AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rilee Rossouw: ಪಿಎಸ್​ಎಲ್​ನಲ್ಲಿ ಅತ್ಯಂತ ವೇಗದ ಶತಕ ಸಿಡಿಸಿದ ರಿಲೀ ರೋಸೌವ್

PSL 2023: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಸೌತ್ ಆಫ್ರಿಕಾದ ಹೊಡಿಬಡಿ ದಾಂಡಿಗ ರಿಲೀ ರೋಸೌವ್ ರಾಜಸ್ಥಾನ್ ರಾಯಲ್ಸ್ ಪರ ಆಡಲಿದ್ದಾರೆ.

Rilee Rossouw: ಪಿಎಸ್​ಎಲ್​ನಲ್ಲಿ ಅತ್ಯಂತ ವೇಗದ ಶತಕ ಸಿಡಿಸಿದ ರಿಲೀ ರೋಸೌವ್
Rilee Rossouw
TV9 Web
| Edited By: |

Updated on: Mar 11, 2023 | 5:09 PM

Share

PSL 2023: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಅತ್ಯಂತ ವೇಗದ ಶತಕ ಸಿಡಿಸಿ ಸೌತ್ ಆಫ್ರಿಕಾ ಬ್ಯಾಟರ್ ರಿಲೀ ರೋಸೌವ್ (Rilee Rossouw) ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ತಮ್ಮದೇ ದಾಖಲೆಯನ್ನು ಮುರಿಯುವ ಮೂಲಕ ಎಂಬುದೇ ಇಲ್ಲಿ ವಿಶೇಷ. ಈ ಪಂದ್ಯದಲ್ಲಿ ಪೇಶಾವರ್ ಝಲ್ಮಿ ಹಾಗೂ ಮುಲ್ತಾನ್ ಸುಲ್ತಾನ್ಸ್ ತಂಡಗಳು ಮುಖಾಮುಖಿಯಾಗಿತ್ತು. ಟಾಸ್ ಗೆದ್ದ ಝಲ್ಮಿ ತಂಡದ ನಾಯಕ ಬಾಬರ್ ಆಝಂ ಬ್ಯಾಟಿಂಗ್ ಆಯ್ದುಕೊಂಡಿದ್ದರು.

ಅದರಂತೆ ಇನಿಂಗ್ಸ್​ ಆರಂಭಿಸಿದ ಬಾಬರ್ ಆಝಂ ಹಾಗೂ ಸೈಮ್ ಅಯ್ಯುಬ್ ಪೇಶಾವರ್ ಝಲ್ಮಿ ತಂಡಕ್ಕೆ ಅತ್ಯುತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 134 ರನ್​ಗಳ ಜೊತೆಯಾಟವಾಡಿದ ಈ ಜೋಡಿಯನ್ನು ಮುರಿಯುವಲ್ಲಿ ಕೊನೆಗೂ ಉಸಾಮ ಮಿರ್ ಯಶಸ್ವಿಯಾದರು.

38 ಎಸೆತಗಳಲ್ಲಿ 58 ರನ್​ ಬಾರಿಸಿದ್ದ ಸೈಮ್ ಅಯ್ಯುಬ್ ಮೊದಲಿಗರಾಗಿ ಔಟಾದರೆ, ಇದರ ಬೆನ್ನಲ್ಲೇ 39 ಎಸೆತಗಳಲ್ಲಿ 73 ರನ್​ಗಳಿಸಿದ್ದ ಬಾಬರ್ ಆಝಂ ಕೂಡ ವಿಕೆಟ್ ಒಪ್ಪಿಸಿದರು. ಇನ್ನು ಮೊಹಮ್ಮದ್ ಹ್ಯಾರಿಸ್ (35) ಹಾಗೂ ಕ್ಯಾಡ್​ಮೋರ್ (38) ಅವರ ಉಪಯುಕ್ತ ಕಾಣಿಕೆಯೊಂದಿಗೆ ಪೇಶಾವರ್ ಝಲ್ಮಿ ತಂಡವು ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 242 ರನ್​ ಕಲೆಹಾಕಿತು.

ಇದನ್ನೂ ಓದಿ
Image
Ravindra Jadeja: 500 ವಿಕೆಟ್ ಕಬಳಿಸಿ ಮತ್ತೊಂದು ದಾಖಲೆ ಬರೆದ ರವೀಂದ್ರ ಜಡೇಜಾ
Image
Rishabh Pant: ಅಪಘಾತದ ಬಳಿಕ ಜೀವನ ಹೇಗಿದೆ? ಮುಕ್ತವಾಗಿ ಮಾತನಾಡಿದ ರಿಷಭ್ ಪಂತ್
Image
IPL 2023: ಐಪಿಎಲ್​ ವೇಳೆ ಜೊತೆಯಾಗಿ ಕಾಣಿಸಿಕೊಳ್ಳಲಿದ್ದಾರೆ RCB ತ್ರಿಮೂರ್ತಿಗಳು
Image
IPL 2023: ಐಪಿಎಲ್​ನಿಂದ ಬುಮ್ರಾ ಔಟ್: ಮುಂಬೈ ಇಂಡಿಯನ್ಸ್​ ಮುಂದಿದೆ 3 ಆಯ್ಕೆಗಳು

243 ರನ್​ಗಳ ಬೃಹತ್ ಟಾರ್ಗೆಟ್ ಪಡೆದ ಮುಲ್ತಾನ್ ಸುಲ್ತಾನ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರರಾದ ಶಾನ್ ಮಸೂದ್ (5) ಹಾಗೂ ಮೊಹಮ್ಮದ್ ರಿಜ್ವಾನ್ (7) ಬೇಗನೆ ನಿರ್ಗಮಿಸಿದರು. ಈ ವೇಳೆ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಲೀ ರೋಸೌವ್ ಇಡೀ ಪಂದ್ಯದ ಚಿತ್ರಣ ಬದಲಿಸಿಬಿಟ್ಟರು.

ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಎಡಗೈ ದಾಂಡಿಗ ಮೈದಾನದ ಮೂಲೆ ಮೂಲೆಗೆ ಸಿಕ್ಸ್​-ಫೋರ್​ಗಳನ್ನು ಬಾರಿಸಿದರು. ಪರಿಣಾಮ ಕೇವಲ 41 ಎಸೆತಗಳಲ್ಲಿ ರಿಲೀ ರೋಸೌವ್ ಬ್ಯಾಟ್​ನಿಂದ ಸ್ಪೋಟಕ ಶತಕ ಮೂಡಿಬಂತು. ಇದು ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಮೂಡಿಬಂದ ಅತ್ಯಂತ ವೇಗದ ಶತಕವಾಗಿದೆ.

ಇದಕ್ಕೂ ಮುನ್ನ ಪಿಎಸ್​ಎಲ್​ನಲ್ಲಿ ಅತೀ ವೇಗದ ಶತಕ ಬಾರಿಸಿದ ದಾಖಲೆ ಕೂಡ ರಿಲೀ ರೋಸೌವ್ ಹೆಸರಿನಲ್ಲಿಯೇ ಇತ್ತು. 2020ರ ಸೀಸನ್​ನಲ್ಲಿ ರೋಸೌವ್ ಕ್ವೆಟ್ಟಾ ಗ್ಲಾಡಿಯೇಟರ್ಸ್ ವಿರುದ್ಧದ ಪಂದ್ಯದಲ್ಲಿ ಕೇವಲ 43 ಎಸೆತಗಳಲ್ಲಿ ಶತಕ ಬಾರಿಸಿದ್ದರು. ಇದೀಗ 41 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ತಮ್ಮದೇ ದಾಖಲೆ ಮುರಿದಿರುವುದು ವಿಶೇಷ.

ಇದನ್ನೂ ಓದಿ: IPL 2023: ಮುಂಬೈ ಇಂಡಿಯನ್ಸ್​ಗೆ ಡಬಲ್ ಶಾಕ್: ತಂಡದಿಂದ ಇಬ್ಬರು ಆಟಗಾರರು ಔಟ್

ಇನ್ನು ಈ ಪಂದ್ಯದಲ್ಲಿ 51 ಎಸೆತಗಳಲ್ಲಿ 8 ಭರ್ಜರಿ ಸಿಕ್ಸ್​ ಹಾಗೂ 12 ಫೋರ್​ನೊಂದಿಗೆ ರಿಲೀ ರೋಸೌವ್ 121 ರನ್​ ಬಾರಿಸಿ ಔಟಾದರು. ಇದರ ನಡುವೆ ಕೀರನ್ ಪೊಲಾರ್ಡ್ 25 ಎಸೆತಗಳಲ್ಲಿ 52 ರನ್ ಬಾರಿಸಿದ್ದರು. ಪರಿಣಾಮ ಮುಲ್ತಾನ್ ಸುಲ್ತಾನ್ಸ್ ತಂಡವು 19.1 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 244 ರನ್​ ಬಾರಿಸಿ ಭರ್ಜರಿ ಗೆಲುವು ದಾಖಲಿಸಿತು. ವಿಶೇಷ ಎಂದರೆ ಇದು ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಮೂಡಿಬಂದ ಗರಿಷ್ಠ ಮೊತ್ತದ ಚೇಸಿಂಗ್ ಗೆಲುವಾಗಿದೆ.

ಅಂದಹಾಗೆ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಸೌತ್ ಆಫ್ರಿಕಾದ ಹೊಡಿಬಡಿ ದಾಂಡಿಗ ರಿಲೀ ರೋಸೌವ್ ರಾಜಸ್ಥಾನ್ ರಾಯಲ್ಸ್ ಪರ ಆಡಲಿದ್ದಾರೆ.

ಪೇಶಾವರ್ ಝಲ್ಮಿ: ಸೈಮ್ ಅಯ್ಯುಬ್ , ಬಾಬರ್ ಆಜಮ್ (ನಾಯಕ) , ರೋವ್ಮನ್ ಪೊವೆಲ್ , ಟಾಮ್ ಕೊಹ್ಲರ್-ಕ್ಯಾಡ್​ಮೋರ್ , ಮೊಹಮ್ಮದ್ ಹ್ಯಾರಿಸ್ , ಹಸೀಬುಲ್ಲಾ ಖಾನ್ (ವಿಕೆಟ್ ಕೀಪರ್) , ಉಸ್ಮಾನ್ ಖಾದಿರ್ , ವಹಾಬ್ ರಿಯಾಜ್ , ಅಜ್ಮತುಲ್ಲಾ ಒಮರ್ಜಾಯ್ , ಮುಜೀಬ್ ಉರ್ ರಹಮಾನ್ , ಅರ್ಷದ್ ಇಕ್ಬಾಲ್.

ಮುಲ್ತಾನ್ ಸುಲ್ತಾನ್ಸ್​: ಶಾನ್ ಮಸೂದ್ , ಮೊಹಮ್ಮದ್ ರಿಜ್ವಾನ್ (ನಾಯಕ) , ರಿಲೀ ರೋಸೌವ್ , ಟಿಮ್ ಡೇವಿಡ್ , ಖುಶ್ದಿಲ್ ಶಾ , ಕೀರಾನ್ ಪೊಲಾರ್ಡ್ , ಅನ್ವರ್ ಅಲಿ , ಉಸಾಮಾ ಮಿರ್ , ಅಬ್ಬಾಸ್ ಅಫ್ರಿದಿ , ಶೆಲ್ಡನ್ ಕಾಟ್ರೆಲ್ , ಇಹ್ಸಾನುಲ್ಲಾ.

Follow Us
ಉಲ್ಟಾ ಹೊಡೆದ ಚೇತನ್ ಅಹಿಂಸ ವಿರುದ್ಧ ಸಾರಾ ಗೋವಿಂದು ವಾಗ್ದಾಳಿ
ಉಲ್ಟಾ ಹೊಡೆದ ಚೇತನ್ ಅಹಿಂಸ ವಿರುದ್ಧ ಸಾರಾ ಗೋವಿಂದು ವಾಗ್ದಾಳಿ
ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು
ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು
ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್
ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್
ದೊಣ್ಣೆ ಹಿಡಿದು ಕಾರಿನ ಗಾಜು ಒಡೆಯಲು ಬಂದ ವ್ಯಕ್ತಿ
ದೊಣ್ಣೆ ಹಿಡಿದು ಕಾರಿನ ಗಾಜು ಒಡೆಯಲು ಬಂದ ವ್ಯಕ್ತಿ
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಕೂದಲಿಗೆ ಹೊತ್ತಿದ ಬೆಂಕಿ
ಪ್ರತಿಕೃತಿ ಸುಡುವಾಗ ಬಿಜೆಪಿ ಶಾಸಕಿ ಕೂದಲಿಗೆ ಹೊತ್ತಿದ ಬೆಂಕಿ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಮಹಿಳೆ
ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಮಹಿಳೆ
ಮೇ 15ಕ್ಕೆ ಗುಡ್ ನ್ಯೂಸ್ ಸಿಗತ್ತಾ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ!
ಮೇ 15ಕ್ಕೆ ಗುಡ್ ನ್ಯೂಸ್ ಸಿಗತ್ತಾ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ!
ಬರಿದಾದ ಜಲಾಶಯವೇ ಮಕ್ಕಳಿಗೀಗ ಕ್ರಿಕೆಟ್​​ ಮೈದಾನ!
ಬರಿದಾದ ಜಲಾಶಯವೇ ಮಕ್ಕಳಿಗೀಗ ಕ್ರಿಕೆಟ್​​ ಮೈದಾನ!