AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 Cricket: 22 ಸಿಕ್ಸ್, 17 ಫೋರ್: ಟಿ20 ಕ್ರಿಕೆಟ್​ನಲ್ಲಿ ದ್ವಿಶತಕ ಸಿಡಿಸಿದ ವಿಂಡೀಸ್ ದಾಂಡಿಗ

Rahkeem Cornwall: ಟಿ20 ಕ್ರಿಕೆಟ್​ನಲ್ಲಿ ಸ್ಪೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆಯುತ್ತಿರುವ ರಹಕೀಮ್ ಕಾರ್ನ್‌ವಾಲ್ ಈ ಬಾರಿಯ ಟಿ20 ವಿಶ್ವಕಪ್​ಗಾಗಿ ವೆಸ್ಟ್ ಇಂಡೀಸ್ ತಂಡದಲ್ಲಿ ಸ್ಥಾನ ಪಡೆದಿಲ್ಲ.

T20 Cricket: 22 ಸಿಕ್ಸ್, 17 ಫೋರ್: ಟಿ20 ಕ್ರಿಕೆಟ್​ನಲ್ಲಿ ದ್ವಿಶತಕ ಸಿಡಿಸಿದ ವಿಂಡೀಸ್ ದಾಂಡಿಗ
Rahkeem Cornwall
TV9 Web
| Edited By: |

Updated on:Oct 06, 2022 | 12:32 PM

Share

ಟಿ20 ಕ್ರಿಕೆಟ್​ನಲ್ಲಿ ದ್ವಿಶತಕ ಸಿಡಿಸುವ ಮೂಲಕ ವೆಸ್ಟ್ ಇಂಡೀಸ್​ನ ದೈತ್ಯ ಬ್ಯಾಟ್ಸ್​ಮನ್ ರಹಕೀಮ್ ಕಾರ್ನ್‌ವಾಲ್ (Rahkeem Cornwall) ಇಡೀ ವಿಶ್ವದ ಗಮನ ಸೆಳೆದಿದ್ದಾರೆ. ಅಮೆರಿಕದಲ್ಲಿ ನಡೆಯುತ್ತಿರುವ ಅಟ್ಲಾಂಟಾ ಓಪನ್ ಟೂರ್ನಿಯಲ್ಲಿ ಅಟ್ಲಾಂಟಾ ಫೈರ್ ಹಾಗೂ ಸ್ಕ್ವೇರ್ ಡ್ರೈವ್ ಪ್ಯಾಂಥರ್ಸ್ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಟ್ಲಾಂಟಾ ಫೈರ್ ಪರ ಆರಂಭಿಕನಾಗಿ ಕಣಕ್ಕಿಳಿದ ರಹಕೀಮ್ ಕಾರ್ನ್‌ವಾಲ್ ಸ್ಪೋಟಕ ಇನಿಂಗ್ಸ್ ಆಡಿದರು.

ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಕಾರ್ನ್​ವಾಲ್ ಪ್ಯಾಂಥರ್ಸ್ ಬೌಲರ್​ಗಳ ಬೆಂಡೆತ್ತಿದರು. ಪರಿಣಾಮ ವಿಂಡೀಸ್​ ದಾಂಡಿಗನ ಬ್ಯಾಟ್​ನಿಂದ ಬರೋಬ್ಬರಿ 22 ಸಿಕ್ಸ್ ಹಾಗೂ 17 ಫೋರ್​ಗಳು ಮೂಡಿಬಂತು. ಈ ಮೂಲಕ ಕೇವಲ 77 ಎಸೆತಗಳಲ್ಲಿ ಅಜೇಯ 205 ರನ್​ ಚಚ್ಚಿದ್ದರು. ರಹಕೀಮ್ ಕಾರ್ನ್‌ವಾಲ್ ಅವರ ಈ ದ್ವಿಶತಕದ ನೆರವಿನಿಂದ ಅಟ್ಲಾಂಟಾ ಫೈರ್​ ತಂಡವು ನಿಗದಿತ 20 ಓವರ್​ಗಳಲ್ಲಿ 1 ವಿಕೆಟ್ ನಷ್ಟಕ್ಕೆ 326 ರನ್​ ಕಲೆಹಾಕಿತು.

ಇದನ್ನೂ ಓದಿ
Image
David Miller: ಕಿಲ್ಲರ್ ಮಿಲ್ಲರ್ ಆರ್ಭಟಕ್ಕೆ ಧೋನಿ ದಾಖಲೆ ಧೂಳೀಪಟ
Image
Dinesh Karthik: ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಹೊಸ ವಿಶ್ವ ದಾಖಲೆ ಬರೆದ DK
Image
Virat Kohli: ಸ್ಪೋಟಕ ಬ್ಯಾಟಿಂಗ್ ಮೂಲಕ ಹೊಸ ದಾಖಲೆ ಬರೆದ ಕಿಂಗ್ ಕೊಹ್ಲಿ
Image
2007ರ ಟಿ20 ವಿಶ್ವಕಪ್ ಫೈನಲ್‌ ಪಂದ್ಯದ ಹೀರೋಗಳು ಈಗ ಏನ್ಮಾಡ್ತಿದ್ದಾರೆ ಗೊತ್ತಾ?

327 ರನ್​ಗಳ ಗುರಿಯನ್ನು ಬೆನ್ನತ್ತಿದ ಸ್ಕ್ವೇರ್ ಡ್ರೈವ್ ಪ್ಯಾಂಥರ್ಸ್ ತಂಡವು 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 154 ರನ್​ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಅಟ್ಲಾಂಟಾ ಫೈರ್ ತಂಡವು 172 ರನ್​ಗಳ ಬೃಹತ್ ಅಂತರದಿಂದ ಜಯ ಸಾಧಿಸಿತು.

ಟಿ20 ಕ್ರಿಕೆಟ್​ನಲ್ಲಿ ಸ್ಪೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆಯುತ್ತಿರುವ ರಹಕೀಮ್ ಕಾರ್ನ್‌ವಾಲ್ ಈ ಬಾರಿಯ ಟಿ20 ವಿಶ್ವಕಪ್​ಗಾಗಿ ವೆಸ್ಟ್ ಇಂಡೀಸ್ ತಂಡದಲ್ಲಿ ಸ್ಥಾನ ಪಡೆದಿಲ್ಲ. ದೈತ್ಯ ದೇಹವನ್ನು ಹೊಂದಿರುವ ರಹಕೀಮ್ ಫೀಲ್ಡಿಂಗ್​ನಲ್ಲಿ ಹಿಂದೆ ಉಳಿದಿದ್ದಾರೆ. ಇದಾಗ್ಯೂ ಕೆರಿಬಿಯನ್ ಪ್ರೀಮಿಯರ್ ಲೀಗ್ ಮೂಲಕ ತಮ್ಮ ಸ್ಪೋಟಕ ಬ್ಯಾಟಿಂಗ್ ಮೂಲಕ ಕಾರ್ನ್​​ವಾಲ್ ಇಡೀ ವಿಶ್ವದ ಗಮನ ಸೆಳೆಯುತ್ತಿದ್ದಾರೆ.

Published On - 12:32 pm, Thu, 6 October 22

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ