Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯರು ನಿಮ್ಮನ್ನು… ಪಾಕ್ ಪತ್ರಕರ್ತನ ಪ್ರಶ್ನೆಗೆ ಡೇವಿಡ್ ವಾರ್ನರ್ ಖಡಕ್ ಉತ್ತರ

David Warner In PSL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್ 2025) ಸನ್​ರೈಸರ್ಸ್ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳನ್ನು ಮುನ್ನಡೆಸಿದ್ದ ಡೇವಿಡ್ ವಾರ್ನರ್ ಇದೀಗ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ (ಪಿಎಸ್​ಎಲ್ 2025) ಕರಾಚಿ ಕಿಂಗ್ಸ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದಾರೆ.

ಭಾರತೀಯರು ನಿಮ್ಮನ್ನು... ಪಾಕ್ ಪತ್ರಕರ್ತನ ಪ್ರಶ್ನೆಗೆ ಡೇವಿಡ್ ವಾರ್ನರ್ ಖಡಕ್ ಉತ್ತರ
David Warner
Follow us
ಝಾಹಿರ್ ಯೂಸುಫ್
|

Updated on:Apr 13, 2025 | 9:04 AM

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL 2025) ಅವಕಾಶ ವಂಚಿತರಾಗಿರುವ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ (David Warner) ಹೊಸ ಇನಿಂಗ್ಸ್ ಆರಂಭಿಸಿದ್ದಾರೆ. ಅದು ಸಹ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ (PSL 2025) ಕಣಕ್ಕಿಳಿಯುವ ಮೂಲಕ ಎಂಬುದು ವಿಶೇಷ. ಈ ಬಾರಿಯ ಐಪಿಎಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡ ವಾರ್ನರ್ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಹೀಗಾಗಿ ಅವರು ಪಿಎಸ್​ಎಲ್​ಗೆ ಹೆಸರು ನೀಡಿದ್ದರು. ಅದರಂತೆ ಇದೀಗ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಕರಾಚಿ ಕಿಂಗ್ಸ್ ತಂಡದ ನಾಯಕರಾಗಿ ವಾರ್ನರ್ ಕಣಕ್ಕಿಳಿದಿದ್ದಾರೆ.

ಮುಲ್ತಾನ್ ಸುಲ್ತಾನ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡಿದ್ದ ಡೇವಿಡ್ ವಾರ್ನರ್ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಾಗಿತ್ತು. ಅದರಲ್ಲೊಂದು ಪ್ರಶ್ನೆ ಭಾರತೀಯರು ಟ್ರೋಲ್ ಮಾಡುತ್ತಿರುವುದರ ಬಗ್ಗೆಯಾಗಿತ್ತು. ಐಪಿಎಲ್​ನಲ್ಲಿ ಅವಕಾಶ ಸಿಗದಿರುವ ಕಾರಣ ನಿಮ್ಮನ್ನು ಭಾರತೀಯರು ಟ್ರೋಲ್ ಮಾಡುತ್ತಿದ್ದಾರೆ. ಐಪಿಎಲ್ ಬಿಟ್ಟು ಪಿಎಸ್​ಎಲ್​ ಆಡುತ್ತಿರುವುದರ ಬಗ್ಗೆ ಇಂಡಿಯಾದ ಅಭಿಮಾನಿಗಳು ಕಾಲೆಳೆಯುತ್ತಿದ್ದಾರೆ. ಈ ಬಗ್ಗೆ ನಿಮ್ಮ ಅಭಿಪ್ರಾಯವೇನು ಎಂದು ಪ್ರಶ್ನಿಸಲಾಗಿತ್ತು.

ಡೇವಿಡ್ ವಾರ್ನರ್ ಖಡಕ್ ಉತ್ತರ:

ಪಾಕಿಸ್ತಾನ್ ಪತ್ರಕರ್ತನ ಈ ಅನಿರೀಕ್ಷಿತ ಪ್ರಶ್ನೆಗೆ ಡೇವಿಡ್ ವಾರ್ನರ್ ಸೂಕ್ತ ಉತ್ತರವನ್ನು ನೀಡಿದರು. ನೀವು ಹೇಳಿರುವ ವಿಷಯವನ್ನು ನಾನು ಇದೇ ಮೊದಲ ಬಾರಿಗೆ ಕೇಳುತ್ತಿದ್ದೇನೆ. ಆ ರೀತಿ ಏನೂ ಇಲ್ಲ. ನನಗೆ  ಕ್ರಿಕೆಟ್ ಆಡಲು ಮಾತ್ರ ಇಷ್ಟ. ಈ ಬಾರಿ ಪಿಎಸ್‌ಎಲ್‌ನಲ್ಲಿ ಆಡಲು ಅವಕಾಶ ಸಿಕ್ಕಿದೆ, ಅದಕ್ಕೆ ತಾನು ಸಿದ್ಧನಿದ್ದೇನೆ ಎಂದರು.

ಇದನ್ನೂ ಓದಿ
Image
PSL 2025: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ RCB ಮಾಜಿ ಆಟಗಾರರು
Image
ಪ್ರಿಯಾಂಶ್ ಆರ್ಯನ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್
Image
ಕ್ರಿಸ್​ ಗೇಲ್ ದಾಖಲೆ ಜಸ್ಟ್ ಮಿಸ್: ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ
Image
ಉಲ್ಟಾ ಹೊಡೆದ RCB ಕಪ್ ಗೆಲ್ಲಬಾರದು ಎಂದಿದ್ದ ಅಂಬಾಟಿ ರಾಯುಡು

ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಬಿಡುವಿಲ್ಲದ ವೇಳಾಪಟ್ಟಿಯಿಂದಾಗಿ, ಮೊದಲು ಪಿಎಸ್‌ಎಲ್‌ಗೆ ಬರುವ ಅವಕಾಶ ಸಿಗಲಿಲ್ಲ. ಆದರೆ ಈಗ ಸಿಕ್ಕಿದೆ. ಕರಾಚಿ ಕಿಂಗ್ಸ್‌ಗೆ ನಾಯಕತ್ವ ವಹಿಸಿಕೊಂಡು ಪ್ರಶಸ್ತಿ ಗೆಲ್ಲುವುದು ಮಾತ್ರ ನನ್ನ ಗುರಿ ಎಂದು ಡೇವಿಡ್ ವಾರ್ನರ್ ಹೇಳಿದರು.

ಅಲ್ಲದೆ ಭಾರತೀಯ ಅಭಿಮಾನಿಗಳು ನನ್ನನ್ನು ಟ್ರೋಲ್ ಮಾಡುತ್ತಿದ್ದಾರೆ, ಪಿಎಸ್​ಎಲ್ ಆಡುತ್ತಿರುವುದಕ್ಕೆ ದೂಷಿಸುತ್ತಿದ್ದಾರೆ ಎಂಬುದೆಲ್ಲಾ ನಾನು ಇದೇ ಮೊದಲ ಬಾರಿಗೆ ಕೇಳುತ್ತಿದ್ದೇನೆ. ಆ ರೀತಿ ಏನೂ ಇಲ್ಲ ಎಂದು ವಾರ್ನರ್ ಹೇಳಿದ್ದಾರೆ.

ಈ ಮೂಲಕ ದ್ವೇಷ ಹರಡಲು ಮುಂದಾಗಿದ್ದ ಪಾಕಿಸ್ತಾನ್ ಪತ್ರಕರ್ತನಿಗೆ ಭಾರತದ ವಿರುದ್ಧ ಯಾವುದೇ ಹೇಳಿಕೆ ನೀಡದೇ ಡೇವಿಡ್ ವಾರ್ನರ್, ನಾನು ಕ್ರಿಕೆಟ್ ಆಡಲಷ್ಟೇ ಇಷ್ಟಪಡುತ್ತೇನೆ ಎಂದು ಖಡಕ್ ಉತ್ತರ ನೀಡಿದ್ದಾರೆ. ಈ ಉತ್ತರದೊಂದಿಗೆ ಪಾಕ್ ಪತ್ರಕರ್ತ ಕೂಡ ಗಪ್ ಚುಪ್ ಆಗಿದ್ದಾರೆ.

ಇದನ್ನೂ ಓದಿ: IPL 2025: ಮುಂಬೈ ಇಂಡಿಯನ್ಸ್ ಆಟಗಾರನ ಬ್ಯಾನ್ ಮಾಡಿದ ಪಾಕಿಸ್ತಾನ್

IPL ನಲ್ಲಿ ವಾರ್ನರ್ ಸಾಧನೆ:

ಡೇವಿಡ್ ವಾರ್ನರ್ ಐಪಿಎಲ್ ಇತಿಹಾಸದ ಅತ್ಯಂತ ಯಶಸ್ವಿ ವಿದೇಶಿ ಆಟಗಾರ ಎಂಬುದು ವಿಶೇಷ. ಡೆಲ್ಲಿ ಕ್ಯಾಪಿಟಲ್ಸ್, ಸನ್​ರೈಸರ್ಸ್ ಹೈದರಾಬಾದ್ ಪರ ಕಣಕ್ಕಿಳಿದಿರುವ ವಾರ್ನರ್ 184 ಪಂದ್ಯಗಳನ್ನಾಡಿದ್ದು, ಈ ವೇಳೆ 4 ಶತಕ ಹಾಗೂ 62 ಅರ್ಧಶತಕಗಳೊಂದಿಗೆ ಒಟ್ಟು 6565 ರನ್ ಕಲೆಹಾಕಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ರನ್ ಗಳಿಸಿದ ವಿದೇಶಿ ಬ್ಯಾಟರ್ ಎನಿಸಿಕೊಂಡಿದ್ದಾರೆ.

Published On - 9:04 am, Sun, 13 April 25

ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ