AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಂಡ್ಯ ಬ್ರದರ್ಸ್​ ಕನಸನ್ನು ನುಚ್ಚು ನೂರು ಮಾಡಿದ ರಹಾನೆ- ಅಯ್ಯರ್; ಫೈನಲ್​ಗೇರಿದ ಮುಂಬೈ

Syed Mushtaq Ali Trophy 2024: ಮುಂಬೈ ತಂಡವು ಸಯ್ಯದ್ ಮುಷ್ಟಾಕ್ ಅಲಿ ಟಿ20 ಟ್ರೋಫಿಯ ಸೆಮಿಫೈನಲ್‌ನಲ್ಲಿ ಬರೋಡಾವನ್ನು 6 ವಿಕೆಟ್‌ಗಳಿಂದ ಸೋಲಿಸಿ ಫೈನಲ್‌ಗೆ ಪ್ರವೇಶಿಸಿದೆ. ಅಜಿಂಕ್ಯ ರಹಾನೆ ಅವರ 98 ರನ್‌ಗಳ ಅದ್ಭುತ ಇನ್ನಿಂಗ್ಸ್ ಮತ್ತು ಶ್ರೇಯಸ್ ಅಯ್ಯರ್ ಅವರ 46 ರನ್‌ಗಳ ಸಹಾಯದಿಂದ ಮುಂಬೈ 164 ರನ್‌ಗಳ ಗುರಿಯನ್ನು ಸುಲಭವಾಗಿ ಸಾಧಿಸಿತು.

ಪಾಂಡ್ಯ ಬ್ರದರ್ಸ್​ ಕನಸನ್ನು ನುಚ್ಚು ನೂರು ಮಾಡಿದ ರಹಾನೆ- ಅಯ್ಯರ್; ಫೈನಲ್​ಗೇರಿದ ಮುಂಬೈ
ಮುಂಬೈ ತಂಡ
Follow us
ಪೃಥ್ವಿಶಂಕರ
|

Updated on:Dec 13, 2024 | 3:15 PM

ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್, ಪೃಥ್ವಿ ಶಾ ಅವರಂತಹ ಸ್ಟಾರ್​ ಬ್ಯಾಟ್ಸ್‌ಮನ್‌ಗಳಿಂದ ಕಂಗೊಳಿಸುತ್ತಿರುವ ಮುಂಬೈ ತಂಡ, ಸೈಯದ್ ಮುಷ್ತಾಕ್ ಅಲಿ ಟಿ20 ಟ್ರೋಫಿಯ ಸೆಮಿಫೈನಲ್‌ ಪಂದ್ಯದಲ್ಲಿ ಪಾಂಡ್ಯ ಬ್ರದರ್ಸ್ ನೇತೃತ್ವದ ಬರೋಡಾ ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸಿದೆ. ಈ ಮೂಲಕ ಮುಂಬೈ ತಂಡ ಎರಡನೇ ಬಾರಿಗೆ ಈ ಟ್ರೋಫಿಯ ಫೈನಲ್ ತಲುಪಿದೆ. ಈ ಹಿಂದೆ 2022-23ರಲ್ಲಿ ಮೊದಲ ಬಾರಿಗೆ ಫೈನಲ್ ತಲುಪಿದ್ದ ಮುಂಬೈ ತಂಡ ಚೊಚ್ಚಲ ಬಾರಿಗೆ ಚಾಂಪಿಯನ್ ಆಗಿತ್ತು. ಇತ್ತ ಮುಂಬೈ ವಿರುದ್ಧ ಸೋತಿರುವ ಬರೋಡಾ ತಂಡ ಆರನೇ ಬಾರಿಗೆ ಫೈನಲ್ ಆಡುವ ಅವಕಾಶದಿಂದ ವಂಚಿತವಾಗಿದೆ.

ಮಿಂಚಿದ ರಹಾನೆ, ಫೈನಲ್​ಗೆ ಮುಂಬೈ

ಉಭಯ ತಂಡಗಳ ನಡುವೆ ನಡೆದ ಈ ಸೆಮಿಫೈನಲ್ ಪಂದ್ಯದಲ್ಲಿ ಮುಂಬೈ ಗೆಲುವಿನಲ್ಲಿ ಅಜಿಂಕ್ಯ ರಹಾನೆ ಅವರ ಪಾತ್ರ ಅಪಾರವಾಗಿತ್ತು. ಈ ಪಂದ್ಯದಲ್ಲೂ ತಮ್ಮ ಅಮೋಘ ಫಾರ್ಮ್ ಮುಂದುವರೆಸಿದ ರಹಾನೆ ಮೊದಲಿಗೆ, ಅಯ್ಯರ್ ಅವರೊಂದಿಗೆ ಎರಡನೇ ವಿಕೆಟ್‌ಗೆ 88 ರನ್‌ಗಳ ಜೊತೆಯಾಟವನ್ನು ಮಾಡಿದರು. ಇದರ ಜೊತೆಗೆ ತಂಡದ ಸ್ಕೋರ್ ಅನ್ನು 118 ರನ್‌ಗಳಿಗೆ ಕೊಂಡೊಯ್ದರು. ಈ ವೇಳೆ ರಹಾನೆ 56 ಎಸೆತಗಳಲ್ಲಿ 11 ಬೌಂಡರಿ ಹಾಗೂ 5 ಸಿಕ್ಸರ್‌ಗಳ ನೆರವಿನಿಂದ 98 ರನ್ ಗಳಿಸಿ ಕೇವಲ 2 ರನ್​ಗಳಿಂದ ಶತಕವಂಚಿತಾದರು.

ರಹಾನೆ ಜೊತೆ ಉತ್ತಮ ಜೊತೆಯಾಟ ಕಟ್ಟಿದ ಶ್ರೇಯಸ್ ಅಯ್ಯರ್ ಕೂಡಲೇ 30 ಎಸೆತಗಳಲ್ಲಿ 46 ರನ್​ಗಳ ಕಾಣಿಕೆ ನೀಡಿದರು. ಇದರಲ್ಲಿ 4 ಬೌಂಡರಿ ಮತ್ತು 3 ಸಿಕ್ಸರ್‌ಗಳು ಸೇರಿದ್ದವು. ಇತ್ತ ಸ್ಫೋಟಕ ಬ್ಯಾಟರ್ ಸೂರ್ಯಕುಮಾರ್ ಯಾದವ್ ಸೆಮಿಫೈನಲ್‌ನಲ್ಲಿಯೂ ವಿಫಲರಾದರು. ಅಂತಿಮವಾಗಿ ಮುಂಬೈ ತಂಡ 17.2 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 164 ರನ್ ಗಳಿಸಿತು. ಹೀಗಾಗಿ ಪಂದ್ಯವನ್ನು 6 ವಿಕೆಟ್‌ಗಳಿಂದ ಗೆದ್ದುಕೊಂಡಿತು.

158 ರನ್​ಗಳ ಗುರಿ ನೀಡಿದ ಬರೋಡಾ

ಇದಕ್ಕೂ ಮುನ್ನ ಮೊದಲು ಬ್ಯಾಟ್ ಮಾಡಿದ ಬರೋಡಾ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 158 ರನ್ ಗಳಿಸಿತು. ಬರೋಡಾ ಪರ ಕೃನಾಲ್ ಪಾಂಡ್ಯ 30 ರನ್ ಗಳಿಸಿದರು. ಆದರೆ ತಂಡದ ಸ್ಟಾರ್ ಬ್ಯಾಟರ್ ಹಾರ್ದಿಕ್ ಪಾಂಡ್ಯ ಈ ಮಹತ್ವದ ಪಂದ್ಯದಲ್ಲಿ ಎರಡಂಕಿಯನ್ನು ಮುಟ್ಟಲಿಲ್ಲ. ಹಾರ್ದಿಕ್ ಕೇವಲ 5 ರನ್ ಗಳಿಸಲಷ್ಟೇ ಶಕ್ತರಾದರು. ಶಿವಾಲಿಕ್ ಶರ್ಮಾ 36 ರನ್ ಗಳಿಸಿ ಬರೋಡಾ ಪರ ಅಗ್ರ ಸ್ಕೋರರ್ ಎನಿಸಿಕೊಂಡರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:12 pm, Fri, 13 December 24

ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು
800 ಕಿ.ಮೀ. ನಾಶ; ಇದು ಭಾರತದ ಮಿಲಿಟರಿಯ ಬ್ರಹ್ಮೋಸ್ ಕ್ಷಿಪಣಿಯ ತಾಕತ್ತು
800 ಕಿ.ಮೀ. ನಾಶ; ಇದು ಭಾರತದ ಮಿಲಿಟರಿಯ ಬ್ರಹ್ಮೋಸ್ ಕ್ಷಿಪಣಿಯ ತಾಕತ್ತು
OMC Mining Case, ಜನಾರ್ದನ್​ ರೆಡ್ಡಿಗೆ ಜಾಮೀನು ಸಿಗುವ ಸಾಧ್ಯತೆ: ವಕೀಲ
OMC Mining Case, ಜನಾರ್ದನ್​ ರೆಡ್ಡಿಗೆ ಜಾಮೀನು ಸಿಗುವ ಸಾಧ್ಯತೆ: ವಕೀಲ
ಬೆಂಗಳೂರಿನ 35 ಭಾಗಗಳಲ್ಲಿ ಸೈರನ್ ಅಳವಡಿಕೆ, 32 ಕಾರ್ಯ ನಿರ್ವಹಿಸಲಿವೆ
ಬೆಂಗಳೂರಿನ 35 ಭಾಗಗಳಲ್ಲಿ ಸೈರನ್ ಅಳವಡಿಕೆ, 32 ಕಾರ್ಯ ನಿರ್ವಹಿಸಲಿವೆ
ಮಹಿಳೆ ವಿಚಾರಕ್ಕೆ ನಡೆಯಿತಾ ಮೈಸೂರಿನ ಕಾರ್ತಿಕ್​ ಕೊಲೆ? SP ಹೇಳಿದ್ದಿಷ್ಟು
ಮಹಿಳೆ ವಿಚಾರಕ್ಕೆ ನಡೆಯಿತಾ ಮೈಸೂರಿನ ಕಾರ್ತಿಕ್​ ಕೊಲೆ? SP ಹೇಳಿದ್ದಿಷ್ಟು
ನನ್ನ ಪತಿಯನ್ನು ಕೊಂದವರ ಎನ್ಕೌಂಟರ್ ಆಗಬೇಕು: ಶೃತಿ
ನನ್ನ ಪತಿಯನ್ನು ಕೊಂದವರ ಎನ್ಕೌಂಟರ್ ಆಗಬೇಕು: ಶೃತಿ
ರಾಜ್ಯ ಸರ್ಕಾರಕ್ಕೆ ಸೋರಿಕೆ ಇಲ್ಲದೆ ಒಂದು ಪರೀಕ್ಷೆಯನ್ನೂ ನಡೆಸಲಾಗಲ್ಲ: ರವಿ
ರಾಜ್ಯ ಸರ್ಕಾರಕ್ಕೆ ಸೋರಿಕೆ ಇಲ್ಲದೆ ಒಂದು ಪರೀಕ್ಷೆಯನ್ನೂ ನಡೆಸಲಾಗಲ್ಲ: ರವಿ
ಬ್ಲ್ಯಾಂಕ್ ಲೆಟರ್ ಹೆಡ್ ಯತ್ನಾಳ್​ಗೆ ಕೊಡುತ್ತೇನೆ, ಅವರೇ ಬರೆಯಲಿ: ಶಿವಾನಂದ
ಬ್ಲ್ಯಾಂಕ್ ಲೆಟರ್ ಹೆಡ್ ಯತ್ನಾಳ್​ಗೆ ಕೊಡುತ್ತೇನೆ, ಅವರೇ ಬರೆಯಲಿ: ಶಿವಾನಂದ
ಭಾರತದ ಯುದ್ಧ ತಯಾರಿ ಕಂಡು ಪತರುಗುಟ್ಟಿದೆ ಪಾಕಿಸ್ತಾನ
ಭಾರತದ ಯುದ್ಧ ತಯಾರಿ ಕಂಡು ಪತರುಗುಟ್ಟಿದೆ ಪಾಕಿಸ್ತಾನ