AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSL vs IPL Prize Money: ಪಾಕಿಸ್ತಾನ್ ಸೂಪರ್ ಲೀಗ್ ಗೆದ್ರೆ ಸಿಗುವ ಪ್ರಶಸ್ತಿ ಮೊತ್ತವೆಷ್ಟು ಗೊತ್ತಾ?

PSL vs IPL Prize Money: ಐಪಿಎಲ್​ನಲ್ಲಿ ಇಶಾನ್ ಕಿಶನ್ ಪಡೆಯುವ ಮೊತ್ತಕ್ಕಿಂತ 4 ಪಟ್ಟು ಕಡಿಮೆ. ಇಶಾನ್ ಕಿಶನ್ ಈ ಬಾರಿಯ ಐಪಿಎಲ್​ನಲ್ಲಿ 15 ಕೋಟಿಗಿಂತ ಅಧಿಕ ಮೊತ್ತ ಪಡೆಯುತ್ತಿದ್ದಾರೆ.

PSL vs IPL Prize Money: ಪಾಕಿಸ್ತಾನ್ ಸೂಪರ್ ಲೀಗ್ ಗೆದ್ರೆ ಸಿಗುವ ಪ್ರಶಸ್ತಿ ಮೊತ್ತವೆಷ್ಟು ಗೊತ್ತಾ?
PSL vs IPL Prize Money
TV9 Web
| Edited By: |

Updated on:Mar 01, 2022 | 10:58 PM

Share

ಪಾಕಿಸ್ತಾನ್ ಸೂಪರ್ ಲೀಗ್​ ಸೀಸನ್​ 7ಗೆ ತೆರೆಬಿದ್ದಿದೆ. ಫೈನಲ್ ಪಂದ್ಯದಲ್ಲಿ ಮುಲ್ತಾನ್ ಸುಲ್ತಾನ್ಸ್ ತಂಡವನ್ನು ಮಣಿಸುವ ಮೂಲಕ ಇದೇ ಮೊದಲ ಬಾರಿಗೆ ಲಾಹೋರ್ ಖಲಂದರ್ಸ್​ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ ಟ್ರೋಫಿಯೊಂದಿಗೆ ನಗದು ಮೊತ್ತವನ್ನು ತನ್ನದಾಗಿಸಿಕೊಂಡಿದೆ. ಆದರೆ PSL ನಲ್ಲಿ ಚಾಂಪಿಯನ್ ತಂಡ ಪಡೆದಿರುವ ಮೊತ್ತವು ಐಪಿಎಲ್​ನ ಸಾಮಾನ್ಯ ಆಟಗಾರನಿಗೆ ನೀಡುವ ಮೊತ್ತಗಿಂತ ಕಡಿಮೆ ಎಂಬುದು ವಿಶೇಷ. ಅಂದರೆ ಐಪಿಎಲ್​ನಲ್ಲಿ ಆಟಗಾರನೊಬ್ಬ ಪಡೆಯುವ ಮೊತ್ತಕ್ಕಿಂತ ಕಡಿಮೆ ಮೊತ್ತವನ್ನು ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಚಾಂಪಿಯನ್​ ತಂಡಕ್ಕೆ ನೀಡಲಾಗುತ್ತೆ ಎಂದರೆ ನಂಬಲೇಬೇಕು.

ಹೌದು, ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಚಾಂಪಿಯನ್​ ಪಟ್ಟವನ್ನು ಅಲಂಕರಿಸಿದ ತಂಡಕ್ಕೆ ಸಿಗುವ ಮೊತ್ತ ಕೇವಲ 3 ಕೋಟಿ 40 ಲಕ್ಷ ರೂ. ಮಾತ್ರ. ಅಂದರೆ ಐಪಿಎಲ್​ನಲ್ಲಿ ಇಶಾನ್ ಕಿಶನ್ ಪಡೆಯುವ ಮೊತ್ತಕ್ಕಿಂತ 4 ಪಟ್ಟು ಕಡಿಮೆ. ಇಶಾನ್ ಕಿಶನ್ ಈ ಬಾರಿಯ ಐಪಿಎಲ್​ನಲ್ಲಿ 15 ಕೋಟಿಗಿಂತ ಅಧಿಕ ಮೊತ್ತ ಪಡೆಯುತ್ತಿದ್ದಾರೆ. ಇನ್ನು ಐಪಿಎಲ್​ನ ಚಾಂಪಿಯನ್​ ತಂಡಕ್ಕೆ 20 ಕೋಟಿ ನೀಡಲಾಗುತ್ತೆ. ಅಂದರೆ ಐಪಿಎಲ್ ಪ್ರಶಸ್ತಿ ಮೊತ್ತದ ನಾಲ್ಕನೇ ಒಂದು ಭಾಗ ಕೂಡ ಪಿಎಸ್​ಎಲ್​ನಲ್ಲಿ ನೀಡಲಾಗುತ್ತಿಲ್ಲ.

ಇನ್ನು ಪಾಕಿಸ್ತಾನ್ ಸೂಪರ್ ಲೀಗ್​​ನಲ್ಲಿ ರನ್ನರ್ಸ್ ತಂಡಕ್ಕೆ ಸಿಗುವ ಮೊತ್ತ ಕೇವಲ 1 ಕೋಟಿ 36 ಲಕ್ಷ ರೂ. ಮಾತ್ರ. ಅಂದರೆ ಐಪಿಎಲ್​ನಲ್ಲಿ ಬಹುತೇಕ ಆಟಗಾರರು ಪಡೆಯುವ ಮೊತ್ತಕ್ಕಿಂತ ಕಡಿಮೆ. ಅದೇ ಐಪಿಎಲ್​ನಲ್ಲಿ ರನ್ನರ್ಸ್​ ತಂಡಕ್ಕೆ ಮೊತ್ತ 12 ಕೋಟಿ 50 ಲಕ್ಷ ಕೋಟಿ ರೂ. ನೀಡಲಾಗುತ್ತದೆ. ಇನ್ನು ಐಪಿಎಲ್​ನಲ್ಲಿ ಮೂರನೇ ಸ್ಥಾನ ಹಾಗೂ ನಾಲ್ಕನೇ ಸ್ಥಾನ ಪಡೆದ ತಂಡಗಳಿಗೆ 8.75 ಕೋಟಿ ನೀಡಲಾಗುತ್ತದೆ. ಅಂದರೆ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಚಾಂಪಿಯನ್ ತಂಡಕ್ಕೆ ನೀಡುವ ಮೊತ್ತಕ್ಕಿಂತ ಹೆಚ್ಚು ಮೊತ್ತವನ್ನು ಐಪಿಎಲ್​ನಲ್ಲಿ ಪ್ಲೇಆಫ್ ಆಡಿದ ತಂಡಗಳಿಗೆ ನೀಡುತ್ತಿದೆ. ಈ ಎಲ್ಲಾ ಕಾರಣಗಳಿಂದಾಗಿ ಐಪಿಎಲ್​ ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಎನಿಸಿಕೊಂಡಿದೆ.

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: RCB ತಂಡವನ್ನು ಮುನ್ನಡೆಸಿದ 5 ನಾಯಕರುಗಳು ಯಾರೆಲ್ಲಾ ಗೊತ್ತಾ?

Published On - 10:57 pm, Tue, 1 March 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ