IPL 2022: ಕ್ರಿಕೆಟಿಗ ಶಿಖರ್ ಧವನ್​ಗೆ ತಂದೆಯಿಂದಲೇ ಮನಬಂದಂತೆ ಥಳಿತ! ಕಾರಣ ಸಿಂಪಲ್; ವಿಡಿಯೋ ನೋಡಿ

Shikhar Dhawan: ಧವನ್ ತಂದೆ ಮೊದಲು ಧವನ್​ಗೆ ಕಪಾಳಮೋಕ್ಷ ಮಾಡಿ, ನಂತರ ಧವನ್​ರನ್ನು ನೆಲಕ್ಕೆ ಬೀಳಿಸಿ ಕಾಲಿನಿಂದ ಒದೆಯುವುದನ್ನು ಈ ವಿಡಿಯೋದಲ್ಲಿ ಕಾಣಬಹುದಾಗಿದೆ.

IPL 2022: ಕ್ರಿಕೆಟಿಗ ಶಿಖರ್ ಧವನ್​ಗೆ ತಂದೆಯಿಂದಲೇ ಮನಬಂದಂತೆ ಥಳಿತ! ಕಾರಣ ಸಿಂಪಲ್; ವಿಡಿಯೋ ನೋಡಿ
ಶಿಖರ್ ಧವನ್
Follow us
| Updated By: ಪೃಥ್ವಿಶಂಕರ

Updated on:May 26, 2022 | 8:50 PM

ಐಪಿಎಲ್ 2022 (IPL 2022) ರಲ್ಲಿ ಪಂಜಾಬ್ ಕಿಂಗ್ಸ್ (Punjab Kings) ತಂಡದ ಪ್ರಯಾಣವು ಲೀಗ್ ಸುತ್ತಿನಲ್ಲಿಯೇ ಕೊನೆಗೊಂಡಿತು. ತಂಡವು ಪ್ಲೇ ಆಫ್‌ಗೆ ಅರ್ಹತೆ ಗಳಿಸಲು ಸಾಧ್ಯವಾಗಲಿಲ್ಲ. ತಂಡದ ಎಲ್ಲ ಆಟಗಾರರು ಮುಂಬೈನಿಂದ ತಮ್ಮ ತಮ್ಮ ಮನೆಗೆ ಮರಳಿದ್ದಾರೆ. ಈ ಋತುವಿನಲ್ಲಿ ಪಂಜಾಬ್ ಕಿಂಗ್ಸ್ ಪರ ಶಿಖರ್ ಧವನ್ (Shikhar Dhawan) ಸಾಕಷ್ಟು ಸ್ಕೋರ್ ಮಾಡಿದರು. ಆದರೆ ತಂಡವನ್ನು ಪ್ಲೇಆಫ್‌ಗೆ ಕೊಂಡೊಯ್ಯಲು ಸಾಧ್ಯವಾಗಲಿಲ್ಲ. ಇದರಿಂದ ನಿರಾಶೆಗೊಂಡ ಶಿಖರ್ ಧವನ್ ತಂದೆ, ಧವನ್ ಮನೆಗೆ ಬಂದ ಕೂಡಲೇ ಮನಬಂದಂತೆ ಥಳಿಸಿದ್ದಾರೆ. ಇದನ್ನು ನಾವು ಹೇಳುತ್ತಿಲ್ಲ. ಬದಲಿಗೆ ಈ ವಿಷಯವನ್ನು ಸ್ವತಃ ಶಿಖರ್ ಧವನ್ ಅವರೇ ವಿಡಿಯೋ ಶೇರ್ ಮಾಡುವ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ. ಧವನ್ ಅವರ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಈಗ ಸಾಕಷ್ಟು ವೈರಲ್ ಆಗುತ್ತಿದೆ.

ಧವನ್ ತಂದೆಗೆ ಇನ್ನಿಲ್ಲದ ಕೋಪ

ಇದನ್ನೂ ಓದಿ
Image
ಆರ್​ಸಿಬಿಯಿಂದ ಅನಿರೀಕ್ಷಿತ ಕರೆ; ಐಪಿಎಲ್​ಗಾಗಿ ತನ್ನ ಮದುವೆಯನ್ನೇ ಮುಂದೂಡಿದ ರಜತ್ ಮ್ಯಾರೇಜ್​ ಸ್ಟೋರಿಯಿದು
Image
RR vs RCB Head to Head Records: ಫೈನಲ್ ರೇಸ್​ನಲ್ಲಿ ಗೆಲುವು ಯಾರಿಗೆ? ಹಿಂದಿನ ಪಂದ್ಯಗಳ ಅಂಕಿಅಂಶ ಹೇಳಿದ ಕಥೆಯಿದು

ಶಿಖರ್ ಧವನ್ ಅವರು ತಮ್ಮ ತಂದೆ ಅವರಿಗೆ ಮನಬಂದಂತೆ ಥಳಿಸುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ವೀಡಿಯೊದಲ್ಲಿ, ಧವನ್ ತಂದೆ ಡಾನ್‌ನಂತೆ ಕಪ್ಪು ಕೋಟ್ ಪ್ಯಾಂಟನ್ನು ಧರಿಸಿರುವುದನ್ನು ನಾವು ಕಾಣಬಹುದು. ಅವರೊಂದಿಗೆ ಇನ್ನೂ ಕೆಲವು ಮಂದಿಯಿದ್ದು, ಅವರಲ್ಲಿ ಒಬ್ಬ ಪೋಲೀಸ್ ಸಹ ಇದ್ದಾರೆ. ಧವನ್ ತಂದೆ ಮೊದಲು ಧವನ್​ಗೆ ಕಪಾಳಮೋಕ್ಷ ಮಾಡಿ, ನಂತರ ಧವನ್​ರನ್ನು ನೆಲಕ್ಕೆ ಬೀಳಿಸಿ ಕಾಲಿನಿಂದ ಒದೆಯುವುದನ್ನು ಈ ವಿಡಿಯೋದಲ್ಲಿ ಕಾಣಬಹುದಾಗಿದೆ. ಇತರರು ಅವರನ್ನು ತಡೆಯಲು ಪ್ರಯತ್ನಿಸುತ್ತಿದ್ದರಾದರೂ, ಅವರನ್ನು ತಡೆಯಲು ಯಾರಿಗೂ ಸಾಧ್ಯವಾಗಿಲ್ಲ. ಈ ವೇಳೆ ತಂದೆಯಿಂದ ಒದೆ ತಿಂದ ಧವನ್ ನೆಲದಲ್ಲೇ ಬಿದ್ದು ಹೊರಳಾಡುವುದನ್ನು ನಾವು ಕಾಣಬಹುದು. ತಮಾಷೆಯ ವಿಚಾರವೆಂದರೆ, ಇದೆಲ್ಲವೂ ನಿಜವಾಗಿ ಸಂಭವಿಸಿಲ್ಲ,ಬದಲಿಗೆ ಧವನ್​ರ ತಂದೆ ಇನ್​ಸ್ಟಾ ರೀಲ್ ವೀಡಿಯೊ ಮಾಡುವ ಸಲುವಾಗಿ ಈ ರೀತಿ ವರ್ತಿಸಿದ್ದಾರೆ. ನಾಕೌಟ್‌ಗೆ ಅರ್ಹತೆ ಪಡೆಯದಿದ್ದಕ್ಕೆ ತಂದೆ ನನ್ನನ್ನು ಥಳಿಸಿದ್ದಾರೆ ಎಂಬ ಶೀರ್ಷಿಕೆಯನ್ನು ಈ ವಿಡಿಯೋಗೆ ಧವನ್ ನೀಡಿದ್ದಾರೆ.

ದಿಗ್ಗಜರ ಶಭಾಷ್​ಗಿರಿ

ಧವನ್ ಶೇರ್ ಮಾಡಿರುವ ಈ ವಿಡಿಯೋ ಸಾಕಷ್ಟು ಅಭಿಮಾನಿಗಳ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಭಾರತದ ಅನುಭವಿ ಬೌಲರ್ ಹರ್ಭಜನ್ ಸಿಂಗ್ ವಿಡಿಯೋ ಕುರಿತು ಪ್ರತಿಕ್ರಿಯಿಸಿ, ನಿಮ್ಮ ಬಾಪು ನಿಮಗಿಂತ ದೊಡ್ಡ ನಟ’ ಎಂದು ಬರೆದಿದ್ದಾರೆ. ಕ್ರೀಡಾ ನಿರೂಪಕ ಗೌರವ್ ಕಪೂರ್ ಕೂಡ ಈ ವಿಡಿಯೋ ಬಗ್ಗೆ ಪ್ರತಿಕ್ರಿಯಿಸಿ, ಇಡೀ ಕುಟುಂಬವು ಉತ್ತಮ ಪ್ರದರ್ಶನ ನೀಡುತ್ತಿದೆ ಎಂದು ಬರೆದಿದ್ದಾರೆ. ಶಿಖರ್ ಧವನ್ ತಂಡವು ಪ್ಲೇಆಫ್‌ಗೆ ಪ್ರವೇಶಿಸಲು ಸಾಧ್ಯವಾಗಲಿಲ್ಲ ಆದರೆ ಗಬ್ಬರ್ ಅವರ ಬ್ಯಾಟ್ ಸಾಕಷ್ಟು ಸದ್ದು ಮಾಡಿತು. ಅವರು 14 ಪಂದ್ಯಗಳಲ್ಲಿ 122.74 ಸ್ಟ್ರೈಕ್ ರೇಟ್‌ನಲ್ಲಿ ಒಟ್ಟು 460 ರನ್ ಗಳಿಸಿದರು, ಔಟಾಗದೆ 88 ರನ್ ಗಳಿಸಿದ್ದು ಗರಿಷ್ಠ ವೈಯಕ್ತಿಕ ಸ್ಕೋರ್ ಆಗಿತ್ತು. ಶಿಖರ್ ಒಟ್ಟಾರೆ ಈ ಸೀಸನ್​ನಲ್ಲಿ 47 ಬೌಂಡರಿ ಮತ್ತು 12 ಸಿಕ್ಸರ್ಗಳನ್ನು ಬಾರಿಸಿದ್ದಾರೆ. ಇದರೊಂದಿಗೆ ಐಪಿಎಲ್ 15ನೇ ಸೀಸನ್​ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್​ಮನ್​ಗಳ ಪಟ್ಟಿಯಲ್ಲಿ ಸದ್ಯ ಆರನೇ ಸ್ಥಾನದಲ್ಲಿದ್ದಾರೆ.

Published On - 8:50 pm, Thu, 26 May 22

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು