Rahmanullah Gurbaz: 8 ಭರ್ಜರಿ ಸಿಕ್ಸ್, 13 ಫೋರ್: ಸ್ಪೋಟಕ ಶತಕ ಸಿಡಿಸಿದ ಗುರ್ಬಾಝ್

Rahmanullah Gurbaz: ಅಫ್ಘಾನ್ ಪರ ಏಕದಿನ ಕ್ರಿಕೆಟ್​ನಲ್ಲಿ ಮೊದಲ ವಿಕೆಟ್​ಗೆ ಅತ್ಯಧಿಕ ರನ್ ಕಲೆಹಾಕಿದ ಜೋಡಿ ಎಂಬ ದಾಖಲೆಯನ್ನು​​ ಇಬ್ರಾಹಿಂ ಝದ್ರಾನ್ ಹಾಗೂ ರಹಮಾನುಲ್ಲಾ ಗುರ್ಬಾಝ್ ನಿರ್ಮಿಸಿದ್ದಾರೆ.

Rahmanullah Gurbaz: 8 ಭರ್ಜರಿ ಸಿಕ್ಸ್, 13 ಫೋರ್: ಸ್ಪೋಟಕ ಶತಕ ಸಿಡಿಸಿದ ಗುರ್ಬಾಝ್
Rahmanullah Gurbaz
Follow us
| Updated By: ಝಾಹಿರ್ ಯೂಸುಫ್

Updated on: Jul 08, 2023 | 5:00 PM

Bangladesh vs Afghanistan, 2nd ODI: ಚಟ್ಟೋಗ್ರಾಮ್​ನಲ್ಲಿ ನಡೆಯುತ್ತಿರುವ ಆತಿಥೇಯ ಬಾಂಗ್ಲಾದೇಶ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ರಹಮಾನುಲ್ಲಾ ಗುರ್ಬಾಝ್  (Rahmanullah Gurbaz) ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ್ ತಂಡದ ಹಂಗಾಮಿ ನಾಯಕ ಲಿಟ್ಟನ್ ದಾಸ್ ಬೌಲಿಂಗ್ ಆಯ್ಕೆ ಮಾಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಅಫ್ಘಾನಿಸ್ತಾನ್ ತಂಡಕ್ಕೆ ಗುರ್ಬಾಝ್ ಹಾಗೂ ಇಬ್ರಾಹಿಂ ಝದ್ರಾನ್ ಬಿರುಸಿನ ಆರಂಭ ಒದಗಿಸಿದ್ದರು.

ಆರಂಭದಿಂದಲೇ ಸ್ಪೋಟಕ ಬ್ಯಾಟಿಂಗ್​ಗೆ ಒತ್ತು ನೀಡಿದ್ದ ಗುರ್ಬಾಝ್ ಬಾಂಗ್ಲಾ ಬೌಲರ್​ಗಳ ಬೆಂಡೆತ್ತಿದರು. ಆಕ್ರಮಣಕಾರಿಯಾಗಿ ಬ್ಯಾಟ್ ಬೀಸಿದ ಅಫ್ಘಾನ್ ವಿಕೆಟ್ ಕೀಪರ್ ಮೈದಾನದ ಮೂಲೆ ಮೂಲೆಗೂ ಚೆಂಡನ್ನು ತಲುಪಿಸಿದರು. ಈ ಮೂಲಕ 100 ಎಸೆತಗಳಲ್ಲಿ ರಹಮಾನುಲ್ಲಾ ಗುರ್ಬಾಝ್ ಶತಕ ಪೂರೈಸಿದರು.

ಭರ್ಜರಿ ಸೆಂಚುರಿ ಬಳಿಕ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಗುರ್ಬಾಝ್ 125 ಎಸೆತಗಳಲ್ಲಿ 8 ಸಿಕ್ಸರ್ ಹಾಗೂ 13 ಫೋರ್​ಗಳೊಂದಿಗೆ 145 ರನ್ ಬಾರಿಸಿದರು. ಈ ಹಂತದಲ್ಲಿ ಶಕೀಬ್ ಅಲ್ ಹಸನ್ ಎಸೆತವನ್ನು ಗುರುತಿಸುವಲ್ಲಿ ಎಡವಿದ ರಹಮಾನುಲ್ಲಾ ಗುರ್ಬಾಝ್ (145) ಎಲ್​ಬಿಡಬ್ಲ್ಯೂ ಆಗಿ ಹೊರನಡೆದರು. ಆದರೆ ಅಷ್ಟರಲ್ಲಾಗಲೇ ಅಫ್ಘಾನಿಸ್ತಾನ್ ತಂಡವು 36 ಓವರ್​ಗಳಲ್ಲಿ 256 ರನ್ ಪೇರಿಸಿತ್ತು.

ಅಫ್ಘಾನ್ ಪರ ಹೊಸ ದಾಖಲೆ:

256 ರನ್​ಗಳ ಜೊತೆಯಾಟದೊಂದಿಗೆ ಅಫ್ಘಾನಿಸ್ತಾನ್ ಪರ ಏಕದಿನ ಕ್ರಿಕೆಟ್​ನಲ್ಲಿ ಮೊದಲ ವಿಕೆಟ್​ಗೆ ಅತ್ಯಧಿಕ ರನ್ ಕಲೆಹಾಕಿದ ಜೋಡಿ ಎಂಬ ದಾಖಲೆಯನ್ನು​​ ಇಬ್ರಾಹಿಂ ಝದ್ರಾನ್ ಹಾಗೂ ರಹಮಾನುಲ್ಲಾ ಗುರ್ಬಾಝ್ ನಿರ್ಮಿಸಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಮೊಹಮ್ಮದ್ ಶಹಝಾದ್ ಹಾಗೂ ಇಹ್ಸಾನುಲ್ಲ ಜನ್ನತ್ ಹೆಸರಿನಲ್ಲಿತ್ತು.

ಇದನ್ನೂ ಓದಿ: ODI World Cup 2023: ಏಕದಿನ ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ​ 10 ತಂಡಗಳು ಫೈನಲ್

2018 ರಲ್ಲಿ ಶಹಝಾದ್ ಹಾಗೂ ಜನ್ನತ್ ಝಿಂಬಾಬ್ವೆ ವಿರುದ್ಧ ಮೊದಲ ವಿಕೆಟ್​ಗೆ ಅಜೇಯ 135 ರನ್ ಬಾರಿಸಿದ್ದರು. ಇದೀಗ ಈ ದಾಖಲೆಯನ್ನು ಅಳಿಸಿ ಹಾಕಿ ರಹಮಾನುಲ್ಲಾ ಗುರ್ಬಾಝ್ ಹಾಗೂ ಇಬ್ರಾಹಿಂ ಝದ್ರಾನ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ