AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ ಪ್ರೀಮಿಯರ್​​ ಲೀಗ್​​ಗೆ ಇದೆಂಥ ಗತಿ; ಬೆವರಿಗೆ ಬಿಡ್ತು ಜೆರ್ಸಿ ಬಣ್ಣ, ಬಾಲ್​ ಕಲರೇ ಚೇಂಜ್

ಪಾಕಿಸ್ತಾನ ಸೂಪರ್ ಲೀಗ್ (PSL) ಆರ್ಥಿಕ ಸಂಕಷ್ಟದಲ್ಲಿದ್ದು, ಈ ಬಾರಿ ಅಭಿಮಾನಿಗಳಿಗೆ ಪ್ರವೇಶವಿಲ್ಲ. ಲೀಗ್‌ನ ಕಳಪೆ ಗುಣಮಟ್ಟ ಎದ್ದು ಕಾಣುತ್ತಿದೆ. ಆಟಗಾರರ ಜೆರ್ಸಿ ಬೆವರಿನಿಂದ ಬಣ್ಣ ಬಿಟ್ಟರೆ, ಬಾಲ್ ಕೂಡ ಬಟ್ಟೆಗೆ ಉಜ್ಜಿದಾಗ ಬಣ್ಣ ಕಳೆದುಕೊಂಡಿದೆ. ಈ ಘಟನೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಟ್ರೋಲ್‌ಗೆ ಕಾರಣವಾಗಿವೆ.

ಪಾಕಿಸ್ತಾನ ಪ್ರೀಮಿಯರ್​​ ಲೀಗ್​​ಗೆ ಇದೆಂಥ ಗತಿ; ಬೆವರಿಗೆ ಬಿಡ್ತು ಜೆರ್ಸಿ ಬಣ್ಣ, ಬಾಲ್​ ಕಲರೇ ಚೇಂಜ್
ಪಿಎಸ್​ಎಲ್
ರಾಜೇಶ್ ದುಗ್ಗುಮನೆ
|

Updated on: Mar 27, 2026 | 1:15 PM

Share

ಪಾಕಿಸ್ತಾನ ಪ್ರೀಮಿಯರ್ ಲೀಗ್ ಸದ್ಯ ಚರ್ಚೆಯಲ್ಲಿದೆ. ಈ ಸೀಸನ್​ ಅಲ್ಲಿ ಫ್ಯಾನ್ಸ್​​ಗೆ ಎಂಟ್ರಿ ಇಲ್ಲ. ಕಾಸ್ಟ್ ಕಟಿಂಗ್ ಮಾಡುವ ಉದ್ದೇಶದಿಂದ ಈ ರೀತಿ ಮಾಡಲಾಗಿದೆ. ಇಸ್ರೇಲ್​, ಅಮೆರಿಕ-ಇರಾನ್ ಯುದ್ಧದಿಂದ ಪೆಟ್ರೋಲ್ ಹಾಗೂ ಡೀಸೆಲ್ ಕೊರತೆ ಕಾಣಿಸಿದ್ದು, ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಬೆನ್ನಲ್ಲೇ ಒಂದು ಪಿಎಸ್​ಎಲ್​ ಎಷ್ಟು ಬಡ ಲೀಗ್ ಎಂಬುದು ಸಾಬೀತಾಗಿದೆ. ಆಟಗಾರರ ಬೆವರಿಗೆ ಶರ್ಟ್ ಬಣ್ಣ ಬಿಟ್ಟುಕೊಂಡಿದೆ.

2008ರ ಐಪಿಎಲ್​​​ನಲ್ಲಿ ಪಾಕ್ ಆಟಗಾರರು ಕೂಡ ಇದ್ದರು. ಆದರೆ, ಅದೇ ವರ್ಷ ಪಾಕ್ ಬೆಂಬಲಿತ ಉಗ್ರರು ಮುಂಬೈ ಮೇಲೆ ದಾಳಿ ಮಾಡಿದ ಬಳಿಕ ಪಾಕಿಸ್ತಾನ ಆಟಗಾರರನ್ನು ಐಪಿಎಲ್​​ನಿಂದ ಹೊರಕ್ಕೆ ಇಡಲಾಯಿತು. ವರ್ಷ ಕಳೆದಂತೆ ಐಪಿಎಲ್ ತನ್ನ ಖ್ಯಾತಿ ಹೆಚ್ಚಿಸಿಕೊಳ್ಳುತ್ತಾ ಹೋಯಿತು. ಈ ಸಂದರ್ಭದಲ್ಲಿ ಯಾವುದೇ ಅಂತಾರಾಷ್ಟ್ರೀಯ ಪಂದ್ಯಗಳು ನಡೆಯುತ್ತಿರಲಿಲ್ಲ. ಈ ಅವಧಿಯಲ್ಲಿ ಪಾಕ್ ಆಟಗಾರರು ಖಾಲಿ ಕೂರಬೇಕಿತ್ತು ಅಥವಾ ಜಿಂಬಾಬ್ವೆ ಜೊತೆ ಸರಣಿ ಆಡಬೇಕಿತ್ತು. ಹೀಗಾಗಿ, 2016ರಲ್ಲಿ ಪಾಕಿಸ್ತಾನ್ ಸೂಪರ್ ಲೀಗ್ ಆರಂಭಿಸಲಾಯಿತು.

ಇದನ್ನೂ ಓದಿ: ಪಾಕಿಸ್ತಾನ್ ಸೂಪರ್ ಲೀಗ್ ಉದ್ಘಾಟನಾ ಪಂದ್ಯ ನೋಡಲು ಒಬ್ಬರೂ ಬರಲಿಲ್ಲ ಐಪಿಎಲ್​​​ನಲ್ಲಿ ಅವಕಾಶ ಸಿಗದ ಕೆಲ ವಿದೇಶಿ ಆಟಗಾರರು ಹಾಗೂ ಪಾಕಿಸ್ತಾನ ಆಟಗಾರರು ಇದರಲ್ಲಿ ಆಡುತ್ತಿದ್ದಾರೆ. ವರ್ಷ ಕಳೆದಂತೆ ಪಾಕಿಸ್ತಾನ ಸೂಪರ್ ಲೀಗ್ ಸಂಕಷ್ಟ ಅನುಭವಿಸುತ್ತಿದೆ. ಈ ಬಾರಿ ಫ್ಯಾನ್ಸ್​​ಗಳಿಗೂ ಅವಕಾಶ ನೀಡಿಲ್ಲ. ಹೀಗಿರುವಾಗಲೇ ಆಟಗಾರರಿಗೆ ನೀಡಲಾದ ಜೆರ್ಸಿ ಗುಣಮಟ್ಟದ ಬಗ್ಗೆ ಚರ್ಚೆ ನಡೆದಿದೆ.

ಮಾರ್ಚ್ 26ರ ಉದ್ಘಾಟನಾ ಪಂದ್ಯದಲ್ಲಿ ಲಾಹೋರ್ ಹಾಗೂ ಹೈದರಾಬಾದ್ ಕಿಂಗ್ಸ್​​ಮನ್ ಮುಖಾಮುಖಿ ಆಗಿದ್ದವು. ಆಗ ಇದ್ದಕ್ಕಿಂದ ಬಿಳಿ ಬಾಲ್ ಬಣ್ಣ ಬದಲಿಸಿದೆ. ಇದನ್ನು ನೋಡಿ ಅಂಪೈರ್​​​ಗಳು ಶಾಕ್ ಆದರು. ಆ ಬಳಿಕ ತಿಳಿದು ಬಂದಿದ್ದೇನೆಂದರೆ ಬಾಲ್​​​ನ ಆಟಗಾರರು ಬಟ್ಟೆಗೆ ಉಜ್ಜಿದಾಗ ಅದು ಬಣ್ಣ ಬಿಟ್ಟಿದೆ. ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಟ್ರೋಲ್ ಆಗುತ್ತಿದೆ.

ಇನ್ನಷ್ಟು ಕ್ರಿಕೆಟ್​​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?