ಹೊಂದಿದೆ. ಬಾಕಿ ಉಳಿದ ಎರಡೂ ಪಂದ್ಯಗಳನ್ನೂ ಗೆಲ್ಲಲೇಬೇಕಾದ ಅನಿವಾರ್ಯತೆ ಡೆಲ್ಲಿಗಿದೆ. ಸೋಮವಾರ ನಡೆಯುವ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಡೆಲ್ಲಿ ಎದುರಿಸಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:01 pm, Sun, 15 May 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ