AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ಇಂಡಿಯನ್ಸ್​ ತಂಡದ 17 ವರ್ಷಗಳ ದಾಖಲೆಗೆ ಬ್ರೇಕ್ ಹಾಕಿದ ಪಂಜಾಬ್ ಕಿಂಗ್ಸ್

IPL 2025 MI vs PBKS: ಇಂಡಿಯನ್ ಪ್ರೀಮಿಯರ್ ಲೀಗ್​ನ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 203 ರನ್​ ಕಲೆಹಾಕಿತು. ಈ ಕಠಿಣ ಗುರಿಯನ್ನು ಪಂಜಾಬ್ ಕಿಂಗ್ಸ್ ತಂಡವು 19 ಓವರ್​ಗಳಲ್ಲಿ ಚೇಸ್ ಮಾಡಿ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಮುಂಬೈ ಇಂಡಿಯನ್ಸ್​ ತಂಡದ 17 ವರ್ಷಗಳ ದಾಖಲೆಗೆ ಬ್ರೇಕ್ ಹಾಕಿದ ಪಂಜಾಬ್ ಕಿಂಗ್ಸ್
Mi Vs Pbks
ಝಾಹಿರ್ ಯೂಸುಫ್
|

Updated on: Jun 02, 2025 | 8:31 AM

Share

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ 200 ರನ್​ಗಳಿಸಿ ಒಮ್ಮೆಯೂ ಸೋಲದ ತಂಡವಾಗಿದ್ದ ಮುಂಬೈ ಇಂಡಿಯನ್ಸ್ (MI)​ ತಂಡಕ್ಕೆ ಕೊನೆಗೂ ಸೋಲುಣಿಸುವಲ್ಲಿ ಪಂಜಾಬ್ ಕಿಂಗ್ಸ್ (PBKS) ತಂಡ ಯಶಸ್ವಿಯಾಗಿದೆ. ಅದು ಕೂಡ 19 ಓವರ್​ಗಳಲ್ಲಿ 203 ರನ್​ಗಳನ್ನು ಚೇಸ್ ಮಾಡುವ ಮೂಲಕ ಎಂಬುದು ವಿಶೇಷ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 203 ರನ್ ಕಲೆಹಾಕಿತು.

ಈ ಕಠಿಣ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್ ಪರ ನಾಯಕ ಶ್ರೇಯಸ್ ಅಯ್ಯರ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. 41 ಎಸೆತಗಳನ್ನು ಎದುರಿಸಿದ ಅಯ್ಯರ್ 8 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ ಅಜೇಯ 87 ರನ್ ಬಾರಿಸಿದರು. ಈ ಮೂಲಕ ಪಂಜಾಬ್ ಕಿಂಗ್ಸ್ 19 ಓವರ್​ಗಳಲ್ಲಿ 207 ರನ್​ಗಳಿಸಿ 5 ವಿಕೆಟ್​ಗಳ ಜಯ ಸಾಧಿಸಿತು.

ಕೊನೆಗೊಂಡ ನಾಗಾಲೋಟ:

ಪಂಜಾಬ್ ಕಿಂಗ್ಸ್ ತಂಡದ ಈ ಗೆಲುವಿನೊಂದಿಗೆ ಕಳೆದ 17 ಸೀಸನ್​ಗಳಿಂದ 200+ ರನ್​ ವಿಷಯದಲ್ಲಿ ಸೋಲಿಲ್ಲದ ಸರದಾರರಾಗಿ ಮೆರೆದಿದ್ದ ಮುಂಬೈ ಇಂಡಿಯನ್ಸ ತಂಡದ ಗೆಲುವಿನ ನಾಗಾಲೋಟ ಕೊನೆಗೊಂಡಿದೆ. ಅಂದರೆ ಕಳೆದ 17 ಸೀಸನ್​ಗಳಲ್ಲಿ ಮುಂಬೈ ಪಡೆಯು 200 ರನ್​ಗಳಿಸಿ ಒಮ್ಮೆಯೂ ಸೋಲನುಭವಿಸಿರಲಿಲ್ಲ.

ಅಲ್ಲದೆ ಈವರೆಗೆ 19 ಬಾರಿ 200+ ಸ್ಕೋರ್​ಗಳ ಟಾರ್ಗೆಟ್ ನೀಡಿದ್ದ ಮುಂಬೈ ಇಂಡಿಯನ್ಸ್​ ತಂಡವು 18 ಬಾರಿ ಜಯಗಳಿಸಿತ್ತು. ಆದರೆ ಈ ಬಾರಿ ಪಂಜಾಬ್ ಕಿಂಗ್ಸ್ ತಂಡವು ಮುಂಬೈ ಪಡೆಯನ್ನು ಮಕಾಡೆ ಮಲಗಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಕಳೆದ 17 ವರ್ಷಗಳಿಂದ ಕಾಪಾಡಿಕೊಂಡು ಬಂದಿದ್ದ ವಿಶೇಷ ದಾಖಲೆ ಕೂಡ ಬ್ರೇಕ್ ಆಗಿದೆ.

ಫೈನಲ್​ಗೆ ಪಂಜಾಬ್ ಕಿಂಗ್ಸ್:

ಮುಂಬೈ ಇಂಡಿಯನ್ಸ್ ವಿರುದ್ಧದ ಗೆಲುವಿನೊಂದಿಗೆ ಪಂಜಾಬ್ ಕಿಂಗ್ಸ್ ತಂಡವು ಐಪಿಎಲ್​ನ ಫೈನಲ್​ಗೆ ಪ್ರವೇಶಿಸಿದೆ. ಅದು ಕೂಡ 11 ವರ್ಷಗಳ ಬಳಿಕ ಎಂಬುದು ವಿಶೇ. ಅಂದರೆ ಪಂಜಾಬ್ ಪಡೆ ಕೊನೆಯ ಬಾರಿ ಫೈನಲ್ ಆಡಿದ್ದು 2014 ರಲ್ಲಿ. ಇದೀಗ ದಶಕದ ಬಳಿಕ ಮತ್ತೊಮ್ಮೆ ಅಂತಿಮ ಪಂದ್ಯವಾಡಲು ಪಂಜಾಬ್ ಕಿಂಗ್ಸ್ ಸಜ್ಜಾಗಿದೆ.

ಇದನ್ನೂ ಓದಿ: ಮುಂಬೈ ಇಂಡಿಯನ್ಸ್ ಸೋಲುತ್ತಿದ್ದಂತೆ ನೋವಿನಿಂದ ಕುಗ್ಗಿ ಹೋದ ಹಾರ್ದಿಕ್ ಪಾಂಡ್ಯ

ಅದರಂತೆ ಜೂನ್ 3 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ.

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ