AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSL vs IPL Prize Money: ಪಾಕಿಸ್ತಾನ್ ಸೂಪರ್ ಲೀಗ್ ಗೆದ್ರೆ ಸಿಗುವ ಪ್ರಶಸ್ತಿ ಮೊತ್ತವೆಷ್ಟು ಗೊತ್ತಾ?

PSL vs IPL Prize Money: ಐಪಿಎಲ್​ನಲ್ಲಿ ಇಶಾನ್ ಕಿಶನ್ ಪಡೆಯುವ ಮೊತ್ತಕ್ಕಿಂತ 4 ಪಟ್ಟು ಕಡಿಮೆ. ಇಶಾನ್ ಕಿಶನ್ ಈ ಬಾರಿಯ ಐಪಿಎಲ್​ನಲ್ಲಿ 15 ಕೋಟಿಗಿಂತ ಅಧಿಕ ಮೊತ್ತ ಪಡೆಯುತ್ತಿದ್ದಾರೆ.

PSL vs IPL Prize Money: ಪಾಕಿಸ್ತಾನ್ ಸೂಪರ್ ಲೀಗ್ ಗೆದ್ರೆ ಸಿಗುವ ಪ್ರಶಸ್ತಿ ಮೊತ್ತವೆಷ್ಟು ಗೊತ್ತಾ?
PSL vs IPL Prize Money
TV9 Web
| Updated By: ಝಾಹಿರ್ ಯೂಸುಫ್|

Updated on:Mar 01, 2022 | 10:58 PM

Share

ಪಾಕಿಸ್ತಾನ್ ಸೂಪರ್ ಲೀಗ್​ ಸೀಸನ್​ 7ಗೆ ತೆರೆಬಿದ್ದಿದೆ. ಫೈನಲ್ ಪಂದ್ಯದಲ್ಲಿ ಮುಲ್ತಾನ್ ಸುಲ್ತಾನ್ಸ್ ತಂಡವನ್ನು ಮಣಿಸುವ ಮೂಲಕ ಇದೇ ಮೊದಲ ಬಾರಿಗೆ ಲಾಹೋರ್ ಖಲಂದರ್ಸ್​ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ ಟ್ರೋಫಿಯೊಂದಿಗೆ ನಗದು ಮೊತ್ತವನ್ನು ತನ್ನದಾಗಿಸಿಕೊಂಡಿದೆ. ಆದರೆ PSL ನಲ್ಲಿ ಚಾಂಪಿಯನ್ ತಂಡ ಪಡೆದಿರುವ ಮೊತ್ತವು ಐಪಿಎಲ್​ನ ಸಾಮಾನ್ಯ ಆಟಗಾರನಿಗೆ ನೀಡುವ ಮೊತ್ತಗಿಂತ ಕಡಿಮೆ ಎಂಬುದು ವಿಶೇಷ. ಅಂದರೆ ಐಪಿಎಲ್​ನಲ್ಲಿ ಆಟಗಾರನೊಬ್ಬ ಪಡೆಯುವ ಮೊತ್ತಕ್ಕಿಂತ ಕಡಿಮೆ ಮೊತ್ತವನ್ನು ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಚಾಂಪಿಯನ್​ ತಂಡಕ್ಕೆ ನೀಡಲಾಗುತ್ತೆ ಎಂದರೆ ನಂಬಲೇಬೇಕು.

ಹೌದು, ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಚಾಂಪಿಯನ್​ ಪಟ್ಟವನ್ನು ಅಲಂಕರಿಸಿದ ತಂಡಕ್ಕೆ ಸಿಗುವ ಮೊತ್ತ ಕೇವಲ 3 ಕೋಟಿ 40 ಲಕ್ಷ ರೂ. ಮಾತ್ರ. ಅಂದರೆ ಐಪಿಎಲ್​ನಲ್ಲಿ ಇಶಾನ್ ಕಿಶನ್ ಪಡೆಯುವ ಮೊತ್ತಕ್ಕಿಂತ 4 ಪಟ್ಟು ಕಡಿಮೆ. ಇಶಾನ್ ಕಿಶನ್ ಈ ಬಾರಿಯ ಐಪಿಎಲ್​ನಲ್ಲಿ 15 ಕೋಟಿಗಿಂತ ಅಧಿಕ ಮೊತ್ತ ಪಡೆಯುತ್ತಿದ್ದಾರೆ. ಇನ್ನು ಐಪಿಎಲ್​ನ ಚಾಂಪಿಯನ್​ ತಂಡಕ್ಕೆ 20 ಕೋಟಿ ನೀಡಲಾಗುತ್ತೆ. ಅಂದರೆ ಐಪಿಎಲ್ ಪ್ರಶಸ್ತಿ ಮೊತ್ತದ ನಾಲ್ಕನೇ ಒಂದು ಭಾಗ ಕೂಡ ಪಿಎಸ್​ಎಲ್​ನಲ್ಲಿ ನೀಡಲಾಗುತ್ತಿಲ್ಲ.

ಇನ್ನು ಪಾಕಿಸ್ತಾನ್ ಸೂಪರ್ ಲೀಗ್​​ನಲ್ಲಿ ರನ್ನರ್ಸ್ ತಂಡಕ್ಕೆ ಸಿಗುವ ಮೊತ್ತ ಕೇವಲ 1 ಕೋಟಿ 36 ಲಕ್ಷ ರೂ. ಮಾತ್ರ. ಅಂದರೆ ಐಪಿಎಲ್​ನಲ್ಲಿ ಬಹುತೇಕ ಆಟಗಾರರು ಪಡೆಯುವ ಮೊತ್ತಕ್ಕಿಂತ ಕಡಿಮೆ. ಅದೇ ಐಪಿಎಲ್​ನಲ್ಲಿ ರನ್ನರ್ಸ್​ ತಂಡಕ್ಕೆ ಮೊತ್ತ 12 ಕೋಟಿ 50 ಲಕ್ಷ ಕೋಟಿ ರೂ. ನೀಡಲಾಗುತ್ತದೆ. ಇನ್ನು ಐಪಿಎಲ್​ನಲ್ಲಿ ಮೂರನೇ ಸ್ಥಾನ ಹಾಗೂ ನಾಲ್ಕನೇ ಸ್ಥಾನ ಪಡೆದ ತಂಡಗಳಿಗೆ 8.75 ಕೋಟಿ ನೀಡಲಾಗುತ್ತದೆ. ಅಂದರೆ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಚಾಂಪಿಯನ್ ತಂಡಕ್ಕೆ ನೀಡುವ ಮೊತ್ತಕ್ಕಿಂತ ಹೆಚ್ಚು ಮೊತ್ತವನ್ನು ಐಪಿಎಲ್​ನಲ್ಲಿ ಪ್ಲೇಆಫ್ ಆಡಿದ ತಂಡಗಳಿಗೆ ನೀಡುತ್ತಿದೆ. ಈ ಎಲ್ಲಾ ಕಾರಣಗಳಿಂದಾಗಿ ಐಪಿಎಲ್​ ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಎನಿಸಿಕೊಂಡಿದೆ.

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: RCB ತಂಡವನ್ನು ಮುನ್ನಡೆಸಿದ 5 ನಾಯಕರುಗಳು ಯಾರೆಲ್ಲಾ ಗೊತ್ತಾ?

Published On - 10:57 pm, Tue, 1 March 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?