AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 Cricket: 22 ಸಿಕ್ಸ್, 17 ಫೋರ್: ಟಿ20 ಕ್ರಿಕೆಟ್​ನಲ್ಲಿ ದ್ವಿಶತಕ ಸಿಡಿಸಿದ ವಿಂಡೀಸ್ ದಾಂಡಿಗ

Rahkeem Cornwall: ಟಿ20 ಕ್ರಿಕೆಟ್​ನಲ್ಲಿ ಸ್ಪೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆಯುತ್ತಿರುವ ರಹಕೀಮ್ ಕಾರ್ನ್‌ವಾಲ್ ಈ ಬಾರಿಯ ಟಿ20 ವಿಶ್ವಕಪ್​ಗಾಗಿ ವೆಸ್ಟ್ ಇಂಡೀಸ್ ತಂಡದಲ್ಲಿ ಸ್ಥಾನ ಪಡೆದಿಲ್ಲ.

T20 Cricket: 22 ಸಿಕ್ಸ್, 17 ಫೋರ್: ಟಿ20 ಕ್ರಿಕೆಟ್​ನಲ್ಲಿ ದ್ವಿಶತಕ ಸಿಡಿಸಿದ ವಿಂಡೀಸ್ ದಾಂಡಿಗ
Rahkeem Cornwall
TV9 Web
| Edited By: |

Updated on:Oct 06, 2022 | 12:32 PM

Share

ಟಿ20 ಕ್ರಿಕೆಟ್​ನಲ್ಲಿ ದ್ವಿಶತಕ ಸಿಡಿಸುವ ಮೂಲಕ ವೆಸ್ಟ್ ಇಂಡೀಸ್​ನ ದೈತ್ಯ ಬ್ಯಾಟ್ಸ್​ಮನ್ ರಹಕೀಮ್ ಕಾರ್ನ್‌ವಾಲ್ (Rahkeem Cornwall) ಇಡೀ ವಿಶ್ವದ ಗಮನ ಸೆಳೆದಿದ್ದಾರೆ. ಅಮೆರಿಕದಲ್ಲಿ ನಡೆಯುತ್ತಿರುವ ಅಟ್ಲಾಂಟಾ ಓಪನ್ ಟೂರ್ನಿಯಲ್ಲಿ ಅಟ್ಲಾಂಟಾ ಫೈರ್ ಹಾಗೂ ಸ್ಕ್ವೇರ್ ಡ್ರೈವ್ ಪ್ಯಾಂಥರ್ಸ್ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಟ್ಲಾಂಟಾ ಫೈರ್ ಪರ ಆರಂಭಿಕನಾಗಿ ಕಣಕ್ಕಿಳಿದ ರಹಕೀಮ್ ಕಾರ್ನ್‌ವಾಲ್ ಸ್ಪೋಟಕ ಇನಿಂಗ್ಸ್ ಆಡಿದರು.

ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಕಾರ್ನ್​ವಾಲ್ ಪ್ಯಾಂಥರ್ಸ್ ಬೌಲರ್​ಗಳ ಬೆಂಡೆತ್ತಿದರು. ಪರಿಣಾಮ ವಿಂಡೀಸ್​ ದಾಂಡಿಗನ ಬ್ಯಾಟ್​ನಿಂದ ಬರೋಬ್ಬರಿ 22 ಸಿಕ್ಸ್ ಹಾಗೂ 17 ಫೋರ್​ಗಳು ಮೂಡಿಬಂತು. ಈ ಮೂಲಕ ಕೇವಲ 77 ಎಸೆತಗಳಲ್ಲಿ ಅಜೇಯ 205 ರನ್​ ಚಚ್ಚಿದ್ದರು. ರಹಕೀಮ್ ಕಾರ್ನ್‌ವಾಲ್ ಅವರ ಈ ದ್ವಿಶತಕದ ನೆರವಿನಿಂದ ಅಟ್ಲಾಂಟಾ ಫೈರ್​ ತಂಡವು ನಿಗದಿತ 20 ಓವರ್​ಗಳಲ್ಲಿ 1 ವಿಕೆಟ್ ನಷ್ಟಕ್ಕೆ 326 ರನ್​ ಕಲೆಹಾಕಿತು.

ಇದನ್ನೂ ಓದಿ
Image
David Miller: ಕಿಲ್ಲರ್ ಮಿಲ್ಲರ್ ಆರ್ಭಟಕ್ಕೆ ಧೋನಿ ದಾಖಲೆ ಧೂಳೀಪಟ
Image
Dinesh Karthik: ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಹೊಸ ವಿಶ್ವ ದಾಖಲೆ ಬರೆದ DK
Image
Virat Kohli: ಸ್ಪೋಟಕ ಬ್ಯಾಟಿಂಗ್ ಮೂಲಕ ಹೊಸ ದಾಖಲೆ ಬರೆದ ಕಿಂಗ್ ಕೊಹ್ಲಿ
Image
2007ರ ಟಿ20 ವಿಶ್ವಕಪ್ ಫೈನಲ್‌ ಪಂದ್ಯದ ಹೀರೋಗಳು ಈಗ ಏನ್ಮಾಡ್ತಿದ್ದಾರೆ ಗೊತ್ತಾ?

327 ರನ್​ಗಳ ಗುರಿಯನ್ನು ಬೆನ್ನತ್ತಿದ ಸ್ಕ್ವೇರ್ ಡ್ರೈವ್ ಪ್ಯಾಂಥರ್ಸ್ ತಂಡವು 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 154 ರನ್​ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಅಟ್ಲಾಂಟಾ ಫೈರ್ ತಂಡವು 172 ರನ್​ಗಳ ಬೃಹತ್ ಅಂತರದಿಂದ ಜಯ ಸಾಧಿಸಿತು.

ಟಿ20 ಕ್ರಿಕೆಟ್​ನಲ್ಲಿ ಸ್ಪೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆಯುತ್ತಿರುವ ರಹಕೀಮ್ ಕಾರ್ನ್‌ವಾಲ್ ಈ ಬಾರಿಯ ಟಿ20 ವಿಶ್ವಕಪ್​ಗಾಗಿ ವೆಸ್ಟ್ ಇಂಡೀಸ್ ತಂಡದಲ್ಲಿ ಸ್ಥಾನ ಪಡೆದಿಲ್ಲ. ದೈತ್ಯ ದೇಹವನ್ನು ಹೊಂದಿರುವ ರಹಕೀಮ್ ಫೀಲ್ಡಿಂಗ್​ನಲ್ಲಿ ಹಿಂದೆ ಉಳಿದಿದ್ದಾರೆ. ಇದಾಗ್ಯೂ ಕೆರಿಬಿಯನ್ ಪ್ರೀಮಿಯರ್ ಲೀಗ್ ಮೂಲಕ ತಮ್ಮ ಸ್ಪೋಟಕ ಬ್ಯಾಟಿಂಗ್ ಮೂಲಕ ಕಾರ್ನ್​​ವಾಲ್ ಇಡೀ ವಿಶ್ವದ ಗಮನ ಸೆಳೆಯುತ್ತಿದ್ದಾರೆ.

Published On - 12:32 pm, Thu, 6 October 22

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ