AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs South Africa 3rd Test: ಕ್ಯಾಚ್ ಬಿಟ್ಟು 5 ರನ್ ನೀಡಿದ ಪೂಜಾರಾ..!

India vs South Africa: ಶಾರ್ದೂಲ್ ಠಾಕೂರ್ ಎಸೆದ ಚೆಂಡು ತೆಂಬಾ ಬಾವುಮಾ ಅವರ ಬ್ಯಾಟ್​ ಅನ್ನು ಸವರಿ ಬಾಲ್​ ಸ್ಲಿಪ್​ನತ್ತ ಸಾಗಿತು. ಚೆಂಡು ನೇರವಾಗಿ ಸ್ಲಿಪ್​ನಲ್ಲಿ ಫೀಲ್ಡಿಂಗ್​ನಲ್ಲಿದ್ದ ಚೇತೇಶ್ವರ ಪೂಜಾರಾ ಕಡೆಗೆ ಚಿಮ್ಮಿತು.

India vs South Africa 3rd Test: ಕ್ಯಾಚ್ ಬಿಟ್ಟು 5 ರನ್ ನೀಡಿದ ಪೂಜಾರಾ..!
Team India
TV9 Web
| Edited By: |

Updated on: Jan 13, 2022 | 2:34 PM

Share

ಕೇಪ್​ ಟೌನ್​ನಲ್ಲಿ ನಡೆಯುತ್ತಿರುವ ಭಾರತ-ದಕ್ಷಿಣ ಆಫ್ರಿಕಾ (India vs South Africa 3rd Test) ನಡುವಣ ಕೊನೆಯ ಟೆಸ್ಟ್ ಪಂದ್ಯವು ಕುತೂಹಲದತ್ತ ಸಾಗುತ್ತಿದೆ. ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ (Team India) ಕಲೆಹಾಕಿದ 223 ರನ್​ಗಳಿಗೆ ಉತ್ತರವಾಗಿ ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ತಂಡವು 2ನೇ ದಿನದಾಟದಲ್ಲೇ 210 ರನ್​ಗಳಿಗೆ ಆಲೌಟ್ ಆಗಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ (Virat Kohli) 2 ಕ್ಯಾಚ್​ಗಳನ್ನು ಹಿಡಿಯುವ ಮೂಲಕ ಟೀಮ್ ಇಂಡಿಯಾ ಪರ ಟೆಸ್ಟ್​ ಕ್ರಿಕೆಟ್​ನಲ್ಲಿ 100 ಕ್ಯಾಚ್​ಗಳನ್ನು ಹಿಡಿದ 6ನೇ ಆಟಗಾರ ಎನಿಸಿಕೊಂಡರು. ಮತ್ತೊಂದೆಡೆ ಚೇತೇಶ್ವರ ಪೂಜಾರ ಕ್ಯಾಚ್ ಡ್ರಾಪ್ ಮಾಡುವ ಮೂಲಕ 5 ರನ್​ಗಳನ್ನು ಬಿಟ್ಟುಕೊಟ್ಟರು.

ದಕ್ಷಿಣ ಆಫ್ರಿಕಾದ 50ನೇ ಓವರ್​ನಲ್ಲಿ ಶಾರ್ದೂಲ್ ಠಾಕೂರ್ ಎಸೆದ ಚೆಂಡು ತೆಂಬಾ ಬಾವುಮಾ ಅವರ ಬ್ಯಾಟ್​ ಅನ್ನು ಸವರಿ ಬಾಲ್​ ಸ್ಲಿಪ್​ನತ್ತ ಸಾಗಿತು. ಚೆಂಡು ನೇರವಾಗಿ ಸ್ಲಿಪ್​ನಲ್ಲಿ ಫೀಲ್ಡಿಂಗ್​ನಲ್ಲಿದ್ದ ಚೇತೇಶ್ವರ ಪೂಜಾರಾ ಕಡೆಗೆ ಚಿಮ್ಮಿತು. ಆದರೆ ಚೆಂಡನ್ನು ಸ್ಪಷ್ಟವಾಗಿ ಗುರುತಿಸಲು ಎಡವಿದ ಪೂಜಾರ ಕ್ಯಾಚ್ ಹಿಡಿಯಲು ಸಾಧ್ಯವಾಗಿಲ್ಲ. ಅಷ್ಟೇ ಅಲ್ಲದೆ ಚೆಂಡು ನೇರವಾಗಿ ವಿಕೆಟ್ ಕೀಪರ್ ಮೈದಾನದಲ್ಲಿಟ್ಟಿದ್ದ ಹೆಲ್ಮೆಟ್​ಗೆ ಹೋಗಿ ಬಡಿಯಿತು.

ಐಸಿಸಿ ನಿಯಮಗಳ ಪ್ರಕಾರ, ಫೀಲ್ಡಿಂಗ್ ತಂಡ ಮೈದಾನದಲ್ಲಿ ಇಟ್ಟಿರುವ ಹೆಲ್ಮೆಟ್​ಗೆ ಚೆಂಡು ತಾಗಿದರೆ ಐದು ಪೆನಾಲ್ಟಿ ರನ್‌ಗಳನ್ನು ನೀಡಬೇಕಾಗುತ್ತದೆ. ಅದರಂತೆ ತೆಂಬಾ ಬವುಮಾ ಜೀವನದಾನದೊಂದಿಗೆ 5 ರನ್​ಗಳನ್ನು ಕೂಡ ಪಡೆದುಕೊಂಡರು. ಸದ್ಯ ಭಾರತ-ದಕ್ಷಿಣ ಆಫ್ರಿಕಾ ಮೊದಲ ಇನಿಂಗ್ಸ್ ಮುಗಿಸಿದ್ದು, ಇದೀಗ ಟೀಮ್ ಇಂಡಿಯಾ 2ನೇ ಇನಿಂಗ್ಸ್ ಆಡುತ್ತಿದೆ. 21 ಓವರ್ ಮುಕ್ತಾಯದ ವೇಳೆ ಭಾರತ ತಂಡವು 4 ವಿಕೆಟ್ ಕಳೆದುಕೊಂಡು 60 ರನ್​ಗಳಿಸಿದೆ. ಕ್ರೀಸ್​ನಲ್ಲಿ ವಿರಾಟ್ ಕೊಹ್ಲಿ ಹಾಗೂ ರಿಷಭ್ ಪಂತ್ ಬ್ಯಾಟ್ ಮಾಡುತ್ತಿದ್ದಾರೆ.

ಇದನ್ನೂ ಓದಿ: IPL 2022: ಮತ್ತೆ RCB ಪರ ಆಡಬೇಕೆಂದ ಸ್ಟಾರ್ ಬೌಲರ್

ಇದನ್ನೂ ಓದಿ:  Sachin Tendulkar: ಆಲ್‌ ಟೈಮ್ ಬೆಸ್ಟ್‌ 11 ಹೆಸರಿಸಿದ ಸಚಿನ್: ಪ್ರಮುಖ ಆಟಗಾರರಿಗಿಲ್ಲ ಸ್ಥಾನ

ಇದನ್ನೂ ಓದಿ: IPL 2022 Mega Auction: ಐಪಿಎಲ್ ಮೆಗಾ ಹರಾಜು ಡೇಟ್ ಫಿಕ್ಸ್..!

ಇದನ್ನೂ ಓದಿ: IPL 2022: ಅಹಮದಾಬಾದ್ ತಂಡಕ್ಕೆ ಟೀಮ್ ಇಂಡಿಯಾ ಮಾಜಿ ಆಟಗಾರ ಕೋಚ್..!

(Pujara’s dropped catch results in 5-run penalty for India)

Follow Us
Web contact
Web contact

TV9 Kannada

Read More
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್