AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೆಸ್​ಕಾನ್ಫರೆನ್ಸ್ ನಡೆಯುವಾಗಲೇ ಹೂಸುಬಿಟ್ಟ ರಿಜ್ವಾನ್; ಸಿಟ್ಟಾದ ವಾರ್ನರ್​ ಹೇಳಿದ್ದೇನು?

ಪಾಕಿಸ್ತಾನ್ ಸೂಪರ್ ಲೀಗ್ ಆರಂಭದ ಸುದ್ದಿಗೋಷ್ಠಿಯಲ್ಲಿ ಮೊಹಮ್ಮದ್ ರಿಜ್ವಾನ್ ಹೂಸು ಬಿಟ್ಟ ಘಟನೆ ವೈರಲ್ ಆಗಿದೆ. ಇದರಿಂದ ಪಕ್ಕದಲ್ಲಿದ್ದವರು ನಕ್ಕಾಗ, ಡೇವಿಡ್ ವಾರ್ನರ್ ಅಸಮಾಧಾನಗೊಂಡರು. ‘ಶಾಲಾ ಮಕ್ಕಳಂತೆ ವರ್ತಿಸಬೇಡಿ’ ಎಂದು ಖಡಕ್ ತಿರುಗೇಟು ನೀಡಿದರು. ವಾರ್ನರ್ ವೃತ್ತಿಪರತೆಗೆ ಒತ್ತು ನೀಡಿದರೆ, ರಿಜ್ವಾನ್ ಟ್ರೋಲ್‌ಗೆ ಒಳಗಾಗಿದ್ದಾರೆ.

ಪ್ರೆಸ್​ಕಾನ್ಫರೆನ್ಸ್ ನಡೆಯುವಾಗಲೇ ಹೂಸುಬಿಟ್ಟ ರಿಜ್ವಾನ್; ಸಿಟ್ಟಾದ ವಾರ್ನರ್​ ಹೇಳಿದ್ದೇನು?
ಪಿಎಸ್​​ಎಲ್​ ಸುದ್ದಿಗೋಷ್ಠಿ
ರಾಜೇಶ್ ದುಗ್ಗುಮನೆ
|

Updated on:Mar 26, 2026 | 7:40 AM

Share

ಪಾಕಿಸ್ತಾನ್ ಸೂಪರ್ ಲೀಗ್ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದಿನಿಂದ (ಮಾರ್ಚ್ 26) ಪಂದ್ಯಗಳು ಆರಂಭ ಆಗಲಿವೆ. ಅದಕ್ಕೂ ಮೊದಲು ಪಂದ್ಯದ ಬಗ್ಗೆ ಮಾಹಿತಿ ನೀಡಲು ಸುದ್ದಿಗೋಷ್ಠಿ ನಡೆಸಿಲಾಯಿತು. ಈ ವೇಳೆ ಡೇವಿಡ್ ವಾರ್ನರ್​ ಮೊದಲಾದವರು ಇದ್ದರು. ಆಗ ರಿಜ್ವಾನ್ ಜೋರಾಗಿಯೇ ಹೂಸು ಬಿಟ್ಟಿದ್ದಾರೆ. ಇದನ್ನು ನೋಡಿ ಅಲ್ಲಿದ್ದವರು ನಕ್ಕಿದ್ದಾರೆ. ಇದಕ್ಕೆ ಡೇವಿಡ್ ವಾರ್ನರ್ ಖಡಕ್ ಆಗಿ ಉತ್ತರ ಕೊಟ್ಟಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ.

ಪಾಕಿಸ್ತಾನ ಸೂಪರ್ ಲೀಗ್ಸ್​ ಬಗ್ಗೆ ಮಾಹಿತಿ ನೀಡಲು ಸುದ್ದಿಗೋಷ್ಠಿ ಕರೆಯಲಾಗಿತ್ತು. ಪತ್ರಕರ್ತರು ಪ್ರಶ್ನೆ ಕೇಳುವಾಗಲೇ ಉಳಿದ ತಂಡದ ಕ್ಯಾಪ್ಟನ್ಸ್ ತಮ್ಮ ಪಾಡಿಗೆ ತಾವು ಚರ್ಚೆ ನಡೆಸುತ್ತಿದ್ದರು. ಇದೇ ಸಂದರ್ಭದಲ್ಲಿ ರಿಜ್ವಾನ್ (ವಿಡಿಯೋದಲ್ಲಿ 33-34 ಸೆಕೆಂಡ್​​) ಹೂಸು ಬಿಟ್ಟಿದ್ದಾರೆ. ಆಗ ಉಳಿದವರು ನಕ್ಕಿದ್ದಾರೆ. ಡೇವಿಡ್ ವಾರ್ನರ್ ತಮ್ಮ ಪಾಡಿಗೆ ತಾವು ಕೂಲ್ ಆಗಿ ಸುದ್ದಿಗೋಷ್ಠಿಯಲ್ಲಿ ಎಲ್ಲವನ್ನೂ ವಿವರಿಸುತ್ತಿದ್ದರು. ಆದರೆ, ಉಳಿದವರು ನಗುತ್ತಾ ಡಿಸ್ಟರ್ಬ್ ಮಾಡಿದ್ದು ಡೇವಿಡ್ ವಾರ್ನರ್​​ಗೆ ಇಷ್ಟ ಆಗಿಲ್ಲ.

ಇದನ್ನೂ ಓದಿ: ನೀನು ಬ್ಯಾಟಿಂಗ್ ಮಾಡಿದ್ದು ಸಾಕು ಬಾ; ಮೊಹಮ್ಮದ್ ರಿಜ್ವಾನ್​ಗೆ ಲೈವ್ ಪಂದ್ಯದಲ್ಲೇ ಅವಮಾನ

ಈ ವಿಷಯವಾಗಿ ಡೇವಿಡ್ ವಾರ್ನರ್ ತಿರುಗೇಟು ಕೊಟ್ಟರು. ‘ಏನಾಯ್ತು ಜಂಟಲಮೆನ್ಸ್? ಕ್ಷಮಿಸಿ, ಇಲ್ಲಿ ಕೆಲವು ಶಾಲಾ ಮಕ್ಕಳಿದ್ದಾರೆ’ ಎಂದು ವಾರ್ನರ್ ಹೇಳಿದರು. ವಾರ್ನರ್ ಹಲವು ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದವರು. ಎಲ್ಲಿ ಹೇಗೆ ಇರಬೇಕು ಎಂಬುದು ಸರಿಯಾಗಿ ತಿಳಿದಿದೆ. ಫೀಲ್ಡ್​​ನಲ್ಲಿ ಅವರು ಫನ್ ಮಾಡುತ್ತಾರೆ ನಿಜ. ಆದರೆ, ಸುದ್ದಿಗೋಷ್ಠಿಗಳಲ್ಲಿ ಅವರಿಗೆ ಹೇಗೆ ಇರಬೇಕು ಎನ್ನುವ ವಿಷಯ ಗೊತ್ತಿದೆ. ಹೀಗಾಗಿ, ಅವರು ಸುದ್ದಿಗೋಷ್ಠಿಯಲ್ಲಿ ಗಂಭಿರವಾಗಿ ನಡೆದುಕೊಂಡಿದ್ದಾರೆ.

ಇನ್ನು, ರಿಜ್ವಾನ್ ಹೂಸು ಕೊಟ್ಟ ವಿಷಯ ಸಾಕಷ್ಟು ಟ್ರೋಲ್ ಆಗುತ್ತಿದೆ. ಅವರನ್ನು ಎಲ್ಲರೂ ಟೀಕೆ ಮಾಡುತ್ತಿದ್ದಾರೆ. ಸುದ್ದಿಗೋಷ್ಠಿಯಲ್ಲೂ ಅದನ್ನು ತಡೆದುಕೊಳ್ಳಲು ಸಾಧ್ಯವಾಗಿಲ್ಲವೇ ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಡೇವಿಡ್ ವಾರ್ನರ್ ಅವರು ಕರಾಚಿ ತಂಡವನ್ನು ಮುನ್ನಡೆಸುತ್ತಿದ್ದಾರೆ. ವಾರ್ನರ್ ಕಳೆದ ಸೀಸನ್​ ಅಲ್ಲಿ 368 ರನ್ ಪೇರಿಸಲು ಮಾತ್ರ ಶಕ್ಯವಾಗಿದ್ದರು.

ಇನ್ನಷ್ಟು ಕ್ರಿಕೆಟ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:39 am, Thu, 26 March 26

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More