AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs South Africa 3rd Test: ಕ್ಯಾಚ್ ಬಿಟ್ಟು 5 ರನ್ ನೀಡಿದ ಪೂಜಾರಾ..!

India vs South Africa: ಶಾರ್ದೂಲ್ ಠಾಕೂರ್ ಎಸೆದ ಚೆಂಡು ತೆಂಬಾ ಬಾವುಮಾ ಅವರ ಬ್ಯಾಟ್​ ಅನ್ನು ಸವರಿ ಬಾಲ್​ ಸ್ಲಿಪ್​ನತ್ತ ಸಾಗಿತು. ಚೆಂಡು ನೇರವಾಗಿ ಸ್ಲಿಪ್​ನಲ್ಲಿ ಫೀಲ್ಡಿಂಗ್​ನಲ್ಲಿದ್ದ ಚೇತೇಶ್ವರ ಪೂಜಾರಾ ಕಡೆಗೆ ಚಿಮ್ಮಿತು.

India vs South Africa 3rd Test: ಕ್ಯಾಚ್ ಬಿಟ್ಟು 5 ರನ್ ನೀಡಿದ ಪೂಜಾರಾ..!
Team India
TV9 Web
| Edited By: |

Updated on: Jan 13, 2022 | 2:34 PM

Share

ಕೇಪ್​ ಟೌನ್​ನಲ್ಲಿ ನಡೆಯುತ್ತಿರುವ ಭಾರತ-ದಕ್ಷಿಣ ಆಫ್ರಿಕಾ (India vs South Africa 3rd Test) ನಡುವಣ ಕೊನೆಯ ಟೆಸ್ಟ್ ಪಂದ್ಯವು ಕುತೂಹಲದತ್ತ ಸಾಗುತ್ತಿದೆ. ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ (Team India) ಕಲೆಹಾಕಿದ 223 ರನ್​ಗಳಿಗೆ ಉತ್ತರವಾಗಿ ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ತಂಡವು 2ನೇ ದಿನದಾಟದಲ್ಲೇ 210 ರನ್​ಗಳಿಗೆ ಆಲೌಟ್ ಆಗಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ (Virat Kohli) 2 ಕ್ಯಾಚ್​ಗಳನ್ನು ಹಿಡಿಯುವ ಮೂಲಕ ಟೀಮ್ ಇಂಡಿಯಾ ಪರ ಟೆಸ್ಟ್​ ಕ್ರಿಕೆಟ್​ನಲ್ಲಿ 100 ಕ್ಯಾಚ್​ಗಳನ್ನು ಹಿಡಿದ 6ನೇ ಆಟಗಾರ ಎನಿಸಿಕೊಂಡರು. ಮತ್ತೊಂದೆಡೆ ಚೇತೇಶ್ವರ ಪೂಜಾರ ಕ್ಯಾಚ್ ಡ್ರಾಪ್ ಮಾಡುವ ಮೂಲಕ 5 ರನ್​ಗಳನ್ನು ಬಿಟ್ಟುಕೊಟ್ಟರು.

ದಕ್ಷಿಣ ಆಫ್ರಿಕಾದ 50ನೇ ಓವರ್​ನಲ್ಲಿ ಶಾರ್ದೂಲ್ ಠಾಕೂರ್ ಎಸೆದ ಚೆಂಡು ತೆಂಬಾ ಬಾವುಮಾ ಅವರ ಬ್ಯಾಟ್​ ಅನ್ನು ಸವರಿ ಬಾಲ್​ ಸ್ಲಿಪ್​ನತ್ತ ಸಾಗಿತು. ಚೆಂಡು ನೇರವಾಗಿ ಸ್ಲಿಪ್​ನಲ್ಲಿ ಫೀಲ್ಡಿಂಗ್​ನಲ್ಲಿದ್ದ ಚೇತೇಶ್ವರ ಪೂಜಾರಾ ಕಡೆಗೆ ಚಿಮ್ಮಿತು. ಆದರೆ ಚೆಂಡನ್ನು ಸ್ಪಷ್ಟವಾಗಿ ಗುರುತಿಸಲು ಎಡವಿದ ಪೂಜಾರ ಕ್ಯಾಚ್ ಹಿಡಿಯಲು ಸಾಧ್ಯವಾಗಿಲ್ಲ. ಅಷ್ಟೇ ಅಲ್ಲದೆ ಚೆಂಡು ನೇರವಾಗಿ ವಿಕೆಟ್ ಕೀಪರ್ ಮೈದಾನದಲ್ಲಿಟ್ಟಿದ್ದ ಹೆಲ್ಮೆಟ್​ಗೆ ಹೋಗಿ ಬಡಿಯಿತು.

ಐಸಿಸಿ ನಿಯಮಗಳ ಪ್ರಕಾರ, ಫೀಲ್ಡಿಂಗ್ ತಂಡ ಮೈದಾನದಲ್ಲಿ ಇಟ್ಟಿರುವ ಹೆಲ್ಮೆಟ್​ಗೆ ಚೆಂಡು ತಾಗಿದರೆ ಐದು ಪೆನಾಲ್ಟಿ ರನ್‌ಗಳನ್ನು ನೀಡಬೇಕಾಗುತ್ತದೆ. ಅದರಂತೆ ತೆಂಬಾ ಬವುಮಾ ಜೀವನದಾನದೊಂದಿಗೆ 5 ರನ್​ಗಳನ್ನು ಕೂಡ ಪಡೆದುಕೊಂಡರು. ಸದ್ಯ ಭಾರತ-ದಕ್ಷಿಣ ಆಫ್ರಿಕಾ ಮೊದಲ ಇನಿಂಗ್ಸ್ ಮುಗಿಸಿದ್ದು, ಇದೀಗ ಟೀಮ್ ಇಂಡಿಯಾ 2ನೇ ಇನಿಂಗ್ಸ್ ಆಡುತ್ತಿದೆ. 21 ಓವರ್ ಮುಕ್ತಾಯದ ವೇಳೆ ಭಾರತ ತಂಡವು 4 ವಿಕೆಟ್ ಕಳೆದುಕೊಂಡು 60 ರನ್​ಗಳಿಸಿದೆ. ಕ್ರೀಸ್​ನಲ್ಲಿ ವಿರಾಟ್ ಕೊಹ್ಲಿ ಹಾಗೂ ರಿಷಭ್ ಪಂತ್ ಬ್ಯಾಟ್ ಮಾಡುತ್ತಿದ್ದಾರೆ.

ಇದನ್ನೂ ಓದಿ: IPL 2022: ಮತ್ತೆ RCB ಪರ ಆಡಬೇಕೆಂದ ಸ್ಟಾರ್ ಬೌಲರ್

ಇದನ್ನೂ ಓದಿ:  Sachin Tendulkar: ಆಲ್‌ ಟೈಮ್ ಬೆಸ್ಟ್‌ 11 ಹೆಸರಿಸಿದ ಸಚಿನ್: ಪ್ರಮುಖ ಆಟಗಾರರಿಗಿಲ್ಲ ಸ್ಥಾನ

ಇದನ್ನೂ ಓದಿ: IPL 2022 Mega Auction: ಐಪಿಎಲ್ ಮೆಗಾ ಹರಾಜು ಡೇಟ್ ಫಿಕ್ಸ್..!

ಇದನ್ನೂ ಓದಿ: IPL 2022: ಅಹಮದಾಬಾದ್ ತಂಡಕ್ಕೆ ಟೀಮ್ ಇಂಡಿಯಾ ಮಾಜಿ ಆಟಗಾರ ಕೋಚ್..!

(Pujara’s dropped catch results in 5-run penalty for India)

Follow Us
ಧಾರವಾಡ: ₹50 ಲಕ್ಷ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್
ಧಾರವಾಡ: ₹50 ಲಕ್ಷ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್
ಇಂದು ಕನ್ಯಾ ಸಂಕ್ರಮಣದ ದಿನ; ಸೂರ್ಯ ದೇವನ ದರ್ಶನದಿಂದ ಆರೋಗ್ಯ ವೃದ್ಧಿ
ಇಂದು ಕನ್ಯಾ ಸಂಕ್ರಮಣದ ದಿನ; ಸೂರ್ಯ ದೇವನ ದರ್ಶನದಿಂದ ಆರೋಗ್ಯ ವೃದ್ಧಿ
ಎಂ.ಎಸ್. ಸುಬ್ಬುಲಕ್ಷ್ಮಿ ಜಯಂತಿ ವೇಳೆ ಕಣ್ಣೀರಿಟ್ಟ ನಿರ್ಮಲಾ ಸೀತಾರಾಮನ್!
ಎಂ.ಎಸ್. ಸುಬ್ಬುಲಕ್ಷ್ಮಿ ಜಯಂತಿ ವೇಳೆ ಕಣ್ಣೀರಿಟ್ಟ ನಿರ್ಮಲಾ ಸೀತಾರಾಮನ್!
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ