AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಂಡ್ಯ ಬ್ರದರ್ಸ್​ ಕನಸನ್ನು ನುಚ್ಚು ನೂರು ಮಾಡಿದ ರಹಾನೆ- ಅಯ್ಯರ್; ಫೈನಲ್​ಗೇರಿದ ಮುಂಬೈ

Syed Mushtaq Ali Trophy 2024: ಮುಂಬೈ ತಂಡವು ಸಯ್ಯದ್ ಮುಷ್ಟಾಕ್ ಅಲಿ ಟಿ20 ಟ್ರೋಫಿಯ ಸೆಮಿಫೈನಲ್‌ನಲ್ಲಿ ಬರೋಡಾವನ್ನು 6 ವಿಕೆಟ್‌ಗಳಿಂದ ಸೋಲಿಸಿ ಫೈನಲ್‌ಗೆ ಪ್ರವೇಶಿಸಿದೆ. ಅಜಿಂಕ್ಯ ರಹಾನೆ ಅವರ 98 ರನ್‌ಗಳ ಅದ್ಭುತ ಇನ್ನಿಂಗ್ಸ್ ಮತ್ತು ಶ್ರೇಯಸ್ ಅಯ್ಯರ್ ಅವರ 46 ರನ್‌ಗಳ ಸಹಾಯದಿಂದ ಮುಂಬೈ 164 ರನ್‌ಗಳ ಗುರಿಯನ್ನು ಸುಲಭವಾಗಿ ಸಾಧಿಸಿತು.

ಪಾಂಡ್ಯ ಬ್ರದರ್ಸ್​ ಕನಸನ್ನು ನುಚ್ಚು ನೂರು ಮಾಡಿದ ರಹಾನೆ- ಅಯ್ಯರ್; ಫೈನಲ್​ಗೇರಿದ ಮುಂಬೈ
ಮುಂಬೈ ತಂಡ
ಪೃಥ್ವಿಶಂಕರ
|

Updated on:Dec 13, 2024 | 3:15 PM

Share

ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್, ಪೃಥ್ವಿ ಶಾ ಅವರಂತಹ ಸ್ಟಾರ್​ ಬ್ಯಾಟ್ಸ್‌ಮನ್‌ಗಳಿಂದ ಕಂಗೊಳಿಸುತ್ತಿರುವ ಮುಂಬೈ ತಂಡ, ಸೈಯದ್ ಮುಷ್ತಾಕ್ ಅಲಿ ಟಿ20 ಟ್ರೋಫಿಯ ಸೆಮಿಫೈನಲ್‌ ಪಂದ್ಯದಲ್ಲಿ ಪಾಂಡ್ಯ ಬ್ರದರ್ಸ್ ನೇತೃತ್ವದ ಬರೋಡಾ ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸಿದೆ. ಈ ಮೂಲಕ ಮುಂಬೈ ತಂಡ ಎರಡನೇ ಬಾರಿಗೆ ಈ ಟ್ರೋಫಿಯ ಫೈನಲ್ ತಲುಪಿದೆ. ಈ ಹಿಂದೆ 2022-23ರಲ್ಲಿ ಮೊದಲ ಬಾರಿಗೆ ಫೈನಲ್ ತಲುಪಿದ್ದ ಮುಂಬೈ ತಂಡ ಚೊಚ್ಚಲ ಬಾರಿಗೆ ಚಾಂಪಿಯನ್ ಆಗಿತ್ತು. ಇತ್ತ ಮುಂಬೈ ವಿರುದ್ಧ ಸೋತಿರುವ ಬರೋಡಾ ತಂಡ ಆರನೇ ಬಾರಿಗೆ ಫೈನಲ್ ಆಡುವ ಅವಕಾಶದಿಂದ ವಂಚಿತವಾಗಿದೆ.

ಮಿಂಚಿದ ರಹಾನೆ, ಫೈನಲ್​ಗೆ ಮುಂಬೈ

ಉಭಯ ತಂಡಗಳ ನಡುವೆ ನಡೆದ ಈ ಸೆಮಿಫೈನಲ್ ಪಂದ್ಯದಲ್ಲಿ ಮುಂಬೈ ಗೆಲುವಿನಲ್ಲಿ ಅಜಿಂಕ್ಯ ರಹಾನೆ ಅವರ ಪಾತ್ರ ಅಪಾರವಾಗಿತ್ತು. ಈ ಪಂದ್ಯದಲ್ಲೂ ತಮ್ಮ ಅಮೋಘ ಫಾರ್ಮ್ ಮುಂದುವರೆಸಿದ ರಹಾನೆ ಮೊದಲಿಗೆ, ಅಯ್ಯರ್ ಅವರೊಂದಿಗೆ ಎರಡನೇ ವಿಕೆಟ್‌ಗೆ 88 ರನ್‌ಗಳ ಜೊತೆಯಾಟವನ್ನು ಮಾಡಿದರು. ಇದರ ಜೊತೆಗೆ ತಂಡದ ಸ್ಕೋರ್ ಅನ್ನು 118 ರನ್‌ಗಳಿಗೆ ಕೊಂಡೊಯ್ದರು. ಈ ವೇಳೆ ರಹಾನೆ 56 ಎಸೆತಗಳಲ್ಲಿ 11 ಬೌಂಡರಿ ಹಾಗೂ 5 ಸಿಕ್ಸರ್‌ಗಳ ನೆರವಿನಿಂದ 98 ರನ್ ಗಳಿಸಿ ಕೇವಲ 2 ರನ್​ಗಳಿಂದ ಶತಕವಂಚಿತಾದರು.

ರಹಾನೆ ಜೊತೆ ಉತ್ತಮ ಜೊತೆಯಾಟ ಕಟ್ಟಿದ ಶ್ರೇಯಸ್ ಅಯ್ಯರ್ ಕೂಡಲೇ 30 ಎಸೆತಗಳಲ್ಲಿ 46 ರನ್​ಗಳ ಕಾಣಿಕೆ ನೀಡಿದರು. ಇದರಲ್ಲಿ 4 ಬೌಂಡರಿ ಮತ್ತು 3 ಸಿಕ್ಸರ್‌ಗಳು ಸೇರಿದ್ದವು. ಇತ್ತ ಸ್ಫೋಟಕ ಬ್ಯಾಟರ್ ಸೂರ್ಯಕುಮಾರ್ ಯಾದವ್ ಸೆಮಿಫೈನಲ್‌ನಲ್ಲಿಯೂ ವಿಫಲರಾದರು. ಅಂತಿಮವಾಗಿ ಮುಂಬೈ ತಂಡ 17.2 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 164 ರನ್ ಗಳಿಸಿತು. ಹೀಗಾಗಿ ಪಂದ್ಯವನ್ನು 6 ವಿಕೆಟ್‌ಗಳಿಂದ ಗೆದ್ದುಕೊಂಡಿತು.

158 ರನ್​ಗಳ ಗುರಿ ನೀಡಿದ ಬರೋಡಾ

ಇದಕ್ಕೂ ಮುನ್ನ ಮೊದಲು ಬ್ಯಾಟ್ ಮಾಡಿದ ಬರೋಡಾ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 158 ರನ್ ಗಳಿಸಿತು. ಬರೋಡಾ ಪರ ಕೃನಾಲ್ ಪಾಂಡ್ಯ 30 ರನ್ ಗಳಿಸಿದರು. ಆದರೆ ತಂಡದ ಸ್ಟಾರ್ ಬ್ಯಾಟರ್ ಹಾರ್ದಿಕ್ ಪಾಂಡ್ಯ ಈ ಮಹತ್ವದ ಪಂದ್ಯದಲ್ಲಿ ಎರಡಂಕಿಯನ್ನು ಮುಟ್ಟಲಿಲ್ಲ. ಹಾರ್ದಿಕ್ ಕೇವಲ 5 ರನ್ ಗಳಿಸಲಷ್ಟೇ ಶಕ್ತರಾದರು. ಶಿವಾಲಿಕ್ ಶರ್ಮಾ 36 ರನ್ ಗಳಿಸಿ ಬರೋಡಾ ಪರ ಅಗ್ರ ಸ್ಕೋರರ್ ಎನಿಸಿಕೊಂಡರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:12 pm, Fri, 13 December 24

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ