AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಪೈರ್ ಜೊತೆ ಅನುಚಿತ ವರ್ತನೆ: ರವಿಚಂದ್ರನ್ ಅಶ್ವಿನ್​ಗೆ ದಂಡ..!

TNPL 2025: ತಮಿಳುನಾಡು ಪ್ರೀಮಿಯರ್ ಲೀಗ್​ನ 5ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ದಿಂಡಿಗಲ್ ಡ್ರಾಗನ್ಸ್ ತಂಡವು 16.2 ಓವರ್​ಗಳಲ್ಲಿ 93 ರನ್​ಗಳಿಸಿ ಆಲೌಟ್ ಆಯಿತು. ಈ ಸುಲಭ ಗುರಿಯನ್ನು ಬೆನ್ನತ್ತಿದ ತಿರುಪ್ಪೂರು ತಮಿಳನ್ಸ್ ತಂಡವು 11.5 ಓವರ್​ಗಳಲ್ಲಿ 94 ರನ್ ಬಾರಿಸಿ 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

ಅಂಪೈರ್ ಜೊತೆ ಅನುಚಿತ ವರ್ತನೆ: ರವಿಚಂದ್ರನ್ ಅಶ್ವಿನ್​ಗೆ ದಂಡ..!
Ashwin
ಝಾಹಿರ್ ಯೂಸುಫ್
|

Updated on: Jun 10, 2025 | 2:53 PM

Share

ತಮಿಳುನಾಡು ಪ್ರೀಮಿಯರ್ ಲೀಗ್​ನ (TNPL 2025) 5ನೇ ಪಂದ್ಯದಲ್ಲಿ ಅಂಪೈರ್ ಜೊತೆ ವಾಗ್ವಾದ ನಡೆಸಿದ್ದಕ್ಕಾಗಿ ದಿಂಡಿಗಲ್ ಡ್ರಾಗನ್ಸ್ ತಂಡದ ನಾಯಕ ರವಿಚಂದ್ರನ್ ಅಶ್ವಿನ್ ಅವರಿಗೆ ಪಂದ್ಯ ಶುಲ್ಕದ ಶೇ.30 ರಷ್ಟು ದಂಡ ವಿಧಿಸಲಾಗಿದೆ. ಕೊಯಂಬತ್ತೂರಿನ ಎಸ್​ಎನ್​ಆರ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ತಿರುಪ್ಪೂರು ತಮಿಳನ್ಸ್ ಮತ್ತು ದಿಂಡಿಗಲ್ ಡ್ರಾಗನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ತಿರುಪ್ಪೂರು ತಮಿಳನ್ಸ್ ತಂಡದ ನಾಯಕ ಸಾಯಿ ಕಿಶೋರ್ ಬೌಲಿಂಗ್ ಆಯ್ದುಕೊಂಡಿದ್ದರು.

ದಿಂಡಿಗಲ್ ಡ್ರಾಗನ್ಸ್ ಪರ ಇನಿಂಗ್ಸ್ ಆರಂಭಿಸಿದ ರವಿಚಂದ್ರನ್ ಅಶ್ವಿನ್ ಹಾಗೂ ಶಿವಂ ಸಿಂಗ್ ತಂಡಕ್ಕೆ ಉತ್ತಮ ಆರಂಭ ಒದಗಿಸಿದ್ದರು. ಆದರೆ 5ನೇ ಓವರ್​ನ 5ನೇ ಎಸೆತದಲ್ಲಿ ಅಶ್ವಿನ್ ಅವರನ್ನು ಎಲ್​ಬಿಡಬ್ಲ್ಯೂ ಮಾಡುವಲ್ಲಿ ಸಾಯಿ ಕಿಶೋರ್ ಯಶಸ್ವಿಯಾದರು. ಇತ್ತ ಸಾಯಿ ಕಿಶೋರ್ ಎಲ್​ಬಿ ವಿಕೆಟ್​ಗೆ ಮನವಿ ಮಾಡುತ್ತಿದ್ದಂತೆ ಫೀಲ್ಡ್ ಅಂಪೈರ್ ಔಟ್ ನೀಡಿದರು.

ಆದರೆ ಅಂಪೈರ್ ತೀರ್ಪಿನಿಂದ ಅಶ್ವಿನ್ ಸಂತುಷ್ಟರಾಗಿರಲಿಲ್ಲ. ಅಲ್ಲದೆ ನಾನು ನಾಟೌಟ್ ಎಂಬ ವಾದವನ್ನು ಮುಂದಿಟ್ಟು ಫೀಲ್ಡ್ ಅಂಪೈರ್ ಜೊತೆ ವಾಗ್ವಾದಕ್ಕಿಳಿದರು. ಇತ್ತ ಅಶ್ವಿನ್ ತಮ್ಮ ವಾದವನ್ನು ಮುಂದಿಟ್ಟರೂ, ಅತ್ತ ಅಂಪೈರ್ ಅವರೊಂದಿಗೆ ಚರ್ಚಿಸಲು ಮುಂದಾಗಲಿಲ್ಲ.

ಇದರಿಂದ ಮತ್ತಷ್ಟು ಕುಪಿತಗೊಂಡ ಅಶ್ವಿನ್ ಬ್ಯಾಟ್​ನಿಂದ ಪ್ಯಾಡ್​ಗೆ ಬಡಿಯುವ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕುತ್ತಾ ಪೆವಿಲಿಯನ್​ ಕಡೆ ಹೆಜ್ಜೆ ಹಾಕಿದರು. ಅಶ್ವಿನ್ ಅವರ ಈ ನಡೆಯನ್ನು ಗಂಭೀರವಾಗಿ ಪರಿಗಣಿಸಿದ ಮ್ಯಾಚ್ ರೆಫರಿ, ಅಂಪೈರ್ ನಿರ್ಧಾರವನ್ನು ಆಕ್ಷೇಪಿಸಿದ್ದಕ್ಕಾಗಿ ಪಂದ್ಯ ಶುಲ್ಕದ ಶೇ. 10 ರಷ್ಟು ಹಾಗೂ ಕ್ರಿಕೆಟ್ ಉಪಕರಣಗಳ ದುರುಪಯೋಗಕ್ಕಾಗಿ ಶೇ. 20 ರಷ್ಟು ದಂಡ ವಿಧಿಸಿದ್ದಾರೆ.

ರವಿಚಂದ್ರನ್ ಅಶ್ವಿನ್ ವಿಡಿಯೋ:

ಗೆದ್ದು ಬೀಗಿದ ತಿರುಪ್ಪೂರು ತಮಿಳನ್ಸ್:

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ದಿಂಡಿಗಲ್ ಡ್ರಾಗನ್ಸ್ ತಂಡವು 16.2 ಓವರ್​ಗಳಲ್ಲಿ 93 ರನ್​ಗಳಿಸಿ ಆಲೌಟ್ ಆಯಿತು. ತಿರುಪ್ಪೂರು ತಮಿಳನ್ಸ್ ತಂಡದ ಪರ ಎಸಕ್ಕಿಮುತ್ತು 4 ಓವರ್​ಗಳಲ್ಲಿ 26 ರನ್ ನೀಡಿ 4 ವಿಕೆಟ್ ಪಡೆದರೆ, ಮತಿವನ್ನನ್ 3 ವಿಕೆಟ್ ಕಬಳಿಸಿ ಮಿಂಚಿದರು.

ಇದನ್ನೂ ಓದಿ: ಐಪಿಎಲ್​ನ 3 ತಂಡಗಳು ಬ್ಯಾನ್, 2 ಟೀಮ್​​ಗಳು ಕ್ಯಾನ್ಸಲ್

ಇನ್ನು 94 ರನ್​ಗಳ ಗುರಿ ಬೆನ್ನತ್ತಿದ ತಿರುಪ್ಪೂರು ತಮಿಳನ್ಸ್ ಪರ ತುಷಾರ್ ರಹೇಜಾ 39 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ ಅಜೇಯ 65 ರನ್ ಬಾರಿಸಿದರೆ, ಎಸ್ ರಾಧಾಕೃಷ್ಣನ್ ಅಜೇಯ 14 ರನ್ ಕಲೆಹಾಕಿದರು. ಈ ಮೂಲಕ ತಿರುಪ್ಪೂರು ತಮಿಳನ್ಸ್ ತಂಡವು 11.5 ಓವರ್​ಗಳಲ್ಲಿ 94 ರನ್ ಬಾರಿಸಿ 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ