AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs South Africa 3rd Test: ಕ್ಯಾಚ್ ಬಿಟ್ಟು 5 ರನ್ ನೀಡಿದ ಪೂಜಾರಾ..!

India vs South Africa: ಶಾರ್ದೂಲ್ ಠಾಕೂರ್ ಎಸೆದ ಚೆಂಡು ತೆಂಬಾ ಬಾವುಮಾ ಅವರ ಬ್ಯಾಟ್​ ಅನ್ನು ಸವರಿ ಬಾಲ್​ ಸ್ಲಿಪ್​ನತ್ತ ಸಾಗಿತು. ಚೆಂಡು ನೇರವಾಗಿ ಸ್ಲಿಪ್​ನಲ್ಲಿ ಫೀಲ್ಡಿಂಗ್​ನಲ್ಲಿದ್ದ ಚೇತೇಶ್ವರ ಪೂಜಾರಾ ಕಡೆಗೆ ಚಿಮ್ಮಿತು.

India vs South Africa 3rd Test: ಕ್ಯಾಚ್ ಬಿಟ್ಟು 5 ರನ್ ನೀಡಿದ ಪೂಜಾರಾ..!
Team India
TV9 Web
| Edited By: |

Updated on: Jan 13, 2022 | 2:34 PM

Share

ಕೇಪ್​ ಟೌನ್​ನಲ್ಲಿ ನಡೆಯುತ್ತಿರುವ ಭಾರತ-ದಕ್ಷಿಣ ಆಫ್ರಿಕಾ (India vs South Africa 3rd Test) ನಡುವಣ ಕೊನೆಯ ಟೆಸ್ಟ್ ಪಂದ್ಯವು ಕುತೂಹಲದತ್ತ ಸಾಗುತ್ತಿದೆ. ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ (Team India) ಕಲೆಹಾಕಿದ 223 ರನ್​ಗಳಿಗೆ ಉತ್ತರವಾಗಿ ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ತಂಡವು 2ನೇ ದಿನದಾಟದಲ್ಲೇ 210 ರನ್​ಗಳಿಗೆ ಆಲೌಟ್ ಆಗಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ (Virat Kohli) 2 ಕ್ಯಾಚ್​ಗಳನ್ನು ಹಿಡಿಯುವ ಮೂಲಕ ಟೀಮ್ ಇಂಡಿಯಾ ಪರ ಟೆಸ್ಟ್​ ಕ್ರಿಕೆಟ್​ನಲ್ಲಿ 100 ಕ್ಯಾಚ್​ಗಳನ್ನು ಹಿಡಿದ 6ನೇ ಆಟಗಾರ ಎನಿಸಿಕೊಂಡರು. ಮತ್ತೊಂದೆಡೆ ಚೇತೇಶ್ವರ ಪೂಜಾರ ಕ್ಯಾಚ್ ಡ್ರಾಪ್ ಮಾಡುವ ಮೂಲಕ 5 ರನ್​ಗಳನ್ನು ಬಿಟ್ಟುಕೊಟ್ಟರು.

ದಕ್ಷಿಣ ಆಫ್ರಿಕಾದ 50ನೇ ಓವರ್​ನಲ್ಲಿ ಶಾರ್ದೂಲ್ ಠಾಕೂರ್ ಎಸೆದ ಚೆಂಡು ತೆಂಬಾ ಬಾವುಮಾ ಅವರ ಬ್ಯಾಟ್​ ಅನ್ನು ಸವರಿ ಬಾಲ್​ ಸ್ಲಿಪ್​ನತ್ತ ಸಾಗಿತು. ಚೆಂಡು ನೇರವಾಗಿ ಸ್ಲಿಪ್​ನಲ್ಲಿ ಫೀಲ್ಡಿಂಗ್​ನಲ್ಲಿದ್ದ ಚೇತೇಶ್ವರ ಪೂಜಾರಾ ಕಡೆಗೆ ಚಿಮ್ಮಿತು. ಆದರೆ ಚೆಂಡನ್ನು ಸ್ಪಷ್ಟವಾಗಿ ಗುರುತಿಸಲು ಎಡವಿದ ಪೂಜಾರ ಕ್ಯಾಚ್ ಹಿಡಿಯಲು ಸಾಧ್ಯವಾಗಿಲ್ಲ. ಅಷ್ಟೇ ಅಲ್ಲದೆ ಚೆಂಡು ನೇರವಾಗಿ ವಿಕೆಟ್ ಕೀಪರ್ ಮೈದಾನದಲ್ಲಿಟ್ಟಿದ್ದ ಹೆಲ್ಮೆಟ್​ಗೆ ಹೋಗಿ ಬಡಿಯಿತು.

ಐಸಿಸಿ ನಿಯಮಗಳ ಪ್ರಕಾರ, ಫೀಲ್ಡಿಂಗ್ ತಂಡ ಮೈದಾನದಲ್ಲಿ ಇಟ್ಟಿರುವ ಹೆಲ್ಮೆಟ್​ಗೆ ಚೆಂಡು ತಾಗಿದರೆ ಐದು ಪೆನಾಲ್ಟಿ ರನ್‌ಗಳನ್ನು ನೀಡಬೇಕಾಗುತ್ತದೆ. ಅದರಂತೆ ತೆಂಬಾ ಬವುಮಾ ಜೀವನದಾನದೊಂದಿಗೆ 5 ರನ್​ಗಳನ್ನು ಕೂಡ ಪಡೆದುಕೊಂಡರು. ಸದ್ಯ ಭಾರತ-ದಕ್ಷಿಣ ಆಫ್ರಿಕಾ ಮೊದಲ ಇನಿಂಗ್ಸ್ ಮುಗಿಸಿದ್ದು, ಇದೀಗ ಟೀಮ್ ಇಂಡಿಯಾ 2ನೇ ಇನಿಂಗ್ಸ್ ಆಡುತ್ತಿದೆ. 21 ಓವರ್ ಮುಕ್ತಾಯದ ವೇಳೆ ಭಾರತ ತಂಡವು 4 ವಿಕೆಟ್ ಕಳೆದುಕೊಂಡು 60 ರನ್​ಗಳಿಸಿದೆ. ಕ್ರೀಸ್​ನಲ್ಲಿ ವಿರಾಟ್ ಕೊಹ್ಲಿ ಹಾಗೂ ರಿಷಭ್ ಪಂತ್ ಬ್ಯಾಟ್ ಮಾಡುತ್ತಿದ್ದಾರೆ.

ಇದನ್ನೂ ಓದಿ: IPL 2022: ಮತ್ತೆ RCB ಪರ ಆಡಬೇಕೆಂದ ಸ್ಟಾರ್ ಬೌಲರ್

ಇದನ್ನೂ ಓದಿ:  Sachin Tendulkar: ಆಲ್‌ ಟೈಮ್ ಬೆಸ್ಟ್‌ 11 ಹೆಸರಿಸಿದ ಸಚಿನ್: ಪ್ರಮುಖ ಆಟಗಾರರಿಗಿಲ್ಲ ಸ್ಥಾನ

ಇದನ್ನೂ ಓದಿ: IPL 2022 Mega Auction: ಐಪಿಎಲ್ ಮೆಗಾ ಹರಾಜು ಡೇಟ್ ಫಿಕ್ಸ್..!

ಇದನ್ನೂ ಓದಿ: IPL 2022: ಅಹಮದಾಬಾದ್ ತಂಡಕ್ಕೆ ಟೀಮ್ ಇಂಡಿಯಾ ಮಾಜಿ ಆಟಗಾರ ಕೋಚ್..!

(Pujara’s dropped catch results in 5-run penalty for India)

Follow Us
ದೆಹಲಿಯಲ್ಲಿ ಧಾರಾಕಾರ ಮಳೆ; ಜಲಾವೃತಗೊಂಡ ರಸ್ತೆಗಳಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಧಾರಾಕಾರ ಮಳೆ; ಜಲಾವೃತಗೊಂಡ ರಸ್ತೆಗಳಲ್ಲಿ ಈಜಾಡಿದ ಮಕ್ಕಳು
ಕಾಶ್ಮೀರಿ ಪಂಡಿತರಿಗಿರುವ ಬೆದರಿಕೆ​ಗೆ ಕಳವಳ ವ್ಯಕ್ತಪಡಿಸಿದ ಒಮರ್ ಅಬ್ದುಲ್ಲಾ
ಕಾಶ್ಮೀರಿ ಪಂಡಿತರಿಗಿರುವ ಬೆದರಿಕೆ​ಗೆ ಕಳವಳ ವ್ಯಕ್ತಪಡಿಸಿದ ಒಮರ್ ಅಬ್ದುಲ್ಲಾ
‘ಅಪ್ಪು ಸರ್ ನೆನಪಿನಲ್ಲಿ ಗಡ್ಡ ಬಿಟ್ಟೆ’: ಭಾವುಕವಾಗಿ ಮಾತನಾಡಿದ ಎಂ.ಕೆ. ಮಠ
‘ಅಪ್ಪು ಸರ್ ನೆನಪಿನಲ್ಲಿ ಗಡ್ಡ ಬಿಟ್ಟೆ’: ಭಾವುಕವಾಗಿ ಮಾತನಾಡಿದ ಎಂ.ಕೆ. ಮಠ
‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಬುಕಿಂಗ್; ಲೆಕ್ಕ ನೀಡಿದ ಪ್ರದರ್ಶಕ ಜಗದೀಶ್
‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಬುಕಿಂಗ್; ಲೆಕ್ಕ ನೀಡಿದ ಪ್ರದರ್ಶಕ ಜಗದೀಶ್
9 ಗಂಟೆಗಳ ಶೋಧ: ಪ್ಲ್ಯಾನ್ ಮಾಡಿಯೇ ಎಸ್ಕೇಪ್ ಆದ್ರಾ ಜ್ಞಾನೇಂದ್ರ ಕುಮಾರ್?
9 ಗಂಟೆಗಳ ಶೋಧ: ಪ್ಲ್ಯಾನ್ ಮಾಡಿಯೇ ಎಸ್ಕೇಪ್ ಆದ್ರಾ ಜ್ಞಾನೇಂದ್ರ ಕುಮಾರ್?
ಸಿಎಂ ಡಿಕೆಶಿಗೆ ಶಾಸಕ ಸುನಿಲ್ ಕುಮಾರ್ ಸವಾಲು
ಸಿಎಂ ಡಿಕೆಶಿಗೆ ಶಾಸಕ ಸುನಿಲ್ ಕುಮಾರ್ ಸವಾಲು
ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಅಕ್ಸಾ
ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಅಕ್ಸಾ
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ