AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚು ಕಮ್ಮಿಯಾದ್ರೆ ನಮ್ಮನ್ನು ದೂಷಿಸಬೇಡಿ; ವಿದೇಶಿ ಆಟಗಾರರಿಗೆ ಪಾಕ್ ಉಗ್ರ ಸಂಘಟನೆಯಿಂದ ಎಚ್ಚರಿಕೆ

PSL 11 Terror Threat: ಪಾಕಿಸ್ತಾನ ಸೂಪರ್ ಲೀಗ್ 11ನೇ ಆವೃತ್ತಿಗೆ ಸಿದ್ಧತೆಗಳ ನಡುವೆ, ಪಾಕ್ ಕ್ರಿಕೆಟ್ ಮಂಡಳಿಗೆ ವಿದೇಶಿ ಆಟಗಾರರ ಕೊರತೆ, ಇಂಧನ ಬಿಕ್ಕಟ್ಟು ಹಾಗೂ ಉಗ್ರರ ಬೆದರಿಕೆ ದೊಡ್ಡ ಸವಾಲಾಗಿದೆ. ಜಮಾತ್-ಉಲ್-ಅಹ್ರಾರ್ ಸಂಘಟನೆ, ವಿದೇಶಿ ಆಟಗಾರರು ಭಾಗವಹಿಸದಂತೆ ಎಚ್ಚರಿಕೆ ನೀಡಿದೆ, ಇಲ್ಲದಿದ್ದರೆ ಪ್ರಾಣಾಪಾಯಕ್ಕೆ ನಾವು ಜವಾಬ್ದಾರರಲ್ಲ ಎಂದಿದೆ. ಆದರೂ, ಬಾಂಗ್ಲಾದೇಶದ ಆಟಗಾರರು ಈ ಬೆದರಿಕೆಗಳಿಗೆ ಜಗ್ಗದೆ ಪಿಎಸ್‌ಎಲ್‌ನಲ್ಲಿ ಆಡಲು ಸಿದ್ಧರಾಗಿದ್ದಾರೆ.

ಹೆಚ್ಚು ಕಮ್ಮಿಯಾದ್ರೆ ನಮ್ಮನ್ನು ದೂಷಿಸಬೇಡಿ; ವಿದೇಶಿ ಆಟಗಾರರಿಗೆ ಪಾಕ್ ಉಗ್ರ ಸಂಘಟನೆಯಿಂದ ಎಚ್ಚರಿಕೆ
Psl
ಪೃಥ್ವಿಶಂಕರ
|

Updated on:Mar 23, 2026 | 6:10 PM

Share

11ನೇ ಆವೃತ್ತಿಯ ಪಾಕಿಸ್ತಾನ ಸೂಪರ್ ಲೀಗ್ (PSL 2026) ಆರಂಭಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ (PCB) ಸಮಸ್ಯೆಗಳು ಕಡಿಮೆಯಾಗುವ ಲಕ್ಷಣಗಳು ಕಾಣುತ್ತಿಲ್ಲ. ಒಂದೆಡೆ ಪಿಸಿಬಿಗೆ, ವಿದೇಶಿ ಆಟಗಾರರ ಅಲಭ್ಯತೆ ದೊಡ್ಡ ತಲೆನೋವಾಗಿದ್ದರೆ, ಮತ್ತೊಂದೆಡೆ ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ದೇಶದಲ್ಲಿ ಉಂಟಾಗಿರುವ ಅನಿಲ ಬಿಕ್ಕಟ್ಟು ಹಾಗೂ ಅಪ್ಘಾನಿಸ್ತಾನ ದಾಳಿ ಮಾಡುವ ಆತಂಕ ಮತ್ತೊಂದು ಸವಾಲಾಗಿದೆ. ಇದೀಗ ಇದೆಲ್ಲದರ ನಡುವೆ ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಯೊಂದು ವಿದೇಶಿ ಆಟಗಾರರು ಈ ಲೀಗ್​ನಲ್ಲಿ ಪಾಲ್ಗೊಳ್ಳದಂತೆ ಎಚ್ಚರಿಕೆ ನೀಡಿದೆ. ಮಾತ್ರವಲ್ಲದೆ ಲೀಗ್ ನಡೆಯುವ ವೇಳೆ ವಿದೇಶಿ ಆಟಗಾರರಿಗೆ ಪ್ರಾಣಾಪಾಯ ಎದುರಾದರೆ ಅದಕ್ಕೆ ನಾವು ಜವಾಬ್ದಾರರಲ್ಲ ಎಂಬ ಬೆದರಿಕೆಯೊಡ್ಡಿದೆ.

ಜಮಾತ್-ಉಲ್-ಅಹ್ರಾರ್ ಬೆದರಿಕೆ

ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದಿಂದಾಗಿ ಉಂಟಾಗಿರುವ ಇಂಧನ ಕೊರತೆಯಿಂದಾಗಿ ಪಿಎಸ್​ಎಲ್ ಪಂದ್ಯಾವಳಿಯನ್ನು ಕೇವಲ 2 ಕ್ರೀಡಾಂಗಣಗಳಲ್ಲಿ ಪ್ರೇಕ್ಷಕರಿಲ್ಲದೆ ನಡೆಸಲು ಪಿಸಿಬಿ ತೀರ್ಮಾನಿಸಿದೆ. ಇದೆಲ್ಲದರ ನಡುವೆ ಜಮಾತ್-ಉಲ್-ಅಹ್ರಾರ್ ಎಂಬ ಪಾಕಿಸ್ತಾನದ ಉಗ್ರ ಸಂಘಟನೆಯೊಂದು, ‘ವಿಶ್ವಾದ್ಯಂತದ ಎಲ್ಲಾ ಕ್ರಿಕೆಟ್ ಮಂಡಳಿಗಳು ತಮ್ಮ ಆಟಗಾರರನ್ನು ಪಾಕಿಸ್ತಾನಕ್ಕೆ ಕಳುಹಿಸದಂತೆ ನಾವು ಸಲಹೆ ನೀಡುತ್ತೇವೆ.

ಈ ಸಲಹೆಯನ್ನು ಮೀರಿ ವಿದೇಶಿ ಆಟಗಾರರು ಪಾಕಿಸ್ತಾನಕ್ಕೆ ಬಂದು ಪಂದ್ಯಾವಳಿಯಲ್ಲಿ ಭಾಗವಹಿಸಿದರೆ, ಅವರಿಗೆ ಇಲ್ಲಿ ಏನಾದರೂ ಸಂಭವಿಸಿದರೆ, ನಾವು ಜವಾಬ್ದಾರರಾಗಿರುವುದಿಲ್ಲ. ನಾವು ಈಗಾಗಲೇ ಎಚ್ಚರಿಕೆ ನೀಡಿದ್ದೇವೆ. ಇದರ ಹೊರತಾಗಿಯೂ ಆಟಗಾರರು ಪಂದ್ಯಾವಳಿಯಿಂದ ಹಿಂದೆ ಸರಿಯದಿದ್ದರೆ, ಪಂದ್ಯಗಳು ನಡೆಯದಂತೆ ತಡೆಯಲು ನಾವು ಏನು ಬೇಕಾದರೂ ಮಾಡುತ್ತೇವೆ. ಆಟಗಾರರು ಮೈದಾನಕ್ಕೆ ಪ್ರವೇಶಿಸುವುದನ್ನು ತಡೆಯಲು ನಾವು ಎಲ್ಲ ಪ್ರಯತ್ನಗಳನ್ನು ಮಾಡುತ್ತೇವೆ’ ಎಂಬ ಬೆದರಿಕೆಯನ್ನು ಹಾಕಿದೆ.

ಬೆದರಿಕೆಗೂ ಬಗ್ಗದ ಬಾಂಗ್ಲಾದೇಶ

ಭಯೋತ್ಪಾದಕ ಸಂಘಟನೆಗಳು ಆಟಗಾರರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರೂ ಸಹ, ಬಾಂಗ್ಲಾದೇಶ ತನ್ನ ಆಟಗಾರರಿಗೆ ಪಾಕಿಸ್ತಾನಕ್ಕೆ ಪ್ರಯಾಣಿಸಲು ಅನುಮತಿ ನೀಡಿದೆ. ಬಾಂಗ್ಲಾದೇಶದ ಆಟಗಾರರು ಪಿಎಸ್‌ಎಲ್‌ನಲ್ಲಿ ಭಾಗವಹಿಸುತ್ತಾರೆ ಎಂದು ಬಾಂಗ್ಲಾದೇಶದ ಆಟಗಾರ ವ್ಯವಸ್ಥಾಪಕರು ತಿಳಿಸಿದ್ದಾರೆ. ಬಾಂಗ್ಲಾದೇಶದ ವೇಗದ ಬೌಲರ್ ನಹಿದ್ ರಾಣಾ ಕೂಡ ಪಾಕಿಸ್ತಾನಕ್ಕೆ ಪ್ರಯಾಣ ಬೆಳೆಸುತ್ತಿರುವ ಬಗ್ಗೆ ಪೋಸ್ಟ್ ಮಾಡಿದ್ದಾರೆ. ಮುಸ್ತಾಫಿಜುರ್ ರೆಹಮಾನ್, ಶೋರಿಫುಲ್ ಇಸ್ಲಾಂ ಮತ್ತು ಪರ್ವೇಜ್ ಹುಸೇನ್ ಎಮನ್ ಪಿಎಸ್‌ಎಲ್‌ನಲ್ಲಿ ಭಾಗವಹಿಸಲಿದ್ದಾರೆ. ಮುಸ್ತಾಫಿಜುರ್ ರೆಹಮಾನ್ ಮತ್ತು ಪರ್ವೇಜ್ ಹುಸೇನ್ ಲಾಹೋರ್ ಖಲಂದರ್‌ ತಂಡದ ಭಾಗವಾಗಿದ್ದಾರೆ. ಶೋರಿಫುಲ್ ಇಸ್ಲಾಂ, ನಹಿದ್ ರಾಣಾ ಮತ್ತು ತಂಜಿದ್ ಹಸನ್ ತಮೀಮ್ ಪೇಶಾವರ್ ಜಲ್ಮಿ ತಂಡದ ಪರ ಕಣಕ್ಕಿಳಿಯಲಿದ್ದಾರೆ. ಉಳಿದಂತೆ ರಿಯಾದ್ ಹುಸೇನ್ ರಾವಲ್ಪಿಂಡಿ ತಂಡದಲ್ಲಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:08 pm, Mon, 23 March 26

Follow Us
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಲೋಕಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಪ್ರಧಾನಿ ಮೋದಿ ಮಾತು
ಲೋಕಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಪ್ರಧಾನಿ ಮೋದಿ ಮಾತು
ವಾಣಿಜ್ಯ ಸಿಲಿಂಡರ್ ಬೇಕಿದ್ದರೆ ಒಂದು ವಾರದೊಳಗೆ ಈ ಕೆಲಸ ಮಾಡಿ!
ವಾಣಿಜ್ಯ ಸಿಲಿಂಡರ್ ಬೇಕಿದ್ದರೆ ಒಂದು ವಾರದೊಳಗೆ ಈ ಕೆಲಸ ಮಾಡಿ!
ಐವರು ಮಹಿಳೆಯರ ಜತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಖಾಸಗಿ ಕಂಪನಿ ಎಂಡಿ!
ಐವರು ಮಹಿಳೆಯರ ಜತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಖಾಸಗಿ ಕಂಪನಿ ಎಂಡಿ!
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ