AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL ಗೆ ಟಕ್ಕರ್ ಕೊಡಲು PSL ಗೆ ಡೇಟ್ ಫಿಕ್ಸ್

IPL 2025 vs PSL 2025: ಇಂಡಿಯನ್ ಪ್ರೀಮಿಯರ್ ಲೀಗ್ ಪುನರಾರಂಭಕ್ಕೆ ದಿನಾಂಕ ನಿಗದಿ ಮಾಡಿದ ಬೆನ್ನಲ್ಲೇ ಪಾಕ್ ಕ್ರಿಕೆಟ್ ಮಂಡಳಿ, ಪಾಕಿಸ್ತಾನ್ ಸೂಪರ್ ಲೀಗ್​ಗೂ ಡೇಟ್ ಫಿಕ್ಸ್ ಮಾಡಿದೆ. ಈ ಮೂಲಕ ಐಪಿಎಲ್​ಗೆ ಟಕ್ಕರ್ ಕೊಡುವ ದುಸ್ಸಾಹಸಕ್ಕೆಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಕೈ ಹಾಕಿದೆ. 

IPL ಗೆ ಟಕ್ಕರ್ ಕೊಡಲು PSL ಗೆ ಡೇಟ್ ಫಿಕ್ಸ್
Psl 2025
ಝಾಹಿರ್ ಯೂಸುಫ್
|

Updated on: May 14, 2025 | 9:55 AM

Share

ಭಾರತ ಮತ್ತು ಪಾಕಿಸ್ತಾನ್ (India vs Pakistan) ನಡುವಣ ಯುದ್ಧ ಭೀತಿ ಹಿನ್ನಲೆಯಲ್ಲಿ ಇತ್ತ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸ್ಥಗಿತಗೊಂಡರೆ, ಅತ್ತ ಪಾಕಿಸ್ತಾನ್ ಸೂಪರ್ ಲೀಗ್ (PSL 2025) ಅನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಎರಡೂ ಲೀಗ್​ಗಳು ಮತ್ತೆ ಶುರುವಾಗುತ್ತಿದೆ. ಅದು ಕೂಡ ಒಂದೇ ದಿನಾಂಕದಂದು ಎಂಬುದೇ ಅಚ್ಚರಿ. ಅಂದರೆ ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗುವ ದಿನವೇ ಪಾಕಿಸ್ತಾನ್ ಸೂಪರ್ ಲೀಗ್​ಗೂ ಚಾಲನೆ ನೀಡಲು ಪಾಕ್ ಕ್ರಿಕೆಟ್ ಮಂಡಳಿ ನಿರ್ಧರಿಸಿದೆ.

ಪಿಎಸ್​ಎಲ್​ಗೆ ಡೇಟ್ ಫಿಕ್ಸ್:

ಪಾಕಿಸ್ತಾನ್ ಸೂಪರ್ ಲೀಗ್ 2025 ರ ಉಳಿದ ಪಂದ್ಯಗಳಿಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಹೊಸ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ವೇಳಾಪಟ್ಟಿಯಂತೆ ಪಿಎಸ್​ಎಲ್​ 2025 ಮೇ 17 ರಂದು ಮತ್ತೆ ಪ್ರಾರಂಭವಾಗುತ್ತದೆ. ಇದೇ ದಿನಾಂಕದಂದು ಐಪಿಎಲ್ ಕೂಡ ಶುರುವಾಗುತ್ತಿರುವುದು ವಿಶೇಷ.

ಪಿಎಸ್​ಎಲ್​ನ ಹೊಸ ವೇಳಾಪಟ್ಟಿಯನ್ನು ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು, ಲೀಗ್ ಕುರಿತು ನವೀಕರಣವನ್ನು ನೀಡಿದ್ದಾರೆ. ಅದರಂತೆ ಟೂರ್ನಿಯು ಮೇ  17 ರಿಂದ ಆರಂಭವಾಗಲಿದ್ದು, ಮೇ 25 ರಂದು ಗ್ರ್ಯಾಂಡ್ ಫಿನಾಲೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ವಿದೇಶಿ ಆಟಗಾರರು ಡೌಟ್:

ಪಾಕಿಸ್ತಾನ್ ಸೂಪರ್ ಲೀಗ್​ನ ಉಳಿದ 8 ಪಂದ್ಯಗಳಲ್ಲಿ ವಿದೇಶಿ ಆಟಗಾರರು ಕಾಣಿಸಿಕೊಳ್ಳುವ ಸಾಧ್ಯತೆಯಿಲ್ಲ. ಈಗಾಗಲೇ ಎಲ್ಲಾ ಆಟಗಾರರು ತವರಿಗೆ ಹಿಂತಿರುಗಿದ್ದು, ಹೀಗಾಗಿ ಅವರು ಮರಳುವ ಸಾಧ್ಯತೆಯಿಲ್ಲ. ಏಕೆಂದರೆ ಭಾರತದ ದಾಳಿಯಿಂದಾಗಿ ಸ್ಯಾಮ್ ಬಿಲ್ಲಿಂಗ್ಸ್, ಡೇರಿಲ್ ಮಿಚೆಲ್, ಕುಸಲ್ ಪೆರೆರಾ, ಡೇವಿಡ್ ವಿಝ, ಟಾಮ್ ಕರನ್ ಸೇರಿದಂತೆ ಹಲವು ವಿದೇಶಿ ಆಟಗಾರರು ಸಂಪೂರ್ಣ  ಭಯಭೀತರಾಗಿದ್ದರು. ಹೀಗಾಗಿ ಮತ್ತೆ ಟೂರ್ನಿಯನ್ನು ಕಾಣಿಸಿಕೊಳ್ಳಲು ಹಿಂದೇಟು ಹಾಕಿದ್ದಾರೆ.

ಇದನ್ನೂ ಓದಿ: IPL 2025: ಕೇವಲ 2 ಮ್ಯಾಚ್​ಗೆ ಮಾತ್ರ: ಉಳಿದ ಪಂದ್ಯಗಳಿಂದ RCB ಆಟಗಾರ ಔಟ್

ಪಿಎಸ್​ಎಲ್​ ನಡೆಯುವುದು ಎಲ್ಲಿ?

ಪಾಕಿಸ್ತಾನ್ ಸೂಪರ್ ಲೀಗ್​ನ ಕೊನೆಯ ಪಂದ್ಯಗಳೂ ಕೂಡ ಪಾಕ್​ನಲ್ಲೇ ಆಡಲಾಗುತ್ತದೆ. ಎಲಿಮಿನೇಟರ್, ಕ್ವಾಲಿಫೈಯರ್ ಮತ್ತು ಫೈನಲ್ ಸೇರಿದಂತೆ ಒಟ್ಟು 8 ಪಂದ್ಯಗಳು ಬಾಕಿಯಿದ್ದು, ಈ ಎಲ್ಲಾ ಪಂದ್ಯಗಳು ರಾವಲ್ಪಿಂಡಿ, ಮುಲ್ತಾನ್ ಮತ್ತು ಲಾಹೋರ್‌ನಲ್ಲಿ ನಡೆಯಲಿವೆ. ಇನ್ನು ಫೈನಲ್ ಸೇರಿದಂತೆ ಪ್ಲೇಆಫ್ ಸುತ್ತಿನ ಪಂಧ್ಯಗಳನ್ನು ಸಹ ಲಾಹೋರ್​ನಲ್ಲೇ ಆಯೋಜಿಸಲು ನಿರ್ಧರಿಸಲಾಗಿದೆ.

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ